ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ.

ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ.

ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ ಸಡಿಲ ಅಥವಾ ಬಿಗಿ ಎನಿಸಿದ್ರೆ ಯಾವುದೇ ಕಾರಣಕ್ಕೂ ಎಟಿಎಂನಲ್ಲಿ ಹಣ ಡ್ರಾ ಮಾಡಬೇಡಿ.
ಕಾರ್ಡ್ ಸ್ಲಾಟ್ ನಲ್ಲಿ ಉರಿಯುವ ಲೈಟ್ ಬಗ್ಗೆ ಹೆಚ್ಚು ಗಮನ ನೀಡಿ. ಲೈಟ್ ಹಸಿರು ಬಣ್ಣದಲ್ಲಿದ್ದರೆ ಎಟಿಎಂ ಸುರಕ್ಷಿತವಾಗಿದೆ ಎಂದರ್ಥ. ಕೆಂಪು ಅಥವಾ ಯಾವುದೇ ಲೈಟ್ ಬರ್ತಾ ಇಲ್ಲವೆಂದ್ರೆ ಎಟಿಎಂ ಸುರಕ್ಷಿತವಾಗಿಲ್ಲ ಎಂದರ್ಥ.

ನಿಮ್ಮ ಎಟಿಎಂ ಕಾರ್ಡ್ ಬಳಸಲು ಹ್ಯಾಕರ್ಸ್ ಗೆ ಎಟಿಎಂ ಕಾರ್ಡ್ ನಂಬರ್ ಜೊತೆ ಪಾಸ್ವರ್ಡ್ ಬೇಕು. ಎಟಿಎಂ ಕಾರ್ಡ್ ನಂಬರ್ ಹ್ಯಾಕರ್ಸ್ ಯಾವುದೇ ರೂಪದಲ್ಲಿಯಾದ್ರೂ ಪಡೆಯುತ್ತಾರೆ. ಆದ್ರೆ ಪಾಸ್ವರ್ಡ್ ಪಡೆಯೋದು ಕಷ್ಟ. ಎಟಿಎಂನಲ್ಲಿ ಹಣ ಡ್ರಾ ಮಾಡುವ ವೇಳೆ ಪಿನ್ ಹಾಕುವಾಗ ಇನ್ನೊಂದು ಕೈನಲ್ಲಿ ನಂಬರ್ ಮುಚ್ಚಿಟ್ಟುಕೊಳ್ಳಿ. ಸಿಸಿ ಟಿವಿಯಲ್ಲಿ ನಿಮ್ಮ ಪಾಸ್ವರ್ಡ್ ದಾಖಲಾಗದಂತೆ ನೋಡಿಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…
ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…
ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.
ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…
ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.
ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.