ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ.

ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ ಒಳ್ಳೆದು ಎನ್ನಲಾಗುತ್ತೆ. ಅಷ್ಟೇ ಅಲ್ಲದೇ ಬೇವಿನ ಎಲೆಗಳನ್ನು ಅರೆದು ಅದನ್ನು ಗಾಯಗಳಿಗೆ ಹಚ್ಚಿದರೆ ಗಾಯ ಬೇಗನೇ ಮಾಗುತ್ತವೆ.
ಬೇವಿನ ಆರೋಗ್ಯಕರ ಲಾಭವೇನು?
ಲಿವರ್ ಸಮಸ್ಯೆಗೆ ಮದ್ದು:
ಬೇವಿನ ಎಲೆಗಳನ್ನು ಸೇವಿಸುವುದರಿಂದ ಲೀವರ್ ಕ್ಷಮತೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚುತ್ತದೆ. ಅಲ್ಲದೇ ರಕ್ತದಿಂದ ವಿಷಕಾರಿ ಅಂಶವನ್ನು ಹೊರಹಾಕಲು ನೆರವಾಗುತ್ತದೆ. ಜೊತೆಗೆ ಜೀರ್ಣ ಮತ್ತು ಶ್ವಾಸಕೋಶದ ವ್ಯವಸ್ಥೆಯನ್ನು ಇದು ಉತ್ತಮಗೊಳಿಸುತ್ತದೆ. ಅಲ್ಲದೇ ಬೇವಿನ ಎಣ್ಣೆ ಮತ್ತು ಬೇವಿನ ರಸಗಳನ್ನು ಸೇವಿಸುವುದರಿಂದ ದೇಹದಲ್ಲಿದ್ದ ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶವಾಗುತ್ತದೆ.

ಚರ್ಮದ ಸಮಸ್ಯೆಗೆ:
ಬೇವಿನ ಎಣ್ಣೆಯನ್ನು ಬಿಸಿ ನೀರಿನಲ್ಲಿ ಸೇರಿಸಿ ಸ್ನಾನ ಮಾಡುವುದರಿಂದ ವಿವಿಧ ಚರ್ಮರೋಗಗಳು, ತುರಿಕೆ, ಹುಳಕಡ್ಡಿ ಮೊದಲಾದ ಸಮಸ್ಯೆಗಳು ನಿವಾರಣೆಯಾಗುತ್ತದೆ. ಶೀತ ಮತ್ತು ಎಕ್ಸಿಮಾದಂತಹ ಚರ್ಮರೋಗವೂ ಕೂಡ ಇದರಿಂದ ವಾಸಿಯಾಗುತ್ತದೆ.
ತ್ವಚೆಯ ಕಲೆ ನಿವಾರಿಸುತ್ತದೆ:
ಗಾಯ ಮತ್ತು ಮೊಡವೆಗಳು ಮಾಗಿದ ಬಳಿಕ ಚರ್ಮದ ಮೇಲೆ ಕಲೆಗಳು ಉಳಿದು ಬಿಡುತ್ತದೆ. ಈ ಕಲೆಗಳನ್ನು ನಿವಾರಿಸಲು ಬೇವು ಸಹಕಾರಿಯಾಗಿದ್ದು, ಮುಖದಲ್ಲಿ ಮತ್ತೆ ಮೊಡವೆಗಳು ಆಗದಂತೆ ತಡೆಯುತ್ತದೆ.

ಚಿಕ್ಕಪುಟ್ಟ ಗಾಯಗಳಾದರೆ ಬೇವಿನ ಎಲೆಗಳ ರಸ ಅಥವಾ ಎಲೆಗಳನ್ನು ಅರೆದ ಹಚ್ಚಿದರೆ ಗಾಯಗಳು ಬೇಗ ಮಾಗುತ್ತದೆ. ಅಲ್ಲದೆ ಮೊಡವೆಗಳನ್ನು ನಿಯಂತ್ರಿಸಲು ನಿತ್ಯವೂ ಸ್ನಾನ ಮಾಡುವ ನೀರಿಗೆ ಬೇವಿನ ಎಣ್ಣೆಯ ಕೆಲವು ಹನಿಗಳನ್ನು ಸೇರಿಸಿದರೆ ತ್ವಚೆಯ ದುರ್ಗಂಧ, ಸೋಂಕುಗಳು ನಿವಾರಣೆಯಾಗುತ್ತದೆ ಹಾಗೂ ಚರ್ಮದಲ್ಲಿ ದದ್ದು, ಮೊಡವೆಗಳು ಆಗದಂತೆ ಇದು ನೋಡಿಕೊಳ್ಳುತ್ತದೆ.
ಮುಖದ ಕಾಂತಿ ಹೆಚ್ಚಿಸುತ್ತದೆ:
ಬೇವಿನ ಎಲೆಗಳನ್ನು ಹಾಕಿ ಕುದಿಸಿದ ನೀರಿನಲ್ಲಿ ಅದ್ದಿದ ಬಟ್ಟೆಯನ್ನು ಇಡೀ ರಾತ್ರಿ ಮುಖದ ಮೇಲೆ ಇಟ್ಟುಕೊಂಡು ಮಲಗಿದರೆ ಮುಖದ ಕಾಂತಿ ಹೆಚ್ಚಾಗುತ್ತೆ. ಹಾಗೆಯೇ ಈ ನೀರನ್ನು ತಲೆಗೆ ಹಚ್ಚಿ ಸ್ನಾನ ಮಾಡಿದರೆ ಕೂಡಲು ಉದುರುವಿಕೆ, ತಲೆಹೊಟ್ಟಿನ ಸಮಸ್ಯೆ ನಿವಾರಣೆ ಆಗುತ್ತದೆ.

ರಕ್ತ ಶುದ್ಧೀಕರಣಗೊಳಿಸುತ್ತೆ:
ಬೇವನ್ನು ತಿಂದರೆ ರಕ್ತ ಶುದ್ಧೀಕರಣಗೊಳ್ಳುತ್ತದೆ ಹಾಗೂ ರಕ್ತದೊತ್ತಡ ಕಡಿಮೆಯಾಗುತ್ತದೆ. ರಕ್ತದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರ ಹಾಕಿ, ರಕ್ತಸಂಚಾರ ಉತ್ತಮಗೊಳ್ಳುತ್ತದೆ. ವೃದ್ಧಾಪ್ಯ ಬೇಗನೇ ಆವರಿಸಲು ಕಾರಣವಾಗುವ free radical ಎಂಬ ಕಣಗಳನ್ನು ಬೇವು ಕೊಲ್ಲುವುದರಿಂದ ತಾರುಣ್ಯ ಬಹುಕಾಲ ಉಳಿಯುತ್ತದೆ. ಅಲ್ಲದೇ ಬೇವನ್ನು ಸೇರಿಸಿದರೆ ರಕ್ತನಾಳಗಳಲ್ಲಿ ಸಂಗ್ರಹವಾಗಿದ್ದ ಕೆಟ್ಟ ಕೊಲೆಸ್ಟ್ರಾಲ್ ನಿವಾರಣೆಯಾಗಿ, ದೇಹದಲ್ಲಿ ರಕ್ತಸಂಚಾರ ಸುಗಮಗೊಳ್ಳುತ್ತದೆ. ಇದರಿಂದ ಹೃದಯದ ಮೇಲೆ ಬೀಳುವ ಒತ್ತಡ ಕಡಿಮೆಯಾಗುತ್ತದೆ.

ಮಲೇರಿಯಾ ಜ್ವರಕ್ಕೆ:
ಬೇವಿನಲ್ಲಿರುವ ಜೆಡ್ಯುನಿನ್ (Gedunin) ಎಂಬ ರಾಸಾಯನಿಕ ಮಲೇರಿಯಾ ಜ್ವರವನ್ನು ಕಡಿಮೆಗೊಳಿಸಲು ನೆರವಾಗುತ್ತದೆ. ಬೇವಿನ ಎಲೆಗಳನ್ನು ಜಜ್ಜಿ ಮನೆಯ ಸುತ್ತ ಮುತ್ತ ಹರಡುವುದರಿಂದ ಆ ವಾಸನೆಗೆ ಸೊಳ್ಳೆಗಳು ಕಡಿಮೆ ಆಗುತ್ತದೆ. ಅಲ್ಲದೆ ಬೇವಿನ ಎಲೆಗಳನ್ನು ತಿಂದರೆ ಅಥವಾ ಅದರ ರಸವನ್ನು ಕುಡಿದರೆ ಮಲೇರಿಯಾ ಜ್ವರ ಕಡಿಮೆ ಆಗುತ್ತದೆ.
ಕ್ಯಾನ್ಸರ್ ನಿಯಂತ್ರಿಸಲು:
ನಿಯಮಿತವಾಗಿ ಬೇವಿನ ಎಲೆಗಳನ್ನು ಹಸಿಯಾಗಿ ಸೇವಿಸುವವರಲ್ಲಿ ಕ್ಯಾನ್ಸರ್ ಕಾಯಿಲೆ ಕಾಣಿಸಿಕೊಳ್ಳು ಸಾಧ್ಯತೆ ಕಡಿಮೆ. ಬೇವಿನ ಮರದ ತೊಗಟೆಯಲ್ಲಿ ಕಂಡುಬರುವ Limonoids ಮತ್ತು polysaccharides ಎಂಬ ರಾಸಾಯನಿಕಗಳು ದೇಹದಲ್ಲಿ ಕ್ಯಾನ್ಸರ್ ಮತ್ತು ಗಡ್ಡೆಯುಂಟಾಗುವುದನ್ನು ತಡೆಯುತ್ತದೆ.

ಬೇವಿನ ಎಣ್ಣೆಯ ಮಸಾಜ್:
ಬೇವಿನ ಎಣ್ಣೆ ಚರ್ಮಕ್ಕೆ ಒಳ್ಳೆದು. ಈ ಎಣ್ಣೆಯಲ್ಲಿ ಮೈಯನ್ನು ಮಸಾಜ್ ಮಾಡುವುದರಿಂದ ಕೆಳಬೆನ್ನಿನ ನೋವು, ಸಂಧಿವಾತ, ಸ್ನಾಯುಗಳಲ್ಲಿ ನೋವು ಹೀಗೆ ವಿವಿಧ ನೋವುಗಳು ಕಡಿಮೆಯಾಗುತ್ತವೆ.
ಸಂಧಿವಾತಕ್ಕೆ:
ಸಂಧಿವಾತ ಸಮಸ್ಯೆಗೆ ಬೇವಿನ ಎಲೆ ಮತ್ತು ಬೇವಿನ ತೊಗಟೆಯನ್ನು ಅರೆದು ತಯಾರಿಸಿದ ಲೇಪನ ಉತ್ತಮ ಪರಿಹಾರ ನೀಡುತ್ತದೆ. ಇದರಿಂದ ಸಂದುಗಳಲ್ಲಿ ಬಾವು, ನೋವು ಕೂಡ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…
ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?
ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.
ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…
ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.