ಸುದ್ದಿ

ಕರ್ತವ್ಯಕ್ಕೆ ತೆರಳಿದ ಪತಿಗಾಗಿ 19 ವರ್ಷ ಶಬರಿಯಂತೆ ಕಾಯ್ದ ಪತ್ನಿ…….!

46

ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ.

1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು ಗೊತ್ತಿಲ್ಲ. ಸೇನೆಯವರು ಮೊದಲು ಉತ್ತಯ್ಯ ಮಿಸ್ಸಿಂಗ್ ಎಂದು, ನಂತರ ಅವರು ನಿಧನರಾಗಿದ್ದಾರೆ ಎಂದು ಹೇಳಿದ್ದರು. ಅದಕ್ಕೆ ಸಾಕ್ಷಿ ಕೊಡಿ ಎಂದು ಪಾರ್ವತಿ ಇದುವರೆಗೂ ಪತಿಗಾಗಿ ಕಾಯುತ್ತಿದ್ದಾರೆ.

ಆಗಸ್ಟ್ 1999ರಂದು, ಉತ್ತರಪ್ರದೇಶದಲ್ಲಿ ಸ್ನಿಗ್ನಲ್ ಬೆಟಾಲಿಯನ್‍ನಲ್ಲಿ ಲಾನ್ಸ್ ನಾಯಕ್ ಆಗಿದ್ದ ಉತ್ತಯ್ಯ ಮನೆಗೆ ಬಂದಿದ್ದರು. 20 ದಿನ ಇದ್ದು ಗರ್ಭಿಣಿ ಪತ್ನಿಗೆ ದೇಶ ಸೇವೆ ಮುಗಿಸಿ ಬೇಗ ಹಿಂದಿರುಗಿ ಬರುತ್ತೇನೆ ಎಂದು ಹೇಳಿ ಅಲಹಾಬಾದ್‍ನ ತನ್ನ ಯುನಿಟ್‍ಗೆ ವಾಪಾಸ್ ಹೋಗಿದ್ದರು. ಬಳಿಕ ನವೆಂಬರ್ 21ರಂದು ಪತ್ನಿಗೆ ಕರೆ ಮಾಡಿ ಹುಷಾರಿಲ್ಲ ಎಂದು ಹೇಳಿದ್ದರು. ಅದೇ ಕಡೆಯ ಕರೆ, ಆ ನಂತರ ಮತ್ತೆ ಕರೆಯೇ ಬರದಿರೋದ್ರಿಂದ ಆತಂಕಕ್ಕೀಡಾದ ಕುಟುಂಬಕ್ಕೆ ಡಿಸೆಂಬರ್ 4ಕ್ಕೆ ಒಂದು ಟೆಲಿಗ್ರಾಂ ಬಂತು. ಕಡೆಗೂ ಪತಿಯಿಂದ ಟೆಲಿಗ್ರಾಂ ಬಂತು ಎಂದುಕೊಂಡಿದ್ದ ಪತ್ನಿಗೆ ದೊಡ್ಡ ಆಘಾತವೇ ಕಾದಿತ್ತು.

ಆ ಟೆಲಿಗ್ರಾಂನಲ್ಲಿ ಉತ್ತಯ್ಯ ಸೈನ್ಯದ ಯುನಿಟ್‍ನಲ್ಲಿಲ್ಲ ಊರಲ್ಲಿದ್ರೆ ಕಳುಹಿಸಿಕೊಡಿ ಎಂದು ಬರೆಯಲಾಗಿತ್ತು. ಆ ಸುದ್ದಿ ಕೇಳಿ ಶಾಕ್‍ಗೆ ಒಳಗಾದ ಯೋಧ ಉತ್ತಯ್ಯನ ಗರ್ಭಿಣಿ ಪತ್ನಿಗೆ ಡೆಲಿವರಿಯಾಗಿ ಮಗು ಕೂಡ ಸಾವನ್ನಪ್ಪಿತ್ತು. ದಿನ ಕಳೆದಂತೆ ಸುಧಾರಿಸಿಕೊಂಡು ಪತಿಗಾಗಿ ಹುಡುಕಾಟ ನಡೆಸಿ ಸೈನ್ಯದ ಯುನಿಟ್‍ಗೂ ಹೋಗಿ ಬಂದರೂ ಪತಿಯ ಸುಳಿವೇ ಸಿಗಲಿಲ್ಲ. ಕಡೆಗೆ ಸೇನೆ ಜೂನ್ 14ಕ್ಕೆ ಉತ್ತಯ್ಯ ನಿಧನರಾಗಿದ್ದಾರೆ ಎಂದು ಪತ್ರ ಕಳುಹಿಸಿದ್ದರು.

ಪತ್ರ ಕಳುಹಿಸಿದ ನಂತರ 2010ರಿಂದ ಯೋಧನ ಪತ್ನಿಗೆ ಪಿಂಚಣಿ ಕೊಡುವುದಕ್ಕೆ ಶುರು ಮಾಡಿದ ಸರ್ಕಾರ ಮೃತದೇಹವಾಗಲಿ, ಎಲ್ಲಿ, ಹೇಗೆ ನಿಧನರಾದರು ಎಂದಾಗಲೀ ಯೋಧನ ಕುಟುಂಬಕ್ಕೆ ಮಾಹಿತಿಯೇ ಕೊಟ್ಟಿಲ್ಲ. ಹೀಗಾದರೆ ಹೇಗೆ ಸೈನ್ಯ ನಂಬಿ ಯೋಧರನ್ನಾಗಿ ದೇಶ ಸೇವೆಗೆ ನಮ್ಮವರನ್ನು ಕಳುಹಿಸೋದು ಎಂದು ಪಾರ್ವತಿ ಹಿತೈಷಿಗಳು ಪ್ರಶ್ನಿಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದುವೆಯಾದ ಮೊದಲ ರಾತ್ರಿಯ ನಂತರ ಬೆಳಿಗ್ಗೆ ಮನೆ ಬಿಟ್ಟ ವಧು!ಅಸಲಿ ವಿಷಯ ನೀವು ಅಂದುಕೊಂಡ ಹಾಗೆ ಇಲ್ಲ….

    ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ  ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…

  • inspirational

    ಹವಾ ಮಹಲ್

      ಇದು ಭಾರತದ ಜೈಪುರ್‌ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…

  • ಸುದ್ದಿ

    ಆನ್‌ಲೈನ್‌ನಲ್ಲಿ ಪಿಎಫ್‌ ಕ್ಲೇಮ್ ಮಾಡಿಕೊಳ್ಳಲು ಈಗ ಸುಲಭ ಅಂದ್ರೆ ಸುಲಭ..! ಹೇಗೆ ಅಂತಿರಾ..?

    ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್‌ ಫಂಡ್‌ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್‌ಒ ಉದ್ಯೋಗಿಗಳಿಗೆ ಪಿಎಫ್‌ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್‌ ಹಣವನ್ನು ಪಡೆಯಬಹುದಾಗಿದೆ. ಇನ್ನು, ಪಿಎಫ್‌ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ…

  • ಜ್ಯೋತಿಷ್ಯ

    ಶಿವ ಪರಮೇಶ್ವರನನ್ನು ನೆನೆಯುತ್ತ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಮುಖದಲ್ಲಿ…

  • inspirational

    ‘ಇಂದಿರಾ ಕ್ಯಾಂಟೀನ್​​ ಬದಲು ಅನ್ನಪೂರ್ಣ ಕ್ಯಾಂಟೀನ್​​ ಎಂದು ಹೆಸರಿಡಲು ಬಿಜೆಪಿ ಚಿಂತನೆ’…!

    ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು. ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್​​ಗೆ ಈ ಪ್ರಕರಣ ಹೋಗಬಹುದು ಕೋರ್ಟ್​​ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು. ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ…

  • ದೇಶ-ವಿದೇಶ

    ಸೇನೆಯ ಮೇಲೆ ಕಲ್ಲು ತೂರಾಟ, ನಡೆಸಿದ ಯುವಕನಿಗೆ 10 ಲಕ್ಷ ಪರಿಹಾರ..!

    ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.