ಸುದ್ದಿ

ಭಾರತೀಯ ಸೇನೆಗಾಗಿ ವಿಶೇಷವಾಗಿ ತಯಾರಾದ ಈ ಬೈಕ್ ವಿಶೇಷತೆ ಏನು ಗೊತ್ತಾ?

44

ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್‍ಗಢ್‍ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್‍ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್‍ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್‍ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್‍ಗಳನ್ನು ಬಳಸುತ್ತಿದ್ದಾರೆ.

ಈ ನಿಟ್ಟಿನಲ್ಲಿ ಚತ್ತೀಸ್‍ಗಢ್‍ನಲ್ಲಿನ ರಾಯ್‍ಪುರ್ ನಿವಾಸಿಯಾದ ವೈಭವ್ ಭಾಜ್‍ಪೇ ಎಂಬ ಯುವಕ ಮಾರುತಿ ಆಲ್ಟೋ ಕಾರಿನಲ್ಲಿರುವ 800ಸಿಸಿಯನ್ನು ಎಂಜಿನ್ ಬಳಸಿ ಹೊಸ ಬೈಕ್ ಒಂದನ್ನು ತಯಾರು ಮಾಡಿದ್ದಾನೆ. ಇಂದಿನ ಲೇಖನದಲ್ಲಿ ಈ ಬೈಕಿನ ಕುರಿತಾಗಾಗಿ ಹೆಚ್ಚು ಮಾಹಿತಿಯನ್ನು ತಿಳಿಯಿರಿ. ಸುಮಾರು 18 ತಿಂಗಳ ಕಾಲ ಪ್ರಯತ್ನದ ಫಲವಾಗಿ ವೈಭವ್ ಭಾಜ್‍ಪೇ ಎಂಬ ಯುವಕ ಭಾರತೀಯ ಸೇನೆಗಾಗಿ ವಿಶೇಷವಾದ ಬೈಕ್ ಒಂದನ್ನು ತಯಾರು ಮಾಡಲಾಗಿದ್ದು, ಈ ಬೈಕ್‍ಗೆ ಅಮರ್ ಜವಾನ್ ಎಂದು ಆತ ಹೆಸರಿಟ್ಟಿದ್ದಾನೆ.

ಈ ಅಮರ್ ಜವಾನ್ ಬೈಕ್ ನೋಡಲು ಆಕ್ರಮಣಕಾರಿ ವಿನ್ಯಾಸವನ್ನು ಪಡೆದುಕೊಂಡಿದ್ದು, ಬೈಕಿನ ಮುಂಭಾಗದಲ್ಲಿ ಸೈನಿಕನ ಮುಖದ ವಿನ್ಯಾಸದ ಮಾದರಿಯಲ್ಲಿ ಹೆಡ್‍ಲ್ಯಾಂಪ್‍ಗಳು ಮತ್ತು ಸಣ್ಣದಾದ ವಿಂಡ್‍ಶೀಲ್ಡ್ ನ ಮೇಲೆ ‘ಅಮರ್ ಜವಾನ್’ ಎಂಬ ಹೆಸರನ್ನು ಅಳವಡಿಸಲಾಗಿದೆ. ಸುಮಾರು 24 ರಿಂದ 27 ಲೀಟರ್ ಪೆಟ್ರೋಲ್ ಅನ್ನು ತುಂಬಲಾಗುವ ಈ ಬೈಕ್‍ನಲ್ಲಿ 800ಸಿಸಿ 3 ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದ್ದು, ಇದು ಪ್ರತಿ ಕಿಲೋಮೀಟರ್‍‍ಗೆ 22 ರಿಂದ 27 ಕಿಲೋಮೀಟರ್ ಮೈಲೇಜ್ ನೀಡುವ ಹಾಗೆ ಈ ಬೈಕ್ ಅನ್ನು ತಯಾರು ಮಾಡಿದ್ದಾನೆ.

ಬೈಕ್‍ಗಳ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೇ, ಹಿಂಭಾಗದಲ್ಲಿ ಡಬಲ್ ಕ್ಯಾಲಿಪರ್ ಡಿಸ್ಕ್ ಬ್ರೇಕ್ ಮತ್ತು ಮುಂಭಾಗದಲ್ಲಿ ಕೂಡಾ ಡಬಲ್ ಕ್ಯಾಲಿಪರ್ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದ್ದು, ಫಾರ್ವಡ್ 4 ಗೇರ್‍‍ಗಳು ಮತ್ತು 4 ರಿವರ್ಸ್‍ ಗೇರ್ ಅಂದರೆ ಒಟ್ಟಾರೆಯಾಗಿ 8 ಗೇರ್‍‍ಗಳನ್ನು ಬದಲಾಯಿಸಬಹುದಾಗಿದೆ. ಅಮರ್ ಜವಾನ್ ಬೈಕಿನಲ್ಲಿ ಬಹುತೇಕ ವಾಹನಗಳಲ್ಲಿ ಕಾಣಬಹುದಾದ ಹಳದಿ ಬಣ್ಣದ ಪೆಯಿಂಟ್ ಸ್ಕೀಮ್ ಅನ್ನು ಈ ಬೈಕಿಗೆ ಬಳಸಲಾಗಿದೆ. ಸುಮಾರು 450 ಕಿಲೋಗ್ರಾಂ ತೂಕವಿರುವ ಈ ಬೈಕ್ ಜಿಪಿಎಸ್ ಮತ್ತು ಬ್ಲೂಟೂಥ್ ಕನೆಕ್ಟಿವಿಟಿ ಎಂಬ ಆಯ್ಕೆಗಳನ್ನು ಸಹ ಅಳವಡಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೆಚ್ಚರಿಕೆ : ಮುಖಕ್ಕೆ ಕೇಕ್ ಹಚ್ಚಿದರೆ ಜೈಲೇ ಗತಿ…!

    ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ‌ ಗುಜರಾತ್ ಪೊಲೀಸರು ಹೊಸ‌ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್‌ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…

  • ಸುದ್ದಿ

    ಟ್ರೋಲ್‍ ವಾಸಣ್ಣ ಪ್ರಸಿದ್ದಿಯ ಮಲ್ಪೆ ವಾಸುಗೆ ಖಡಕ್ ವರ್ನಿಗ್ ಕೊಟ್ಟ ಪೊಲೀಸರು!ಅಸಲಿಗೆ ಯಾರಿದು ವಾಸಣ್ಣ ಗೊತ್ತಾ?

    ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್‍ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್‍ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‍ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…

  • ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರುವ ಮೆಕ್ಕೆಜೋಳದ ರೇಷ್ಮೆಯ ಉಪಯೋಗಗಳು..!ತಿಳಿಯಲು ಈ ಲೇಖನ ಓದಿ…

    ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.

  • inspirational, ಸುದ್ದಿ

    ನಿವೃತ್ತಿ ಬಳಿಕ ಮಾಡೋದೇನು? ಎಂಬ ಪ್ರಶ್ನೆಗೆ ಕೊಹ್ಲಿ ಕೊಟ್ಟ ಉತ್ತರ ತಿಳಿದರೆ ಶಾಕ್ ಆಗುತ್ತೀರಾ…!

    ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್‌ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್‌ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್‌ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಚಕ್ರ ಆರಾಧಿಸಿದರೆ ಸಿಗುವ ಫಲ!!

    ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ. ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ. ”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ…