ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.
ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.
ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು ಎಂಬುದನ್ನು ತಜ್ಞರು ಹೇಳಿದ್ದಾರೆ ನೋಡಿ.
1. ಚಳಿಗಾಲದಲ್ಲಿ ಆಗಾಗ ಏನಾದರೂ ತಿನ್ನುತ್ತಿದ್ದರೆ ದೇಹ ಬೆಚ್ಚಗಿರುತ್ತದೆ.
ಇದೊಂದು ಶುದ್ಧ ತಪ್ಪು ಕಲ್ಪನೆ ಎಂದು ಹೇಳುತ್ತಾರೆ ಪೌಷ್ಟಿಕತಜ್ಞರು. ಚಳಿಗಾಲ ಬಂತೆಂದರೆ ಸಾಕು, ಜಾಸ್ತಿ ಆಹಾರ ಸೇವಿಸಿ. ಆಗಾಗ ಏನಾದರೂ ಸ್ವಲ್ಪ ತಿನ್ನುತ್ತಿರಿ. ಇದರಿಂದ ದೇಹ ಬೆಚ್ಚಗಿರುತ್ತದೆ. ಅನಾರೋಗ್ಯಕ್ಕೆ ಒಳಗಾಗುವುದೂ ತಪ್ಪುತ್ತದೆ ಎಂದು ಮನೆಯಲ್ಲಿ ಹಿರಿಯರು, ಪಾಲಕರು ಹೇಳುವುದನ್ನು ಕೇಳಿದ್ದೇವೆ.
ಆದರೆ ತಜ್ಞರು ಹೇಳುವ ಪ್ರಕಾರ, ಹೀಗೆ ಪದೇಪದೆ ತಿನ್ನುವುದರಿಂದ ದೇಹದ ತೂಕ ಹೆಚ್ಚುತ್ತದೆ ಹೊರತು ಬೇರೇನೂ ಉಪಯೋಗ ಆಗುವುದಿಲ್ಲ. ಅದರ ಬದಲಾಗಿದೆ ಚಳಿಗಾಲದಲ್ಲಿ ಸರಿಯಾದ ಕ್ರಮದಲ್ಲಿ ಡಯಟ್ ಮಾಡುವ ಮೂಲಕ ಕಾಯಿಲೆ ಬರುವುದನ್ನು ತಡೆಗಟ್ಟಬಹುದು. ಹಾಗಾಗಿ ಆಗಾಗ ಏನಾದರೂ ಆಹಾರ ಸೇವನೆ ಮಾಡುವುದರಿಂದ ಏನೂ ಉಪಯೋಗವಿಲ್ಲ.
2. ಮಸಾಲೆಯುಕ್ತ ಆಹಾರ ಸೇವನೆ ದೇಹವನ್ನು ಬೆಚ್ಚಗಿಡುತ್ತದೆ.
ಮಸಾಲೆಯುಕ್ತ, ಖಾರ, ಸ್ಪೈಸಿ ಆಹಾರಗಳ ಸೇವನೆಯಿಂದ ಖಂಡಿತ ಮೈ ಬೆವರುತ್ತದೆ. ಅದರಲ್ಲೂ ಚಳಿಗಾಲದಲ್ಲಿ ಮೆಣಸಿನಕಾಯಿ ಪ್ರಮಾಣ ಹೆಚ್ಚಾಗಿರುವ ಆಹಾರ ಸೇವನೆಯಿಂದ ದೇಹದ ಉಷ್ಣತೆ ಹೆಚ್ಚಾಗಿ ನಾವು ಚಳಿಯಿಂದ ಪಾರಾಗಬಹುದು ಎಂದುಕೊಂಡಿದ್ದರೆ ಅದು ದೊಡ್ಡ ತಪ್ಪು.
ಆಹಾರ ತಜ್ಞರ ಪ್ರಕಾರ, ಮಸಾಲೆಯುಕ್ತ ಸ್ಪೈಸಿ ಆಹಾರಗಳು ನಮ್ಮ ದೇಹದ ಉಷ್ಣತೆಯ ಮೇಲೆ ಯಾವುದೇ ಗುರುತರ ಪ್ರಭಾವವನ್ನೂ ಬೀರುವುದಿಲ್ಲ. ಅದನ್ನು ತಿಂದ ಕ್ಷಣಕ್ಕೆ ಖಾರದಿಂದ ಮೈ ಬಿಸಿಯಾಗಬಹುದು. ಬೆವರಬಹುದು. ಆದರೆ ನಂತರ ಏನೂ ಪ್ರಯೋಜನವಿಲ್ಲ.
3. ನೀವು ಶೀತ, ಕೆಮ್ಮಿನಿಂದ ಬಳಲುತ್ತಿದ್ದರೆ ಸಿಟ್ರಸ್ ಹಣ್ಣುಗಳನ್ನು ತಿನ್ನಬಾರದು
ಯಾರಾದರೂ ಹೀಗೆ ಹೇಳಿದರೆ ಅದನ್ನು ಕೇಳಲೇಬೇಡಿ ಎನ್ನುತ್ತಾರೆ ತಜ್ಞರು.
ಕಿತ್ತಳೆ, ಲಿಂಬುವಿನಂತಹ ಸಿಟ್ರಸ್ ಹಣ್ಣುಗಳು ಚಳಿಗಾಲದಲ್ಲಿ ದೇಹಕ್ಕೆ ಅತ್ಯವಶ್ಯಕ. ವಿಟಮಿನ್ ಸಿಯನ್ನು ಹೇರಳವಾಗಿ ಹೊಂದಿರುವ ಈ ಹಣ್ಣುಗಳಲ್ಲಿ ನೀರಿನ ಅಂಶವೂ ಹೆಚ್ಚಾಗಿರುತ್ತದೆ.
ಕಿತ್ತಳೆಗಳು ಚಳಿಗಾಲದ ಹಣ್ಣುಗಳು. ಅವು ಚಳಿಗಾದಲ್ಲಿ ಸಿಗುತ್ತವೆ ಎಂದರೆ ಆ ಸಮಯದಲ್ಲಿಯೇ ನಮ್ಮ ದೇಹಕ್ಕೆ ಬೇಕು ಎಂದರ್ಥ. ಕೆಮ್ಮು, ನೆಗಡಿಯಾದಾಗ ಕಿತ್ತಳೆ, ಲಿಂಬು ಹಣ್ಣುಗಳ ಸೇವನೆ ಮಾಡಬೇಕು. ನಮ್ಮೊಳಗಿನ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತವೆ. ಅಲ್ಲದೆ ಪೌಷ್ಟಿಕಾಂಶವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತವೆ. ಕಟ್ಟಿಕೊಂಡ ಕಫವನ್ನು ಸಡಿಲಗೊಳಿಸುತ್ತವೆ ಹಾಗೂ ಶೀತವನ್ನು ತೊಡೆದುಹಾಕುತ್ತದೆ ಎಂದು ನ್ಯೂಟ್ರಿಷಿಯನಿಸ್ಟ್ ಹೇಳುತ್ತಾರೆ.
4. ಡೇರಿ ಉತ್ಪನ್ನಗಳಿಂದ ದೂರವಿರಿ
ಈ ಮಾತನ್ನು ಸಾಮಾನ್ಯವಾಗಿ ಎಲ್ಲರೂ ಹೇಳುತ್ತಾರೆ. ಮೊದಲೇ ಚಳಿ ಇರುತ್ತದೆ. ಶೀತ, ಕೆಮ್ಮು, ಜ್ವರ, ಕಫ ಇರುತ್ತದೆ. ಹೀಗಿರುವಾಗ ಡೇರಿ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪಗಳ ಸೇವನೆಯಿಂದ ಮತ್ತಷ್ಟು ಕಫ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಬಹುತೇಕರ ನಂಬಿಕೆ. ಆದರೆ ನಿಜಕ್ಕೂ ಹಾಗೇನೂ ಆಗುವುದಿಲ್ಲ ಎಂಬುದನ್ನು ಆಹಾರತಜ್ಞರು ಪತ್ತೆಹಚ್ಚಿದ್ದಾರೆ.
ಚಳಿಗಾಲದಲ್ಲಿ ರಾತ್ರಿ ವೇಳೆ ಬಿಸಿ ಹಾಲಿಗೆ ಸ್ವಲ್ಪ ಕೇಸರಿ ಬೆರಸಿ ಕುಡಿಯುವುದು ತುಂಬ ಉತ್ತಮ. ಹಾಲಿನ ಉತ್ಪನ್ನಗಳನ್ನು ಹಿತಮಿತವಾಗಿ ಸೇವಿಸುವುದರಿಂದ ಪೋಷಕಾಂಶ ಸಿಗುತ್ತದೆ ಎಂದು ಹೇಳಿದ್ದಾರೆ.
5.ಚಳಿಗಾಲದಲ್ಲಿ ವಿಟಮಿನ್ ಸಪ್ಲಿಮೆಂಟ್ಸ್ ತೀರ ಅಗತ್ಯ
ವಿಟಮಿನ್ಗಳನ್ನು ತೆಗೆದುಕೊಳ್ಳುವುದು ಒಳ್ಳೆಯದೇ. ಆದರೆ ಉಳಿದ ಕಾಲಗಳಿಗಿಂತ ಚಳಿಗಾಲದಲ್ಲೇ ತೆಗೆದುಕೊಳ್ಳಬೇಕು ಎಂಬುದು ತಪ್ಪು ಅಭಿಪ್ರಾಯ.
ಒಬ್ಬ ಮನುಷ್ಯ ತನ್ನ ದೇಹಕ್ಕೆ ಬೇಕಾದ ವಿಟಮಿನ್ಗಳನ್ನು ಪಡೆಯಲು ಸಮತೋಲನಯುಕ್ತ ಡಯಟ್ ಮಾಡುವುದು ಉತ್ತಮ. ಸುಮ್ಮನೆ ತೆಗೆದುಕೊಳ್ಳುವ ಅನಗತ್ಯ ಸಪ್ಲಿಮೆಂಟ್ಸ್ಗಳು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…
ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್ಮಸ್ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು4. ಶುಂಠಿ –…
ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ.. ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…