News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸುದ್ದಿ

ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

127

ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ.

ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ ಕುರ್ಚಿ ಗಿಡಗಳನ್ನು ಸ್ವಾಭಾವಿಕವಾಗಿ ಬೆಳೆಸಲಾಗುತ್ತಿದೆ. ಗಿಡಗಳ ಮೂಲಕ ಇಲ್ಲಿ 250 ಚೇರ್‍ಗಳು, 100 ಲ್ಯಾಂಪ್‍ಗಳು ಮತ್ತು 50 ಟೇಬಲ್‍ಗಳನ್ನು ಅಭಿವೃದ್ದಿಗೊಳಿಸಲಾಗುತ್ತಿದೆ.ಕುರ್ಚಿ ಗಿಡ ಬೆಳೆಯಲು ಗೋವಿನ್‍ಗೆ ಬಾಲ್ಯವೇ ಪ್ರೇರಣೆ. ಬೋನ್ಸಾಯಿ ಗಿಡಗಳು ಬೆಳೆದು ಕುರ್ಚಿಯಂತೆ ಕಾಣುತ್ತಿತ್ತು. ಅಲ್ಲದೇ ಗೋವಿನ್‍ಗೆ ಬೆನ್ನುಲುಬು ಸಮಸ್ಯೆ ಇತ್ತು. ಬಾಲ್ಯದಲ್ಲಿ ಅವರ ಬೆನ್ನು ಮೂಳೆ ಸೊಟ್ಟವಾಗಿತ್ತು. ಅದನ್ನು ಸರಿಪಡಿಸಲು ಹಲವು ವರ್ಷಗಳ ಕಾಲ ಮೆಟಲ್ ಫ್ರೇಮ್ ಧರಿಸಿದ್ದರು. ಕುರ್ಚಿ ಗಿಡ ಬೆಳೆಯಲು ಗೋವಿನ್ 2006ರಲ್ಲಿ ಯತ್ನಿಸಿದರು. ಇಂಗ್ಲೆಂಡ್‍ನ ಪೀಕ್ ಜಿಲ್ಲೆಯಲ್ಲಿ ಎರಡು ತುಂಡು ನೆಲದಲ್ಲಿ ಅವರು ಮರದ ಕುರ್ಚಿಗಳನ್ನು ಸ್ವಾಭಾವಿಕವಾಗಿ ಬೆಳೆಸಲು ಮುಂದಾದರು.

2012ರಲ್ಲಿ ತಮ್ಮ ಯೋಜನೆಯನ್ನು ವಿಸ್ತರಿಸಿದರು. ಅದೇ ವರ್ಷ ಅಲೈಸ್ ಜೊತೆ ಗೋವಿನ್ ವಿವಾಹವಾಯಿತು. ದೊಡ್ಡ ಮಟ್ಟದಲ್ಲಿ ಮರದ ಕುರ್ಚಿಗಳನ್ನು ಬೆಳೆಯಬೇಕೆಂಬ ಅಭಿಲಾಷೆ ದುರಂತದಲ್ಲಿ ಅಂತ್ಯವಾಯಿತು. ಈ ಗಿಡಗಳನ್ನು ಹಸುಗಳು ಮತ್ತು ಮೊಲಗಳು ತಿಂದು ಹಾಕಿದವು. ಇದರಿಂದ ದೃತಿಗಡೆದ ದಂಪತಿ ಬೆಳವಣಿಗೆಯನ್ನು ಕುಂಠಿತ ಗೊಳಿಸದೆ ಮರವನ್ನು ಕುರ್ಚಿ ಆಕಾರದಲ್ಲಿ ಬೆಳೆಸಲು ಪರಿಣಾಮಕಾರಿ ಮಾರ್ಗ ಕಂಡುಕೊಂಡರು.

ಬೆಳೆಯುತ್ತಿರುವ ಕಾಂಡಗಳನ್ನು ಸರಿಯಾದ ದಿಕ್ಕಿನಲ್ಲಿ ಹಬ್ಬಿ ಕುರ್ಚಿಯ ಆಕಾರ ಪಡೆಯುವಂತೆ ಮಾಡಿದರು. ರೆಂಬೆಗಳು ಒಂದಕ್ಕೊಂದು ಬೆಸೆದುಕೊಳ್ಳಲು ಕಸಿ ವಿಧಾನ ಅನುಸರಿಸಿದರು. ಇವರ ಶ್ರಮ ಫಲ ನೀಡಿತು. ಕುರ್ಚಿಗಳು 12,480 ಡಾಲರ್, ಲ್ಯಾಂಪ್‍ಗಳು 2,870 ಡಾಲರ್ ಹಾಗೂ ಮೇಜುಗಳು 15,600 ಡಾಲರ್ ಮೌಲ್ಯ ಹೊಂದಿವೆ.ತೋಟದಲ್ಲೇ ಬೆಳೆಯುವ ಈ ಗಿಡ ಪೂರ್ಣಪ್ರಮಾಣದಲ್ಲಿ ಕುರ್ಚಿಯ ರೂಪ ಪಡೆಯಲು ಆರರಿಂದ ಒಂಭತ್ತು ವರ್ಷಗಳು ಬೇಕು. ಅಲ್ಲದೇ ಇದು ಸಂಪೂರ್ಣ ಒಣಗಲು ತೆಗೆದುಕೊಳ್ಳುವ ಅವಧಿ ಒಂದು ವರ್ಷ. 2030ರ ವೇಳೆಗೆ ಈ ಫರ್ನಿಚರ್ ಫಾರಂನನ್ನು ಮತ್ತಷ್ಟು ವಿಸ್ತರಿಸಲು ದಂಪತಿ ಬಯಸಿದ್ದಾರೆ. ಇದು ನಿವೃತ್ತರಾಗಿ ವಿಶ್ರಾಂತಿ ಪಡೆಯುವ ಮಂದಿಗೆ ಸೂಕ್ತವಾದ ಕುರ್ಚಿ ಎನಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆನ್‍ಲೈನ್ ಫುಡ್ ಪ್ರಿಯರೆ ದಯವಿಟ್ಟು ಇದನ್ನೊಮ್ಮೆ ಓದಿ, ಇದನ್ನು ನೀವು ತಪ್ಪದೇ ತಿಳಿದುಕೊಳ್ಳಬೇಕು,.!

    ಆನ್‍ಲೈನ್‍ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್‍ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್‍ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್‍ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನ ಕರಾವಳಿ…

  • ಸುದ್ದಿ

    ಸುಧಾ ಮೂರ್ತಿ ದಂಪತಿಯ ಮಗನ ಮದುವೆ ಯಾವಾಗ,ಎಲ್ಲಿ,ಹೇಗೆ ಗೊತ್ತಾ?ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ ನೋಡಿ..!

    ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ…

  • ಸಿನಿಮಾ, ಸ್ಪೂರ್ತಿ

    ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದ ಈ ವ್ಯಕ್ತಿ ,ಸೂಪರ್ ಸ್ಟಾರ್ ಆಗಿದ್ದು ಹೇಗೆ..?ತಿಳಿಯಲು ಈ ಲೇಖನ ಓದಿ..

    ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ವಾಂಗಿಬಾತ್, ಚಿತ್ರಾನ್ನಕ್ಕಾಗಿ ದೀಪಿಕಾ ಚಂದನ್ ನಡುವೆ ಕಿತ್ತಾಟ.

    ಕನ್ನಡ ಬಿಗ್‍ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…

  • ಆಧ್ಯಾತ್ಮ

    ದರ್ಭೆಯ ಬಗ್ಗೆ ಮಾಹಿತಿ.!

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ? ಬನ್ನಿ ತಿಳಿಯೋಣ. ಗರುಡ ರಾಜನು ತನ್ನ ಪರಿವಾರವನ್ನು…

  • ಆರೋಗ್ಯ

    ‘ಎಳನೀರಿನಲ್ಲಿದೆ’ ಎಲ್ಲ ರೋಗಗಳನ್ನು ತಡೆಯಬಲ್ಲ ಶಕ್ತಿ ..!ತಿಳಿಯಲು ಈ ಲೇಖನ ಓದಿ ..

    ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು