ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ ಬಳಿ ತೆರಳಿದರು.

ಹುಯಿಯಾಂಗ್ನಲ್ಲಿನ ಸಾನ್ಹೆ ಆಸ್ಪತ್ರೆಯ ವೈದ್ಯರು ಆತನ ಕಿವಿ ತಪಾಸಣೆ ನಡೆಸಿದಾಗ ಕಂಡಿದ್ದು, ಒಳಗೆ ಸಂಸಾರ ನಡೆಸಿದ್ದ ಜಿರಲೆಯ ಕುಟುಂಬ. ಚಿಮಟ ಬಳಸಿ ಮರಿಗಳನ್ನು ಹೊರತೆಗೆದ ಬಳಿಕ ತಾಯಿ ಜಿರಲೆ ಕಣ್ಣಿಗೆ ಬಿತ್ತು. ಸಾಹಸ ಪಟ್ಟು ಅದನ್ನೂ ಹೊರತೆಗೆಯುವಲ್ಲಿ ಯಶಸ್ವಿಯಾದರು. ಆದರೆ ಆತನ ಕಿವಿಯ ನಾಳಕ್ಕೆ ಸ್ವಲ್ಪ ಹಾನಿಯಾಗಿತ್ತು.

‘ಎಲ್ವಿ ಕಿವಿಯೊಳಗೆ ಅಸಾಧ್ಯ ನೋವಾಗುತ್ತಿದೆ ಎಂದು ಹೇಳಿದ್ದರು. ಒಳಗಿನಿಂದ ಕೆರೆದಂತೆ, ಓಡಾಡಿದಂತೆ ಭಾಸವಾಗುತ್ತಿತ್ತು. ಇದರಿಂದ ಸುಮ್ಮನೆ ಕುಳಿತು ಕೊಳ್ಳಲು ಸಹ ಸಾಧ್ಯವಾಗುತ್ತಿರಲಿಲ್ಲ. ಪರಿಶೀಲಿಸಿದಾಗ ಒಳಗೆ ಹತ್ತಕ್ಕೂ ಹೆಚ್ಚುಜಿರಲೆ ಮರಿಗಳು ಇರುವುದು ಕಾಣಿಸಿತು. ಅವು ಆಗಲೇ ಅಲ್ಲಿ ಅಡ್ಡಾಡುತ್ತಿದ್ದವು’ಎಂದು ಕಿವಿ, ಮೂಗು ಮತ್ತು ಗಂಟಲು ತಜ್ಞರು ತಿಳಿಸಿದ್ದಾರೆ.

ಎಲ್ವಿ ಅರೆ ಬರೆ ಆಹಾರ ತಿಂದು ತನ್ನ ಹಾಸಿಗೆ ಪಕ್ಕದಲ್ಲಿಯೇ ಇಟ್ಟುಕೊಂಡು ಮಲಗುವ ಅಭ್ಯಾಸ ಇರಿಸಿಕೊಂಡಿದ್ದ. ಇದೇಆತನಿಗೆ ಎರವಾಗಿತ್ತು. ಆಹಾರ ತಿನ್ನಲು ಬಂದ ಜಿರಲೆ ಅಲ್ಲಿಯೇ ಮಲಗಿದ್ದ ಆತನ ಕಿವಿಯೊಳಗೆ ನುಗ್ಗಿ ಅದನ್ನೇ ತನ್ನಆವಾಸ ಸ್ಥಾನವನ್ನಾಗಿ ಮಾಡಿಕೊಂಡಿತ್ತು. ಅಲ್ಲಿಯೇ ಮೊಟ್ಟೆಯಿಟ್ಟು ಮರಿಯನ್ನೂ ಮಾಡಿತ್ತು. ಎಷ್ಟು ಸಮಯದಿಂದ ಅದು ಆತನ ಕಿವಿಯೊಳಗೆ ಇದ್ದಿರ ಬಹುದು ಎಂಬುದು ಗೊತ್ತಾಗಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್ ಪಡೆದು ನಾಮಿನೇಶನ್ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಿದ ಬಳಿಕ ಶೈನ್ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…
ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….
ಕರಿಬೇವು ಮನುಷ್ಯನ ದೇಹಕ್ಕೆ ಬೇಕಾಗುವ ಹತ್ತಾರು ಆರೋಗ್ಯಕಾರಿ ಲಾಭಗಳನ್ನು ಕೊಡುವಲ್ಲಿ ಇದರ ಪಾತ್ರ ಮಹತ್ವವಾದದ್ದು…
ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ…
ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್ .ಚೈತ್ರಾ ಕೋಟೂರ್ಗೆ ಈ ನವೆಂಬರ್ ಬಂದರೆ ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…
ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…