ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ.

ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ. ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ವೆಲ್ಲಿಯನ್ ದಂಪತಿಗೆ ಒಟ್ಟು ನಾಲ್ಕು ಜನ ಹೆಣ್ಣುಮಕ್ಕಳಿದ್ದು. ಈ ಹೆಣ್ಣು ಮಕ್ಕಳನ್ನು ಚೆನ್ನಾಗಿ ಓದಿಸಿ, ಅವರಿಗೊಂದು ಬದುಕು ಕಟ್ಟಿಕೊಟ್ಟಿದ್ದಾರೆ. ನಾಲ್ಕು ಜನರಿಗೂ ಸಹ ಚಾಮರಾಜಪೇಟೆಯಲ್ಲಿ ಸ್ವಂತ ಮನೆಯನ್ನು ಸಹ ಕಟ್ಟಿಕೊಟ್ಟಿದ್ದಾರೆ. ಇಷ್ಟೆಲ್ಲ ಸೌಕರ್ಯಗಳನ್ನು ಮಾಡಿದರೂ ಕೂಡ ಹೆತ್ತವರಿಗೆ ಈ ಮಕ್ಕಳು ಭಾರವಾಗಿದ್ದಾರೆ. ನಾಲ್ವರಲ್ಲಿ ಮೂವರು ಮಕ್ಕಳು ಆಸ್ತಿಯ ಅತಿ ಆಸೆಗೆ ಆಸ್ತಿಯ ಪತ್ರಕ್ಕೆ ಫೋರ್ಜರಿ ಸಹಿ ಮಾಡುವ ಮೂಲಕ ತಮ್ಮ ಹೆಸರಿಗೆ ಮಾಡಿಕೊಂಡು. ತಂದೆ- ತಾಯಿಯನ್ನು ಮನೆಗೆ ಸೇರಿಸಿಕೊಳ್ಳುತ್ತಿಲ್ಲ.

ಆದರೆ ಒಬ್ಬಳು ಪುತ್ರಿ ಮಾತ್ರ ಹೆತ್ತವರನ್ನು ಮನೆಗೆ ಕರೆದುಕೊಂಡು ಬಂದು ಸಾಕಲು ಮುಂದಾದಾಗ ಆಕೆಯ ಮನೆ ಮತ್ತು ಆಸ್ತಿಯನ್ನು ಕೂಡ ಲಪಟಾಯಿಸಲು ಉಳಿದ ಮೂವರು ಸ್ಕೆಚ್ ಹಾಕಿದ್ದಾರಂತೆ. ಹೆಣ್ಣು ಮಕ್ಕಳ ಈ ವರ್ತನೆಗೆ ವೃದ್ದ ದಂಪತಿ ಕಣ್ಣೀರಿಟ್ಟಿದ್ದಾರೆ. ಮಕ್ಕಳಿಗೋಸ್ಕರ ಈ ದಂಪತಿಳು ವಿಲ್ ಸಹ ಮಾಡಿದ್ದರು.
ಅದನ್ನ ನಂಬದೇ ಮಕ್ಕಳು ಫೋರ್ಜರಿ ಮಾಡಿ ಆಸ್ತಿಯನ್ನ ಮಕ್ಕಳು ಕಬಳಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಇರಲು ಸ್ವಂತ ಮನೆ ಮಾಡಬೇಕೆಂದು ದೊಡ್ಡ ಸೈಟುಗಳಲ್ಲಿ ನಾಲ್ಕು ಮನೆಗಳನ್ನ ನಿರ್ಮಿಸಿ, ಎಲ್ಲರ ಹೆಸರಲ್ಲೂ ಕೂಡ ಒಂದೊಂದು ಮನೆಯನ್ನ ಬರೆದು ವಿಲ್ ಮಾಡಿದ್ದರು. ಆದರೆ ಆ ವಿಲ್ ಅನ್ನು ಹೆಣ್ಣು ಮಕ್ಕಳಿಗೆ ತೋರಿಸಿರಲಿಲ್ಲ. ಈ ಕಾರಣಕ್ಕೆ ತಂದೆ ತಾಯಿ ಮೇಲೆ ಮಕ್ಕಳು ಮುನಿಸಿಕೊಂಡು ಈ ನಿರ್ಧಾರಕ್ಕೆ ಕೈ ಹಾಕಿದ್ದಾರೆ.

ನಂತರ ಜನವರಿಯಲ್ಲಿ ಜಿಗಣಿಯಲ್ಲಿ ರಿಜಿಸ್ಟ್ರಾರ್ ಆಫೀಸಿನಲ್ಲಿ ಸಬ್ ರಿಜಿಸ್ಟ್ರಾರ್ ಆಗಿದ್ದ ಮಂಜುನಾಥ್ ಅನ್ನೋರು ಚಿನ್ನಪ್ಪ ಎಂಬವರಿಗೆ ಜನರಲ್ ಪವರ್ ಆಫ್ ಅಟಾರ್ನಿಯ(ಜಿಪಿಎ) ಕೊಟ್ಟು ನಂತರ ಅದನ್ನ ದಾನದ ರೂಪದಲ್ಲಿ ಈ ಹೆಣ್ಣು ಮಕ್ಕಳು ಫೋರ್ಜರಿ ಮಾಡಿ ಬರೆಸಿಕೊಂಡಿದ್ದಾರೆ. ಈಗ ತಾವೇ ನಿರ್ಮಿಸಿದ ಮನೆಯಲ್ಲಿ ಇರಲೂ ಆಗದೇ ಕಣ್ಣೀರಿಡುತ್ತಿದ್ದಾರೆ. ಹೆಣ್ಣುಮಕ್ಕಳ ಬಗ್ಗೆ ತಂದೆಗೆ ಹೆಚ್ಚು ಪ್ರೀತಿ ಅಂತಾರೆ ಆದರೆ ಈ ಹೆಣ್ಣುಮಕ್ಕಳಿಂದಲೇ ತಂದೆ ಇಷ್ಟೊಂದು ನೋವು ಅನುಭವಿಸುತ್ತಿದ್ದಾರೆ.
ತಂದೆ ತಾಯಿ ಕಣ್ಣಿಗೆ ಕಾಣೋ ದೇವರು ಅಂತಾರೆ ಆದರೆ ಕೇವಲ ತಂದೆ ತಾಯಿಯೇ ಕಷ್ಟ ಪಟ್ಟು ಸಂಪಾದಿಸಿದ ಆಸ್ತಿಗಾಗಿ ಅವರನ್ನೇ ಬೀದಿ ಪಾಲು ಮಾಡಲು ಹೊರಟಿರುವ ಇಂತಹ ಮಕ್ಕಳಿಗೆ ಕಾನೂನು ತಕ್ಕ ಶಾಸ್ತಿ ಮಾಡಬೇಕು ಅನ್ನೊದು ನೊಂದವರ ಒತ್ತಾಯವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್ಗೆ ಜೂ. ಎನ್ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…
ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…
ಇಂದು ಮಹಾಶಿವರಾತ್ರಿ ಮಂಗಳವಾರ, 13/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.