ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.
ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.
ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು ಎಂಬುದನ್ನು ತಜ್ಞರು ಹೇಳಿದ್ದಾರೆ ನೋಡಿ.
1. ಚಳಿಗಾಲದಲ್ಲಿ ಆಗಾಗ ಏನಾದರೂ ತಿನ್ನುತ್ತಿದ್ದರೆ ದೇಹ ಬೆಚ್ಚಗಿರುತ್ತದೆ.
ಇದೊಂದು ಶುದ್ಧ ತಪ್ಪು ಕಲ್ಪನೆ ಎಂದು ಹೇಳುತ್ತಾರೆ ಪೌಷ್ಟಿಕತಜ್ಞರು. ಚಳಿಗಾಲ ಬಂತೆಂದರೆ ಸಾಕು, ಜಾಸ್ತಿ ಆಹಾರ ಸೇವಿಸಿ. ಆಗಾಗ ಏನಾದರೂ ಸ್ವಲ್ಪ ತಿನ್ನುತ್ತಿರಿ. ಇದರಿಂದ ದೇಹ ಬೆಚ್ಚಗಿರುತ್ತದೆ. ಅನಾರೋಗ್ಯಕ್ಕೆ ಒಳಗಾಗುವುದೂ ತಪ್ಪುತ್ತದೆ ಎಂದು ಮನೆಯಲ್ಲಿ ಹಿರಿಯರು, ಪಾಲಕರು ಹೇಳುವುದನ್ನು ಕೇಳಿದ್ದೇವೆ.
ಆದರೆ ತಜ್ಞರು ಹೇಳುವ ಪ್ರಕಾರ, ಹೀಗೆ ಪದೇಪದೆ ತಿನ್ನುವುದರಿಂದ ದೇಹದ ತೂಕ ಹೆಚ್ಚುತ್ತದೆ ಹೊರತು ಬೇರೇನೂ ಉಪಯೋಗ ಆಗುವುದಿಲ್ಲ. ಅದರ ಬದಲಾಗಿದೆ ಚಳಿಗಾಲದಲ್ಲಿ ಸರಿಯಾದ ಕ್ರಮದಲ್ಲಿ ಡಯಟ್ ಮಾಡುವ ಮೂಲಕ ಕಾಯಿಲೆ ಬರುವುದನ್ನು ತಡೆಗಟ್ಟಬಹುದು. ಹಾಗಾಗಿ ಆಗಾಗ ಏನಾದರೂ ಆಹಾರ ಸೇವನೆ ಮಾಡುವುದರಿಂದ ಏನೂ ಉಪಯೋಗವಿಲ್ಲ.
2. ಮಸಾಲೆಯುಕ್ತ ಆಹಾರ ಸೇವನೆ ದೇಹವನ್ನು ಬೆಚ್ಚಗಿಡುತ್ತದೆ.
ಮಸಾಲೆಯುಕ್ತ, ಖಾರ, ಸ್ಪೈಸಿ ಆಹಾರಗಳ ಸೇವನೆಯಿಂದ ಖಂಡಿತ ಮೈ ಬೆವರುತ್ತದೆ. ಅದರಲ್ಲೂ ಚಳಿಗಾಲದಲ್ಲಿ ಮೆಣಸಿನಕಾಯಿ ಪ್ರಮಾಣ ಹೆಚ್ಚಾಗಿರುವ ಆಹಾರ ಸೇವನೆಯಿಂದ ದೇಹದ ಉಷ್ಣತೆ ಹೆಚ್ಚಾಗಿ ನಾವು ಚಳಿಯಿಂದ ಪಾರಾಗಬಹುದು ಎಂದುಕೊಂಡಿದ್ದರೆ ಅದು ದೊಡ್ಡ ತಪ್ಪು.
ಆಹಾರ ತಜ್ಞರ ಪ್ರಕಾರ, ಮಸಾಲೆಯುಕ್ತ ಸ್ಪೈಸಿ ಆಹಾರಗಳು ನಮ್ಮ ದೇಹದ ಉಷ್ಣತೆಯ ಮೇಲೆ ಯಾವುದೇ ಗುರುತರ ಪ್ರಭಾವವನ್ನೂ ಬೀರುವುದಿಲ್ಲ. ಅದನ್ನು ತಿಂದ ಕ್ಷಣಕ್ಕೆ ಖಾರದಿಂದ ಮೈ ಬಿಸಿಯಾಗಬಹುದು. ಬೆವರಬಹುದು. ಆದರೆ ನಂತರ ಏನೂ ಪ್ರಯೋಜನವಿಲ್ಲ.
3. ನೀವು ಶೀತ, ಕೆಮ್ಮಿನಿಂದ ಬಳಲುತ್ತಿದ್ದರೆ ಸಿಟ್ರಸ್ ಹಣ್ಣುಗಳನ್ನು ತಿನ್ನಬಾರದು
ಯಾರಾದರೂ ಹೀಗೆ ಹೇಳಿದರೆ ಅದನ್ನು ಕೇಳಲೇಬೇಡಿ ಎನ್ನುತ್ತಾರೆ ತಜ್ಞರು.
ಕಿತ್ತಳೆ, ಲಿಂಬುವಿನಂತಹ ಸಿಟ್ರಸ್ ಹಣ್ಣುಗಳು ಚಳಿಗಾಲದಲ್ಲಿ ದೇಹಕ್ಕೆ ಅತ್ಯವಶ್ಯಕ. ವಿಟಮಿನ್ ಸಿಯನ್ನು ಹೇರಳವಾಗಿ ಹೊಂದಿರುವ ಈ ಹಣ್ಣುಗಳಲ್ಲಿ ನೀರಿನ ಅಂಶವೂ ಹೆಚ್ಚಾಗಿರುತ್ತದೆ.
ಕಿತ್ತಳೆಗಳು ಚಳಿಗಾಲದ ಹಣ್ಣುಗಳು. ಅವು ಚಳಿಗಾದಲ್ಲಿ ಸಿಗುತ್ತವೆ ಎಂದರೆ ಆ ಸಮಯದಲ್ಲಿಯೇ ನಮ್ಮ ದೇಹಕ್ಕೆ ಬೇಕು ಎಂದರ್ಥ. ಕೆಮ್ಮು, ನೆಗಡಿಯಾದಾಗ ಕಿತ್ತಳೆ, ಲಿಂಬು ಹಣ್ಣುಗಳ ಸೇವನೆ ಮಾಡಬೇಕು. ನಮ್ಮೊಳಗಿನ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತವೆ. ಅಲ್ಲದೆ ಪೌಷ್ಟಿಕಾಂಶವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತವೆ. ಕಟ್ಟಿಕೊಂಡ ಕಫವನ್ನು ಸಡಿಲಗೊಳಿಸುತ್ತವೆ ಹಾಗೂ ಶೀತವನ್ನು ತೊಡೆದುಹಾಕುತ್ತದೆ ಎಂದು ನ್ಯೂಟ್ರಿಷಿಯನಿಸ್ಟ್ ಹೇಳುತ್ತಾರೆ.
4. ಡೇರಿ ಉತ್ಪನ್ನಗಳಿಂದ ದೂರವಿರಿ
ಈ ಮಾತನ್ನು ಸಾಮಾನ್ಯವಾಗಿ ಎಲ್ಲರೂ ಹೇಳುತ್ತಾರೆ. ಮೊದಲೇ ಚಳಿ ಇರುತ್ತದೆ. ಶೀತ, ಕೆಮ್ಮು, ಜ್ವರ, ಕಫ ಇರುತ್ತದೆ. ಹೀಗಿರುವಾಗ ಡೇರಿ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪಗಳ ಸೇವನೆಯಿಂದ ಮತ್ತಷ್ಟು ಕಫ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಬಹುತೇಕರ ನಂಬಿಕೆ. ಆದರೆ ನಿಜಕ್ಕೂ ಹಾಗೇನೂ ಆಗುವುದಿಲ್ಲ ಎಂಬುದನ್ನು ಆಹಾರತಜ್ಞರು ಪತ್ತೆಹಚ್ಚಿದ್ದಾರೆ.
ಚಳಿಗಾಲದಲ್ಲಿ ರಾತ್ರಿ ವೇಳೆ ಬಿಸಿ ಹಾಲಿಗೆ ಸ್ವಲ್ಪ ಕೇಸರಿ ಬೆರಸಿ ಕುಡಿಯುವುದು ತುಂಬ ಉತ್ತಮ. ಹಾಲಿನ ಉತ್ಪನ್ನಗಳನ್ನು ಹಿತಮಿತವಾಗಿ ಸೇವಿಸುವುದರಿಂದ ಪೋಷಕಾಂಶ ಸಿಗುತ್ತದೆ ಎಂದು ಹೇಳಿದ್ದಾರೆ.
5.ಚಳಿಗಾಲದಲ್ಲಿ ವಿಟಮಿನ್ ಸಪ್ಲಿಮೆಂಟ್ಸ್ ತೀರ ಅಗತ್ಯ
ವಿಟಮಿನ್ಗಳನ್ನು ತೆಗೆದುಕೊಳ್ಳುವುದು ಒಳ್ಳೆಯದೇ. ಆದರೆ ಉಳಿದ ಕಾಲಗಳಿಗಿಂತ ಚಳಿಗಾಲದಲ್ಲೇ ತೆಗೆದುಕೊಳ್ಳಬೇಕು ಎಂಬುದು ತಪ್ಪು ಅಭಿಪ್ರಾಯ.
ಒಬ್ಬ ಮನುಷ್ಯ ತನ್ನ ದೇಹಕ್ಕೆ ಬೇಕಾದ ವಿಟಮಿನ್ಗಳನ್ನು ಪಡೆಯಲು ಸಮತೋಲನಯುಕ್ತ ಡಯಟ್ ಮಾಡುವುದು ಉತ್ತಮ. ಸುಮ್ಮನೆ ತೆಗೆದುಕೊಳ್ಳುವ ಅನಗತ್ಯ ಸಪ್ಲಿಮೆಂಟ್ಸ್ಗಳು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.
ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….
“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.
ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.
ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.