News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ನಿಮ್ಮ ಮಗುವಿನ ನಿದ್ದೆಯನ್ನು ಇನ್ನೂ ಉತ್ತಮವಾಗಿಸಿಕೊಳ್ಳಲು ಈ ಕೆಳಗಿನ ಸಲಹೆಗಳನ್ನು ಅನುಸರಿಸಿ….!

86

ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ.

ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ ಹೊರಗಿನ ಆಟ ಮತ್ತು ಚಟುವಟಿಕೆಗಳಲ್ಲಿ ಒಳಗೊಳ್ಳುವಂತೆ ಮಾಡಿ. ಇದರಿಂದ ಹೆಚ್ಚು ಹೆಚ್ಚಾಗಿ ಸೂರ್ಯನ ಬೆಳಕನ್ನು ನೋಡುವಂತಾಗುತ್ತದೆ ಹಾಗೂ ಈ ಬೆಳಕಿನಲ್ಲಿ ಮೆದುಳಿನಲ್ಲಿ ಉತ್ಪತ್ತಿಯಾಗುವ ಮೆಲಟೋನಿನ್ ಪ್ರಮಾಣವನ್ನು ತಡೆಯುತ್ತದೆ. ಸಮಯಕ್ಕೆ ಸರಿಯಾಗಿ ನಮ್ಮ ನಿದ್ದೆ ಆವರಿಸಲು ಮತ್ತು ಎಚ್ಚರಾಗಲು ಈ ಮೆಲಟೋನಿನ್ ಪ್ರಮುಖ ಕಾರಣವಾಗಿದೆ. ಈ ವಿಧಾನದ ಮೂಲಕ ಮಕ್ಕಳು ಹಗಲಿನ ಹೊತ್ತು ಎಚ್ಚರಾಗಿದ್ದು ರಾತ್ರಿಯ ಸಮಯದಲ್ಲಿ ಬೇಗನೇ ಮಲಗತೊಡಗುತ್ತಾರೆ.

ಕೆಫೇನ್ ಇರುವ ಪೇಯಗಳನ್ನು ನೀಡದಿರಿ ಯಾವುದೇ ಕೆಫೀನ್ ಇರುವ ಪಾನೀಯ, ಉದಾಹರಣೆಗೆ, ಟೀ, ಕಾಫಿ, ಬುರುಗು ಪಾನೀಯ, ಸೋಡಾ ಮೊದಲಾದವುಗಳ ಸೇವನೆಯಿಂದ ಮಕ್ಕಳಲ್ಲಿ ನಿದ್ದೆ ಹಾರಿ ಹೋಗುತ್ತದೆ ಹಾಗೂ ಇವರನ್ನು ಮಲಗಿಸುವುದು ಭಾರೀ ಕಷ್ಟಕರವಾದ ಕೆಲಸವಾಗುತ್ತದೆ. ಹಾಗಾಗಿ ಸಂಜೆಯ ಬಳಿಕ ಈ ಯಾವುದೇ ಪಾನೀಯಗಳನ್ನು ನೀಡದಿರಿ.
ರಾತ್ರಿ ಮಲಗಲು ನಿರ್ದಿಷ್ಟ ಸಮಯವನ್ನು ಅನುಸರಿಸಿ ನಿಮ್ಮ ಮಕ್ಕಳು ಪ್ರತಿದಿನ ಒಂದೇ ಸಮಯಕ್ಕೆ ಸರಿಯಾಗಿ ಮಲಗುವಂತೆ ವೇಳಾಪಟ್ಟಿಯನ್ನು ನಿರ್ಧರಿಸಿ ಈ ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಮಕ್ಕಳನ್ನು ಪ್ರೇರೇಪಿಸಿ. ಇದು ಮಕ್ಕಳಲ್ಲಿ ಆರೋಗ್ಯಕರ ವೇಳಾಪಟ್ಟಿಯನ್ನು ಅನುಸರಿಸುವ ಉತ್ತಮ ಅಭ್ಯಾಸ ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ ಹಾಗೂ ದೇಹದ ಜೈವಿಕ ಗಡಿಯಾರ ಈ ಸಮಯಗಳಿಗೆ ಅನುಸಾರವಾಗಿ ಸ್ಪಂದಿಸತೊಡಗುತ್ತದೆ.

ಮಕ್ಕಳು ಸುರಕ್ಷತಾ ಭಾವನೆ ಹೊಂದುವಂತೆ ಮಾಡಿ ಸಂಜೆಯ ಬಳಿಕ ಮಕ್ಕಳಲ್ಲಿ ಹೆದರಿಕೆ ಹುಟ್ಟಿಸುವ ಯಾವುದೇ ಕಥೆಗಳನ್ನಾಗಲೀ, ಸಿನೇಮಾಗಳನ್ನಾಗಲೀ ಕೇಳುವುದಾಗಲೀ, ನೋಡುವುದಾಗಲೀ ಬೇಡ. ಈ ಹೆದರಿಕೆಯ ವಿಷಯಗಳು ಮಕ್ಕಳ ಮನದಲ್ಲಿ ಅಚ್ಚೊತ್ತಿದಂತೆ ನೆನಪಿನಲ್ಲಿ ಉಳಿಯುತ್ತವೆ ಹಾಗೂ ಈ ಹೆದರಿಕೆಯಿಂದಾಗಿ ಮಕ್ಕಳಿಗೆ ಬೇಗನೇ ಮಲಗಲು ಸಾಧ್ಯವಾಗದೇ ಹೋಗಬಹುದು.ಆರೋಗ್ಯಕರ ಆಹಾರಕ್ರಮವನ್ನು ಅನುಸರಿಸಿ ಸಕ್ಕರೆ ಹೆಚ್ಚಿರುವ ಆಹಾರಗಳನ್ನು ಸೇವಿಸಿದರೆ ಇದು ನಿದ್ದೆಯ ವೇಳಾಪಟ್ಟಿಯನ್ನು ಏರುಪೇರುಗೊಳಿಸಬಹುದು. ಅಲ್ಲದೇ ಮಕ್ಕಳು ಸಂಜೆಯ ಬಳಿಕ ಕುಡಿಯುವ ನೀರಿನ ಪ್ರಮಾಣ ಅತಿಯಾಗದಂತೆ ನೋಡಿಕೊಳ್ಳಿ. ಒಂದು ವೇಳೆ ಅತಿಯಾದರೆ ರಾತ್ರಿಯ ಸಮಯದಲ್ಲಿ ಮೂತ್ರವಿಸರ್ಜನೆಗೆ ಕೆಲವಾರು ಬಾರಿ ಏಳಬೇಕಾಗುತ್ತದೆ. ಇದು ನಿದ್ದೆಯನ್ನು ಭಂಗಗೊಳಿಸಬಹುದು. ಅಲ್ಲದೇ ರಾತ್ರಿ ಮಲಗುವ ಮುನ್ನ ಮೂತ್ರ ವಿಸರ್ಜಿಸಿದ ಬಳಿಕವೇ ಮಲಗುವಂತೆ ರೂಢಿ ಮಾಡಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿದ್ದ ಈ ವೃದ್ದ ಮಹಿಳೆ,ಅದೇ ದೇವಸ್ಥಾನಕ್ಕೆ ಕೊಟ್ಟ ಹಣ ಎಷ್ಟು ಗೊತ್ತಾ?ಈ ಲೇಖನ ಓದಿ ಶಾಕ್ ಆಗ್ತೀರಾ…

    ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
    ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.

  • ಉಪಯುಕ್ತ ಮಾಹಿತಿ

    ತಿಗಣೆಗಳನ್ನು ನಾಶಪಡಿಸುವ ಹತ್ತು ಸುಲಭ ಉಪಾಯಗಳು ಇಲ್ಲಿದೆ ನೋಡಿ.

    ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…

  • govt

    2000 ರೂ ನೋಟಿನ ಮುದ್ರಣವನ್ನು ಸ್ಥಗಿತಗೊಳಿಸಿದ ರಿಸರ್ವ್ ಬ್ಯಾಂಕ್,..!ಯಾಕೆ ಗೊತ್ತಾ,.??

    ರಿಸರ್ವ್  ಬ್ಯಾಂಕ್  ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್​ಬಿಐಆರ್​ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್​ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…

  • ಸುದ್ದಿ

    ‘ಗೂಗಲ್ ಪೇ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ!..ನೀವು ಬಳಸುತ್ತಿದ್ದಿರಾ ಅಗಾದರೆ ಇದನ್ನು ಓದಿ…

    ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್‌ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್‌ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್‌ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್‌ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್‌ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್‌ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…

  • ರಾಜಕೀಯ

    ಬಿಜೆಪಿಯಲ್ಲಿ ಸಂತಸವೋ ಸಂತಸ…ಯಡಿಯೂರಪ್ಪಾ ಗೆ ಬಂಪರ್…!

    ಈಗ ಕರ್ನಾಟಕ ಬಿಜೆಪಿ ಪಾಳಯದಲ್ಲಿ ಸಂತೋಷ ವೋ ಸಂತೋಷ. ಬಿಜೆಪಿಯ ರಾಜ್ಯಾಧ್ಯಕ್ಷ ರಾದ ಯಡಿಯೂರಪ್ಪಾ ಗೆ ತಡೆಯಲಾರದ ಸಂತಸ. ಕಾರಣ ಅವರ ಮೇಲೆ ದಾಖಲಾಗಿದ್ದ ಬರೋಬರಿ ಐದೂ ಕೇಸುಗಳನ್ನು ಮಂಗಳವಾರ ಡಿಸೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾ ಗಳಿಸಿದೆ. ಶಿವಮೊಗ್ಗ ಮೂಲದ ವಕೀಲರಾದ ಸಿರಾಜಿನ್ ಪಾಷಾ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಡಿನೋಟಿಫಿಕೇಷನ್ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ 5 ಕೇಸ್ ಗಳ ನ್ನು ದಾಖಲಿಸಿದ್ದರು. ಹಲವಾರು ವರ್ಷಗಳಿಂದ ಈ ಕೇಸ್ ಗಳ ವಿಚಾರಣೆ…

  • ಸುದ್ದಿ

    ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತ ಸಮಿತಿಗಳ ರಚನೆ – ಡಿಸಿ ಸಸಿಕಾಂತ್ ಸೆಂಥೀಲ್…!

    ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…