News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಚಳಿಗಾಲದಲ್ಲಿ ಏನು ತಿನ್ನಬೇಕು? ಯಾವುದನ್ನು ತಿನ್ನಬಾರದು? ಈ ಮಾಹಿತಿ ನೋಡಿ.

132

ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್​ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.
ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್​ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.
ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು ಎಂಬುದನ್ನು ತಜ್ಞರು ಹೇಳಿದ್ದಾರೆ ನೋಡಿ.

1. ಚಳಿಗಾಲದಲ್ಲಿ ಆಗಾಗ ಏನಾದರೂ ತಿನ್ನುತ್ತಿದ್ದರೆ ದೇಹ ಬೆಚ್ಚಗಿರುತ್ತದೆ.
ಇದೊಂದು ಶುದ್ಧ ತಪ್ಪು ಕಲ್ಪನೆ ಎಂದು ಹೇಳುತ್ತಾರೆ ಪೌಷ್ಟಿಕತಜ್ಞರು. ಚಳಿಗಾಲ ಬಂತೆಂದರೆ ಸಾಕು, ಜಾಸ್ತಿ ಆಹಾರ ಸೇವಿಸಿ. ಆಗಾಗ ಏನಾದರೂ ಸ್ವಲ್ಪ ತಿನ್ನುತ್ತಿರಿ. ಇದರಿಂದ ದೇಹ ಬೆಚ್ಚಗಿರುತ್ತದೆ. ಅನಾರೋಗ್ಯಕ್ಕೆ ಒಳಗಾಗುವುದೂ ತಪ್ಪುತ್ತದೆ ಎಂದು ಮನೆಯಲ್ಲಿ ಹಿರಿಯರು, ಪಾಲಕರು ಹೇಳುವುದನ್ನು ಕೇಳಿದ್ದೇವೆ.
ಆದರೆ ತಜ್ಞರು ಹೇಳುವ ಪ್ರಕಾರ, ಹೀಗೆ ಪದೇಪದೆ ತಿನ್ನುವುದರಿಂದ ದೇಹದ ತೂಕ ಹೆಚ್ಚುತ್ತದೆ ಹೊರತು ಬೇರೇನೂ ಉಪಯೋಗ ಆಗುವುದಿಲ್ಲ. ಅದರ ಬದಲಾಗಿದೆ ಚಳಿಗಾಲದಲ್ಲಿ ಸರಿಯಾದ ಕ್ರಮದಲ್ಲಿ ಡಯಟ್​ ಮಾಡುವ ಮೂಲಕ ಕಾಯಿಲೆ ಬರುವುದನ್ನು ತಡೆಗಟ್ಟಬಹುದು. ಹಾಗಾಗಿ ಆಗಾಗ ಏನಾದರೂ ಆಹಾರ ಸೇವನೆ ಮಾಡುವುದರಿಂದ ಏನೂ ಉಪಯೋಗವಿಲ್ಲ.

2. ಮಸಾಲೆಯುಕ್ತ ಆಹಾರ ಸೇವನೆ ದೇಹವನ್ನು ಬೆಚ್ಚಗಿಡುತ್ತದೆ.
ಮಸಾಲೆಯುಕ್ತ, ಖಾರ, ಸ್ಪೈಸಿ ಆಹಾರಗಳ ಸೇವನೆಯಿಂದ ಖಂಡಿತ ಮೈ ಬೆವರುತ್ತದೆ. ಅದರಲ್ಲೂ ಚಳಿಗಾಲದಲ್ಲಿ ಮೆಣಸಿನಕಾಯಿ ಪ್ರಮಾಣ ಹೆಚ್ಚಾಗಿರುವ ಆಹಾರ ಸೇವನೆಯಿಂದ ದೇಹದ ಉಷ್ಣತೆ ಹೆಚ್ಚಾಗಿ ನಾವು ಚಳಿಯಿಂದ ಪಾರಾಗಬಹುದು ಎಂದುಕೊಂಡಿದ್ದರೆ ಅದು ದೊಡ್ಡ ತಪ್ಪು.
ಆಹಾರ ತಜ್ಞರ ಪ್ರಕಾರ, ಮಸಾಲೆಯುಕ್ತ ಸ್ಪೈಸಿ ಆಹಾರಗಳು ನಮ್ಮ ದೇಹದ ಉಷ್ಣತೆಯ ಮೇಲೆ ಯಾವುದೇ ಗುರುತರ ಪ್ರಭಾವವನ್ನೂ ಬೀರುವುದಿಲ್ಲ. ಅದನ್ನು ತಿಂದ ಕ್ಷಣಕ್ಕೆ ಖಾರದಿಂದ ಮೈ ಬಿಸಿಯಾಗಬಹುದು. ಬೆವರಬಹುದು. ಆದರೆ ನಂತರ ಏನೂ ಪ್ರಯೋಜನವಿಲ್ಲ.

3. ನೀವು ಶೀತ, ಕೆಮ್ಮಿನಿಂದ ಬಳಲುತ್ತಿದ್ದರೆ ಸಿಟ್ರಸ್ ಹಣ್ಣುಗಳನ್ನು ತಿನ್ನಬಾರದು
ಯಾರಾದರೂ ಹೀಗೆ ಹೇಳಿದರೆ ಅದನ್ನು ಕೇಳಲೇಬೇಡಿ ಎನ್ನುತ್ತಾರೆ ತಜ್ಞರು.

ಕಿತ್ತಳೆ, ಲಿಂಬುವಿನಂತಹ ಸಿಟ್ರಸ್​​ ಹಣ್ಣುಗಳು ಚಳಿಗಾಲದಲ್ಲಿ ದೇಹಕ್ಕೆ ಅತ್ಯವಶ್ಯಕ. ವಿಟಮಿನ್​ ಸಿಯನ್ನು ಹೇರಳವಾಗಿ ಹೊಂದಿರುವ ಈ ಹಣ್ಣುಗಳಲ್ಲಿ ನೀರಿನ ಅಂಶವೂ ಹೆಚ್ಚಾಗಿರುತ್ತದೆ.
ಕಿತ್ತಳೆಗಳು ಚಳಿಗಾಲದ ಹಣ್ಣುಗಳು. ಅವು ಚಳಿಗಾದಲ್ಲಿ ಸಿಗುತ್ತವೆ ಎಂದರೆ ಆ ಸಮಯದಲ್ಲಿಯೇ ನಮ್ಮ ದೇಹಕ್ಕೆ ಬೇಕು ಎಂದರ್ಥ. ಕೆಮ್ಮು, ನೆಗಡಿಯಾದಾಗ ಕಿತ್ತಳೆ, ಲಿಂಬು ಹಣ್ಣುಗಳ ಸೇವನೆ ಮಾಡಬೇಕು. ನಮ್ಮೊಳಗಿನ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತವೆ. ಅಲ್ಲದೆ ಪೌಷ್ಟಿಕಾಂಶವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತವೆ. ಕಟ್ಟಿಕೊಂಡ ಕಫವನ್ನು ಸಡಿಲಗೊಳಿಸುತ್ತವೆ ಹಾಗೂ ಶೀತವನ್ನು ತೊಡೆದುಹಾಕುತ್ತದೆ ಎಂದು ನ್ಯೂಟ್ರಿಷಿಯನಿಸ್ಟ್​ ಹೇಳುತ್ತಾರೆ.

4. ಡೇರಿ ಉತ್ಪನ್ನಗಳಿಂದ ದೂರವಿರಿ
ಈ ಮಾತನ್ನು ಸಾಮಾನ್ಯವಾಗಿ ಎಲ್ಲರೂ ಹೇಳುತ್ತಾರೆ. ಮೊದಲೇ ಚಳಿ ಇರುತ್ತದೆ. ಶೀತ, ಕೆಮ್ಮು, ಜ್ವರ, ಕಫ ಇರುತ್ತದೆ. ಹೀಗಿರುವಾಗ ಡೇರಿ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪಗಳ ಸೇವನೆಯಿಂದ ಮತ್ತಷ್ಟು ಕಫ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಬಹುತೇಕರ ನಂಬಿಕೆ. ಆದರೆ ನಿಜಕ್ಕೂ ಹಾಗೇನೂ ಆಗುವುದಿಲ್ಲ ಎಂಬುದನ್ನು ಆಹಾರತಜ್ಞರು ಪತ್ತೆಹಚ್ಚಿದ್ದಾರೆ.
ಚಳಿಗಾಲದಲ್ಲಿ ರಾತ್ರಿ ವೇಳೆ ಬಿಸಿ ಹಾಲಿಗೆ ಸ್ವಲ್ಪ ಕೇಸರಿ ಬೆರಸಿ ಕುಡಿಯುವುದು ತುಂಬ ಉತ್ತಮ. ಹಾಲಿನ ಉತ್ಪನ್ನಗಳನ್ನು ಹಿತಮಿತವಾಗಿ ಸೇವಿಸುವುದರಿಂದ ಪೋಷಕಾಂಶ ಸಿಗುತ್ತದೆ ಎಂದು ಹೇಳಿದ್ದಾರೆ.

5.ಚಳಿಗಾಲದಲ್ಲಿ ವಿಟಮಿನ್​ ಸಪ್ಲಿಮೆಂಟ್ಸ್​ ತೀರ ಅಗತ್ಯ
ವಿಟಮಿನ್​ಗಳನ್ನು ತೆಗೆದುಕೊಳ್ಳುವುದು ಒಳ್ಳೆಯದೇ. ಆದರೆ ಉಳಿದ ಕಾಲಗಳಿಗಿಂತ ಚಳಿಗಾಲದಲ್ಲೇ ತೆಗೆದುಕೊಳ್ಳಬೇಕು ಎಂಬುದು ತಪ್ಪು ಅಭಿಪ್ರಾಯ.
ಒಬ್ಬ ಮನುಷ್ಯ ತನ್ನ ದೇಹಕ್ಕೆ ಬೇಕಾದ ವಿಟಮಿನ್​ಗಳನ್ನು ಪಡೆಯಲು ಸಮತೋಲನಯುಕ್ತ ಡಯಟ್​ ಮಾಡುವುದು ಉತ್ತಮ. ಸುಮ್ಮನೆ ತೆಗೆದುಕೊಳ್ಳುವ ಅನಗತ್ಯ ಸಪ್ಲಿಮೆಂಟ್ಸ್​ಗಳು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ

    ಇವುಗಳನ್ನು ಪಾಲಿಸಿದ್ರೆ ನೀವೂ ಸಹ ಕೋಟ್ಯಾಧಿಪತಿ ಆಗಬಹುದು!ಹೇಗೆ ಅಂತೀರಾ?ಈ ಲೇಖನಿ ಓದಿ…

    ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.

  • ರಾಜಕೀಯ

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…

  • ಸುದ್ದಿ

    ‘ಪಿತೃ ಪಕ್ಷ’ಕ್ಕೂ ಮಹಾಭಾರತದ ಕರ್ಣನಿಗೂ ಏನು ಸಂಬಂಧ ಗೊತ್ತ….!

    ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….

  • ರಾಜಕೀಯ

    ಗಣಿ ಧಣಿಗಳ ಬಳ್ಳಾರಿ ನೆಲದಲ್ಲಿ, ಕಾಂಗ್ರೆಸ್ ನ ಉಗ್ರಪ್ಪಗೆ ಗೆಲವು..!ಗೆದ್ದಿದ್ದು ಎಷ್ಟು ಮತಗಳಿಂದ ಗೊತ್ತಾ..?

    ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ…

  • ವೀಡಿಯೊ ಗ್ಯಾಲರಿ

    ಕಾಲೇಜು ದಾರಿಯಲ್ಲಿ ಆ ಹುಡುಗ ಹುಡುಗಿ ಮಾಡಿದ್ದೇನು..?ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

    ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…

  • ಸುದ್ದಿ

    ಇನ್ಫೋಸಿಸ್ ದಂಪತಿಗಳ ಸಿನಿಮಾದಲ್ಲಿ ಸುಧಾ ಮೂರ್ತಿಯವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಬಾಲಿವುಡ್ ನ ಈ ಸ್ಟಾರ್ ನಟಿ..!ಆ ನಟಿ ಯಾರು?

    ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ  ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ…