News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಚಳಿಗಾಲದಲ್ಲಿ ಏನು ತಿನ್ನಬೇಕು? ಯಾವುದನ್ನು ತಿನ್ನಬಾರದು? ಈ ಮಾಹಿತಿ ನೋಡಿ.

132

ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್​ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.
ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್​ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.
ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು ಎಂಬುದನ್ನು ತಜ್ಞರು ಹೇಳಿದ್ದಾರೆ ನೋಡಿ.

1. ಚಳಿಗಾಲದಲ್ಲಿ ಆಗಾಗ ಏನಾದರೂ ತಿನ್ನುತ್ತಿದ್ದರೆ ದೇಹ ಬೆಚ್ಚಗಿರುತ್ತದೆ.
ಇದೊಂದು ಶುದ್ಧ ತಪ್ಪು ಕಲ್ಪನೆ ಎಂದು ಹೇಳುತ್ತಾರೆ ಪೌಷ್ಟಿಕತಜ್ಞರು. ಚಳಿಗಾಲ ಬಂತೆಂದರೆ ಸಾಕು, ಜಾಸ್ತಿ ಆಹಾರ ಸೇವಿಸಿ. ಆಗಾಗ ಏನಾದರೂ ಸ್ವಲ್ಪ ತಿನ್ನುತ್ತಿರಿ. ಇದರಿಂದ ದೇಹ ಬೆಚ್ಚಗಿರುತ್ತದೆ. ಅನಾರೋಗ್ಯಕ್ಕೆ ಒಳಗಾಗುವುದೂ ತಪ್ಪುತ್ತದೆ ಎಂದು ಮನೆಯಲ್ಲಿ ಹಿರಿಯರು, ಪಾಲಕರು ಹೇಳುವುದನ್ನು ಕೇಳಿದ್ದೇವೆ.
ಆದರೆ ತಜ್ಞರು ಹೇಳುವ ಪ್ರಕಾರ, ಹೀಗೆ ಪದೇಪದೆ ತಿನ್ನುವುದರಿಂದ ದೇಹದ ತೂಕ ಹೆಚ್ಚುತ್ತದೆ ಹೊರತು ಬೇರೇನೂ ಉಪಯೋಗ ಆಗುವುದಿಲ್ಲ. ಅದರ ಬದಲಾಗಿದೆ ಚಳಿಗಾಲದಲ್ಲಿ ಸರಿಯಾದ ಕ್ರಮದಲ್ಲಿ ಡಯಟ್​ ಮಾಡುವ ಮೂಲಕ ಕಾಯಿಲೆ ಬರುವುದನ್ನು ತಡೆಗಟ್ಟಬಹುದು. ಹಾಗಾಗಿ ಆಗಾಗ ಏನಾದರೂ ಆಹಾರ ಸೇವನೆ ಮಾಡುವುದರಿಂದ ಏನೂ ಉಪಯೋಗವಿಲ್ಲ.

2. ಮಸಾಲೆಯುಕ್ತ ಆಹಾರ ಸೇವನೆ ದೇಹವನ್ನು ಬೆಚ್ಚಗಿಡುತ್ತದೆ.
ಮಸಾಲೆಯುಕ್ತ, ಖಾರ, ಸ್ಪೈಸಿ ಆಹಾರಗಳ ಸೇವನೆಯಿಂದ ಖಂಡಿತ ಮೈ ಬೆವರುತ್ತದೆ. ಅದರಲ್ಲೂ ಚಳಿಗಾಲದಲ್ಲಿ ಮೆಣಸಿನಕಾಯಿ ಪ್ರಮಾಣ ಹೆಚ್ಚಾಗಿರುವ ಆಹಾರ ಸೇವನೆಯಿಂದ ದೇಹದ ಉಷ್ಣತೆ ಹೆಚ್ಚಾಗಿ ನಾವು ಚಳಿಯಿಂದ ಪಾರಾಗಬಹುದು ಎಂದುಕೊಂಡಿದ್ದರೆ ಅದು ದೊಡ್ಡ ತಪ್ಪು.
ಆಹಾರ ತಜ್ಞರ ಪ್ರಕಾರ, ಮಸಾಲೆಯುಕ್ತ ಸ್ಪೈಸಿ ಆಹಾರಗಳು ನಮ್ಮ ದೇಹದ ಉಷ್ಣತೆಯ ಮೇಲೆ ಯಾವುದೇ ಗುರುತರ ಪ್ರಭಾವವನ್ನೂ ಬೀರುವುದಿಲ್ಲ. ಅದನ್ನು ತಿಂದ ಕ್ಷಣಕ್ಕೆ ಖಾರದಿಂದ ಮೈ ಬಿಸಿಯಾಗಬಹುದು. ಬೆವರಬಹುದು. ಆದರೆ ನಂತರ ಏನೂ ಪ್ರಯೋಜನವಿಲ್ಲ.

3. ನೀವು ಶೀತ, ಕೆಮ್ಮಿನಿಂದ ಬಳಲುತ್ತಿದ್ದರೆ ಸಿಟ್ರಸ್ ಹಣ್ಣುಗಳನ್ನು ತಿನ್ನಬಾರದು
ಯಾರಾದರೂ ಹೀಗೆ ಹೇಳಿದರೆ ಅದನ್ನು ಕೇಳಲೇಬೇಡಿ ಎನ್ನುತ್ತಾರೆ ತಜ್ಞರು.

ಕಿತ್ತಳೆ, ಲಿಂಬುವಿನಂತಹ ಸಿಟ್ರಸ್​​ ಹಣ್ಣುಗಳು ಚಳಿಗಾಲದಲ್ಲಿ ದೇಹಕ್ಕೆ ಅತ್ಯವಶ್ಯಕ. ವಿಟಮಿನ್​ ಸಿಯನ್ನು ಹೇರಳವಾಗಿ ಹೊಂದಿರುವ ಈ ಹಣ್ಣುಗಳಲ್ಲಿ ನೀರಿನ ಅಂಶವೂ ಹೆಚ್ಚಾಗಿರುತ್ತದೆ.
ಕಿತ್ತಳೆಗಳು ಚಳಿಗಾಲದ ಹಣ್ಣುಗಳು. ಅವು ಚಳಿಗಾದಲ್ಲಿ ಸಿಗುತ್ತವೆ ಎಂದರೆ ಆ ಸಮಯದಲ್ಲಿಯೇ ನಮ್ಮ ದೇಹಕ್ಕೆ ಬೇಕು ಎಂದರ್ಥ. ಕೆಮ್ಮು, ನೆಗಡಿಯಾದಾಗ ಕಿತ್ತಳೆ, ಲಿಂಬು ಹಣ್ಣುಗಳ ಸೇವನೆ ಮಾಡಬೇಕು. ನಮ್ಮೊಳಗಿನ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತವೆ. ಅಲ್ಲದೆ ಪೌಷ್ಟಿಕಾಂಶವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತವೆ. ಕಟ್ಟಿಕೊಂಡ ಕಫವನ್ನು ಸಡಿಲಗೊಳಿಸುತ್ತವೆ ಹಾಗೂ ಶೀತವನ್ನು ತೊಡೆದುಹಾಕುತ್ತದೆ ಎಂದು ನ್ಯೂಟ್ರಿಷಿಯನಿಸ್ಟ್​ ಹೇಳುತ್ತಾರೆ.

4. ಡೇರಿ ಉತ್ಪನ್ನಗಳಿಂದ ದೂರವಿರಿ
ಈ ಮಾತನ್ನು ಸಾಮಾನ್ಯವಾಗಿ ಎಲ್ಲರೂ ಹೇಳುತ್ತಾರೆ. ಮೊದಲೇ ಚಳಿ ಇರುತ್ತದೆ. ಶೀತ, ಕೆಮ್ಮು, ಜ್ವರ, ಕಫ ಇರುತ್ತದೆ. ಹೀಗಿರುವಾಗ ಡೇರಿ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪಗಳ ಸೇವನೆಯಿಂದ ಮತ್ತಷ್ಟು ಕಫ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಬಹುತೇಕರ ನಂಬಿಕೆ. ಆದರೆ ನಿಜಕ್ಕೂ ಹಾಗೇನೂ ಆಗುವುದಿಲ್ಲ ಎಂಬುದನ್ನು ಆಹಾರತಜ್ಞರು ಪತ್ತೆಹಚ್ಚಿದ್ದಾರೆ.
ಚಳಿಗಾಲದಲ್ಲಿ ರಾತ್ರಿ ವೇಳೆ ಬಿಸಿ ಹಾಲಿಗೆ ಸ್ವಲ್ಪ ಕೇಸರಿ ಬೆರಸಿ ಕುಡಿಯುವುದು ತುಂಬ ಉತ್ತಮ. ಹಾಲಿನ ಉತ್ಪನ್ನಗಳನ್ನು ಹಿತಮಿತವಾಗಿ ಸೇವಿಸುವುದರಿಂದ ಪೋಷಕಾಂಶ ಸಿಗುತ್ತದೆ ಎಂದು ಹೇಳಿದ್ದಾರೆ.

5.ಚಳಿಗಾಲದಲ್ಲಿ ವಿಟಮಿನ್​ ಸಪ್ಲಿಮೆಂಟ್ಸ್​ ತೀರ ಅಗತ್ಯ
ವಿಟಮಿನ್​ಗಳನ್ನು ತೆಗೆದುಕೊಳ್ಳುವುದು ಒಳ್ಳೆಯದೇ. ಆದರೆ ಉಳಿದ ಕಾಲಗಳಿಗಿಂತ ಚಳಿಗಾಲದಲ್ಲೇ ತೆಗೆದುಕೊಳ್ಳಬೇಕು ಎಂಬುದು ತಪ್ಪು ಅಭಿಪ್ರಾಯ.
ಒಬ್ಬ ಮನುಷ್ಯ ತನ್ನ ದೇಹಕ್ಕೆ ಬೇಕಾದ ವಿಟಮಿನ್​ಗಳನ್ನು ಪಡೆಯಲು ಸಮತೋಲನಯುಕ್ತ ಡಯಟ್​ ಮಾಡುವುದು ಉತ್ತಮ. ಸುಮ್ಮನೆ ತೆಗೆದುಕೊಳ್ಳುವ ಅನಗತ್ಯ ಸಪ್ಲಿಮೆಂಟ್ಸ್​ಗಳು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಇದು ಸೃಷ್ಟಿ ಕರ್ತ ಬ್ರಹ್ಮದೇವರ, ವಿಶ್ವದ ಏಕೈಕ ದೇವಾಲಯ!ಈ ದೇವಾಲಯ ಎಲ್ಲಿದೆ ಗೊತ್ತಾ?

    ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
    ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.

  • inspirational

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸಿನಿಮಾ

    ಬಿಗ್ ಬಾಸ್ ಹೊಸ ಸಂಚಿಕೆಗೆ ಬಾಹುಬಲಿ ನಾಯಕಿ ಅನುಷ್ಕಾ ಶೆಟ್ಟಿ ನಿರೂಪಣೆ..!

    ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…

  • ಸುದ್ದಿ

    ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಎಕ್ಸಾಂ ಹಾಲ್‍ನಲ್ಲಿ ಕಾಪಿ, ಈ ಸುದ್ದಿ ನೋಡಿ.

    ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…

  • ದೇವರು-ಧರ್ಮ

    ಸಂತಾನ ಭಾಗ್ಯ,ಸರ್ಪ ದೋಷ ಇನ್ನೂ ಹತ್ತು ಹಲವು ದೋಷಗಳು ನಿವಾರಣೆಯಾಗುವ ಜಗತ್ತಿನ ಏಕೈಕ ಗರುಡ ದೇವಾಲಯ..!ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ ಎಲ್ಲರಿಗೂ ದರ್ಶನ ಭಾಗ್ಯ ಸಿಗಲಿ..

    ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…

  • ಸುದ್ದಿ

    ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ. ಈ ಸುದ್ದಿ ನೋಡಿ..

    ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…