ಹುಡುಗಿಯರ ಎದೆಗೆ ಕನ್ನ ಹಾಕಿದ ಚಾಕ್ಲೇಟ್ ಹೀರೋ. ತನ್ನ ಮುದ್ದು ಮುಖದ ಚೆಲುವಿನಿಂದ ಹುಡುಗಿಯರ ನಿದ್ದೆ ಕದ್ದ ಚೋರನೀತ. ಹುಡುಗ ಅಂದ್ರೆ ಇವನ ತರ ಸುಂದರವಾಗಿರಬೇಕು ಅಂತ ಹುಡುಗಿಯರ ಮನದಲ್ಲಿ ಆಸೆ ಹುಟ್ಟಿಸಿದವ. ಅವನೇ ಸುನಿಲ್. ಬೆಳ್ಳಿಕಾಲುಂಗುರ ಸುನಿಲ್ ಅಂತಾನೆ ಇವತ್ತಿಗೂ ಫೇಮಸ್. ಮಂಗಳೂರು ಮೂಲದವರಾದ ಸುನೀಲ್ 1991 ರಲ್ಲಿ ಚಿತ್ರರಂಗಕ್ಕೆ ದ್ವಾರಕೀಶ್ ಅವರ ನಿರ್ದೇಶನದ ಶ್ರುತಿ ಚಿತ್ರದ ಮೂಲಕ ಎಂಟ್ರಿ ಕೊಡ್ತಾರೆ. ನಂತರ ಕನಸಿನ ರಾಣಿ ಮಾಲಾಶ್ರಿ ಜೊತೆ ಅನೇಕ ಚಿತ್ರಗಳಲ್ಲಿ ನಟಿಸುತ್ತಾರೆ. ತೊಂಬತ್ತರ ದಶಕದಲ್ಲಿ ಇವರಿಬ್ಬರದು ಹಿಟ್ ಜೋಡಿ.
ಸುನಿಲ್ ಮತ್ತು ಮಾಲಾಶ್ರೀ ಹಲವಾರು ಹಿಟ್ ಚಿತ್ರಗಳನ್ನು ನೀಡಿದರು. ಬೆಳ್ಳಿ ಕಾಲುಂಗುರ ,ಸಿಂಧೂರ ತಿಲಕ, ಮನಮೆಚ್ಚಿದ ಸೊಸೆ ,ಮರಣ ಮೃದಂಗ ಹೀಗೆ ಅನೇಕ ಚಿತ್ರಗಳಲ್ಲಿ ಈ ಜೋಡಿ ರೊಮ್ಯಾಂಟಿಕ್ ಆಗಿ ನಡೆಸಿ ಸೈ ಎನಿಸಿಕೊಂಡರು ಈ ಜೋಡಿ ತೆರೆಯ ಮೇಲೆ ಬಹಳ ಮುದ್ದು ಮುದ್ದಾಗಿ ಕಾಣಿಸಿಕೊಳ್ಳುತ್ತಿತ್ತು. ಮಾಲಾಶ್ರೀ ಸ್ವಲ್ಪ ಜೋರು ಅನಿಸ್ಸಿದ್ರು ಸುನಿಲ್ ಅವರ ಚಾಕಲೇಟು ಹೀರೊ ಇಮೇಜ್ ಅದಕ್ಕೆ ಹೇಳಿ ಮಾಡಿಸಿದ ಹಾಗೆ ಇರ್ತಿತ್ತು.
ಶ್ರುತಿ ಚಿತ್ರದಿಂದ ಪ್ರಾರಂಭವಾದ ಸುನಿಲ್ ಅವರ ಸಿನಿ ಪಯಣ ತದನಂತರ, ಸಾಕಷ್ಟು ಸಿನಿಮಾಗಳಲ್ಲಿ ನಟಿಸುವ ಅವಕಾಶಗಳನ್ನು ಗಿಟ್ಟಿಸಿಕೊಂಡರು. ಬೆಳ್ಳಿ ಕಾಲುಂಗುರ, ಮಾಂಗಲ್ಯ, ನಗು ನಗುತಾ ನಲಿ, ನಗರದಲ್ಲಿ ನಾಯಕರು, ಸಿಡಿದೆದ್ದ ಶಿವ ಹೀಗೆ ಹತ್ತು ಹಲವು ಸಿನಿಮಾಗಳಲ್ಲಿ ಅಭಿನಯಿಸಿದ ಸುನಿಲ್ ತೆಲುಗು ಚಿತ್ರರಂಗದಲ್ಲೂ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾದರು. ಮಾಲಾಶ್ರೀ ಮತ್ತು ಸುನೀಲ್ ಅವರ ಜೋಡಿ ಆ ಸಮಯದಲ್ಲಿ ಕನ್ನಡ ಚಿತ್ರರಂಗದ ಮೋಸ್ಟ್ ಫೇವರಿಟ್ ಜೋಡಿಯಾಗಿತ್ತು.
ಇವರು ಒಟ್ಟಾಗಿ ಅಭಿನಯಿಸಿದ ಚಿತ್ರಗಳು ಅವರಿಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿತ್ತು. ತೆರೆಯ ಮೇಲೆ ಮೋಡಿ ಮಾಡಿದ್ದ ಈ ಜೋಡಿ ನಿಜಜೀವನದಲ್ಲಿ ಒಂದಾಗಬೇಕು ಎಂದು ಅದೆಷ್ಟೋ ಅಭಿಮಾನಿಗಳು ಕನಸು ಕಂಡಿದ್ದರು. ಅಂತೆಯೇ ಸುನೀಲ್ ಮತ್ತು ಮಾಲಾಶ್ರೀ ಪ್ರೇಮದಲ್ಲಿದ್ದಾರೆ ಎಂಬ ವಿಷಯ ಸಿನಿಮಾ ರಂಗದಲ್ಲಿ ಹರಡಿತ್ತು. ಮೂಲಗಳ ಪ್ರಕಾರ ತಾವು ವಿವಾಹವಾಗುತ್ತೇನೆ ಎಂದು ಹೇಳಿಕೊಂಡಿದ್ದರಂತೆ.
ಯಶಸ್ಸಿನ ಮೆಟ್ಟಿಲು ಹತ್ತುತ್ತಿರಬೇಕಾದರೆನೇ ಜವರಾಯ ಸುನೀಲ್ ಗಾಗಿ ಕಾಯುತ್ತಿದ್ದ ಅನ್ಸತ್ತೆ. 1994 ರಂದು ಸುನಿಲ್ ಮಾಲಾಶ್ರೀ ಮತ್ತು ಪ್ರೊಡ್ಯೂಸರ್ ಸಚಿನ್ ಮಲ್ಲಿ ಬಾಗಲಕೋಟೆಯಿಂದ ಬೆಂಗಳೂರಿಗೆ ಕಾರಲ್ಲಿ ಬರಬೇಕಾದರೆ ಟ್ರಕ್ಕೊಂದು ಸುನೀಲ್ ಅವರ ಕಾರಿಗೆ ಗುದ್ದತ್ತೆ. ಸುನಿಲ್ ಸ್ಥಳದಲ್ಲೇ ಸಾವನ್ನಪ್ಪುತ್ತಾರೆ. ದುಃಖಕರ ವಿಷಯವೇನೆಂದರೆ ಅಪಘಾತವಾದ ನಂತರ ನಲವತ್ತು ನಿಮಿಷಗಳ ಕಾಲ ಸುನೀಲ್ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದರು. ಆದರೆ ಸುನೀಲ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಈ ಸಾವಿನಿಂದ ಚಿತ್ರರಂಗ ಬಹಳ ಭಾವುಕದಿಂದ ಕೂಡಿತ್ತು.
ಸುನೀಲ್ ಅವರ ಸಮಾಧಿಯಲ್ಲಿ ಒಂದು ಮರವನ್ನು ನೆಟ್ಟಿದ್ದ ಸುನಿಲ್ ತಾಯಿ, ಈಗಲೂ ಕೂಡ ಆ ಮರವನ್ನೆ ತನ್ನ ಮಗ ಎಂದು ನಂಬಿ ಜೀವನ ಸಾಗಿಸುತ್ತಿದ್ದಾರೆ.! ಮಗನ ಸಾವಿನಿಂದ ಮನ ನೊಂದಿರುವ ಆ ವಯಸ್ಸಾದ ತಾಯಿ, ನನ್ನ ಮಗನ ಸಾವಿಗೆ ಇಲ್ಲಸಲ್ಲದ ಬಣ್ಣಗಳನ್ನು ಕಟ್ಟಬೇಡಿ, ಇಡೀ ಚಿತ್ರರಂಗ ನನ್ನ ಮಗನ ಜೊತೆ ಆತ್ಮೀಯವಾಗಿತ್ತು. ಅವನ ಸಾವು ಆಕಸ್ಮಿಕ ,ಅವನ ಹಣೆಯಲ್ಲಿ ಬರೆದದ್ದು ಇಷ್ಟೇ ಇದು ವಿಧಿಲಿಖಿತ. ಎಂದು ಭಾವುಕರಾಗಿದ್ದಾರೆ. ಅಂದು ಕರ್ನಾಟಕ ಫಿಲಂ ಇಂಡಸ್ಟ್ರಿ ಒಂದು ಒಳ್ಳೆಯ ನಾಯಕನನ್ನು ಕಳೆದುಕೊಳ್ಳುತ್ತೆ. ಸಾವು ಯಾರಿಗೆ ಯಾವಾಗ ಹೇಗೆ ಬರುತ್ತೆ ಅಂತ ಹೇಳಕಾಗಲ್ಲ. ಯಾರೇ ಆದ್ರು ಸಾವಿಗೆ ಸೋಲಲೇ ಬೇಕು. ಆದ್ರೆ ಇನ್ನು ಬಾಳಿ ಬದುಕಬೇಕಾಗಿದ್ದ ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಸುನಿಲ್ ಅವರ ಸಾವು ಕನ್ನಡ ಚಿತ್ರ ರಂಗಕ್ಕೆ ತುಂಬಾಲಾರದ ನಷ್ಟ ಅಂತಾನೆ ಹೇಳಬಹುದು.
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಮನುಷ್ಯರು ಇಷ್ಟೊಂದು ಕ್ರೂರಿಗಳಾಗಿ ಬಿಟ್ಟಿದ್ದೇವೆಯೇ.?ಯಾಕಂದ್ರೆ ಇಲ್ಲೊಬ್ಬ ಮಹಾ ತಾಯಿ ತನ್ನ ಹಸುಗೂಸು ಕಂದಮ್ಮನನ್ನು, ಕರುಣೆಯಿಲ್ಲದೆ ಜೀವಂತವಾಗಿಯೇ ಮಣ್ಣಲ್ಲಿ ಮುಚ್ಚಿ ಹೋದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಮ್ಮಲ್ಲಿ ಎಷ್ಟೋ ಜನಕ್ಕೆ ಮಕ್ಕಳಿಲ್ಲದೆ, ಮಕ್ಕಳಿಗಾಗಿ ಏನೇನೋ ಪ್ರಯತ್ನಗಳನ್ನು ಮಾಡುತ್ತಾರೆ.ಆದರೆ ಸಂತಾನ ಭಾಗ್ಯ ಇರುವ ಕೆಲವರು ಹೀಗೆ ಮಕ್ಕಳನ್ನು ಮಣ್ಣಲ್ಲಿ ಹುತು ಬಿಡುವುದೋ, ಎಲ್ಲೋ ಬಿಸಾಡಿ ಹೋಗುವುದೋ ಮಾಡುತ್ತಾರೆ. ಅಮ್ಮ ನಿನಗೆ ಕರುಣೆನೇ ಇಲ್ವ..? ಆಗತಾನೆ ಕಣ್ಬಿಟ್ಟ ನನಗೆ ನಿನ್ನ ನೋಡೋ ಆಸೆ…
ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ಕಿರಿಯರ ವಿಶ್ವಕಪ್ ಎತ್ತಿ ಹಿಡಿದಿದೆ.
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ. ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು,…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…
ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.
ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…