ಆರೋಗ್ಯ

ಚಳಿಗಾಲದಲ್ಲಿ ಏನು ತಿನ್ನಬೇಕು? ಯಾವುದನ್ನು ತಿನ್ನಬಾರದು? ಈ ಮಾಹಿತಿ ನೋಡಿ.

129

ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್​ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.
ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್​ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.
ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು ಎಂಬುದನ್ನು ತಜ್ಞರು ಹೇಳಿದ್ದಾರೆ ನೋಡಿ.

1. ಚಳಿಗಾಲದಲ್ಲಿ ಆಗಾಗ ಏನಾದರೂ ತಿನ್ನುತ್ತಿದ್ದರೆ ದೇಹ ಬೆಚ್ಚಗಿರುತ್ತದೆ.
ಇದೊಂದು ಶುದ್ಧ ತಪ್ಪು ಕಲ್ಪನೆ ಎಂದು ಹೇಳುತ್ತಾರೆ ಪೌಷ್ಟಿಕತಜ್ಞರು. ಚಳಿಗಾಲ ಬಂತೆಂದರೆ ಸಾಕು, ಜಾಸ್ತಿ ಆಹಾರ ಸೇವಿಸಿ. ಆಗಾಗ ಏನಾದರೂ ಸ್ವಲ್ಪ ತಿನ್ನುತ್ತಿರಿ. ಇದರಿಂದ ದೇಹ ಬೆಚ್ಚಗಿರುತ್ತದೆ. ಅನಾರೋಗ್ಯಕ್ಕೆ ಒಳಗಾಗುವುದೂ ತಪ್ಪುತ್ತದೆ ಎಂದು ಮನೆಯಲ್ಲಿ ಹಿರಿಯರು, ಪಾಲಕರು ಹೇಳುವುದನ್ನು ಕೇಳಿದ್ದೇವೆ.
ಆದರೆ ತಜ್ಞರು ಹೇಳುವ ಪ್ರಕಾರ, ಹೀಗೆ ಪದೇಪದೆ ತಿನ್ನುವುದರಿಂದ ದೇಹದ ತೂಕ ಹೆಚ್ಚುತ್ತದೆ ಹೊರತು ಬೇರೇನೂ ಉಪಯೋಗ ಆಗುವುದಿಲ್ಲ. ಅದರ ಬದಲಾಗಿದೆ ಚಳಿಗಾಲದಲ್ಲಿ ಸರಿಯಾದ ಕ್ರಮದಲ್ಲಿ ಡಯಟ್​ ಮಾಡುವ ಮೂಲಕ ಕಾಯಿಲೆ ಬರುವುದನ್ನು ತಡೆಗಟ್ಟಬಹುದು. ಹಾಗಾಗಿ ಆಗಾಗ ಏನಾದರೂ ಆಹಾರ ಸೇವನೆ ಮಾಡುವುದರಿಂದ ಏನೂ ಉಪಯೋಗವಿಲ್ಲ.

2. ಮಸಾಲೆಯುಕ್ತ ಆಹಾರ ಸೇವನೆ ದೇಹವನ್ನು ಬೆಚ್ಚಗಿಡುತ್ತದೆ.
ಮಸಾಲೆಯುಕ್ತ, ಖಾರ, ಸ್ಪೈಸಿ ಆಹಾರಗಳ ಸೇವನೆಯಿಂದ ಖಂಡಿತ ಮೈ ಬೆವರುತ್ತದೆ. ಅದರಲ್ಲೂ ಚಳಿಗಾಲದಲ್ಲಿ ಮೆಣಸಿನಕಾಯಿ ಪ್ರಮಾಣ ಹೆಚ್ಚಾಗಿರುವ ಆಹಾರ ಸೇವನೆಯಿಂದ ದೇಹದ ಉಷ್ಣತೆ ಹೆಚ್ಚಾಗಿ ನಾವು ಚಳಿಯಿಂದ ಪಾರಾಗಬಹುದು ಎಂದುಕೊಂಡಿದ್ದರೆ ಅದು ದೊಡ್ಡ ತಪ್ಪು.
ಆಹಾರ ತಜ್ಞರ ಪ್ರಕಾರ, ಮಸಾಲೆಯುಕ್ತ ಸ್ಪೈಸಿ ಆಹಾರಗಳು ನಮ್ಮ ದೇಹದ ಉಷ್ಣತೆಯ ಮೇಲೆ ಯಾವುದೇ ಗುರುತರ ಪ್ರಭಾವವನ್ನೂ ಬೀರುವುದಿಲ್ಲ. ಅದನ್ನು ತಿಂದ ಕ್ಷಣಕ್ಕೆ ಖಾರದಿಂದ ಮೈ ಬಿಸಿಯಾಗಬಹುದು. ಬೆವರಬಹುದು. ಆದರೆ ನಂತರ ಏನೂ ಪ್ರಯೋಜನವಿಲ್ಲ.

3. ನೀವು ಶೀತ, ಕೆಮ್ಮಿನಿಂದ ಬಳಲುತ್ತಿದ್ದರೆ ಸಿಟ್ರಸ್ ಹಣ್ಣುಗಳನ್ನು ತಿನ್ನಬಾರದು
ಯಾರಾದರೂ ಹೀಗೆ ಹೇಳಿದರೆ ಅದನ್ನು ಕೇಳಲೇಬೇಡಿ ಎನ್ನುತ್ತಾರೆ ತಜ್ಞರು.

ಕಿತ್ತಳೆ, ಲಿಂಬುವಿನಂತಹ ಸಿಟ್ರಸ್​​ ಹಣ್ಣುಗಳು ಚಳಿಗಾಲದಲ್ಲಿ ದೇಹಕ್ಕೆ ಅತ್ಯವಶ್ಯಕ. ವಿಟಮಿನ್​ ಸಿಯನ್ನು ಹೇರಳವಾಗಿ ಹೊಂದಿರುವ ಈ ಹಣ್ಣುಗಳಲ್ಲಿ ನೀರಿನ ಅಂಶವೂ ಹೆಚ್ಚಾಗಿರುತ್ತದೆ.
ಕಿತ್ತಳೆಗಳು ಚಳಿಗಾಲದ ಹಣ್ಣುಗಳು. ಅವು ಚಳಿಗಾದಲ್ಲಿ ಸಿಗುತ್ತವೆ ಎಂದರೆ ಆ ಸಮಯದಲ್ಲಿಯೇ ನಮ್ಮ ದೇಹಕ್ಕೆ ಬೇಕು ಎಂದರ್ಥ. ಕೆಮ್ಮು, ನೆಗಡಿಯಾದಾಗ ಕಿತ್ತಳೆ, ಲಿಂಬು ಹಣ್ಣುಗಳ ಸೇವನೆ ಮಾಡಬೇಕು. ನಮ್ಮೊಳಗಿನ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತವೆ. ಅಲ್ಲದೆ ಪೌಷ್ಟಿಕಾಂಶವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತವೆ. ಕಟ್ಟಿಕೊಂಡ ಕಫವನ್ನು ಸಡಿಲಗೊಳಿಸುತ್ತವೆ ಹಾಗೂ ಶೀತವನ್ನು ತೊಡೆದುಹಾಕುತ್ತದೆ ಎಂದು ನ್ಯೂಟ್ರಿಷಿಯನಿಸ್ಟ್​ ಹೇಳುತ್ತಾರೆ.

4. ಡೇರಿ ಉತ್ಪನ್ನಗಳಿಂದ ದೂರವಿರಿ
ಈ ಮಾತನ್ನು ಸಾಮಾನ್ಯವಾಗಿ ಎಲ್ಲರೂ ಹೇಳುತ್ತಾರೆ. ಮೊದಲೇ ಚಳಿ ಇರುತ್ತದೆ. ಶೀತ, ಕೆಮ್ಮು, ಜ್ವರ, ಕಫ ಇರುತ್ತದೆ. ಹೀಗಿರುವಾಗ ಡೇರಿ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪಗಳ ಸೇವನೆಯಿಂದ ಮತ್ತಷ್ಟು ಕಫ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಬಹುತೇಕರ ನಂಬಿಕೆ. ಆದರೆ ನಿಜಕ್ಕೂ ಹಾಗೇನೂ ಆಗುವುದಿಲ್ಲ ಎಂಬುದನ್ನು ಆಹಾರತಜ್ಞರು ಪತ್ತೆಹಚ್ಚಿದ್ದಾರೆ.
ಚಳಿಗಾಲದಲ್ಲಿ ರಾತ್ರಿ ವೇಳೆ ಬಿಸಿ ಹಾಲಿಗೆ ಸ್ವಲ್ಪ ಕೇಸರಿ ಬೆರಸಿ ಕುಡಿಯುವುದು ತುಂಬ ಉತ್ತಮ. ಹಾಲಿನ ಉತ್ಪನ್ನಗಳನ್ನು ಹಿತಮಿತವಾಗಿ ಸೇವಿಸುವುದರಿಂದ ಪೋಷಕಾಂಶ ಸಿಗುತ್ತದೆ ಎಂದು ಹೇಳಿದ್ದಾರೆ.

5.ಚಳಿಗಾಲದಲ್ಲಿ ವಿಟಮಿನ್​ ಸಪ್ಲಿಮೆಂಟ್ಸ್​ ತೀರ ಅಗತ್ಯ
ವಿಟಮಿನ್​ಗಳನ್ನು ತೆಗೆದುಕೊಳ್ಳುವುದು ಒಳ್ಳೆಯದೇ. ಆದರೆ ಉಳಿದ ಕಾಲಗಳಿಗಿಂತ ಚಳಿಗಾಲದಲ್ಲೇ ತೆಗೆದುಕೊಳ್ಳಬೇಕು ಎಂಬುದು ತಪ್ಪು ಅಭಿಪ್ರಾಯ.
ಒಬ್ಬ ಮನುಷ್ಯ ತನ್ನ ದೇಹಕ್ಕೆ ಬೇಕಾದ ವಿಟಮಿನ್​ಗಳನ್ನು ಪಡೆಯಲು ಸಮತೋಲನಯುಕ್ತ ಡಯಟ್​ ಮಾಡುವುದು ಉತ್ತಮ. ಸುಮ್ಮನೆ ತೆಗೆದುಕೊಳ್ಳುವ ಅನಗತ್ಯ ಸಪ್ಲಿಮೆಂಟ್ಸ್​ಗಳು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    750 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿಗೆ ಶಾಶ್ವತ ಕುಡಿಯವ ನೀರು ಯೋಜನೆ…!

    ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್‍ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದಾ ಕುತೂಹಲಕಾರಿ ಸಂಗತಿಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what   …

  • ಜ್ಯೋತಿಷ್ಯ

    ಗುರು ರಾಯರ ಕೃಪೆಯಿಂದ ನಿಮ್ಮ ರಾಶಿಗಳಿಗೆ ಶುಭ ಯೋಗವಿದ್ದು ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…

  • ಸುದ್ದಿ

    ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!

    ಇಂಧನ ಕ್ಷಮತೆ, ಕಡಿಮೆ ಕಾರ್ಬನ್‌ ಬಿಡುಗಡೆ ಮಾಡುವ ಏರ್‌ಬಸ್‌ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್‌ಬಸ್‌ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್‌ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್‌ಬಸ್‌, ಭಾರತೀಯ ಏರ್‌ಲೈನ್ಸ್‌ ಕಂಪನಿಗಳಿಗೆ ಆರ್ಡರ್‌ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್‌ಮತ್ತು ಎಕಾನಮಿ ಕ್ಲಾಸ್‌ನಲ್ಲಿ100 ಸೀಟ್‌ಗಳಿಂದ 150 ಸೀಟ್‌ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…

  • Health, ಉಪಯುಕ್ತ ಮಾಹಿತಿ

    ಸೌತೆಕಾಯಿ ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಸೌತೆಕಾಯಿಗಳು 95% ನೀರನ್ನು ಒಳಗೊಂಡಿರುತ್ತವೆ ಮತ್ತು ಇದು ಅವರಿಗೆ ಸೂಕ್ತವಾದ ಹೈಡ್ರೇಟಿಂಗ್ ಮತ್ತು ತಂಪಾಗಿಸುವ ಆಹಾರವಾಗಿಸುತ್ತದೆ. ಸೌತೆಕಾಯಿಗಳು ಫಿಸೆಟಿನ್ ಎಂಬ ಉರಿಯೂತದ ಫ್ಲೇವನಾಲ್ ಅನ್ನು ಹೊಂದಿರುತ್ತವೆ, ಇದು ನಿಮ್ಮ ಮೆದುಳಿನ ಆರೋಗ್ಯವನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸೌತೆಕಾಯಿಗಳಲ್ಲಿ ಲಿಗ್ನಾನ್ಸ್ ಎಂಬ ಪಾಲಿಫಿನಾಲ್‌ಗಳಿವೆ, ಇದು ಸ್ತನ, ಗರ್ಭಾಶಯ, ಅಂಡಾಶಯ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೌತೆಕಾಯಿ ಸಾರವು ಅನಗತ್ಯ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಪರ ಕಿಣ್ವಗಳ ಚಟುವಟಿಕೆಯನ್ನು ತಡೆಯುವ…

  • ಜ್ಯೋತಿಷ್ಯ

    ಪರಮೇಶ್ವರನಿಗೆ ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷಕೆಲಸ ಕಾರ್ಯದಲ್ಲಿ ಗೊಂದಲ…