News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಚಳಿಗಾಲದಲ್ಲಿ ಏನು ತಿನ್ನಬೇಕು? ಯಾವುದನ್ನು ತಿನ್ನಬಾರದು? ಈ ಮಾಹಿತಿ ನೋಡಿ.

130

ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್​ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.
ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್​ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.
ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು ಎಂಬುದನ್ನು ತಜ್ಞರು ಹೇಳಿದ್ದಾರೆ ನೋಡಿ.

1. ಚಳಿಗಾಲದಲ್ಲಿ ಆಗಾಗ ಏನಾದರೂ ತಿನ್ನುತ್ತಿದ್ದರೆ ದೇಹ ಬೆಚ್ಚಗಿರುತ್ತದೆ.
ಇದೊಂದು ಶುದ್ಧ ತಪ್ಪು ಕಲ್ಪನೆ ಎಂದು ಹೇಳುತ್ತಾರೆ ಪೌಷ್ಟಿಕತಜ್ಞರು. ಚಳಿಗಾಲ ಬಂತೆಂದರೆ ಸಾಕು, ಜಾಸ್ತಿ ಆಹಾರ ಸೇವಿಸಿ. ಆಗಾಗ ಏನಾದರೂ ಸ್ವಲ್ಪ ತಿನ್ನುತ್ತಿರಿ. ಇದರಿಂದ ದೇಹ ಬೆಚ್ಚಗಿರುತ್ತದೆ. ಅನಾರೋಗ್ಯಕ್ಕೆ ಒಳಗಾಗುವುದೂ ತಪ್ಪುತ್ತದೆ ಎಂದು ಮನೆಯಲ್ಲಿ ಹಿರಿಯರು, ಪಾಲಕರು ಹೇಳುವುದನ್ನು ಕೇಳಿದ್ದೇವೆ.
ಆದರೆ ತಜ್ಞರು ಹೇಳುವ ಪ್ರಕಾರ, ಹೀಗೆ ಪದೇಪದೆ ತಿನ್ನುವುದರಿಂದ ದೇಹದ ತೂಕ ಹೆಚ್ಚುತ್ತದೆ ಹೊರತು ಬೇರೇನೂ ಉಪಯೋಗ ಆಗುವುದಿಲ್ಲ. ಅದರ ಬದಲಾಗಿದೆ ಚಳಿಗಾಲದಲ್ಲಿ ಸರಿಯಾದ ಕ್ರಮದಲ್ಲಿ ಡಯಟ್​ ಮಾಡುವ ಮೂಲಕ ಕಾಯಿಲೆ ಬರುವುದನ್ನು ತಡೆಗಟ್ಟಬಹುದು. ಹಾಗಾಗಿ ಆಗಾಗ ಏನಾದರೂ ಆಹಾರ ಸೇವನೆ ಮಾಡುವುದರಿಂದ ಏನೂ ಉಪಯೋಗವಿಲ್ಲ.

2. ಮಸಾಲೆಯುಕ್ತ ಆಹಾರ ಸೇವನೆ ದೇಹವನ್ನು ಬೆಚ್ಚಗಿಡುತ್ತದೆ.
ಮಸಾಲೆಯುಕ್ತ, ಖಾರ, ಸ್ಪೈಸಿ ಆಹಾರಗಳ ಸೇವನೆಯಿಂದ ಖಂಡಿತ ಮೈ ಬೆವರುತ್ತದೆ. ಅದರಲ್ಲೂ ಚಳಿಗಾಲದಲ್ಲಿ ಮೆಣಸಿನಕಾಯಿ ಪ್ರಮಾಣ ಹೆಚ್ಚಾಗಿರುವ ಆಹಾರ ಸೇವನೆಯಿಂದ ದೇಹದ ಉಷ್ಣತೆ ಹೆಚ್ಚಾಗಿ ನಾವು ಚಳಿಯಿಂದ ಪಾರಾಗಬಹುದು ಎಂದುಕೊಂಡಿದ್ದರೆ ಅದು ದೊಡ್ಡ ತಪ್ಪು.
ಆಹಾರ ತಜ್ಞರ ಪ್ರಕಾರ, ಮಸಾಲೆಯುಕ್ತ ಸ್ಪೈಸಿ ಆಹಾರಗಳು ನಮ್ಮ ದೇಹದ ಉಷ್ಣತೆಯ ಮೇಲೆ ಯಾವುದೇ ಗುರುತರ ಪ್ರಭಾವವನ್ನೂ ಬೀರುವುದಿಲ್ಲ. ಅದನ್ನು ತಿಂದ ಕ್ಷಣಕ್ಕೆ ಖಾರದಿಂದ ಮೈ ಬಿಸಿಯಾಗಬಹುದು. ಬೆವರಬಹುದು. ಆದರೆ ನಂತರ ಏನೂ ಪ್ರಯೋಜನವಿಲ್ಲ.

3. ನೀವು ಶೀತ, ಕೆಮ್ಮಿನಿಂದ ಬಳಲುತ್ತಿದ್ದರೆ ಸಿಟ್ರಸ್ ಹಣ್ಣುಗಳನ್ನು ತಿನ್ನಬಾರದು
ಯಾರಾದರೂ ಹೀಗೆ ಹೇಳಿದರೆ ಅದನ್ನು ಕೇಳಲೇಬೇಡಿ ಎನ್ನುತ್ತಾರೆ ತಜ್ಞರು.

ಕಿತ್ತಳೆ, ಲಿಂಬುವಿನಂತಹ ಸಿಟ್ರಸ್​​ ಹಣ್ಣುಗಳು ಚಳಿಗಾಲದಲ್ಲಿ ದೇಹಕ್ಕೆ ಅತ್ಯವಶ್ಯಕ. ವಿಟಮಿನ್​ ಸಿಯನ್ನು ಹೇರಳವಾಗಿ ಹೊಂದಿರುವ ಈ ಹಣ್ಣುಗಳಲ್ಲಿ ನೀರಿನ ಅಂಶವೂ ಹೆಚ್ಚಾಗಿರುತ್ತದೆ.
ಕಿತ್ತಳೆಗಳು ಚಳಿಗಾಲದ ಹಣ್ಣುಗಳು. ಅವು ಚಳಿಗಾದಲ್ಲಿ ಸಿಗುತ್ತವೆ ಎಂದರೆ ಆ ಸಮಯದಲ್ಲಿಯೇ ನಮ್ಮ ದೇಹಕ್ಕೆ ಬೇಕು ಎಂದರ್ಥ. ಕೆಮ್ಮು, ನೆಗಡಿಯಾದಾಗ ಕಿತ್ತಳೆ, ಲಿಂಬು ಹಣ್ಣುಗಳ ಸೇವನೆ ಮಾಡಬೇಕು. ನಮ್ಮೊಳಗಿನ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತವೆ. ಅಲ್ಲದೆ ಪೌಷ್ಟಿಕಾಂಶವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತವೆ. ಕಟ್ಟಿಕೊಂಡ ಕಫವನ್ನು ಸಡಿಲಗೊಳಿಸುತ್ತವೆ ಹಾಗೂ ಶೀತವನ್ನು ತೊಡೆದುಹಾಕುತ್ತದೆ ಎಂದು ನ್ಯೂಟ್ರಿಷಿಯನಿಸ್ಟ್​ ಹೇಳುತ್ತಾರೆ.

4. ಡೇರಿ ಉತ್ಪನ್ನಗಳಿಂದ ದೂರವಿರಿ
ಈ ಮಾತನ್ನು ಸಾಮಾನ್ಯವಾಗಿ ಎಲ್ಲರೂ ಹೇಳುತ್ತಾರೆ. ಮೊದಲೇ ಚಳಿ ಇರುತ್ತದೆ. ಶೀತ, ಕೆಮ್ಮು, ಜ್ವರ, ಕಫ ಇರುತ್ತದೆ. ಹೀಗಿರುವಾಗ ಡೇರಿ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪಗಳ ಸೇವನೆಯಿಂದ ಮತ್ತಷ್ಟು ಕಫ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಬಹುತೇಕರ ನಂಬಿಕೆ. ಆದರೆ ನಿಜಕ್ಕೂ ಹಾಗೇನೂ ಆಗುವುದಿಲ್ಲ ಎಂಬುದನ್ನು ಆಹಾರತಜ್ಞರು ಪತ್ತೆಹಚ್ಚಿದ್ದಾರೆ.
ಚಳಿಗಾಲದಲ್ಲಿ ರಾತ್ರಿ ವೇಳೆ ಬಿಸಿ ಹಾಲಿಗೆ ಸ್ವಲ್ಪ ಕೇಸರಿ ಬೆರಸಿ ಕುಡಿಯುವುದು ತುಂಬ ಉತ್ತಮ. ಹಾಲಿನ ಉತ್ಪನ್ನಗಳನ್ನು ಹಿತಮಿತವಾಗಿ ಸೇವಿಸುವುದರಿಂದ ಪೋಷಕಾಂಶ ಸಿಗುತ್ತದೆ ಎಂದು ಹೇಳಿದ್ದಾರೆ.

5.ಚಳಿಗಾಲದಲ್ಲಿ ವಿಟಮಿನ್​ ಸಪ್ಲಿಮೆಂಟ್ಸ್​ ತೀರ ಅಗತ್ಯ
ವಿಟಮಿನ್​ಗಳನ್ನು ತೆಗೆದುಕೊಳ್ಳುವುದು ಒಳ್ಳೆಯದೇ. ಆದರೆ ಉಳಿದ ಕಾಲಗಳಿಗಿಂತ ಚಳಿಗಾಲದಲ್ಲೇ ತೆಗೆದುಕೊಳ್ಳಬೇಕು ಎಂಬುದು ತಪ್ಪು ಅಭಿಪ್ರಾಯ.
ಒಬ್ಬ ಮನುಷ್ಯ ತನ್ನ ದೇಹಕ್ಕೆ ಬೇಕಾದ ವಿಟಮಿನ್​ಗಳನ್ನು ಪಡೆಯಲು ಸಮತೋಲನಯುಕ್ತ ಡಯಟ್​ ಮಾಡುವುದು ಉತ್ತಮ. ಸುಮ್ಮನೆ ತೆಗೆದುಕೊಳ್ಳುವ ಅನಗತ್ಯ ಸಪ್ಲಿಮೆಂಟ್ಸ್​ಗಳು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಳೆ ಆತಂಕದಲ್ಲಿರುವ ಕೊಡಗಿನ ಜನತೆಗೆ ನೋಟಿಸ್ ಶಾಕ್ ನೀಡಿದ ನಗರಸಭೆ….!

    ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…

  • ಸರ್ಕಾರಿ ಯೋಜನೆಗಳು

    ಜೂನ್‌ ತಿಂಗಳಿನಿಂದ ಸರ್ಕಾರಿ ಬಸ್ ಪ್ರಯಾಣ ದರ ಶೇ 20ರಷ್ಟು ಏರಿಕೆ …!

    ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ. ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ,…

  • ವಿಸ್ಮಯ ಜಗತ್ತು

    ನೀವೂ ನಂಬಲೇಬೇಕು..ಇಲ್ಲಿ ಜನ ಪ್ರತೀದಿನ ಸ್ನಾನ ಮಾಡೋದು ಗೋವಿನ ಮೂತ್ರದಲ್ಲಿ!

    ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು  ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…

  • ಸುದ್ದಿ

    ‘ಹುಷಾರ್’ ಹೆತ್ತವರನ್ನು ನಿರ್ಲಕ್ಷಿಸಿದರೆ ಜೈಲು ಪಾಲು ಗ್ಯಾರಂಟಿ..ಎಚ್ಚರ..!

    ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….

  • ಸಿನಿಮಾ, ಸುದ್ದಿ

    ಮಗು ಮುಖ ನೋಡುವ ಮುನ್ನವೇ ಎಲ್ಲರನ್ನು ಅಗಲಿದ ಚಿರಂಜೀವಿ ಸರ್ಜಾ! ನಿಜಕ್ಕೂ ಶಾಕ್

    ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…