ಸಿನಿಮಾ

ಬಿಗ್ ಬಾಸ್ ಹೊಸ ಸಂಚಿಕೆಗೆ ಬಾಹುಬಲಿ ನಾಯಕಿ ಅನುಷ್ಕಾ ಶೆಟ್ಟಿ ನಿರೂಪಣೆ..!

62

ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ.

ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ ನಿರೂಪಣೆ ಮಾಡಲು ನಿರಾಕರಿಸಿದ್ದಾರೆ. 

ಜೂ. ಎನ್‍ಟಿಆರ್ ಅಲ್ಲದೆ ನಾಗಾರ್ಜುನ, ವೆಂಕಟೇಶ್, ರಾಣಾ ದಗ್ಗುಬಾಟಿ ಹಾಗೂ ವಿಜಯ್ ದೇವರಕೊಂಡ ಅವರನ್ನು ಬಿಗ್ ಬಾಸ್ ಸೀಸನ್ -3 ನಿರೂಪಣೆ ಮಾಡಲು ಅಪ್ರೋಚ್ ಮಾಡಲಾಗಿದೆ. ಆದರೆ ಕಾರಣಾಂತರದಿಂದ ನಟರು ಈ ಅವಕಾಶವನ್ನು ತಿರಸ್ಕರಿಸಿದ್ದಾರೆ.

ನಟರು ನಿರೂಪಣೆ ಮಾಡಲು ಒಪ್ಪದ ಕಾರಣ ಖಾಸಗಿ ವಾಹಿನಿ ನಿರೂಪಕಿಯಿಂದ ಕಾರ್ಯಕ್ರಮವನ್ನು ನಡೆಸಿಕೊಡಲು ಪ್ಲಾನ್ ಮಾಡಿದೆ. ಹಾಗಾಗಿ ರಿಯಾಲಿಟಿ ಶೋ ತಂಡ ನಟಿ ಅನುಷ್ಕಾ ಶೆಟ್ಟಿ ಅವರಿಗೆ ನಿರೂಪಣೆ ಮಾಡಲು ಅಪ್ರೋಚ್ ಮಾಡಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಅನುಷ್ಕಾ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಮೊದಲ ಸೀಸನ್ ನಿರೂಪಣೆ ಮಾಡಿದ ಜೂ. ಎನ್‍ಟಿಆರ್ ಅವರು ಒಂದು ಸಂಚಿಕೆಗೆ 50 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎಂದು ಹೇಳಲಾಗಿದೆ. ಎರಡನೇ ಸೀಸನ್ ನಟ ನಾನಿ ಅವರಿಗೆ ಒಂದು ಸಂಚಿಕೆಗೆ 10 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ