News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಆರೋಗ್ಯ

ಚಳಿಗಾಲದಲ್ಲಿ ಏನು ತಿನ್ನಬೇಕು? ಯಾವುದನ್ನು ತಿನ್ನಬಾರದು? ಈ ಮಾಹಿತಿ ನೋಡಿ.

130

ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್​ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.
ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್​ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.
ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು ಎಂಬುದನ್ನು ತಜ್ಞರು ಹೇಳಿದ್ದಾರೆ ನೋಡಿ.

1. ಚಳಿಗಾಲದಲ್ಲಿ ಆಗಾಗ ಏನಾದರೂ ತಿನ್ನುತ್ತಿದ್ದರೆ ದೇಹ ಬೆಚ್ಚಗಿರುತ್ತದೆ.
ಇದೊಂದು ಶುದ್ಧ ತಪ್ಪು ಕಲ್ಪನೆ ಎಂದು ಹೇಳುತ್ತಾರೆ ಪೌಷ್ಟಿಕತಜ್ಞರು. ಚಳಿಗಾಲ ಬಂತೆಂದರೆ ಸಾಕು, ಜಾಸ್ತಿ ಆಹಾರ ಸೇವಿಸಿ. ಆಗಾಗ ಏನಾದರೂ ಸ್ವಲ್ಪ ತಿನ್ನುತ್ತಿರಿ. ಇದರಿಂದ ದೇಹ ಬೆಚ್ಚಗಿರುತ್ತದೆ. ಅನಾರೋಗ್ಯಕ್ಕೆ ಒಳಗಾಗುವುದೂ ತಪ್ಪುತ್ತದೆ ಎಂದು ಮನೆಯಲ್ಲಿ ಹಿರಿಯರು, ಪಾಲಕರು ಹೇಳುವುದನ್ನು ಕೇಳಿದ್ದೇವೆ.
ಆದರೆ ತಜ್ಞರು ಹೇಳುವ ಪ್ರಕಾರ, ಹೀಗೆ ಪದೇಪದೆ ತಿನ್ನುವುದರಿಂದ ದೇಹದ ತೂಕ ಹೆಚ್ಚುತ್ತದೆ ಹೊರತು ಬೇರೇನೂ ಉಪಯೋಗ ಆಗುವುದಿಲ್ಲ. ಅದರ ಬದಲಾಗಿದೆ ಚಳಿಗಾಲದಲ್ಲಿ ಸರಿಯಾದ ಕ್ರಮದಲ್ಲಿ ಡಯಟ್​ ಮಾಡುವ ಮೂಲಕ ಕಾಯಿಲೆ ಬರುವುದನ್ನು ತಡೆಗಟ್ಟಬಹುದು. ಹಾಗಾಗಿ ಆಗಾಗ ಏನಾದರೂ ಆಹಾರ ಸೇವನೆ ಮಾಡುವುದರಿಂದ ಏನೂ ಉಪಯೋಗವಿಲ್ಲ.

2. ಮಸಾಲೆಯುಕ್ತ ಆಹಾರ ಸೇವನೆ ದೇಹವನ್ನು ಬೆಚ್ಚಗಿಡುತ್ತದೆ.
ಮಸಾಲೆಯುಕ್ತ, ಖಾರ, ಸ್ಪೈಸಿ ಆಹಾರಗಳ ಸೇವನೆಯಿಂದ ಖಂಡಿತ ಮೈ ಬೆವರುತ್ತದೆ. ಅದರಲ್ಲೂ ಚಳಿಗಾಲದಲ್ಲಿ ಮೆಣಸಿನಕಾಯಿ ಪ್ರಮಾಣ ಹೆಚ್ಚಾಗಿರುವ ಆಹಾರ ಸೇವನೆಯಿಂದ ದೇಹದ ಉಷ್ಣತೆ ಹೆಚ್ಚಾಗಿ ನಾವು ಚಳಿಯಿಂದ ಪಾರಾಗಬಹುದು ಎಂದುಕೊಂಡಿದ್ದರೆ ಅದು ದೊಡ್ಡ ತಪ್ಪು.
ಆಹಾರ ತಜ್ಞರ ಪ್ರಕಾರ, ಮಸಾಲೆಯುಕ್ತ ಸ್ಪೈಸಿ ಆಹಾರಗಳು ನಮ್ಮ ದೇಹದ ಉಷ್ಣತೆಯ ಮೇಲೆ ಯಾವುದೇ ಗುರುತರ ಪ್ರಭಾವವನ್ನೂ ಬೀರುವುದಿಲ್ಲ. ಅದನ್ನು ತಿಂದ ಕ್ಷಣಕ್ಕೆ ಖಾರದಿಂದ ಮೈ ಬಿಸಿಯಾಗಬಹುದು. ಬೆವರಬಹುದು. ಆದರೆ ನಂತರ ಏನೂ ಪ್ರಯೋಜನವಿಲ್ಲ.

3. ನೀವು ಶೀತ, ಕೆಮ್ಮಿನಿಂದ ಬಳಲುತ್ತಿದ್ದರೆ ಸಿಟ್ರಸ್ ಹಣ್ಣುಗಳನ್ನು ತಿನ್ನಬಾರದು
ಯಾರಾದರೂ ಹೀಗೆ ಹೇಳಿದರೆ ಅದನ್ನು ಕೇಳಲೇಬೇಡಿ ಎನ್ನುತ್ತಾರೆ ತಜ್ಞರು.

ಕಿತ್ತಳೆ, ಲಿಂಬುವಿನಂತಹ ಸಿಟ್ರಸ್​​ ಹಣ್ಣುಗಳು ಚಳಿಗಾಲದಲ್ಲಿ ದೇಹಕ್ಕೆ ಅತ್ಯವಶ್ಯಕ. ವಿಟಮಿನ್​ ಸಿಯನ್ನು ಹೇರಳವಾಗಿ ಹೊಂದಿರುವ ಈ ಹಣ್ಣುಗಳಲ್ಲಿ ನೀರಿನ ಅಂಶವೂ ಹೆಚ್ಚಾಗಿರುತ್ತದೆ.
ಕಿತ್ತಳೆಗಳು ಚಳಿಗಾಲದ ಹಣ್ಣುಗಳು. ಅವು ಚಳಿಗಾದಲ್ಲಿ ಸಿಗುತ್ತವೆ ಎಂದರೆ ಆ ಸಮಯದಲ್ಲಿಯೇ ನಮ್ಮ ದೇಹಕ್ಕೆ ಬೇಕು ಎಂದರ್ಥ. ಕೆಮ್ಮು, ನೆಗಡಿಯಾದಾಗ ಕಿತ್ತಳೆ, ಲಿಂಬು ಹಣ್ಣುಗಳ ಸೇವನೆ ಮಾಡಬೇಕು. ನಮ್ಮೊಳಗಿನ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತವೆ. ಅಲ್ಲದೆ ಪೌಷ್ಟಿಕಾಂಶವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತವೆ. ಕಟ್ಟಿಕೊಂಡ ಕಫವನ್ನು ಸಡಿಲಗೊಳಿಸುತ್ತವೆ ಹಾಗೂ ಶೀತವನ್ನು ತೊಡೆದುಹಾಕುತ್ತದೆ ಎಂದು ನ್ಯೂಟ್ರಿಷಿಯನಿಸ್ಟ್​ ಹೇಳುತ್ತಾರೆ.

4. ಡೇರಿ ಉತ್ಪನ್ನಗಳಿಂದ ದೂರವಿರಿ
ಈ ಮಾತನ್ನು ಸಾಮಾನ್ಯವಾಗಿ ಎಲ್ಲರೂ ಹೇಳುತ್ತಾರೆ. ಮೊದಲೇ ಚಳಿ ಇರುತ್ತದೆ. ಶೀತ, ಕೆಮ್ಮು, ಜ್ವರ, ಕಫ ಇರುತ್ತದೆ. ಹೀಗಿರುವಾಗ ಡೇರಿ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪಗಳ ಸೇವನೆಯಿಂದ ಮತ್ತಷ್ಟು ಕಫ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಬಹುತೇಕರ ನಂಬಿಕೆ. ಆದರೆ ನಿಜಕ್ಕೂ ಹಾಗೇನೂ ಆಗುವುದಿಲ್ಲ ಎಂಬುದನ್ನು ಆಹಾರತಜ್ಞರು ಪತ್ತೆಹಚ್ಚಿದ್ದಾರೆ.
ಚಳಿಗಾಲದಲ್ಲಿ ರಾತ್ರಿ ವೇಳೆ ಬಿಸಿ ಹಾಲಿಗೆ ಸ್ವಲ್ಪ ಕೇಸರಿ ಬೆರಸಿ ಕುಡಿಯುವುದು ತುಂಬ ಉತ್ತಮ. ಹಾಲಿನ ಉತ್ಪನ್ನಗಳನ್ನು ಹಿತಮಿತವಾಗಿ ಸೇವಿಸುವುದರಿಂದ ಪೋಷಕಾಂಶ ಸಿಗುತ್ತದೆ ಎಂದು ಹೇಳಿದ್ದಾರೆ.

5.ಚಳಿಗಾಲದಲ್ಲಿ ವಿಟಮಿನ್​ ಸಪ್ಲಿಮೆಂಟ್ಸ್​ ತೀರ ಅಗತ್ಯ
ವಿಟಮಿನ್​ಗಳನ್ನು ತೆಗೆದುಕೊಳ್ಳುವುದು ಒಳ್ಳೆಯದೇ. ಆದರೆ ಉಳಿದ ಕಾಲಗಳಿಗಿಂತ ಚಳಿಗಾಲದಲ್ಲೇ ತೆಗೆದುಕೊಳ್ಳಬೇಕು ಎಂಬುದು ತಪ್ಪು ಅಭಿಪ್ರಾಯ.
ಒಬ್ಬ ಮನುಷ್ಯ ತನ್ನ ದೇಹಕ್ಕೆ ಬೇಕಾದ ವಿಟಮಿನ್​ಗಳನ್ನು ಪಡೆಯಲು ಸಮತೋಲನಯುಕ್ತ ಡಯಟ್​ ಮಾಡುವುದು ಉತ್ತಮ. ಸುಮ್ಮನೆ ತೆಗೆದುಕೊಳ್ಳುವ ಅನಗತ್ಯ ಸಪ್ಲಿಮೆಂಟ್ಸ್​ಗಳು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಮುಖ್ಯಮಂತ್ರಿಗಳ ಪ್ರಕಾರ ಈ ಸಂಘಟನೆಗಳು ಮತ್ತು ಈ ಪಕ್ಷದ ನಾಯಕರೇ ಉಗ್ರಗಾಮಿಗಳಂತೆ..! ಹಾಗಾದ್ರೆ ನಿಜವಾದ ಉಗ್ರಗಾಮಿಗಳು ಯಾರು..?

    ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನಾ ಬೆಳಿಗ್ಗೆ ಪರಂಗಿ ಹಣ್ಣು ತಿನ್ನುವುದರಿಂದ ಏನೆಲ್ಲಾ ಪ್ರಯೋಜಗಳಿವೆ ನೋಡಿ…

    ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…

  • Sports

    ಶಿವಂದುಬೆಗೆ ಕೋವಿಡ್-19

    ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ  

    Loading

  • ದೇಶ-ವಿದೇಶ

    ಇವು ಜಿಎಸ್ಟಿ ಅಡಿಯಲ್ಲಿ ಕಡಿಮೆಯಾಗಲಿವೆ.ಏನು ಅಂತ ಗೊತ್ತಾ ನಿಮಗೆ ???

    ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು  ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು?                                                                                  …

  • ಸುದ್ದಿ

    ‘ಬ್ಯಾಂಕ್’ಉದ್ಯೋಗಹುಡುಕುತ್ತಿರುವವರಿಗೊಂದು ಮುಖ್ಯ ಮಾಹಿತಿ…!

    ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…

  • ಸುದ್ದಿ

    ಕೇವಲ 12 ವರ್ಷಗಳಲ್ಲಿ 9 ಸಿನಿಮಾ ; ಶಂಕ್ರಣ್ಣ ನಿರ್ದೇಶಿಸಿದ ಸಿನಿಮಾಗಳಿಗೆ ಸಿಕ್ಕಿದ ಬಿರುದುಗಳೆಷ್ಟು ಗೊತ್ತಾ?

    ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್‌ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್  ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್‌, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…