ಸುದ್ದಿ

ನೀರಿಗಾಗಿ ಕಾದು ಕುಳಿತಿದ್ದವರು ನಲ್ಲಿ ತಿರುವಿದ ತಕ್ಷಣ ಬಂತು ರಕ್ತ…ಕಾರಣ?

112

ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ.

ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ.

ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ ಖಾನೆ ಹಾಗೂ ಮೀನು ಮಾರುಕಟ್ಟೆಯ ಗಲೀಜು ನೀರು ಕೂಡುತ್ತಿರುವುದರಿಂದ ಕುಡಿಯುವ ನೀರಿನಲ್ಲಿ ರಕ್ತದ ನೀರು ಬರುತ್ತಿದೆ. ಈ ಹಿಂದೆ ಕೂಡಾ ರಸ್ತೆಯ ಮೇಲೆಯೇ ಕಸಾಯಿ ಖಾನೆಯ ನೀರು ಹರಿಯುತ್ತಿತ್ತು. ಆದರೆ ಈಗ ಅದೇ ಕಸಾಯಿ ಖಾನೆ ಹಾಗೂ ಮೀನು ಮಾರುಕಟ್ಟೆಯ ಗಲಿಜು ನೀರು ಜನರ ಮನೆಗೆ ಬರುತ್ತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಒಂದೆಡೆ ಬರಗಾಲದಿಂದ ಕುಡಿಯಲು ನೀರಿಲ್ಲದೇ ಜನರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಆದರೆ ಇಲ್ಲಿಯ ಜನರಿಗೆ ಕುಡಿಯುವ ನೀರು ಹೋಗಲಿ ಬಳಸಲು ಕೂಡ ನೀರಿಲ್ಲದಂತೆ ಆಗಿದೆ. ಇದಕ್ಕೆಲ್ಲ ಪಾಲಿಕೆ ಹಾಗೂ ಜಲ ಮಂಡಳಿಯ ನಿರ್ಲಕ್ಷ್ಯ ಕಾರಣ ಎಂದು ಜನರು ಹಿಡಿ ಶಾಪ ಹಾಕುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಪ್ರದಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸುವ ಧೈರ್ಯ ಒಂದಿರುವವರು ಯಾರು ಗೊತ್ತ….!

    ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…

  • ವಿಸ್ಮಯ ಜಗತ್ತು

    ಈತ ಮಗುವಿಗೆ ಜನ್ಮ ನೀಡಿದ ಮೊದಲ ಬ್ರಿಟನ್ ಪುರುಷ!ಶಾಕ್ ಆಗ್ತೀರ…ಈ ಲೇಖನಿ ಓದಿ…

    ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್‌ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…

  • ಉಪಯುಕ್ತ ಮಾಹಿತಿ, ದೇವರು

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಒಮ್ಮೆ ನೋಡಿ.!

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…

  • ವಿಸ್ಮಯ ಜಗತ್ತು

    ತಲೆ ಇಲ್ಲದೆ ಜೀವಂತವಾಗಿ ಒಂದು ವಾರದಿಂದ ಓಡಾಡುತ್ತಿರುವ ಈ ಕೋಳಿ ವೈದ್ಯ ಲೋಕಕ್ಕೆ ಸವಾಲಾಗಿದೆ.!ತಿಳಿಯಲು ಈ ಲೇಖನ ಓದಿ…

    ಒಂದು ಕೋಳಿ ತಲೆ ತೆಗೆದ ಮೇಲೆ ಎಷ್ಟು ಕಾಲ ಬದುಕಬಹುದು..? ಈ ಪ್ರಶ್ನೆ ನಿಮ್ಮನ್ನು ಕೇಳಿದ್ರೆ, ನೀವು ಹೇಳೋದು ಒಂದೇ ನಿನ್ನಷ್ಟು ಮೂರ್ಖ ಬೇರೆ ಯಾರು ಇಲ್ಲ ಅಂತ.ನೀವು ಹಾಗೆ ಅನ್ನೋದ್ರಲ್ಲಿ ಏನೂ ಅಚ್ಚರಿಯಿಲ್ಲ ಬಿಡಿ. ಯಾಕಂದ್ರೆ ಕೋಳಿ ತಲೆ ತೆಗೆದ ಮೇಲೆ ಕೋಳಿ ಬದುಕೋಕೆ ಹೇಗೆ ಸಾಧ್ಯ ಅಲ್ವ. ಆದ್ರೆ, ನೀವೂ ಹಾಗೆ ಅನ್ಕೊಂಡಿದ್ರೆ ಅದು ಸುಳ್ಳು.ಯಾಕಂದ್ರೆ ಇಲ್ಲಿ ಕೋಳಿ ಒಂದರ ಬದುಕಿಗಾಗಿ ನಡೀತಿರುವ ಹೋರಾಟವೋ ಅಥವಾ ಪವಾಡವೋ ಗೊತ್ತಿಲ್ಲ, ತಲೆ ತೆಗೆದ ಮೇಲೇನೂ ಒಂದು…