ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲೆಂಡ್ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್ನ ಮಿಡ್ಲ್ಯಾಂಡ್ಸ್ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ.

ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ ಕುರ್ಚಿ ಗಿಡಗಳನ್ನು ಸ್ವಾಭಾವಿಕವಾಗಿ ಬೆಳೆಸಲಾಗುತ್ತಿದೆ. ಗಿಡಗಳ ಮೂಲಕ ಇಲ್ಲಿ 250 ಚೇರ್ಗಳು, 100 ಲ್ಯಾಂಪ್ಗಳು ಮತ್ತು 50 ಟೇಬಲ್ಗಳನ್ನು ಅಭಿವೃದ್ದಿಗೊಳಿಸಲಾಗುತ್ತಿದೆ.ಕುರ್ಚಿ ಗಿಡ ಬೆಳೆಯಲು ಗೋವಿನ್ಗೆ ಬಾಲ್ಯವೇ ಪ್ರೇರಣೆ. ಬೋನ್ಸಾಯಿ ಗಿಡಗಳು ಬೆಳೆದು ಕುರ್ಚಿಯಂತೆ ಕಾಣುತ್ತಿತ್ತು. ಅಲ್ಲದೇ ಗೋವಿನ್ಗೆ ಬೆನ್ನುಲುಬು ಸಮಸ್ಯೆ ಇತ್ತು. ಬಾಲ್ಯದಲ್ಲಿ ಅವರ ಬೆನ್ನು ಮೂಳೆ ಸೊಟ್ಟವಾಗಿತ್ತು. ಅದನ್ನು ಸರಿಪಡಿಸಲು ಹಲವು ವರ್ಷಗಳ ಕಾಲ ಮೆಟಲ್ ಫ್ರೇಮ್ ಧರಿಸಿದ್ದರು. ಕುರ್ಚಿ ಗಿಡ ಬೆಳೆಯಲು ಗೋವಿನ್ 2006ರಲ್ಲಿ ಯತ್ನಿಸಿದರು. ಇಂಗ್ಲೆಂಡ್ನ ಪೀಕ್ ಜಿಲ್ಲೆಯಲ್ಲಿ ಎರಡು ತುಂಡು ನೆಲದಲ್ಲಿ ಅವರು ಮರದ ಕುರ್ಚಿಗಳನ್ನು ಸ್ವಾಭಾವಿಕವಾಗಿ ಬೆಳೆಸಲು ಮುಂದಾದರು.

2012ರಲ್ಲಿ ತಮ್ಮ ಯೋಜನೆಯನ್ನು ವಿಸ್ತರಿಸಿದರು. ಅದೇ ವರ್ಷ ಅಲೈಸ್ ಜೊತೆ ಗೋವಿನ್ ವಿವಾಹವಾಯಿತು. ದೊಡ್ಡ ಮಟ್ಟದಲ್ಲಿ ಮರದ ಕುರ್ಚಿಗಳನ್ನು ಬೆಳೆಯಬೇಕೆಂಬ ಅಭಿಲಾಷೆ ದುರಂತದಲ್ಲಿ ಅಂತ್ಯವಾಯಿತು. ಈ ಗಿಡಗಳನ್ನು ಹಸುಗಳು ಮತ್ತು ಮೊಲಗಳು ತಿಂದು ಹಾಕಿದವು. ಇದರಿಂದ ದೃತಿಗಡೆದ ದಂಪತಿ ಬೆಳವಣಿಗೆಯನ್ನು ಕುಂಠಿತ ಗೊಳಿಸದೆ ಮರವನ್ನು ಕುರ್ಚಿ ಆಕಾರದಲ್ಲಿ ಬೆಳೆಸಲು ಪರಿಣಾಮಕಾರಿ ಮಾರ್ಗ ಕಂಡುಕೊಂಡರು.

ಬೆಳೆಯುತ್ತಿರುವ ಕಾಂಡಗಳನ್ನು ಸರಿಯಾದ ದಿಕ್ಕಿನಲ್ಲಿ ಹಬ್ಬಿ ಕುರ್ಚಿಯ ಆಕಾರ ಪಡೆಯುವಂತೆ ಮಾಡಿದರು. ರೆಂಬೆಗಳು ಒಂದಕ್ಕೊಂದು ಬೆಸೆದುಕೊಳ್ಳಲು ಕಸಿ ವಿಧಾನ ಅನುಸರಿಸಿದರು. ಇವರ ಶ್ರಮ ಫಲ ನೀಡಿತು. ಕುರ್ಚಿಗಳು 12,480 ಡಾಲರ್, ಲ್ಯಾಂಪ್ಗಳು 2,870 ಡಾಲರ್ ಹಾಗೂ ಮೇಜುಗಳು 15,600 ಡಾಲರ್ ಮೌಲ್ಯ ಹೊಂದಿವೆ.ತೋಟದಲ್ಲೇ ಬೆಳೆಯುವ ಈ ಗಿಡ ಪೂರ್ಣಪ್ರಮಾಣದಲ್ಲಿ ಕುರ್ಚಿಯ ರೂಪ ಪಡೆಯಲು ಆರರಿಂದ ಒಂಭತ್ತು ವರ್ಷಗಳು ಬೇಕು. ಅಲ್ಲದೇ ಇದು ಸಂಪೂರ್ಣ ಒಣಗಲು ತೆಗೆದುಕೊಳ್ಳುವ ಅವಧಿ ಒಂದು ವರ್ಷ. 2030ರ ವೇಳೆಗೆ ಈ ಫರ್ನಿಚರ್ ಫಾರಂನನ್ನು ಮತ್ತಷ್ಟು ವಿಸ್ತರಿಸಲು ದಂಪತಿ ಬಯಸಿದ್ದಾರೆ. ಇದು ನಿವೃತ್ತರಾಗಿ ವಿಶ್ರಾಂತಿ ಪಡೆಯುವ ಮಂದಿಗೆ ಸೂಕ್ತವಾದ ಕುರ್ಚಿ ಎನಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.
ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ. ವೃಷಭ:- ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ…
ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್ಬುಕ್ ಪೇಜ್ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…
ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…
ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…
ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.