News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಮನರಂಜನೆ

ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಕಾಲಿಗೆ ಬಿದ್ದು ಕೈ ಮುಗಿದು ತಪ್ಪಾಯಿತೆಂದು ಕೇಳಿಕೊಂಡ ಅಕ್ಷತಾ..!

144

ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ..

ಬಿಗ್ ಮನೆಯ ಮಂದಿಗೆ ಬಿಗ್‍ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ ಅಕ್ಷತಾ ಹೇಳಬೇಕಾಗಿತ್ತು.

ಟಾಸ್ಕ್ ಶುರುವಾಗಿ ರಶ್ಮಿ ಕಣ್ಣಿಗೆ ಬಟ್ಟೆ ಕಟ್ಟಲಾಗಿದ್ದು, ಮಡಿಕೆ ಒಡೆಯುತ್ತಿದ್ದರು. ಉಳಿದ ಸ್ಪರ್ಧಿಗಳು ಅವರಿಗೆ ಗೈಡ್ ಮಾಡಲು ಎಲ್ಲರೂ ಕೂಗಾಡುತ್ತಿದ್ದರು. ಈ ನಡುವೆ ಅಕ್ಷತಾ ಮಡಿಕೆಯಲ್ಲಿ ಸಿಕ್ಕ ಚೀಟಿಗಳನ್ನು ಓದಿ ಪದಾರ್ಥಗಳ ಹೆಸರನ್ನು ಹೇಳುತ್ತಿದ್ದರು. ಅಕ್ಷತಾ ಹೇಳುವ ಪದಾರ್ಥವನ್ನು ಆಂಡಿ ಬರೆಯುತ್ತಿದ್ದರು. ಆದರೆ ಎಲ್ಲರೂ ಕೂಗಾಡುತ್ತಿದ್ದ ಕಾರಣ ಅಕ್ಷತಾ ಹೇಳುತ್ತಿದ್ದ ಪದಾರ್ಥಗಳ ಹೆಸರು ಕೇಳಿಸುತ್ತಿರಲಿಲ್ಲ.

ಕೆಲವು ಬಾರಿ ಅಕ್ಷತಾ, ಆಂಡಿ ಬಳಿ ಬಂದು ಹೇಳುತ್ತಿದ್ದರು. ಈ ವೇಳೆ ಬಝರ್ ಶಬ್ಧ ಬಂತು. ಆಗ ಪಾಯಿಂಟ್ಸ್ ಇನ್ನೂ ಉಳಿದಿತ್ತು. ಹೀಗಾಗಿ ಕೋಪಗೊಂಡ ರಾಕೇಶ್, ಅಕ್ಷತಾ ವಿರುದ್ಧ ಕೂಗಾಡುತ್ತಿದ್ದರು. ಆಗ ರಾಕೇಶ್, ನೀನು ಹತ್ತಿರ ಬಂದು ಹೇಳಬೇಕಿತ್ತು. ಯಾಕಂದ್ರೆ ಇನ್ನು ಪಾಯಿಂಟ್ಸ್ ಇತ್ತು ಅಂತ ಅಕ್ಷತಾಗೆ ಹೇಳಿದ್ರು. ಆಗ ಅಕ್ಷತಾ, ಎಲ್ಲರೂ ಕೂಡಾಗುತ್ತಿದ್ದರು ಆದ್ದರಿಂದ ನನ್ನ ಧ್ವನಿ ಕೇಳಿಸುತ್ತಿರಲಿಲ್ಲ ಎಂದು ರಾಕೇಶ್‍ಗೆ ಉತ್ತರ ಕೊಟ್ಟರು.

ಮಾತು ಮುಂದುವರಿಸಿದ ರಾಕೇಶ್, ನೀನು ಎಲ್ಲರ ಧ್ವನಿಗಿಂತ ಜೋರಾಗಿ ಕೇಳಿಸುವ ರೀತಿ ಹೇಳಬೇಕಿತ್ತು ಎಂದು ಅಕ್ಷತಾಗೆ ಹೇಳಿದರು. ಇದರಿಂದ ಬೇಸರಗೊಂಡ ಅಕ್ಷತಾ ತಪ್ಪು ನನ್ನದೆ, ಕ್ಷಮಿಸಿ ಎಂದು ಹೇಳಿ ಕೈ ಮುಗಿದು ರಾಕೇಶ್ ಕಾಲಿಗೆ ಬಿದ್ದಿದ್ದಾರೆ. ಬಳಿಕ ಇದೇ ವಿಚಾರಕ್ಕೆ ಅಕ್ಷತಾ ಮತ್ತು ರಾಕೇಶ್ ನಡುವೆ ಮಾತಿನ ಚಕಮಕಿ ನಡೆದಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಿಚ್ಚನ ನಳಪಾಕ ಸೌಟು ಹಿಡಿದು ಮೊಟ್ಟೆ ದೋಸೆ ಮಾಡಿದ ಸುದೀಪ್…!

    ‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ. ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು…

  • ಸುದ್ದಿ

    ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಪೆಟ್ರೋಲ್ ಮತ್ತು ಡೀಸೆಲ್ ಬೇಡಿಕೆ ಕುಸಿತ,.!

    ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…

  • ಸುದ್ದಿ

    ಕರೀನಾಳ “ಸ್ನೇಕ್ ಚೈನ್ ‘’ ಬೆಲೆ ಕೇಳಿದರೆ ಅಚ್ಚರಿಯಂತು ಗ್ಯಾರಂಟಿ..!ಅಷ್ಟಕ್ಕೂ ಅದರ ಬೆಲೆ ಎಷ್ಟು ಗೊತ್ತ.?

    ಬಾಲಿವುಡ್ ನಟಿ ಕರೀನಾ ಕಪೂರ್ ಹುಟ್ಟು ಹಬ್ಬದ ನಂತ್ರ ಡಾನ್ಸ್ ಇಂಡಿಯಾ ಡಾನ್ಸ್ ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಡಾನ್ಸ್ ಇಂಡಿಯಾ ಡಾನ್ಸ್ ಫೈನಲ್ ನಲ್ಲಿ ಜಡ್ಜ್ ಆಗಿ ಕರೀನಾ ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ಕರೀನಾ ಸ್ಟೈಲ್ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದೆ. ಸೆಟ್ ನಲ್ಲಿ ಕರೀನಾ ಫ್ಯಾಷನ್ ಎಲ್ಲರನ್ನು ಆಕರ್ಷಿಸಿದೆ. ವಿಶೇಷವಾಗಿ ಕರಿನಾ ಕತ್ತಿಗೆ ಹಾಕಿದ್ದ ಸ್ನೇಕ್ ಚೈನ್. ಕರೀನಾ ಡೈಮಂಡ್ ಸ್ನೇಕ್ ಚೈನ್ ಧರಿಸಿ ಬಂದಿದ್ದರು. ಕರೀನಾರ ಈ ಚೈನ್ ಐಷಾರಾಮಿ ಕಾರುಗಳಿಗಿಂತ ದುಬಾರಿ ಎನ್ನಲಾಗಿದೆ. ಇದ್ರ…

  • ಆಧ್ಯಾತ್ಮ, ಜ್ಯೋತಿಷ್ಯ

    ಶುಭ ಶನಿವಾರದಂದು ಈ ವಸ್ತುಗಳು ನಿಮ್ಮ ಕಣ್ಣಿಗೆ ಬಿದ್ರೆ ಅದೃಷ್ಟವೋ ಅದೃಷ..!

    ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ವಾರದ ಏಳೂ ದಿನವನ್ನು ಒಂದೊಂದು ದೇವತೆಗಳಿಗೆ ಅರ್ಪಣೆ ಮಾಡಲಾಗಿದೆ. ಅದ್ರಲ್ಲೂ ಶನಿವಾರಕ್ಕೆ ವಿಶೇಷ ಮಹತ್ವವಿದೆ. ಶನಿವಾರ ಶನಿದೇವನಿಗೆ ಪೂಜೆ ಮಾಡಲಾಗುತ್ತದೆ. ಕೋಪದ ದೇವರು ಶನಿ ಕೃಪೆಗೆ ಪಾತ್ರರಾಗಲು ಭಕ್ತರು ಹರಸಾಹಸ ಪಡ್ತಾರೆ. ಸಾಡೆಸಾತ್ ಶನಿ ಇದ್ದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಅಂತವರು ಶನಿಯ ವಿಶೇಷ ಆರಾಧನೆ ಮಾಡಬೇಕಾಗುತ್ತದೆ. ಶನಿವಾರ ವಿಶೇಷ ಪೂಜೆ, ವೃತದ ಜೊತೆ ಶನಿವಾರ ಬೆಳಿಗ್ಗೆ ಕೆಲವೊಂದು ವಸ್ತುಗಳು ಕಣ್ಣಿಗೆ ಬಿದ್ರೆ ಶುಭಕರ. ಕಪ್ಪು ನಾಯಿ ಮೇಲೆ ಶನಿ ಸವಾರಿ ಮಾಡ್ತಾನೆ…

  • ಸುದ್ದಿ

    ಅಪ್ಪಟ ರಾಪ್ಟ್ರೀಯವಾದಿ,ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಇನ್ನಿಲ್ಲ….!

    ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್  ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ  67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…