ಆರೋಗ್ಯ

ಹಾಗಲಕಾಯಿಯನ್ನು ನೀವು ತಿನ್ನೋದಿಲ್ವಾ ಹಾಗಾದರೆ ಈ ಹಾಗಲಕಾಯಿಯ ಮಹಿಮೆಯನ್ನು ನೋಡಿ.

198

ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್‌ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ.

ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ ಅತ್ಯಂತ ಪರಿಣಾಮಕಾರಿಯಾಗಿದೆ. ಈ ರಸ ಹೊಟ್ಟೆಯಲ್ಲಿಳಿದ ಬಳಿಕ ಜೀರ್ಣರಸಗಳನ್ನು ಅಗತ್ಯಪ್ರಮಾಣದಲ್ಲಿ ಸ್ರವಿಸಲು ಜಠರಕ್ಕೆ ಪ್ರಚೋದನೆ ನೀಡುತ್ತದೆ. ಪರಿಣಾಮವಾಗಿ ಹುಳಿತೇಗು, ಗ್ಯಾಸ್ಟ್ರಿಕ್, ಹೊಟ್ಟೆಯ ಹುಣ್ಣು ಮೊದಲಾದ ತೊಂದರೆಗಳಿಂದ ಕಾಪಾಡಿದಂತಾಗುತ್ತದೆ. ವಾರಕ್ಕೊಮ್ಮೆ ಬೆಳಿಗ್ಗೆದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿಯ ರಸವನ್ನು ಸೇವಿಸುವುದರಿಂದ ಆರೋಗ್ಯ ಉತ್ತಮಗೊಳ್ಳುತ್ತದೆ.

ರಕ್ತದಲ್ಲಿರುವ ಸಕ್ಕರೆಯ ಅಂಶವನ್ನು ತಗ್ಗಿಸುತ್ತದೆ  : ಪ್ರತಿದಿನ ಬೆಳಿಗ್ಗೆ ಒಂದು ಲೋಟ ಹಾಗಲಕಾಯಿಯ ರಸವನ್ನು ಖಾಲಿಹೊಟ್ಟೆಯಲ್ಲಿ ಕುಡಿದರೆ ರಕ್ತದಲ್ಲಿ ಹೆಚ್ಚಾಗಿರುವ ಸಕ್ಕರೆಯ ಅಂಶ ಮೂರೇ ದಿನದಲ್ಲಿ ತಹಬಂದಿಗೆ ಬರುತ್ತದೆ. ಇದಕ್ಕೆ ಕಾರಣ ಹಾಗಲಕಾಯಿಯಲ್ಲಿರುವ ಕಾರಣವಾಗಿವೆ. ವಾಸ್ತವಾಗಿ ರಕ್ತದಲ್ಲಿನ ಸಕ್ಕರೆ ಉಪಯೋಗಿಸಲ್ಪಡದೇ ವಿಸರ್ಜಿಸಲಾಗಲು ಇನ್ಸುಲಿನ್ ಪ್ರಮಾಣ ಮಹತ್ವದ ಪಾತ್ರ ವಹಿಸುತ್ತದೆ. ಈ ಪೋಷಕಾಂಶಗಳು ಇನ್ಸುಲಿನ್ ಕೊರತೆಯಾಗದಂತೆ ನೋಡಿಕೊಳ್ಳುವುದೇ ಹಾಗಲಕಾಯಿಯ ಈ ಸಾಮರ್ಥ್ಯಕ್ಕೆ ಕಾರಣವಾಗಿದೆ.

ಕ್ಯಾನ್ಸರ್‌ನಿಂದ ಕಾಪಾಡುತ್ತದೆ : ರಕ್ತದಲ್ಲಿ ಇನ್ಸುಲಿನ್ ಪ್ರಮಾಣ ಕಡಿಮೆಯಾಗಲು ಕ್ಯಾನ್ಸರ್ ಗೆ ತುತ್ತಾಗಿ ಬಾಡಲಿಯ ಕಾರ್ಯಕ್ಷಮತೆ ಕುಸಿಯುವುದು ಪ್ರಮುಖ ಕಾರಣವಾಗಿದೆ. ಹಾಗಲಕಾಯಿಯಲ್ಲಿರುವ ಪೋಷಕಾಂಶಗಳು ಈ ಕ್ಯಾನ್ಸರ್ ಗೆ ಕಾರಣವಾದ ಅಪಾಯಕಾರಿ ಜೀವಕೋಶಗಳನ್ನು ಬೆಳೆಯದಂತೆ ತಡೆಯುತ್ತದೆ. ಪರಿಣಾಮವಾಗಿ ಬಾಡಲಿ ಸುಕ್ಷಮವಾಗಿ ಕಾರ್ಯನಿರ್ವಹಿಸಿ ರಕ್ತಕ್ಕೆ ಅಗತ್ಯವಾದ ಪ್ರಮಾಣದಲ್ಲಿ ಇನ್ಸುಲಿನ್ ಅನ್ನು ಉತ್ಪಾದಿಸಿಕೊಡಲು ಸಾಧ್ಯವಾಗುತ್ತದೆ.

ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ : ಹಾಗಲಕಾಯಿಯ ರಸದಲ್ಲಿ ಬೀಟಾ-ಕ್ಯಾರೋಟೀನ್ ಮತ್ತು ವಿಟಮಿನ್ ಎ ಪೋಷಕಾಂಶಗಳು ಹೇರಳವಾಗಿರುವುದರಿಂದ ಕಣ್ಣಿಗೆ ಅಗತ್ಯವಾದ ಪೋಷಕಾಂಶಗಳು ದೊರೆತು ಕಣ್ಣಿನ ತೊಂದರೆಗಳಿಂದ ರಕ್ಷಣೆ ನೀಡಿದಂತಾಗುತ್ತದೆ. ಅಲ್ಲದೇ ಉತ್ತಮ ಪ್ರಮಾಣದಲ್ಲಿರುವ ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟುಗಳು ಮಧುಮೇಹದ ಕಾರಣದಿಂದಾಗಿ ಉತ್ಪತ್ತಿಯಾಗುವ ದೃಷ್ಟಿದೋಷದಿಂದ (oxidative stress) ಕಣ್ಣುಗಳನ್ನು ಕಾಪಾಡುತ್ತವೆ. ಹಾಗಲಕಾಯಿಯ ನಿಯಮಿತ ಸೇವನೆಯಿಂದ ಕಣ್ಣುಗಳ ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು ಬರಲು ಸಾಧ್ಯವಾಗುತ್ತದೆ.

ಮೊಡವೆಗಳಿಗೆ : ಹಾಗಲಕಾಯಿಯ ಸೇವನೆಯು ಮೊಡವೆಗಳ ನಿವಾರಣೆಗೆ ಸಹಕಾರಿಯಾಗಿದೆ ಮಾತ್ರವಲ್ಲದೇ ಆಳವಾದ ಚರ್ಮದ ಸೋಂಕುಗಳಿಗೂ ಶಮನಕಾರಿಯಾಗಿದೆ. ಹಾಗಲಕಾಯಿಯ ರಸವನ್ನು ನಿಂಬೆ ಹಣ್ಣಿನ ರಸದೊಂದಿಗೆ ಬೆರೆಸಿ, ಪ್ರತಿದಿನ ಖಾಲಿ ಹೊಟ್ಟೆಗೆ 6 ತಿಂಗಳುಗಳ ಕಾಲ ಸೇವಿಸಿರಿ ಇಲ್ಲವೇ ನಿಮ್ಮ ನಿರೀಕ್ಷಿತ ಫಲಿತಾಂಶ ದೊರೆಯುವವರೆಗೆ ಸೇವನೆಯನ್ನು ಮುಂದುವರೆಸಿರಿ.

ರಕ್ತವನ್ನು ಶುದ್ಧೀಕರಿಸುತ್ತದೆ : ಪ್ರತಿದಿನ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿ ರಸವನ್ನು ಸೇವಿಸುವುದರಿಂದ ರಕ್ತ ಶುದ್ಧಿಗೊಂಡು ಚರ್ಮದ ವಿವಿಧ ತೊಂದರೆಗಳು ಮಾಯವಾಗಿ ಕಾಂತಿಯುಕ್ತ ಚರ್ಮ ಪಡೆಯಲು ಸಾಧ್ಯವಾಗುತ್ತದೆ. ಶುದ್ದೀಕರಣಗೊಂಡ ರಕ್ತದ ಮೂಲಕ ಇಡಿಯ ಶರೀರ ಆರೋಗ್ಯದಿಂದ ಕಂಗೊಳಿಸುತ್ತದೆ.

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಮಾಡುತ್ತದೆ ಹಾಗಲಕಾಯಿಯಲ್ಲಿ ಫೈಟೋನ್ಯೂಟ್ರಿಯೆಂಟ್‌ಗಳೆಂಬ ಆಂಟಿ ಆಕ್ಸಿಡೆಂಟುಗಳಿದ್ದು ಇವು ಕೆಟ್ಟ ಕೊಲೆಸ್ಟಾಲ್ ಕಣಗಳನ್ನು ತಮ್ಮೊಂದಿಗೆ ಅಂಟಿಸಿಕೊಂಡು ಹೋಗುವ ಕ್ಷಮತೆ ಪಡೆದಿವೆ. ಹಾಗಲಕಾಯಿಯನ್ನು ತರಕಾರಿಯ ರೂಪದಲ್ಲಿ ಆಲಿವ್ ಎಣ್ಣೆಯೊಡನೆ ಸೇವಿಸಿದರೆ ಕೊಂಚ ಕಹಿ ಎನಿಸಿದರೂ ನಿಮ್ಮ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ನಿವಾರಿಸುವ ಮೂಲಕ ಆರೋಗ್ಯವನ್ನು ವೃದ್ಧಿಸುತ್ತದೆ.

ಮಧುಮೇಹ ಗುಣಪಡಿಸಲು ನೆರವಾಗುತ್ತದೆ :ಬಾಳೆಹಣ್ಣು ಹಣ್ಣುಗಳು ಆರೋಗ್ಯ ರಹಸ್ಯಗಳನ್ನು ಮಧುಮೇಹವನ್ನು ಗುಣಪಡಿಸಲು ಹಾಗಲಕಾಯಿಯ ಜ್ಯೂಸ್ ಅತಿ ಸಾಮಾನ್ಯವಾದ, ಜನಪ್ರಿಯ ಪರಿಹಾರವಾಗಿದೆ. insulin ಗೆ ಸಮನಾದ ಕೆಲವು ರಾಸಾಯನಿಕಗಳು ಹಾಗಲಕಾಯಿಯಲ್ಲಿದ್ದು, ಅವು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡುತ್ತವೆ.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಅಕ್ಕಿ ತೊಳೆದ ನೀರನ್ನು ಚೆಲ್ಲುವ ಮೊದಲು ಇದನ್ನು ತಿಳಿದುಕೊಳ್ಳಿ.

    ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ.  ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…

  • ಉಪಯುಕ್ತ ಮಾಹಿತಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ನೀಡದಿರಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ   ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…

  • ಸುದ್ದಿ

    ಕಣ್ಣಲ್ಲಿ ನೀರು ತುಂಬುತ್ತೆ ಆ ಪುಟ್ಟ ಬಾಲಕನ ಮನಕಲಕುವ ಕಥೆ…..!

    ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ‌ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ‌ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…

  • inspirational

    ಲಾಕ್ಡೌನ್ ಮೊದಲು ಮತ್ತು ನಂತರ ಗಂಗಾ ನದಿ: ನೀವು ತಿಳಿದುಕೊಳ್ಳಬೇಕಾದ 5 ಸಂಗತಿಗಳು

    ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್‌ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್‌ನಲ್ಲಿ…

  • ದೇವರು-ಧರ್ಮ

    ಹನುಮಂತ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…

  • ಉಪಯುಕ್ತ ಮಾಹಿತಿ

    ಡ್ರೈವಿಂಗ್ ಲೈಸೆನ್ಸ್ ರಿನಿವಲ್ ಅಗಲಿ ಅಡ್ರೆಸ್ ಚೇಂಜ್ ಆಗಲಿ ಈಗ ತುಂಬಾ ಸುಲಭ!ತಿಳಿಯಲು ಈ ಮಾಹಿತಿ ನೋಡಿ..

    ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….