News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Health

ಜಿರಲೆಗಳ ಸೂಪರ್ ಸಂಸಾರ ನೋಡಿ ಬೆರಗಾದ ವೈದ್ಯರು..!ಯಾಕೆ ಗೊತ್ತಾ?ತಿಳಿದರೆ ನೀವು ಶಾಕ್ ಆಗುವುದು ಗ್ಯಾರಂಟಿ..

116

ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ ಬಳಿ ತೆರಳಿದರು.

ಹುಯಿಯಾಂಗ್‌ನಲ್ಲಿನ ಸಾನ್ಹೆ ಆಸ್ಪತ್ರೆಯ ವೈದ್ಯರು ಆತನ ಕಿವಿ ತಪಾಸಣೆ ನಡೆಸಿದಾಗ ಕಂಡಿದ್ದು, ಒಳಗೆ ಸಂಸಾರ ನಡೆಸಿದ್ದ ಜಿರಲೆಯ ಕುಟುಂಬ. ಚಿಮಟ ಬಳಸಿ ಮರಿಗಳನ್ನು ಹೊರತೆಗೆದ ಬಳಿಕ ತಾಯಿ ಜಿರಲೆ ಕಣ್ಣಿಗೆ ಬಿತ್ತು. ಸಾಹಸ ಪಟ್ಟು ಅದನ್ನೂ ಹೊರತೆಗೆಯುವಲ್ಲಿ ಯಶಸ್ವಿಯಾದರು. ಆದರೆ ಆತನ ಕಿವಿಯ ನಾಳಕ್ಕೆ ಸ್ವಲ್ಪ ಹಾನಿಯಾಗಿತ್ತು.

‘ಎಲ್ವಿ ಕಿವಿಯೊಳಗೆ ಅಸಾಧ್ಯ ನೋವಾಗುತ್ತಿದೆ ಎಂದು ಹೇಳಿದ್ದರು. ಒಳಗಿನಿಂದ ಕೆರೆದಂತೆ, ಓಡಾಡಿದಂತೆ ಭಾಸವಾಗುತ್ತಿತ್ತು. ಇದರಿಂದ ಸುಮ್ಮನೆ ಕುಳಿತು ಕೊಳ್ಳಲು ಸಹ ಸಾಧ್ಯವಾಗುತ್ತಿರಲಿಲ್ಲ. ಪರಿಶೀಲಿಸಿದಾಗ ಒಳಗೆ ಹತ್ತಕ್ಕೂ ಹೆಚ್ಚುಜಿರಲೆ ಮರಿಗಳು ಇರುವುದು ಕಾಣಿಸಿತು. ಅವು ಆಗಲೇ ಅಲ್ಲಿ ಅಡ್ಡಾಡುತ್ತಿದ್ದವು’ಎಂದು ಕಿವಿ, ಮೂಗು ಮತ್ತು ಗಂಟಲು ತಜ್ಞರು ತಿಳಿಸಿದ್ದಾರೆ.

ಎಲ್ವಿ ಅರೆ ಬರೆ ಆಹಾರ ತಿಂದು ತನ್ನ ಹಾಸಿಗೆ ಪಕ್ಕದಲ್ಲಿಯೇ ಇಟ್ಟುಕೊಂಡು ಮಲಗುವ ಅಭ್ಯಾಸ ಇರಿಸಿಕೊಂಡಿದ್ದ. ಇದೇಆತನಿಗೆ ಎರವಾಗಿತ್ತು. ಆಹಾರ ತಿನ್ನಲು ಬಂದ ಜಿರಲೆ ಅಲ್ಲಿಯೇ ಮಲಗಿದ್ದ ಆತನ ಕಿವಿಯೊಳಗೆ ನುಗ್ಗಿ ಅದನ್ನೇ ತನ್ನಆವಾಸ ಸ್ಥಾನವನ್ನಾಗಿ ಮಾಡಿಕೊಂಡಿತ್ತು. ಅಲ್ಲಿಯೇ ಮೊಟ್ಟೆಯಿಟ್ಟು ಮರಿಯನ್ನೂ ಮಾಡಿತ್ತು. ಎಷ್ಟು ಸಮಯದಿಂದ ಅದು ಆತನ ಕಿವಿಯೊಳಗೆ ಇದ್ದಿರ ಬಹುದು ಎಂಬುದು ಗೊತ್ತಾಗಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • India, Sports, ಕ್ರೀಡೆ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇಟೆಸ್ಟ್‌ಗೆ ಮಳೆ ಕಾಟ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ  122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ

    Loading

  • inspirational, ಸುದ್ದಿ

    200 ವರ್ಷದ ಹಳೆಯ ಶಿವನ ದೇವಾಲಯ ಪತ್ತೆ ಅಚ್ಚರಿಗೆಗೊಳಗಾದ ಜನ!

    ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…

  • ವಿಚಿತ್ರ ಆದರೂ ಸತ್ಯ

    ವೈದ್ಯಕೀಯ ಪವಾಡದಿಂದ ವರ್ಷದಲ್ಲಿ ‘ಎರಡು ಬಾರಿ ಹುಟ್ಟುಹಬ್ಬ’ ಆಚರಿಸುತ್ತಿರುವ ಮಗು..!ತಿಳಿಯಲು ಈ ಲೇಖನ ಓದಿ..

    ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.

  • ಸುದ್ದಿ

    ಸಾವಿನಲ್ಲಿಯೂ ಸಹ ಸಾರ್ಥಕತೆ, ಮೆದುಳು ನಿಷ್ಕ್ರಿಯಗೊಂಡ ಉಡುಪಿ ಯುವಕನ ಅಂಗಾಂಗ ದಾನ…!

    ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…

  • ಸುದ್ದಿ

    ಕನ್ನಡದ ಕೋಟ್ಯಧಿಪತಿಯಲ್ಲಿ ಪುನೀತ್ ಬದಲು ಬೇರೆ ನಿರೂಪಕಿ! ಯಾರು?

    ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್‌ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್‌ಸೀಟ್‌ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…

  • ಮನರಂಜನೆ, ಸುದ್ದಿ

    ಬಿಗ್ ಬಾಸ್ ಶಾಕಿಂಗ್ ಸುದ್ದಿ.!ರವಿ ಬೆಳಗೆರೆ ಬಿಗ್ ಬಾಸ್ ಕಂಟೆಸ್ಟಂಟ್ ಅಲ್ಲವೇ ಅಲ್ಲ..!ಹಾಗಾದ್ರೆ ಕೊನೆಯ ಸ್ಪರ್ಧಿ ಯಾರು?

    ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…