ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.
ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.
ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು ಎಂಬುದನ್ನು ತಜ್ಞರು ಹೇಳಿದ್ದಾರೆ ನೋಡಿ.
1. ಚಳಿಗಾಲದಲ್ಲಿ ಆಗಾಗ ಏನಾದರೂ ತಿನ್ನುತ್ತಿದ್ದರೆ ದೇಹ ಬೆಚ್ಚಗಿರುತ್ತದೆ.
ಇದೊಂದು ಶುದ್ಧ ತಪ್ಪು ಕಲ್ಪನೆ ಎಂದು ಹೇಳುತ್ತಾರೆ ಪೌಷ್ಟಿಕತಜ್ಞರು. ಚಳಿಗಾಲ ಬಂತೆಂದರೆ ಸಾಕು, ಜಾಸ್ತಿ ಆಹಾರ ಸೇವಿಸಿ. ಆಗಾಗ ಏನಾದರೂ ಸ್ವಲ್ಪ ತಿನ್ನುತ್ತಿರಿ. ಇದರಿಂದ ದೇಹ ಬೆಚ್ಚಗಿರುತ್ತದೆ. ಅನಾರೋಗ್ಯಕ್ಕೆ ಒಳಗಾಗುವುದೂ ತಪ್ಪುತ್ತದೆ ಎಂದು ಮನೆಯಲ್ಲಿ ಹಿರಿಯರು, ಪಾಲಕರು ಹೇಳುವುದನ್ನು ಕೇಳಿದ್ದೇವೆ.
ಆದರೆ ತಜ್ಞರು ಹೇಳುವ ಪ್ರಕಾರ, ಹೀಗೆ ಪದೇಪದೆ ತಿನ್ನುವುದರಿಂದ ದೇಹದ ತೂಕ ಹೆಚ್ಚುತ್ತದೆ ಹೊರತು ಬೇರೇನೂ ಉಪಯೋಗ ಆಗುವುದಿಲ್ಲ. ಅದರ ಬದಲಾಗಿದೆ ಚಳಿಗಾಲದಲ್ಲಿ ಸರಿಯಾದ ಕ್ರಮದಲ್ಲಿ ಡಯಟ್ ಮಾಡುವ ಮೂಲಕ ಕಾಯಿಲೆ ಬರುವುದನ್ನು ತಡೆಗಟ್ಟಬಹುದು. ಹಾಗಾಗಿ ಆಗಾಗ ಏನಾದರೂ ಆಹಾರ ಸೇವನೆ ಮಾಡುವುದರಿಂದ ಏನೂ ಉಪಯೋಗವಿಲ್ಲ.
2. ಮಸಾಲೆಯುಕ್ತ ಆಹಾರ ಸೇವನೆ ದೇಹವನ್ನು ಬೆಚ್ಚಗಿಡುತ್ತದೆ.
ಮಸಾಲೆಯುಕ್ತ, ಖಾರ, ಸ್ಪೈಸಿ ಆಹಾರಗಳ ಸೇವನೆಯಿಂದ ಖಂಡಿತ ಮೈ ಬೆವರುತ್ತದೆ. ಅದರಲ್ಲೂ ಚಳಿಗಾಲದಲ್ಲಿ ಮೆಣಸಿನಕಾಯಿ ಪ್ರಮಾಣ ಹೆಚ್ಚಾಗಿರುವ ಆಹಾರ ಸೇವನೆಯಿಂದ ದೇಹದ ಉಷ್ಣತೆ ಹೆಚ್ಚಾಗಿ ನಾವು ಚಳಿಯಿಂದ ಪಾರಾಗಬಹುದು ಎಂದುಕೊಂಡಿದ್ದರೆ ಅದು ದೊಡ್ಡ ತಪ್ಪು.
ಆಹಾರ ತಜ್ಞರ ಪ್ರಕಾರ, ಮಸಾಲೆಯುಕ್ತ ಸ್ಪೈಸಿ ಆಹಾರಗಳು ನಮ್ಮ ದೇಹದ ಉಷ್ಣತೆಯ ಮೇಲೆ ಯಾವುದೇ ಗುರುತರ ಪ್ರಭಾವವನ್ನೂ ಬೀರುವುದಿಲ್ಲ. ಅದನ್ನು ತಿಂದ ಕ್ಷಣಕ್ಕೆ ಖಾರದಿಂದ ಮೈ ಬಿಸಿಯಾಗಬಹುದು. ಬೆವರಬಹುದು. ಆದರೆ ನಂತರ ಏನೂ ಪ್ರಯೋಜನವಿಲ್ಲ.
3. ನೀವು ಶೀತ, ಕೆಮ್ಮಿನಿಂದ ಬಳಲುತ್ತಿದ್ದರೆ ಸಿಟ್ರಸ್ ಹಣ್ಣುಗಳನ್ನು ತಿನ್ನಬಾರದು
ಯಾರಾದರೂ ಹೀಗೆ ಹೇಳಿದರೆ ಅದನ್ನು ಕೇಳಲೇಬೇಡಿ ಎನ್ನುತ್ತಾರೆ ತಜ್ಞರು.
ಕಿತ್ತಳೆ, ಲಿಂಬುವಿನಂತಹ ಸಿಟ್ರಸ್ ಹಣ್ಣುಗಳು ಚಳಿಗಾಲದಲ್ಲಿ ದೇಹಕ್ಕೆ ಅತ್ಯವಶ್ಯಕ. ವಿಟಮಿನ್ ಸಿಯನ್ನು ಹೇರಳವಾಗಿ ಹೊಂದಿರುವ ಈ ಹಣ್ಣುಗಳಲ್ಲಿ ನೀರಿನ ಅಂಶವೂ ಹೆಚ್ಚಾಗಿರುತ್ತದೆ.
ಕಿತ್ತಳೆಗಳು ಚಳಿಗಾಲದ ಹಣ್ಣುಗಳು. ಅವು ಚಳಿಗಾದಲ್ಲಿ ಸಿಗುತ್ತವೆ ಎಂದರೆ ಆ ಸಮಯದಲ್ಲಿಯೇ ನಮ್ಮ ದೇಹಕ್ಕೆ ಬೇಕು ಎಂದರ್ಥ. ಕೆಮ್ಮು, ನೆಗಡಿಯಾದಾಗ ಕಿತ್ತಳೆ, ಲಿಂಬು ಹಣ್ಣುಗಳ ಸೇವನೆ ಮಾಡಬೇಕು. ನಮ್ಮೊಳಗಿನ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತವೆ. ಅಲ್ಲದೆ ಪೌಷ್ಟಿಕಾಂಶವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತವೆ. ಕಟ್ಟಿಕೊಂಡ ಕಫವನ್ನು ಸಡಿಲಗೊಳಿಸುತ್ತವೆ ಹಾಗೂ ಶೀತವನ್ನು ತೊಡೆದುಹಾಕುತ್ತದೆ ಎಂದು ನ್ಯೂಟ್ರಿಷಿಯನಿಸ್ಟ್ ಹೇಳುತ್ತಾರೆ.
4. ಡೇರಿ ಉತ್ಪನ್ನಗಳಿಂದ ದೂರವಿರಿ
ಈ ಮಾತನ್ನು ಸಾಮಾನ್ಯವಾಗಿ ಎಲ್ಲರೂ ಹೇಳುತ್ತಾರೆ. ಮೊದಲೇ ಚಳಿ ಇರುತ್ತದೆ. ಶೀತ, ಕೆಮ್ಮು, ಜ್ವರ, ಕಫ ಇರುತ್ತದೆ. ಹೀಗಿರುವಾಗ ಡೇರಿ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪಗಳ ಸೇವನೆಯಿಂದ ಮತ್ತಷ್ಟು ಕಫ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಬಹುತೇಕರ ನಂಬಿಕೆ. ಆದರೆ ನಿಜಕ್ಕೂ ಹಾಗೇನೂ ಆಗುವುದಿಲ್ಲ ಎಂಬುದನ್ನು ಆಹಾರತಜ್ಞರು ಪತ್ತೆಹಚ್ಚಿದ್ದಾರೆ.
ಚಳಿಗಾಲದಲ್ಲಿ ರಾತ್ರಿ ವೇಳೆ ಬಿಸಿ ಹಾಲಿಗೆ ಸ್ವಲ್ಪ ಕೇಸರಿ ಬೆರಸಿ ಕುಡಿಯುವುದು ತುಂಬ ಉತ್ತಮ. ಹಾಲಿನ ಉತ್ಪನ್ನಗಳನ್ನು ಹಿತಮಿತವಾಗಿ ಸೇವಿಸುವುದರಿಂದ ಪೋಷಕಾಂಶ ಸಿಗುತ್ತದೆ ಎಂದು ಹೇಳಿದ್ದಾರೆ.
5.ಚಳಿಗಾಲದಲ್ಲಿ ವಿಟಮಿನ್ ಸಪ್ಲಿಮೆಂಟ್ಸ್ ತೀರ ಅಗತ್ಯ
ವಿಟಮಿನ್ಗಳನ್ನು ತೆಗೆದುಕೊಳ್ಳುವುದು ಒಳ್ಳೆಯದೇ. ಆದರೆ ಉಳಿದ ಕಾಲಗಳಿಗಿಂತ ಚಳಿಗಾಲದಲ್ಲೇ ತೆಗೆದುಕೊಳ್ಳಬೇಕು ಎಂಬುದು ತಪ್ಪು ಅಭಿಪ್ರಾಯ.
ಒಬ್ಬ ಮನುಷ್ಯ ತನ್ನ ದೇಹಕ್ಕೆ ಬೇಕಾದ ವಿಟಮಿನ್ಗಳನ್ನು ಪಡೆಯಲು ಸಮತೋಲನಯುಕ್ತ ಡಯಟ್ ಮಾಡುವುದು ಉತ್ತಮ. ಸುಮ್ಮನೆ ತೆಗೆದುಕೊಳ್ಳುವ ಅನಗತ್ಯ ಸಪ್ಲಿಮೆಂಟ್ಸ್ಗಳು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.
ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…
ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.
ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.