ಆರೋಗ್ಯ

ಆರೋಗ್ಯದ ಮೇಲೆ ಹುರುಳಿ ಟೀ, ಹುರುಳಿ ಟೀ ಇಂದ ಏನೆಲ್ಲಾ ಲಾಭವಿದೆ ಗೊತ್ತಾ.

94

ಹುರುಳಿ ಟೀ ಮಾಡುವ ವಿಧಾನ!

ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ.

ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ ಸಮಸ್ಯೆ ನಿವಾರಿಸಲು ಮದ್ದಾಗಿ ಕೆಲಸ ಮಾಡುತ್ತದೆ, ಹೃದಯದ ಆರೋಗ್ಯ, ಜೀರ್ಣ ಶಕ್ತಿ ವೃದ್ಧಿಸುತ್ತದೆ. ಇದರಲ್ಲಿರುವ ಫ್ಲೇವೋನಾಯ್ಡ್ ಅಂಶ ಆರೋಗಕ್ಕೆ ತುಂಬಾ ಒಳ್ಳೆಯದಾಗಿದೆ.

ಹುರುಳಿ ಟೀ ಮಾಡಲು ಬೇಕಾದ ಸಾಮಾಗ್ರಿ:

ನೀರು- 3 ಕಪ್ಹು, ರುಳಿ ಕಾಳು- 2 ಚಮಚ, ಜೇನು ತುಪ್ಪ- 1 ಚಮಚ

ಮಾಡುವ ವಿಧಾನ:

ಮೊದಲು ಸ್ಟವ್ ಹಚ್ಚಿ ಒಂದು ತವಾದಲ್ಲಿ ಹುರುಳಿ ಕಾಳುಗಳನ್ನು ಹುರಿದುಕೊಂಡು ಪಕ್ಕಕ್ಕೆ ಎತ್ತಿಟ್ಟುಕೊಳ್ಳಿ. ಬಳಿಕ ಚಹಾ ತಯಾರಿಸಲು ಪಾತ್ರೆಯಲ್ಲಿ ನೀರು ಕುದಿಯಲು ಇಡಿ.

ಬಳಿಕ ಕುದಿಯುತ್ತಿರುವ ನೀರಿಗೆ ಹುರಿಡದಿಟ್ಟುಕೊಂಡ ಹುರುಳಿ ಕಾಳನ್ನು ಹಾಕಿ 1ರಿಂದ 3 ನಿಮಿಷ ಕುದಿಯಲು ಬಿಡಿ. ಬೇಕಾದರೆ ಹುರಿದ ಹುರುಳಿ ಕಾಳನ್ನು ಪುಡಿ ಮಾಡಿ ಕೂಡ ಚಹಾ ತಯಾರಿಸಬಹುದು. ಅಷ್ಟೇ ಅಲ್ಲದೆ ಹುರುಳಿ ಎಲೆಗಳನ್ನು ಒಣಗಿಸಿ, ಪುಡಿ ಮಾಡಿ ಅದನ್ನು ಕೂಡ ಚಹಾ ಮಾಡಲು ಬಳಸಬಹುದು.

ಬಳಿಕ ಹುರುಳಿ ಕಾಳಿನ ಅಂಶ ನೀರಿನಲ್ಲಿ ಬೆರೆತ ಬಳಿಕ ಸ್ಟವನ್ನು ಆಫ್ ಮಾಡಿ. ಲೋಟದಲ್ಲಿ ಚಹಾ ಸೋಸಿ ಕುಡಿಯಿರಿ. ಈ ಚಹಾವನ್ನು ಹಾಗೆ ಕುಡಿಯಬಹುದು, ಇಲ್ಲವಾದರೇ ಇದಕ್ಕೆ ಸ್ವಲ್ಪ ಜೇನು ತುಪ್ಪ ಬೆರೆಸಿ ಸೇವಿಸಬಹುದು.

ಆರೋಗ್ಯಕರ ಲಾಭವೇನು?

1. ಕಿಡ್ನಿ ಸಮಸ್ಯೆಗೆ ಮದ್ದು

ಹುರುಳಿ ಕಾಳಿನಲ್ಲಿರುವ ಆ್ಯಂಟಿಆಕ್ಸಿಡೆಂಟ್ ಹಾಗೂ ರುಟಿನ್ ಅಂಶ ಕಿಡ್ನಿ ಸಮಸ್ಯೆಗೆ ರಾಮಬಾಣ. ಪ್ರತಿನಿತ್ಯ ಹುರುಳಿ ಟೀ ಸೇವನೆ ಮಾಡಿದರೆ ಕಿಡ್ನಿ ಸಮಸ್ಯೆ ನಿಧಾನವಾಗಿ ಗುಣವಾಗುತ್ತದೆ.

2. ಮಧುಮೇಹ ನಿಯಂತ್ರಣಕ್ಕೆ ಸಹಕಾರಿ:

ಮಧುಮೇಹಿಗಳು ಹುರುಳಿ ಟೀ ಕುಡಿದರೆ ಅವರ ದೇಹದಲ್ಲಿ ಸಕ್ಕರೆಯಂಶವನ್ನು ಅದು ನಿಯಂತ್ರಿಸುತ್ತದೆ. ಈ ಟೀ ರಕ್ತದಲ್ಲಿ ಗ್ಲೂಕೋಸ್ ಪ್ರಮಾಣವನ್ನು ಕಾಪಾಡಿ, ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದನ್ನು ತಡೆಯುತ್ತದೆ.

3. ಹೃದಯದ ಆರೋಗ್ಯಕ್ಕೆ ಉತ್ತಮ:

ಹುರುಳಿ ಟೀ ಪ್ರತಿದಿನ ಕುಡಿಯುವುದರಿಂದ ರಕ್ತದೊತ್ತಡ ಹಾಗೂ ಕೊಲೆಸ್ಟ್ರಾಲ್ ಕಡಿಮೆ ಆಗುತ್ತದೆ. ಇದರಲ್ಲಿ ಫ್ಲೇವೋನಾಯ್ಡ್ ಅಂಶವಿರುವುದರಿಂದ ರಕ್ತ ಹೆಪ್ಪುಗಟ್ಟುವುದನ್ನು ಇದು ತಡೆಗಟ್ಟುತ್ತದೆ. ಪಾಶ್ರ್ವವಾಯು, ಹೃದಯಾಘಾತ ಆಗದಂತೆ ನೋಡಿಕೊಳ್ಳುತ್ತದೆ.

4. ಜೀರ್ಣಕ್ರಿಯೆಗೆ ಒಳ್ಳೆದು:

ಹುರುಳಿ ಕಾಳಿನಲ್ಲಿ ನಾರಿನಂಶ ಅಧಿಕವಿರುವುದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುವಂತೆ ಕಾರ್ಯನಿರ್ವಹಿಸುತ್ತದೆ. ಇದರಿಂದ ಮಲಬದ್ಧತೆ ಸಮಸ್ಯೆ ಬರುವುದಿಲ್ಲ. ಆಗಾಗ ಹೊಟ್ಟೆ ಉಬ್ಬುವ ಸಮಸ್ಯೆ ಇರುವವರು ಹುರುಳಿ ಟೀ ಸೇವಿಸಿದರೆ ಒಳ್ಳೆದು.

5. ತೂಕ ಇಳಿಸುತ್ತದೆ:

ಹುರುಳಿಕಾಳು ತೂಕ ಇಳಿಕೆಯಲ್ಲಿ ಉತ್ತಮ ಕಾರ್ಯ ನಿರ್ವಸುತ್ತದೆ. ಇದರಲ್ಲಿ ಕಡಿಮೆ ಕ್ಯಾಲೋರಿ ಅಧಿಕ ಆ್ಯಂಟಿಆಕ್ಸಿಡೆಂಟ್ ಇರುವುದರಿಂದ ಮೆಟಬಾಲಿಸಂ ಮೇಲೆ ಪರಿಣಾಮ ಬೀರುತ್ತದೆ. ದೇಹದಲ್ಲಿ ನೀರಿನ ಅಂಶ ಹೆಚ್ಚಿಸಿ ಬೇಡದ ಪೌಂಡ್ಸ್ ಗಳನ್ನು ನಾಶ ಮಾಡುತ್ತದೆ. ಇದರಿಂದ ತೂಕ ಇಳಿಕೆಯಾಗುತ್ತದೆ.

6. ಕ್ಯಾನ್ಸರ್ ತಡೆಗಟ್ಟುತ್ತದೆ:
ಹುರುಳಿ ಕಾಳಿನಲ್ಲಿರುವ ರುಟಿನ್ ಅಂಶ ಇರುತ್ತದೆ. ಈ ರುಟಿನ್ ಅಂಶ ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ. ಫ್ಲೇವೋನಾಯ್ಡ್ ಅಂಶವಿರುವ ಆಹಾರ ಸೇವಿಸುವುದರಿಂದ ಕರುಳಿನ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಕಿಡ್ನಿ, ಗರ್ಭಕೋಶದ ಕ್ಯಾನ್ಸರ್ ಮುಂತಾದ ಕಾಯಿಲೆಗಳು ಬರುವುದಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ ಸೊಪ್ಪು ತಿನ್ನೋದರಿಂದ ಆಗೋ ಪ್ರಯೋಜನಗಳನ್ನು ತಿಳಿದ್ರೆ, ನೀವ್ ತಿನ್ನದೇ ಸುಮ್ಮನೆ ಇರಲ್ಲ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಯುರ್ವೇದ ಪದ್ದತಿಯು ನಮ್ಮ ಹಿರಿಯರು ನಮಗೆ ನೀಡಿರುವ ಒಂದು ವರದಾನ. ವಿಶ್ವದಾದ್ಯಂತ ಈಗ ಆಯುರ್ವೇದಕ್ಕೆ ಅತ್ಯುತ್ತಮ ಹೆಸರಿದೆ ಅದಕ್ಕೆಕಾರಣ ಇಂಗ್ಲೀಷ್ ಔಷದೀಯ ಪದ್ದತಿಯಿಂದ ಹಲವಾರು ಅಡ್ಡಪರಿಣಾಮಗಳು ಉಂಟಾಗುವವು ಮತ್ತು ದೀರ್ಘಕಾಲಿಕ ಕಾಯಿಲೆಗಳು ಬರುವುದು. ಆಯುರ್ವೇದದ ಪ್ರಕಾರ ನಾವು ಅಡುಗೆಯಲ್ಲಿ ಬಳಸುವ ಪದಾರ್ಥಗಳು ಸೊಪ್ಪು, ತರಕಾರಿಗಳಲ್ಲಿರುವ ಪೋಷಕಾಂಶಗಳೇ ತುಂಬಾ ಕಾಯಿಲೆಗಳನ್ನು ವಾಸಿಮಾಡುತ್ತವೆ. ಅಂತಹ ಪೋಷಕ ಮೌಲ್ಯಗಳಿರುವ ಗಿಡ “ನುಗ್ಗೆಗಿಡ” ನುಗ್ಗೆ ಗಿಡಗಳ ಎಲೆಗಳಲ್ಲಿ, ಕಾಯಿಗಳಲ್ಲಿ, ಕಾಂಡದಲ್ಲಿ ಬಹಳ ಪೋಷಕಾಂಶಗಳಿರುತ್ತವೆ. ಬಹಳ ಜನರು ನುಗ್ಗೆಕಾಯಿಯ…

  • ಆಧ್ಯಾತ್ಮ

    ಹಿಂದೂ ಧರ್ಮದಲ್ಲಿ ಯಾರಾದ್ರು ಸತ್ತಾಗ ಕೇಶ ಮುಂಡನ ಮಾಡುತ್ತಾರೆ, ಏಕೆ ಗೊತ್ತಾ?

    ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.

  • ಆರೋಗ್ಯ

    ಪಿರಿಯಡ್ಸ್ ಸಮಯದಲ್ಲಿ ಆಗುವ ನೋವುಗಳಿಗೆ ಇಲ್ಲಿದೆ ಪರಿಹಾರ…ತಿಳಿಯಲು ಈ ಲೇಖನ ಓದಿ…

    ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು.

  • ಕಬಡ್ಡಿ

    ಈ ಸಲ ಕಪ್ಪು ನಮ್ದೇ

    ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ.  ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು.  ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…

  • ಸಿನಿಮಾ

    ಮದುವೆಗೂ ಮುನ್ನವೇ ಗರ್ಭಿಣಿಯಾದ ಕನ್ನಡ ಚಿತ್ರದಲ್ಲಿ ನಟಿಸಿದ್ದ ಸ್ಟಾರ್ ನಟಿ..!

    ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…

  • ಮನರಂಜನೆ

    ಬಿಗ್ ಬಾಸ್ ಮನೆಯಿಂದ ದಿಡೀರ್ ಆಚೆ ಬಂದ ಹರೀಶ್ ರಾಜ್ ಅವರಿಗೆ ಸಿಕ್ಕ ದೊಡ್ಡ ಸಂಭಾವನೆ ಎಷ್ಟು ಗೊತ್ತಾ.

    ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…