ಆರೋಗ್ಯ

ಬೇವು ತಿನ್ನಲು ಕಹಿ ಆದರೂ ಆರೋಗ್ಯಕ್ಕೆ ರಾಮಬಾಣದಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

106

ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ.

ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ ಒಳ್ಳೆದು ಎನ್ನಲಾಗುತ್ತೆ. ಅಷ್ಟೇ ಅಲ್ಲದೇ ಬೇವಿನ ಎಲೆಗಳನ್ನು ಅರೆದು ಅದನ್ನು ಗಾಯಗಳಿಗೆ ಹಚ್ಚಿದರೆ ಗಾಯ ಬೇಗನೇ ಮಾಗುತ್ತವೆ.

ಬೇವಿನ ಆರೋಗ್ಯಕರ ಲಾಭವೇನು?

ಲಿವರ್ ಸಮಸ್ಯೆಗೆ ಮದ್ದು:
ಬೇವಿನ ಎಲೆಗಳನ್ನು ಸೇವಿಸುವುದರಿಂದ ಲೀವರ್ ಕ್ಷಮತೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚುತ್ತದೆ. ಅಲ್ಲದೇ ರಕ್ತದಿಂದ ವಿಷಕಾರಿ ಅಂಶವನ್ನು ಹೊರಹಾಕಲು ನೆರವಾಗುತ್ತದೆ. ಜೊತೆಗೆ ಜೀರ್ಣ ಮತ್ತು ಶ್ವಾಸಕೋಶದ ವ್ಯವಸ್ಥೆಯನ್ನು ಇದು ಉತ್ತಮಗೊಳಿಸುತ್ತದೆ. ಅಲ್ಲದೇ ಬೇವಿನ ಎಣ್ಣೆ ಮತ್ತು ಬೇವಿನ ರಸಗಳನ್ನು ಸೇವಿಸುವುದರಿಂದ ದೇಹದಲ್ಲಿದ್ದ ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶವಾಗುತ್ತದೆ.

ಚರ್ಮದ ಸಮಸ್ಯೆಗೆ:
ಬೇವಿನ ಎಣ್ಣೆಯನ್ನು ಬಿಸಿ ನೀರಿನಲ್ಲಿ ಸೇರಿಸಿ ಸ್ನಾನ ಮಾಡುವುದರಿಂದ ವಿವಿಧ ಚರ್ಮರೋಗಗಳು, ತುರಿಕೆ, ಹುಳಕಡ್ಡಿ ಮೊದಲಾದ ಸಮಸ್ಯೆಗಳು ನಿವಾರಣೆಯಾಗುತ್ತದೆ. ಶೀತ ಮತ್ತು ಎಕ್ಸಿಮಾದಂತಹ ಚರ್ಮರೋಗವೂ ಕೂಡ ಇದರಿಂದ ವಾಸಿಯಾಗುತ್ತದೆ.

ತ್ವಚೆಯ ಕಲೆ ನಿವಾರಿಸುತ್ತದೆ:
ಗಾಯ ಮತ್ತು ಮೊಡವೆಗಳು ಮಾಗಿದ ಬಳಿಕ ಚರ್ಮದ ಮೇಲೆ ಕಲೆಗಳು ಉಳಿದು ಬಿಡುತ್ತದೆ. ಈ ಕಲೆಗಳನ್ನು ನಿವಾರಿಸಲು ಬೇವು ಸಹಕಾರಿಯಾಗಿದ್ದು, ಮುಖದಲ್ಲಿ ಮತ್ತೆ ಮೊಡವೆಗಳು ಆಗದಂತೆ ತಡೆಯುತ್ತದೆ.

ಚಿಕ್ಕಪುಟ್ಟ ಗಾಯಗಳಾದರೆ ಬೇವಿನ ಎಲೆಗಳ ರಸ ಅಥವಾ ಎಲೆಗಳನ್ನು ಅರೆದ ಹಚ್ಚಿದರೆ ಗಾಯಗಳು ಬೇಗ ಮಾಗುತ್ತದೆ. ಅಲ್ಲದೆ ಮೊಡವೆಗಳನ್ನು ನಿಯಂತ್ರಿಸಲು ನಿತ್ಯವೂ ಸ್ನಾನ ಮಾಡುವ ನೀರಿಗೆ ಬೇವಿನ ಎಣ್ಣೆಯ ಕೆಲವು ಹನಿಗಳನ್ನು ಸೇರಿಸಿದರೆ ತ್ವಚೆಯ ದುರ್ಗಂಧ, ಸೋಂಕುಗಳು ನಿವಾರಣೆಯಾಗುತ್ತದೆ ಹಾಗೂ ಚರ್ಮದಲ್ಲಿ ದದ್ದು, ಮೊಡವೆಗಳು ಆಗದಂತೆ ಇದು ನೋಡಿಕೊಳ್ಳುತ್ತದೆ.

ಮುಖದ ಕಾಂತಿ ಹೆಚ್ಚಿಸುತ್ತದೆ:
ಬೇವಿನ ಎಲೆಗಳನ್ನು ಹಾಕಿ ಕುದಿಸಿದ ನೀರಿನಲ್ಲಿ ಅದ್ದಿದ ಬಟ್ಟೆಯನ್ನು ಇಡೀ ರಾತ್ರಿ ಮುಖದ ಮೇಲೆ ಇಟ್ಟುಕೊಂಡು ಮಲಗಿದರೆ ಮುಖದ ಕಾಂತಿ ಹೆಚ್ಚಾಗುತ್ತೆ. ಹಾಗೆಯೇ ಈ ನೀರನ್ನು ತಲೆಗೆ ಹಚ್ಚಿ ಸ್ನಾನ ಮಾಡಿದರೆ ಕೂಡಲು ಉದುರುವಿಕೆ, ತಲೆಹೊಟ್ಟಿನ ಸಮಸ್ಯೆ ನಿವಾರಣೆ ಆಗುತ್ತದೆ.

ರಕ್ತ ಶುದ್ಧೀಕರಣಗೊಳಿಸುತ್ತೆ:
ಬೇವನ್ನು ತಿಂದರೆ ರಕ್ತ ಶುದ್ಧೀಕರಣಗೊಳ್ಳುತ್ತದೆ ಹಾಗೂ ರಕ್ತದೊತ್ತಡ ಕಡಿಮೆಯಾಗುತ್ತದೆ. ರಕ್ತದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರ ಹಾಕಿ, ರಕ್ತಸಂಚಾರ ಉತ್ತಮಗೊಳ್ಳುತ್ತದೆ. ವೃದ್ಧಾಪ್ಯ ಬೇಗನೇ ಆವರಿಸಲು ಕಾರಣವಾಗುವ free radical ಎಂಬ ಕಣಗಳನ್ನು ಬೇವು ಕೊಲ್ಲುವುದರಿಂದ ತಾರುಣ್ಯ ಬಹುಕಾಲ ಉಳಿಯುತ್ತದೆ. ಅಲ್ಲದೇ ಬೇವನ್ನು ಸೇರಿಸಿದರೆ ರಕ್ತನಾಳಗಳಲ್ಲಿ ಸಂಗ್ರಹವಾಗಿದ್ದ ಕೆಟ್ಟ ಕೊಲೆಸ್ಟ್ರಾಲ್ ನಿವಾರಣೆಯಾಗಿ, ದೇಹದಲ್ಲಿ ರಕ್ತಸಂಚಾರ ಸುಗಮಗೊಳ್ಳುತ್ತದೆ. ಇದರಿಂದ ಹೃದಯದ ಮೇಲೆ ಬೀಳುವ ಒತ್ತಡ ಕಡಿಮೆಯಾಗುತ್ತದೆ.

ಮಲೇರಿಯಾ ಜ್ವರಕ್ಕೆ:
ಬೇವಿನಲ್ಲಿರುವ ಜೆಡ್ಯುನಿನ್ (Gedunin) ಎಂಬ ರಾಸಾಯನಿಕ ಮಲೇರಿಯಾ ಜ್ವರವನ್ನು ಕಡಿಮೆಗೊಳಿಸಲು ನೆರವಾಗುತ್ತದೆ. ಬೇವಿನ ಎಲೆಗಳನ್ನು ಜಜ್ಜಿ ಮನೆಯ ಸುತ್ತ ಮುತ್ತ ಹರಡುವುದರಿಂದ ಆ ವಾಸನೆಗೆ ಸೊಳ್ಳೆಗಳು ಕಡಿಮೆ ಆಗುತ್ತದೆ. ಅಲ್ಲದೆ ಬೇವಿನ ಎಲೆಗಳನ್ನು ತಿಂದರೆ ಅಥವಾ ಅದರ ರಸವನ್ನು ಕುಡಿದರೆ ಮಲೇರಿಯಾ ಜ್ವರ ಕಡಿಮೆ ಆಗುತ್ತದೆ.

ಕ್ಯಾನ್ಸರ್ ನಿಯಂತ್ರಿಸಲು:
ನಿಯಮಿತವಾಗಿ ಬೇವಿನ ಎಲೆಗಳನ್ನು ಹಸಿಯಾಗಿ ಸೇವಿಸುವವರಲ್ಲಿ ಕ್ಯಾನ್ಸರ್ ಕಾಯಿಲೆ ಕಾಣಿಸಿಕೊಳ್ಳು ಸಾಧ್ಯತೆ ಕಡಿಮೆ. ಬೇವಿನ ಮರದ ತೊಗಟೆಯಲ್ಲಿ ಕಂಡುಬರುವ Limonoids ಮತ್ತು polysaccharides ಎಂಬ ರಾಸಾಯನಿಕಗಳು ದೇಹದಲ್ಲಿ ಕ್ಯಾನ್ಸರ್ ಮತ್ತು ಗಡ್ಡೆಯುಂಟಾಗುವುದನ್ನು ತಡೆಯುತ್ತದೆ.

ಬೇವಿನ ಎಣ್ಣೆಯ ಮಸಾಜ್:
ಬೇವಿನ ಎಣ್ಣೆ ಚರ್ಮಕ್ಕೆ ಒಳ್ಳೆದು. ಈ ಎಣ್ಣೆಯಲ್ಲಿ ಮೈಯನ್ನು ಮಸಾಜ್ ಮಾಡುವುದರಿಂದ ಕೆಳಬೆನ್ನಿನ ನೋವು, ಸಂಧಿವಾತ, ಸ್ನಾಯುಗಳಲ್ಲಿ ನೋವು ಹೀಗೆ ವಿವಿಧ ನೋವುಗಳು ಕಡಿಮೆಯಾಗುತ್ತವೆ.

ಸಂಧಿವಾತಕ್ಕೆ:
ಸಂಧಿವಾತ ಸಮಸ್ಯೆಗೆ ಬೇವಿನ ಎಲೆ ಮತ್ತು ಬೇವಿನ ತೊಗಟೆಯನ್ನು ಅರೆದು ತಯಾರಿಸಿದ ಲೇಪನ ಉತ್ತಮ ಪರಿಹಾರ ನೀಡುತ್ತದೆ. ಇದರಿಂದ ಸಂದುಗಳಲ್ಲಿ ಬಾವು, ನೋವು ಕೂಡ ಕಡಿಮೆಯಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    15 ವರ್ಷಗಳಿಂದ ಕಾಡುತ್ತಿದ್ದ ಮೆದುಳು ತಿನ್ನುವ ಹುಳು ಹೊರತೆಗೆದ ವೈದ್ಯರು,.!

    ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್‌ನಷ್ಟು ಉದ್ದವಿದ್ದ ಈ ಹುಳು…

  • ಸುದ್ದಿ

    ಹಾಸನದ ದೇವಾಲಯದಲ್ಲಿ ಪ್ರತಿ ಸೋಮವಾರ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಪೂಜೆ ನಡೆಯುವದಕ್ಕೆ ಕಾರಣವೇನು ಗೊತ್ತಾ?

    ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…

  • ದೇಶ-ವಿದೇಶ

    ಜಿಎಸ್ಟಿ (GST) ಜಾರಿಗೆ ಬಂದರೆ ಏನೆಲ್ಲಾ ಬೆಲೆಗಳು ಕಡಿಮೆಯಾಗುತ್ತೆ ಗೊತ್ತಾ??? ತಿಳಿಯಲು ಈ ಲೇಖನಿ ಓದಿ……….

    ಸರಕು ಸೇವಾ ತೆರಿಗೆ (GST) ಜಾರಿಗೆ ಬಂದಲ್ಲಿ ಬಿಂದಾಸ್‌ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.

  • ಸುದ್ದಿ

    ಟ್ರೋಲ್‍ ವಾಸಣ್ಣ ಪ್ರಸಿದ್ದಿಯ ಮಲ್ಪೆ ವಾಸುಗೆ ಖಡಕ್ ವರ್ನಿಗ್ ಕೊಟ್ಟ ಪೊಲೀಸರು!ಅಸಲಿಗೆ ಯಾರಿದು ವಾಸಣ್ಣ ಗೊತ್ತಾ?

    ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್‍ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್‍ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‍ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…

  • ಸುದ್ದಿ

    ಒಂದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ 7 ಟೀಚರ್ ಗಳು ಏಕಕಾಲದಲ್ಲಿ ಗರ್ಭಿಣಿಯರು.!

    ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…