ಸುದ್ದಿ

ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

125

ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ.

ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ ಕುರ್ಚಿ ಗಿಡಗಳನ್ನು ಸ್ವಾಭಾವಿಕವಾಗಿ ಬೆಳೆಸಲಾಗುತ್ತಿದೆ. ಗಿಡಗಳ ಮೂಲಕ ಇಲ್ಲಿ 250 ಚೇರ್‍ಗಳು, 100 ಲ್ಯಾಂಪ್‍ಗಳು ಮತ್ತು 50 ಟೇಬಲ್‍ಗಳನ್ನು ಅಭಿವೃದ್ದಿಗೊಳಿಸಲಾಗುತ್ತಿದೆ.ಕುರ್ಚಿ ಗಿಡ ಬೆಳೆಯಲು ಗೋವಿನ್‍ಗೆ ಬಾಲ್ಯವೇ ಪ್ರೇರಣೆ. ಬೋನ್ಸಾಯಿ ಗಿಡಗಳು ಬೆಳೆದು ಕುರ್ಚಿಯಂತೆ ಕಾಣುತ್ತಿತ್ತು. ಅಲ್ಲದೇ ಗೋವಿನ್‍ಗೆ ಬೆನ್ನುಲುಬು ಸಮಸ್ಯೆ ಇತ್ತು. ಬಾಲ್ಯದಲ್ಲಿ ಅವರ ಬೆನ್ನು ಮೂಳೆ ಸೊಟ್ಟವಾಗಿತ್ತು. ಅದನ್ನು ಸರಿಪಡಿಸಲು ಹಲವು ವರ್ಷಗಳ ಕಾಲ ಮೆಟಲ್ ಫ್ರೇಮ್ ಧರಿಸಿದ್ದರು. ಕುರ್ಚಿ ಗಿಡ ಬೆಳೆಯಲು ಗೋವಿನ್ 2006ರಲ್ಲಿ ಯತ್ನಿಸಿದರು. ಇಂಗ್ಲೆಂಡ್‍ನ ಪೀಕ್ ಜಿಲ್ಲೆಯಲ್ಲಿ ಎರಡು ತುಂಡು ನೆಲದಲ್ಲಿ ಅವರು ಮರದ ಕುರ್ಚಿಗಳನ್ನು ಸ್ವಾಭಾವಿಕವಾಗಿ ಬೆಳೆಸಲು ಮುಂದಾದರು.

2012ರಲ್ಲಿ ತಮ್ಮ ಯೋಜನೆಯನ್ನು ವಿಸ್ತರಿಸಿದರು. ಅದೇ ವರ್ಷ ಅಲೈಸ್ ಜೊತೆ ಗೋವಿನ್ ವಿವಾಹವಾಯಿತು. ದೊಡ್ಡ ಮಟ್ಟದಲ್ಲಿ ಮರದ ಕುರ್ಚಿಗಳನ್ನು ಬೆಳೆಯಬೇಕೆಂಬ ಅಭಿಲಾಷೆ ದುರಂತದಲ್ಲಿ ಅಂತ್ಯವಾಯಿತು. ಈ ಗಿಡಗಳನ್ನು ಹಸುಗಳು ಮತ್ತು ಮೊಲಗಳು ತಿಂದು ಹಾಕಿದವು. ಇದರಿಂದ ದೃತಿಗಡೆದ ದಂಪತಿ ಬೆಳವಣಿಗೆಯನ್ನು ಕುಂಠಿತ ಗೊಳಿಸದೆ ಮರವನ್ನು ಕುರ್ಚಿ ಆಕಾರದಲ್ಲಿ ಬೆಳೆಸಲು ಪರಿಣಾಮಕಾರಿ ಮಾರ್ಗ ಕಂಡುಕೊಂಡರು.

ಬೆಳೆಯುತ್ತಿರುವ ಕಾಂಡಗಳನ್ನು ಸರಿಯಾದ ದಿಕ್ಕಿನಲ್ಲಿ ಹಬ್ಬಿ ಕುರ್ಚಿಯ ಆಕಾರ ಪಡೆಯುವಂತೆ ಮಾಡಿದರು. ರೆಂಬೆಗಳು ಒಂದಕ್ಕೊಂದು ಬೆಸೆದುಕೊಳ್ಳಲು ಕಸಿ ವಿಧಾನ ಅನುಸರಿಸಿದರು. ಇವರ ಶ್ರಮ ಫಲ ನೀಡಿತು. ಕುರ್ಚಿಗಳು 12,480 ಡಾಲರ್, ಲ್ಯಾಂಪ್‍ಗಳು 2,870 ಡಾಲರ್ ಹಾಗೂ ಮೇಜುಗಳು 15,600 ಡಾಲರ್ ಮೌಲ್ಯ ಹೊಂದಿವೆ.ತೋಟದಲ್ಲೇ ಬೆಳೆಯುವ ಈ ಗಿಡ ಪೂರ್ಣಪ್ರಮಾಣದಲ್ಲಿ ಕುರ್ಚಿಯ ರೂಪ ಪಡೆಯಲು ಆರರಿಂದ ಒಂಭತ್ತು ವರ್ಷಗಳು ಬೇಕು. ಅಲ್ಲದೇ ಇದು ಸಂಪೂರ್ಣ ಒಣಗಲು ತೆಗೆದುಕೊಳ್ಳುವ ಅವಧಿ ಒಂದು ವರ್ಷ. 2030ರ ವೇಳೆಗೆ ಈ ಫರ್ನಿಚರ್ ಫಾರಂನನ್ನು ಮತ್ತಷ್ಟು ವಿಸ್ತರಿಸಲು ದಂಪತಿ ಬಯಸಿದ್ದಾರೆ. ಇದು ನಿವೃತ್ತರಾಗಿ ವಿಶ್ರಾಂತಿ ಪಡೆಯುವ ಮಂದಿಗೆ ಸೂಕ್ತವಾದ ಕುರ್ಚಿ ಎನಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • ಸುದ್ದಿ

    ತೆಲಂಗಾಣದ ಶಾಲಾ ಹಾಸ್ಟೆಲ್ ಬೆಂಕಿಗೆ ಆಹುತಿ: ವಿದ್ಯಾರ್ಥಿಯ ದುರ್ಮರಣ……!

    ಶಾಲಾ ಹಾಸ್ಟೆಲ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪುಟ್ಟ ಮಕ್ಕಳಿರುವ ಶಾಲೆ, ಹಾಸ್ಟೆಲ್‌ಗಳಲ್ಲಿ ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಹಾಗಿರುವಾಗ ಬೆಂಕಿ, ಶಿಥಿಲ ಕಟ್ಟಡಗಳ ಬಗ್ಗೆ ನಿಗಾ ಇಡಬೇಕಾಗಿರುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ. ಶಾಲಾ ಹಾಸ್ಟೆಲ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ವರ್ಷದ ವಿದ್ಯಾರ್ಥಿ ಬೆಂಕಿಯಲ್ಲೇ ಬೆಂದು ಮೃತಪಟ್ಟಿದ್ದಾನೆ. ತೆಲಂಗಾಣಾದ ಖಮ್ಮಮ್‌ನಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಹಾಸ್ಟೆಲ್‌ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ. ಅಷ್ಟೇ ಅಲ್ಲದೆ ಹಾಸ್ಟೆಲ್‌…

  • inspirational

    ಮಕ್ಕಳ ತಂದೆ ತಾಯಿಯರಿಗೆ ರಾಜ್ಯ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್.! ಈ ಮಾಹಿತಿ ನೋಡಿ.

    ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ…

  • ಆಮೆ
    Animals, India, tourism

    ಮನುಷ್ಯನಿಲ್ಲದ ಭಾರತದಲ್ಲಿ ರಸ್ತೆಗಳನ್ನು ಪ್ರಾಣಿಗಳು ಅವರಿಸುತ್ತಿವೆ.

    ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.

  • ಸುದ್ದಿ

    ಪ್ರೇಕ್ಷಕರಿಗೆ ಮತ್ತೊಂದು ಗುಡ್​ ನ್ಯೂಸ್ ಕೊಡಲಿರುವ ಕಿಚ್ಚ ಸುದೀಪ್

    ಅಭಿನಯ ಚಕ್ರವರ್ತಿ ಬಾದ್​ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್​ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್​​​. ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್​ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ. ‘ಕೋಟಿಗೊಬ್ಬ-3’ ಸಿನಿಮಾದ…

  • ಕ್ರೀಡೆ

    ವೈರಲ್ ಆಯ್ತು ಟೆನಿಸ್ ತಾರೆ ಸಾನಿಯಾ ಮಿರ್ಜಾ, ತನ್ನ ಮಗುವಿನೊಂದಿಗೆ ಇರುವ ಫೋಟೋ..!ಮಗು ಹೇಗಿದೆ ಗೊತ್ತಾ..?

    ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.   ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…