ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.
ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.
ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು ಎಂಬುದನ್ನು ತಜ್ಞರು ಹೇಳಿದ್ದಾರೆ ನೋಡಿ.
1. ಚಳಿಗಾಲದಲ್ಲಿ ಆಗಾಗ ಏನಾದರೂ ತಿನ್ನುತ್ತಿದ್ದರೆ ದೇಹ ಬೆಚ್ಚಗಿರುತ್ತದೆ.
ಇದೊಂದು ಶುದ್ಧ ತಪ್ಪು ಕಲ್ಪನೆ ಎಂದು ಹೇಳುತ್ತಾರೆ ಪೌಷ್ಟಿಕತಜ್ಞರು. ಚಳಿಗಾಲ ಬಂತೆಂದರೆ ಸಾಕು, ಜಾಸ್ತಿ ಆಹಾರ ಸೇವಿಸಿ. ಆಗಾಗ ಏನಾದರೂ ಸ್ವಲ್ಪ ತಿನ್ನುತ್ತಿರಿ. ಇದರಿಂದ ದೇಹ ಬೆಚ್ಚಗಿರುತ್ತದೆ. ಅನಾರೋಗ್ಯಕ್ಕೆ ಒಳಗಾಗುವುದೂ ತಪ್ಪುತ್ತದೆ ಎಂದು ಮನೆಯಲ್ಲಿ ಹಿರಿಯರು, ಪಾಲಕರು ಹೇಳುವುದನ್ನು ಕೇಳಿದ್ದೇವೆ.
ಆದರೆ ತಜ್ಞರು ಹೇಳುವ ಪ್ರಕಾರ, ಹೀಗೆ ಪದೇಪದೆ ತಿನ್ನುವುದರಿಂದ ದೇಹದ ತೂಕ ಹೆಚ್ಚುತ್ತದೆ ಹೊರತು ಬೇರೇನೂ ಉಪಯೋಗ ಆಗುವುದಿಲ್ಲ. ಅದರ ಬದಲಾಗಿದೆ ಚಳಿಗಾಲದಲ್ಲಿ ಸರಿಯಾದ ಕ್ರಮದಲ್ಲಿ ಡಯಟ್ ಮಾಡುವ ಮೂಲಕ ಕಾಯಿಲೆ ಬರುವುದನ್ನು ತಡೆಗಟ್ಟಬಹುದು. ಹಾಗಾಗಿ ಆಗಾಗ ಏನಾದರೂ ಆಹಾರ ಸೇವನೆ ಮಾಡುವುದರಿಂದ ಏನೂ ಉಪಯೋಗವಿಲ್ಲ.
2. ಮಸಾಲೆಯುಕ್ತ ಆಹಾರ ಸೇವನೆ ದೇಹವನ್ನು ಬೆಚ್ಚಗಿಡುತ್ತದೆ.
ಮಸಾಲೆಯುಕ್ತ, ಖಾರ, ಸ್ಪೈಸಿ ಆಹಾರಗಳ ಸೇವನೆಯಿಂದ ಖಂಡಿತ ಮೈ ಬೆವರುತ್ತದೆ. ಅದರಲ್ಲೂ ಚಳಿಗಾಲದಲ್ಲಿ ಮೆಣಸಿನಕಾಯಿ ಪ್ರಮಾಣ ಹೆಚ್ಚಾಗಿರುವ ಆಹಾರ ಸೇವನೆಯಿಂದ ದೇಹದ ಉಷ್ಣತೆ ಹೆಚ್ಚಾಗಿ ನಾವು ಚಳಿಯಿಂದ ಪಾರಾಗಬಹುದು ಎಂದುಕೊಂಡಿದ್ದರೆ ಅದು ದೊಡ್ಡ ತಪ್ಪು.
ಆಹಾರ ತಜ್ಞರ ಪ್ರಕಾರ, ಮಸಾಲೆಯುಕ್ತ ಸ್ಪೈಸಿ ಆಹಾರಗಳು ನಮ್ಮ ದೇಹದ ಉಷ್ಣತೆಯ ಮೇಲೆ ಯಾವುದೇ ಗುರುತರ ಪ್ರಭಾವವನ್ನೂ ಬೀರುವುದಿಲ್ಲ. ಅದನ್ನು ತಿಂದ ಕ್ಷಣಕ್ಕೆ ಖಾರದಿಂದ ಮೈ ಬಿಸಿಯಾಗಬಹುದು. ಬೆವರಬಹುದು. ಆದರೆ ನಂತರ ಏನೂ ಪ್ರಯೋಜನವಿಲ್ಲ.
3. ನೀವು ಶೀತ, ಕೆಮ್ಮಿನಿಂದ ಬಳಲುತ್ತಿದ್ದರೆ ಸಿಟ್ರಸ್ ಹಣ್ಣುಗಳನ್ನು ತಿನ್ನಬಾರದು
ಯಾರಾದರೂ ಹೀಗೆ ಹೇಳಿದರೆ ಅದನ್ನು ಕೇಳಲೇಬೇಡಿ ಎನ್ನುತ್ತಾರೆ ತಜ್ಞರು.
ಕಿತ್ತಳೆ, ಲಿಂಬುವಿನಂತಹ ಸಿಟ್ರಸ್ ಹಣ್ಣುಗಳು ಚಳಿಗಾಲದಲ್ಲಿ ದೇಹಕ್ಕೆ ಅತ್ಯವಶ್ಯಕ. ವಿಟಮಿನ್ ಸಿಯನ್ನು ಹೇರಳವಾಗಿ ಹೊಂದಿರುವ ಈ ಹಣ್ಣುಗಳಲ್ಲಿ ನೀರಿನ ಅಂಶವೂ ಹೆಚ್ಚಾಗಿರುತ್ತದೆ.
ಕಿತ್ತಳೆಗಳು ಚಳಿಗಾಲದ ಹಣ್ಣುಗಳು. ಅವು ಚಳಿಗಾದಲ್ಲಿ ಸಿಗುತ್ತವೆ ಎಂದರೆ ಆ ಸಮಯದಲ್ಲಿಯೇ ನಮ್ಮ ದೇಹಕ್ಕೆ ಬೇಕು ಎಂದರ್ಥ. ಕೆಮ್ಮು, ನೆಗಡಿಯಾದಾಗ ಕಿತ್ತಳೆ, ಲಿಂಬು ಹಣ್ಣುಗಳ ಸೇವನೆ ಮಾಡಬೇಕು. ನಮ್ಮೊಳಗಿನ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತವೆ. ಅಲ್ಲದೆ ಪೌಷ್ಟಿಕಾಂಶವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತವೆ. ಕಟ್ಟಿಕೊಂಡ ಕಫವನ್ನು ಸಡಿಲಗೊಳಿಸುತ್ತವೆ ಹಾಗೂ ಶೀತವನ್ನು ತೊಡೆದುಹಾಕುತ್ತದೆ ಎಂದು ನ್ಯೂಟ್ರಿಷಿಯನಿಸ್ಟ್ ಹೇಳುತ್ತಾರೆ.
4. ಡೇರಿ ಉತ್ಪನ್ನಗಳಿಂದ ದೂರವಿರಿ
ಈ ಮಾತನ್ನು ಸಾಮಾನ್ಯವಾಗಿ ಎಲ್ಲರೂ ಹೇಳುತ್ತಾರೆ. ಮೊದಲೇ ಚಳಿ ಇರುತ್ತದೆ. ಶೀತ, ಕೆಮ್ಮು, ಜ್ವರ, ಕಫ ಇರುತ್ತದೆ. ಹೀಗಿರುವಾಗ ಡೇರಿ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪಗಳ ಸೇವನೆಯಿಂದ ಮತ್ತಷ್ಟು ಕಫ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಬಹುತೇಕರ ನಂಬಿಕೆ. ಆದರೆ ನಿಜಕ್ಕೂ ಹಾಗೇನೂ ಆಗುವುದಿಲ್ಲ ಎಂಬುದನ್ನು ಆಹಾರತಜ್ಞರು ಪತ್ತೆಹಚ್ಚಿದ್ದಾರೆ.
ಚಳಿಗಾಲದಲ್ಲಿ ರಾತ್ರಿ ವೇಳೆ ಬಿಸಿ ಹಾಲಿಗೆ ಸ್ವಲ್ಪ ಕೇಸರಿ ಬೆರಸಿ ಕುಡಿಯುವುದು ತುಂಬ ಉತ್ತಮ. ಹಾಲಿನ ಉತ್ಪನ್ನಗಳನ್ನು ಹಿತಮಿತವಾಗಿ ಸೇವಿಸುವುದರಿಂದ ಪೋಷಕಾಂಶ ಸಿಗುತ್ತದೆ ಎಂದು ಹೇಳಿದ್ದಾರೆ.
5.ಚಳಿಗಾಲದಲ್ಲಿ ವಿಟಮಿನ್ ಸಪ್ಲಿಮೆಂಟ್ಸ್ ತೀರ ಅಗತ್ಯ
ವಿಟಮಿನ್ಗಳನ್ನು ತೆಗೆದುಕೊಳ್ಳುವುದು ಒಳ್ಳೆಯದೇ. ಆದರೆ ಉಳಿದ ಕಾಲಗಳಿಗಿಂತ ಚಳಿಗಾಲದಲ್ಲೇ ತೆಗೆದುಕೊಳ್ಳಬೇಕು ಎಂಬುದು ತಪ್ಪು ಅಭಿಪ್ರಾಯ.
ಒಬ್ಬ ಮನುಷ್ಯ ತನ್ನ ದೇಹಕ್ಕೆ ಬೇಕಾದ ವಿಟಮಿನ್ಗಳನ್ನು ಪಡೆಯಲು ಸಮತೋಲನಯುಕ್ತ ಡಯಟ್ ಮಾಡುವುದು ಉತ್ತಮ. ಸುಮ್ಮನೆ ತೆಗೆದುಕೊಳ್ಳುವ ಅನಗತ್ಯ ಸಪ್ಲಿಮೆಂಟ್ಸ್ಗಳು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.
ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…
ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ ಬ್ಯಾಂಕಿಂಗ್ ವ್ಯವಹಾರಗಳು ಸಹ ಎಲ್ಲರಿಗೂ ಸುಲಭವಾಗುತ್ತಿದೆ. ಹಾಗೆಯೇ ಇಂಟರ್ನೆಟ್ ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ ಮಾಡುವುದು, ಹಣವನ್ನು ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…
ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ. ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…
ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..
ನೀವು ಒಂದು ವೇಳೆ ಟೆನ್ಶನ್ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.