ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.
ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.
ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು ಎಂಬುದನ್ನು ತಜ್ಞರು ಹೇಳಿದ್ದಾರೆ ನೋಡಿ.
1. ಚಳಿಗಾಲದಲ್ಲಿ ಆಗಾಗ ಏನಾದರೂ ತಿನ್ನುತ್ತಿದ್ದರೆ ದೇಹ ಬೆಚ್ಚಗಿರುತ್ತದೆ.
ಇದೊಂದು ಶುದ್ಧ ತಪ್ಪು ಕಲ್ಪನೆ ಎಂದು ಹೇಳುತ್ತಾರೆ ಪೌಷ್ಟಿಕತಜ್ಞರು. ಚಳಿಗಾಲ ಬಂತೆಂದರೆ ಸಾಕು, ಜಾಸ್ತಿ ಆಹಾರ ಸೇವಿಸಿ. ಆಗಾಗ ಏನಾದರೂ ಸ್ವಲ್ಪ ತಿನ್ನುತ್ತಿರಿ. ಇದರಿಂದ ದೇಹ ಬೆಚ್ಚಗಿರುತ್ತದೆ. ಅನಾರೋಗ್ಯಕ್ಕೆ ಒಳಗಾಗುವುದೂ ತಪ್ಪುತ್ತದೆ ಎಂದು ಮನೆಯಲ್ಲಿ ಹಿರಿಯರು, ಪಾಲಕರು ಹೇಳುವುದನ್ನು ಕೇಳಿದ್ದೇವೆ.
ಆದರೆ ತಜ್ಞರು ಹೇಳುವ ಪ್ರಕಾರ, ಹೀಗೆ ಪದೇಪದೆ ತಿನ್ನುವುದರಿಂದ ದೇಹದ ತೂಕ ಹೆಚ್ಚುತ್ತದೆ ಹೊರತು ಬೇರೇನೂ ಉಪಯೋಗ ಆಗುವುದಿಲ್ಲ. ಅದರ ಬದಲಾಗಿದೆ ಚಳಿಗಾಲದಲ್ಲಿ ಸರಿಯಾದ ಕ್ರಮದಲ್ಲಿ ಡಯಟ್ ಮಾಡುವ ಮೂಲಕ ಕಾಯಿಲೆ ಬರುವುದನ್ನು ತಡೆಗಟ್ಟಬಹುದು. ಹಾಗಾಗಿ ಆಗಾಗ ಏನಾದರೂ ಆಹಾರ ಸೇವನೆ ಮಾಡುವುದರಿಂದ ಏನೂ ಉಪಯೋಗವಿಲ್ಲ.
2. ಮಸಾಲೆಯುಕ್ತ ಆಹಾರ ಸೇವನೆ ದೇಹವನ್ನು ಬೆಚ್ಚಗಿಡುತ್ತದೆ.
ಮಸಾಲೆಯುಕ್ತ, ಖಾರ, ಸ್ಪೈಸಿ ಆಹಾರಗಳ ಸೇವನೆಯಿಂದ ಖಂಡಿತ ಮೈ ಬೆವರುತ್ತದೆ. ಅದರಲ್ಲೂ ಚಳಿಗಾಲದಲ್ಲಿ ಮೆಣಸಿನಕಾಯಿ ಪ್ರಮಾಣ ಹೆಚ್ಚಾಗಿರುವ ಆಹಾರ ಸೇವನೆಯಿಂದ ದೇಹದ ಉಷ್ಣತೆ ಹೆಚ್ಚಾಗಿ ನಾವು ಚಳಿಯಿಂದ ಪಾರಾಗಬಹುದು ಎಂದುಕೊಂಡಿದ್ದರೆ ಅದು ದೊಡ್ಡ ತಪ್ಪು.
ಆಹಾರ ತಜ್ಞರ ಪ್ರಕಾರ, ಮಸಾಲೆಯುಕ್ತ ಸ್ಪೈಸಿ ಆಹಾರಗಳು ನಮ್ಮ ದೇಹದ ಉಷ್ಣತೆಯ ಮೇಲೆ ಯಾವುದೇ ಗುರುತರ ಪ್ರಭಾವವನ್ನೂ ಬೀರುವುದಿಲ್ಲ. ಅದನ್ನು ತಿಂದ ಕ್ಷಣಕ್ಕೆ ಖಾರದಿಂದ ಮೈ ಬಿಸಿಯಾಗಬಹುದು. ಬೆವರಬಹುದು. ಆದರೆ ನಂತರ ಏನೂ ಪ್ರಯೋಜನವಿಲ್ಲ.
3. ನೀವು ಶೀತ, ಕೆಮ್ಮಿನಿಂದ ಬಳಲುತ್ತಿದ್ದರೆ ಸಿಟ್ರಸ್ ಹಣ್ಣುಗಳನ್ನು ತಿನ್ನಬಾರದು
ಯಾರಾದರೂ ಹೀಗೆ ಹೇಳಿದರೆ ಅದನ್ನು ಕೇಳಲೇಬೇಡಿ ಎನ್ನುತ್ತಾರೆ ತಜ್ಞರು.
ಕಿತ್ತಳೆ, ಲಿಂಬುವಿನಂತಹ ಸಿಟ್ರಸ್ ಹಣ್ಣುಗಳು ಚಳಿಗಾಲದಲ್ಲಿ ದೇಹಕ್ಕೆ ಅತ್ಯವಶ್ಯಕ. ವಿಟಮಿನ್ ಸಿಯನ್ನು ಹೇರಳವಾಗಿ ಹೊಂದಿರುವ ಈ ಹಣ್ಣುಗಳಲ್ಲಿ ನೀರಿನ ಅಂಶವೂ ಹೆಚ್ಚಾಗಿರುತ್ತದೆ.
ಕಿತ್ತಳೆಗಳು ಚಳಿಗಾಲದ ಹಣ್ಣುಗಳು. ಅವು ಚಳಿಗಾದಲ್ಲಿ ಸಿಗುತ್ತವೆ ಎಂದರೆ ಆ ಸಮಯದಲ್ಲಿಯೇ ನಮ್ಮ ದೇಹಕ್ಕೆ ಬೇಕು ಎಂದರ್ಥ. ಕೆಮ್ಮು, ನೆಗಡಿಯಾದಾಗ ಕಿತ್ತಳೆ, ಲಿಂಬು ಹಣ್ಣುಗಳ ಸೇವನೆ ಮಾಡಬೇಕು. ನಮ್ಮೊಳಗಿನ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತವೆ. ಅಲ್ಲದೆ ಪೌಷ್ಟಿಕಾಂಶವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತವೆ. ಕಟ್ಟಿಕೊಂಡ ಕಫವನ್ನು ಸಡಿಲಗೊಳಿಸುತ್ತವೆ ಹಾಗೂ ಶೀತವನ್ನು ತೊಡೆದುಹಾಕುತ್ತದೆ ಎಂದು ನ್ಯೂಟ್ರಿಷಿಯನಿಸ್ಟ್ ಹೇಳುತ್ತಾರೆ.
4. ಡೇರಿ ಉತ್ಪನ್ನಗಳಿಂದ ದೂರವಿರಿ
ಈ ಮಾತನ್ನು ಸಾಮಾನ್ಯವಾಗಿ ಎಲ್ಲರೂ ಹೇಳುತ್ತಾರೆ. ಮೊದಲೇ ಚಳಿ ಇರುತ್ತದೆ. ಶೀತ, ಕೆಮ್ಮು, ಜ್ವರ, ಕಫ ಇರುತ್ತದೆ. ಹೀಗಿರುವಾಗ ಡೇರಿ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪಗಳ ಸೇವನೆಯಿಂದ ಮತ್ತಷ್ಟು ಕಫ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಬಹುತೇಕರ ನಂಬಿಕೆ. ಆದರೆ ನಿಜಕ್ಕೂ ಹಾಗೇನೂ ಆಗುವುದಿಲ್ಲ ಎಂಬುದನ್ನು ಆಹಾರತಜ್ಞರು ಪತ್ತೆಹಚ್ಚಿದ್ದಾರೆ.
ಚಳಿಗಾಲದಲ್ಲಿ ರಾತ್ರಿ ವೇಳೆ ಬಿಸಿ ಹಾಲಿಗೆ ಸ್ವಲ್ಪ ಕೇಸರಿ ಬೆರಸಿ ಕುಡಿಯುವುದು ತುಂಬ ಉತ್ತಮ. ಹಾಲಿನ ಉತ್ಪನ್ನಗಳನ್ನು ಹಿತಮಿತವಾಗಿ ಸೇವಿಸುವುದರಿಂದ ಪೋಷಕಾಂಶ ಸಿಗುತ್ತದೆ ಎಂದು ಹೇಳಿದ್ದಾರೆ.
5.ಚಳಿಗಾಲದಲ್ಲಿ ವಿಟಮಿನ್ ಸಪ್ಲಿಮೆಂಟ್ಸ್ ತೀರ ಅಗತ್ಯ
ವಿಟಮಿನ್ಗಳನ್ನು ತೆಗೆದುಕೊಳ್ಳುವುದು ಒಳ್ಳೆಯದೇ. ಆದರೆ ಉಳಿದ ಕಾಲಗಳಿಗಿಂತ ಚಳಿಗಾಲದಲ್ಲೇ ತೆಗೆದುಕೊಳ್ಳಬೇಕು ಎಂಬುದು ತಪ್ಪು ಅಭಿಪ್ರಾಯ.
ಒಬ್ಬ ಮನುಷ್ಯ ತನ್ನ ದೇಹಕ್ಕೆ ಬೇಕಾದ ವಿಟಮಿನ್ಗಳನ್ನು ಪಡೆಯಲು ಸಮತೋಲನಯುಕ್ತ ಡಯಟ್ ಮಾಡುವುದು ಉತ್ತಮ. ಸುಮ್ಮನೆ ತೆಗೆದುಕೊಳ್ಳುವ ಅನಗತ್ಯ ಸಪ್ಲಿಮೆಂಟ್ಸ್ಗಳು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…
ಮೊಬೈಲ್ ಫೋನ್ ಬಳಕೆದಾರರು ತಮ್ಮ ಮೊಬೈಲ್ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್ಲೈನ್ ಫೋನ್ಗಳು 60 ಸೆಕೆಂಡ್ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್ ಫೋನ್ಗಳ ರಿಂಗಣವನ್ನು30 ಸೆಕೆಂಡ್ಗಳಿಗೆ ಮತ್ತು ಲ್ಯಾಂಡ್ಲೈನ್ ಫೋನ್ಗಳ ರಿಂಗಣವನ್ನು 60 ಸೆಕೆಂಡ್ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್ಫೋನ್ ಮತ್ತು ಲ್ಯಾಂಡ್ಲೈನ್ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…
ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ನಾಗರಾಜ್, ತಹಸೀಲ್ದಾರ್…
ಕಿಚ್ಚ ಸುದೀಪ್,ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್ನ ಸಿನಿಮಾ ‘ದಬಾಂಗ್ 3’ ಕನ್ನಡಕ್ಕೆ ಡಬ್ ಆಗಿ ರಿಲೀಸ್ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್ ಆಗಿದೆ. ಇನ್ನು ಸುದೀಪ್ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಿಸೆಂಬರ್ನಲ್ಲಿಕ್ರಿಸ್ಮಸ್ ಹಬ್ಬದ ಹೊತ್ತಿಗೆ ದಬಾಂಗ್-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್ 3…
ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.
ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸೋಮವಾರ ಅಧಿಕೃತವಾಗಿ ಘೋಷಿಸಿದೆ. ”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,” ಕಳೆದ…