News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ನಿಮ್ಮ ಮಗುವಿನ ನಿದ್ದೆಯನ್ನು ಇನ್ನೂ ಉತ್ತಮವಾಗಿಸಿಕೊಳ್ಳಲು ಈ ಕೆಳಗಿನ ಸಲಹೆಗಳನ್ನು ಅನುಸರಿಸಿ….!

83

ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ.

ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ ಹೊರಗಿನ ಆಟ ಮತ್ತು ಚಟುವಟಿಕೆಗಳಲ್ಲಿ ಒಳಗೊಳ್ಳುವಂತೆ ಮಾಡಿ. ಇದರಿಂದ ಹೆಚ್ಚು ಹೆಚ್ಚಾಗಿ ಸೂರ್ಯನ ಬೆಳಕನ್ನು ನೋಡುವಂತಾಗುತ್ತದೆ ಹಾಗೂ ಈ ಬೆಳಕಿನಲ್ಲಿ ಮೆದುಳಿನಲ್ಲಿ ಉತ್ಪತ್ತಿಯಾಗುವ ಮೆಲಟೋನಿನ್ ಪ್ರಮಾಣವನ್ನು ತಡೆಯುತ್ತದೆ. ಸಮಯಕ್ಕೆ ಸರಿಯಾಗಿ ನಮ್ಮ ನಿದ್ದೆ ಆವರಿಸಲು ಮತ್ತು ಎಚ್ಚರಾಗಲು ಈ ಮೆಲಟೋನಿನ್ ಪ್ರಮುಖ ಕಾರಣವಾಗಿದೆ. ಈ ವಿಧಾನದ ಮೂಲಕ ಮಕ್ಕಳು ಹಗಲಿನ ಹೊತ್ತು ಎಚ್ಚರಾಗಿದ್ದು ರಾತ್ರಿಯ ಸಮಯದಲ್ಲಿ ಬೇಗನೇ ಮಲಗತೊಡಗುತ್ತಾರೆ.

ಕೆಫೇನ್ ಇರುವ ಪೇಯಗಳನ್ನು ನೀಡದಿರಿ ಯಾವುದೇ ಕೆಫೀನ್ ಇರುವ ಪಾನೀಯ, ಉದಾಹರಣೆಗೆ, ಟೀ, ಕಾಫಿ, ಬುರುಗು ಪಾನೀಯ, ಸೋಡಾ ಮೊದಲಾದವುಗಳ ಸೇವನೆಯಿಂದ ಮಕ್ಕಳಲ್ಲಿ ನಿದ್ದೆ ಹಾರಿ ಹೋಗುತ್ತದೆ ಹಾಗೂ ಇವರನ್ನು ಮಲಗಿಸುವುದು ಭಾರೀ ಕಷ್ಟಕರವಾದ ಕೆಲಸವಾಗುತ್ತದೆ. ಹಾಗಾಗಿ ಸಂಜೆಯ ಬಳಿಕ ಈ ಯಾವುದೇ ಪಾನೀಯಗಳನ್ನು ನೀಡದಿರಿ.
ರಾತ್ರಿ ಮಲಗಲು ನಿರ್ದಿಷ್ಟ ಸಮಯವನ್ನು ಅನುಸರಿಸಿ ನಿಮ್ಮ ಮಕ್ಕಳು ಪ್ರತಿದಿನ ಒಂದೇ ಸಮಯಕ್ಕೆ ಸರಿಯಾಗಿ ಮಲಗುವಂತೆ ವೇಳಾಪಟ್ಟಿಯನ್ನು ನಿರ್ಧರಿಸಿ ಈ ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಮಕ್ಕಳನ್ನು ಪ್ರೇರೇಪಿಸಿ. ಇದು ಮಕ್ಕಳಲ್ಲಿ ಆರೋಗ್ಯಕರ ವೇಳಾಪಟ್ಟಿಯನ್ನು ಅನುಸರಿಸುವ ಉತ್ತಮ ಅಭ್ಯಾಸ ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ ಹಾಗೂ ದೇಹದ ಜೈವಿಕ ಗಡಿಯಾರ ಈ ಸಮಯಗಳಿಗೆ ಅನುಸಾರವಾಗಿ ಸ್ಪಂದಿಸತೊಡಗುತ್ತದೆ.

ಮಕ್ಕಳು ಸುರಕ್ಷತಾ ಭಾವನೆ ಹೊಂದುವಂತೆ ಮಾಡಿ ಸಂಜೆಯ ಬಳಿಕ ಮಕ್ಕಳಲ್ಲಿ ಹೆದರಿಕೆ ಹುಟ್ಟಿಸುವ ಯಾವುದೇ ಕಥೆಗಳನ್ನಾಗಲೀ, ಸಿನೇಮಾಗಳನ್ನಾಗಲೀ ಕೇಳುವುದಾಗಲೀ, ನೋಡುವುದಾಗಲೀ ಬೇಡ. ಈ ಹೆದರಿಕೆಯ ವಿಷಯಗಳು ಮಕ್ಕಳ ಮನದಲ್ಲಿ ಅಚ್ಚೊತ್ತಿದಂತೆ ನೆನಪಿನಲ್ಲಿ ಉಳಿಯುತ್ತವೆ ಹಾಗೂ ಈ ಹೆದರಿಕೆಯಿಂದಾಗಿ ಮಕ್ಕಳಿಗೆ ಬೇಗನೇ ಮಲಗಲು ಸಾಧ್ಯವಾಗದೇ ಹೋಗಬಹುದು.ಆರೋಗ್ಯಕರ ಆಹಾರಕ್ರಮವನ್ನು ಅನುಸರಿಸಿ ಸಕ್ಕರೆ ಹೆಚ್ಚಿರುವ ಆಹಾರಗಳನ್ನು ಸೇವಿಸಿದರೆ ಇದು ನಿದ್ದೆಯ ವೇಳಾಪಟ್ಟಿಯನ್ನು ಏರುಪೇರುಗೊಳಿಸಬಹುದು. ಅಲ್ಲದೇ ಮಕ್ಕಳು ಸಂಜೆಯ ಬಳಿಕ ಕುಡಿಯುವ ನೀರಿನ ಪ್ರಮಾಣ ಅತಿಯಾಗದಂತೆ ನೋಡಿಕೊಳ್ಳಿ. ಒಂದು ವೇಳೆ ಅತಿಯಾದರೆ ರಾತ್ರಿಯ ಸಮಯದಲ್ಲಿ ಮೂತ್ರವಿಸರ್ಜನೆಗೆ ಕೆಲವಾರು ಬಾರಿ ಏಳಬೇಕಾಗುತ್ತದೆ. ಇದು ನಿದ್ದೆಯನ್ನು ಭಂಗಗೊಳಿಸಬಹುದು. ಅಲ್ಲದೇ ರಾತ್ರಿ ಮಲಗುವ ಮುನ್ನ ಮೂತ್ರ ವಿಸರ್ಜಿಸಿದ ಬಳಿಕವೇ ಮಲಗುವಂತೆ ರೂಢಿ ಮಾಡಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • ಸುದ್ದಿ

    ಮದ್ಯಪಾನ ಮಾರಾಟದಲ್ಲಿ ಈ ಬಾರಿ ದಾಖಲೆ ನಿರ್ಮಿಸಿದ ಮಂಡ್ಯ…..!

    ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….

  • ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರುವ ಮೆಕ್ಕೆಜೋಳದ ರೇಷ್ಮೆಯ ಉಪಯೋಗಗಳು..!ತಿಳಿಯಲು ಈ ಲೇಖನ ಓದಿ…

    ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.

  • ಸುದ್ದಿ

    ಈ ʼಮೊಬೈಲ್‍‌ʼ ನಲ್ಲಿ ಇನ್ಮುಂದೆ ಸಿಗಲ್ಲ ಗೂಗಲ್ ಪ್ಲೇ ಸ್ಟೋರ್…..?

    ಹುವಾವೇ ಮೊಬೈಲ್‍ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್‍ ಗಳಿಗೆ ಗೂಗಲ್ ಪ್ಲೇ, ಗೂಗಲ್‍ ಪ್ಲೇ ಸ್ಟೋರ್, ಜಿ ಮೇಲ್‍, ಗೂಗಲ್‍ ಮ್ಯಾಪ್‍ ಹಾಗೂ ಯೂಟೂಬ್‍ ಆಪ್‍ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್‍ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್‍ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…

  • ವಿಸ್ಮಯ ಜಗತ್ತು

    ಈ ಕಾಲದಲ್ಲೂ ಈ ಜನ ವರ್ಷ ಪೂರ್ತಿ ನೀರಿನಲ್ಲೇ ವಾಸ ಮಾಡುತ್ತಾರೆ!

    ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(10 ಡಿಸೆಂಬರ್, 2018) ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಕೆಲವರಿಗೆ ಕುಟುಂಬದಲ್ಲಿಒಂದು ಹೊಸ ಆಗಮನ ಸಂಭ್ರಮಾಚರಣೆ…