ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.
ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.
ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು ಎಂಬುದನ್ನು ತಜ್ಞರು ಹೇಳಿದ್ದಾರೆ ನೋಡಿ.
1. ಚಳಿಗಾಲದಲ್ಲಿ ಆಗಾಗ ಏನಾದರೂ ತಿನ್ನುತ್ತಿದ್ದರೆ ದೇಹ ಬೆಚ್ಚಗಿರುತ್ತದೆ.
ಇದೊಂದು ಶುದ್ಧ ತಪ್ಪು ಕಲ್ಪನೆ ಎಂದು ಹೇಳುತ್ತಾರೆ ಪೌಷ್ಟಿಕತಜ್ಞರು. ಚಳಿಗಾಲ ಬಂತೆಂದರೆ ಸಾಕು, ಜಾಸ್ತಿ ಆಹಾರ ಸೇವಿಸಿ. ಆಗಾಗ ಏನಾದರೂ ಸ್ವಲ್ಪ ತಿನ್ನುತ್ತಿರಿ. ಇದರಿಂದ ದೇಹ ಬೆಚ್ಚಗಿರುತ್ತದೆ. ಅನಾರೋಗ್ಯಕ್ಕೆ ಒಳಗಾಗುವುದೂ ತಪ್ಪುತ್ತದೆ ಎಂದು ಮನೆಯಲ್ಲಿ ಹಿರಿಯರು, ಪಾಲಕರು ಹೇಳುವುದನ್ನು ಕೇಳಿದ್ದೇವೆ.
ಆದರೆ ತಜ್ಞರು ಹೇಳುವ ಪ್ರಕಾರ, ಹೀಗೆ ಪದೇಪದೆ ತಿನ್ನುವುದರಿಂದ ದೇಹದ ತೂಕ ಹೆಚ್ಚುತ್ತದೆ ಹೊರತು ಬೇರೇನೂ ಉಪಯೋಗ ಆಗುವುದಿಲ್ಲ. ಅದರ ಬದಲಾಗಿದೆ ಚಳಿಗಾಲದಲ್ಲಿ ಸರಿಯಾದ ಕ್ರಮದಲ್ಲಿ ಡಯಟ್ ಮಾಡುವ ಮೂಲಕ ಕಾಯಿಲೆ ಬರುವುದನ್ನು ತಡೆಗಟ್ಟಬಹುದು. ಹಾಗಾಗಿ ಆಗಾಗ ಏನಾದರೂ ಆಹಾರ ಸೇವನೆ ಮಾಡುವುದರಿಂದ ಏನೂ ಉಪಯೋಗವಿಲ್ಲ.
2. ಮಸಾಲೆಯುಕ್ತ ಆಹಾರ ಸೇವನೆ ದೇಹವನ್ನು ಬೆಚ್ಚಗಿಡುತ್ತದೆ.
ಮಸಾಲೆಯುಕ್ತ, ಖಾರ, ಸ್ಪೈಸಿ ಆಹಾರಗಳ ಸೇವನೆಯಿಂದ ಖಂಡಿತ ಮೈ ಬೆವರುತ್ತದೆ. ಅದರಲ್ಲೂ ಚಳಿಗಾಲದಲ್ಲಿ ಮೆಣಸಿನಕಾಯಿ ಪ್ರಮಾಣ ಹೆಚ್ಚಾಗಿರುವ ಆಹಾರ ಸೇವನೆಯಿಂದ ದೇಹದ ಉಷ್ಣತೆ ಹೆಚ್ಚಾಗಿ ನಾವು ಚಳಿಯಿಂದ ಪಾರಾಗಬಹುದು ಎಂದುಕೊಂಡಿದ್ದರೆ ಅದು ದೊಡ್ಡ ತಪ್ಪು.
ಆಹಾರ ತಜ್ಞರ ಪ್ರಕಾರ, ಮಸಾಲೆಯುಕ್ತ ಸ್ಪೈಸಿ ಆಹಾರಗಳು ನಮ್ಮ ದೇಹದ ಉಷ್ಣತೆಯ ಮೇಲೆ ಯಾವುದೇ ಗುರುತರ ಪ್ರಭಾವವನ್ನೂ ಬೀರುವುದಿಲ್ಲ. ಅದನ್ನು ತಿಂದ ಕ್ಷಣಕ್ಕೆ ಖಾರದಿಂದ ಮೈ ಬಿಸಿಯಾಗಬಹುದು. ಬೆವರಬಹುದು. ಆದರೆ ನಂತರ ಏನೂ ಪ್ರಯೋಜನವಿಲ್ಲ.
3. ನೀವು ಶೀತ, ಕೆಮ್ಮಿನಿಂದ ಬಳಲುತ್ತಿದ್ದರೆ ಸಿಟ್ರಸ್ ಹಣ್ಣುಗಳನ್ನು ತಿನ್ನಬಾರದು
ಯಾರಾದರೂ ಹೀಗೆ ಹೇಳಿದರೆ ಅದನ್ನು ಕೇಳಲೇಬೇಡಿ ಎನ್ನುತ್ತಾರೆ ತಜ್ಞರು.
ಕಿತ್ತಳೆ, ಲಿಂಬುವಿನಂತಹ ಸಿಟ್ರಸ್ ಹಣ್ಣುಗಳು ಚಳಿಗಾಲದಲ್ಲಿ ದೇಹಕ್ಕೆ ಅತ್ಯವಶ್ಯಕ. ವಿಟಮಿನ್ ಸಿಯನ್ನು ಹೇರಳವಾಗಿ ಹೊಂದಿರುವ ಈ ಹಣ್ಣುಗಳಲ್ಲಿ ನೀರಿನ ಅಂಶವೂ ಹೆಚ್ಚಾಗಿರುತ್ತದೆ.
ಕಿತ್ತಳೆಗಳು ಚಳಿಗಾಲದ ಹಣ್ಣುಗಳು. ಅವು ಚಳಿಗಾದಲ್ಲಿ ಸಿಗುತ್ತವೆ ಎಂದರೆ ಆ ಸಮಯದಲ್ಲಿಯೇ ನಮ್ಮ ದೇಹಕ್ಕೆ ಬೇಕು ಎಂದರ್ಥ. ಕೆಮ್ಮು, ನೆಗಡಿಯಾದಾಗ ಕಿತ್ತಳೆ, ಲಿಂಬು ಹಣ್ಣುಗಳ ಸೇವನೆ ಮಾಡಬೇಕು. ನಮ್ಮೊಳಗಿನ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತವೆ. ಅಲ್ಲದೆ ಪೌಷ್ಟಿಕಾಂಶವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತವೆ. ಕಟ್ಟಿಕೊಂಡ ಕಫವನ್ನು ಸಡಿಲಗೊಳಿಸುತ್ತವೆ ಹಾಗೂ ಶೀತವನ್ನು ತೊಡೆದುಹಾಕುತ್ತದೆ ಎಂದು ನ್ಯೂಟ್ರಿಷಿಯನಿಸ್ಟ್ ಹೇಳುತ್ತಾರೆ.
4. ಡೇರಿ ಉತ್ಪನ್ನಗಳಿಂದ ದೂರವಿರಿ
ಈ ಮಾತನ್ನು ಸಾಮಾನ್ಯವಾಗಿ ಎಲ್ಲರೂ ಹೇಳುತ್ತಾರೆ. ಮೊದಲೇ ಚಳಿ ಇರುತ್ತದೆ. ಶೀತ, ಕೆಮ್ಮು, ಜ್ವರ, ಕಫ ಇರುತ್ತದೆ. ಹೀಗಿರುವಾಗ ಡೇರಿ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪಗಳ ಸೇವನೆಯಿಂದ ಮತ್ತಷ್ಟು ಕಫ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಬಹುತೇಕರ ನಂಬಿಕೆ. ಆದರೆ ನಿಜಕ್ಕೂ ಹಾಗೇನೂ ಆಗುವುದಿಲ್ಲ ಎಂಬುದನ್ನು ಆಹಾರತಜ್ಞರು ಪತ್ತೆಹಚ್ಚಿದ್ದಾರೆ.
ಚಳಿಗಾಲದಲ್ಲಿ ರಾತ್ರಿ ವೇಳೆ ಬಿಸಿ ಹಾಲಿಗೆ ಸ್ವಲ್ಪ ಕೇಸರಿ ಬೆರಸಿ ಕುಡಿಯುವುದು ತುಂಬ ಉತ್ತಮ. ಹಾಲಿನ ಉತ್ಪನ್ನಗಳನ್ನು ಹಿತಮಿತವಾಗಿ ಸೇವಿಸುವುದರಿಂದ ಪೋಷಕಾಂಶ ಸಿಗುತ್ತದೆ ಎಂದು ಹೇಳಿದ್ದಾರೆ.
5.ಚಳಿಗಾಲದಲ್ಲಿ ವಿಟಮಿನ್ ಸಪ್ಲಿಮೆಂಟ್ಸ್ ತೀರ ಅಗತ್ಯ
ವಿಟಮಿನ್ಗಳನ್ನು ತೆಗೆದುಕೊಳ್ಳುವುದು ಒಳ್ಳೆಯದೇ. ಆದರೆ ಉಳಿದ ಕಾಲಗಳಿಗಿಂತ ಚಳಿಗಾಲದಲ್ಲೇ ತೆಗೆದುಕೊಳ್ಳಬೇಕು ಎಂಬುದು ತಪ್ಪು ಅಭಿಪ್ರಾಯ.
ಒಬ್ಬ ಮನುಷ್ಯ ತನ್ನ ದೇಹಕ್ಕೆ ಬೇಕಾದ ವಿಟಮಿನ್ಗಳನ್ನು ಪಡೆಯಲು ಸಮತೋಲನಯುಕ್ತ ಡಯಟ್ ಮಾಡುವುದು ಉತ್ತಮ. ಸುಮ್ಮನೆ ತೆಗೆದುಕೊಳ್ಳುವ ಅನಗತ್ಯ ಸಪ್ಲಿಮೆಂಟ್ಸ್ಗಳು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ
ಶುಕ್ರವಾರ, 06/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…
ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…
ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸೋಮವಾರ ಅಧಿಕೃತವಾಗಿ ಘೋಷಿಸಿದೆ. ”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,” ಕಳೆದ…
ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…
ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…