ಸಿನಿಮಾ

ದನದ ಮಾಂಸ ತಿನ್ನುತ್ತಿದ್ದ, ಯಾರಿಗೆ ಟೀ ತಂದುಕೊಡುತ್ತಿದ್ದ ಅಂತ ಗೊತ್ತಿದೆ ಅಂತ ದರ್ಶನ್ ವಿರುದ್ದ ವಾಗ್ದಾಳಿ ನಡೆಸಿದ ಶಾಸಕ..!

356

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ.

ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ ಜೆಡಿಎಸ್ ನಾಯಕರನ್ನು ಕಾಡುತ್ತಿದೆ.

ಹೀಗಾಗಿ ದರ್ಶನ್ ಹಾಗೂ ಯಶ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಕೆಲ ದಿನಗಳ ಹಿಂದೆ ಕೆ.ಆರ್. ಪೇಟೆ ಕ್ಷೇತ್ರದ ಜೆಡಿಎಸ್ ಶಾಸಕ ನಾರಾಯಣ ಗೌಡ, ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದು, ನಟರ ಅಕ್ರಮಗಳ ವಿರುದ್ಧ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದರು. ಇದೀಗ ಜೆಡಿಎಸ್ ನ ಮತ್ತೊಬ್ಬ ನಾಯಕರು ತಮ್ಮ ನಾಲಿಗೆ ಹರಿ ಬಿಟ್ಟಿದ್ದಾರೆ.

ಜೆಡಿಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಸಂತೋಷ್, ದರ್ಶನ್ ಕುರಿತು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ದರ್ಶನ್ ಜೇಬಲ್ಲಿ ದುಡ್ಡಿಲ್ಲದೆ ದನದ ಮಾಂಸದ ಚಾಕಣ ತಿಂತಿದ್ದ. ಆತ ಯಾರಿಗೆ ಟೀ ತಂದು ಕೊಡ್ತಿದ್ದ ಎಂದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ. ಇದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ದರ್ಶನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    D K ಶಿವಕುಮಾರ್ ಕಾಕಿ ವಶಕ್ಕೆ:ಇತಿಹಾಸದಲ್ಲಿ ಇಂದು ಕಪ್ಪು ದಿನ….!

    ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…

  • ಸುದ್ದಿ

    65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನವನ್ನು ನಡೆಸುತ್ತಿದ್ದಾರೆ,..ಇದಕ್ಕೆ ಕಾರಣವೇನೆಂದು ತಿಳಿಯಿರಿ..?

    ಚೆನ್ನೈನ  65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿರುವ ಮನಕಲಕುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ವಾಸಿಸಲು ಮನೆ ಇಲ್ಲದ ಕಾರಣದಿಂದಾಗಿ ಕರುಪ್ಪಾಯಿ ಅವರು ಶೌಚಾಲಯದ ಕೋಣೆಯಲ್ಲೇ ವಾಸವಾಗಿದ್ದಾರೆ. ವೃದ್ಧೆ ಕರುಪ್ಪಾಯಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿ ಅದರಿಂದ ಬರುವ ಹಣದಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವೃದ್ಧೆ, ಹಿರಿಯ ನಾಗರಿಕ ಪಿಂಚಣಿಗಾಗಿ ನಾನು ಅನೇಕ ಬಾರಿ ಅರ್ಜಿ ಸಲ್ಲಿಸಿದ್ದೇನೆ. ಅದು ಆಗದಿದ್ದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ….

  • ಗ್ಯಾಜೆಟ್

    ವಾಟ್ಸಾಪ್ ಮೂಲಕ ಅವಿವಾಹಿತರು ತಮ್ಮ ಬಾಳಸಂಗಾತಿ ಆಯ್ಕೆ ಮಾಡಿಕೊಳ್ಳಬಹುದು ..!ತಿಳಿಯಲು ಈ ಲೇಖನ ಓದಿ..

    ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.

  • ಸುದ್ದಿ

    ನಿಜಕ್ಕೂ ಅಚ್ಚರಿ ಗೋಡೆಯಲ್ಲಿ ಉದ್ಭವವಾದ ದೇವಿ..! ಅಷ್ಟಕ್ಕೂ ಅಚ್ಚರಿ ನಡೆದಿದ್ದು ಎಲ್ಲಿ ಗೊತ್ತಾ?

    ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…

  • ಸಿನಿಮಾ

    ಅಂಜನಿಪುತ್ರನಿಗೆ ಕೋರ್ಟ್ ಶಾಕ್..!

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.

  • ಉಪಯುಕ್ತ ಮಾಹಿತಿ

    ಒಂದು ಲಕ್ಷದ ಒಳಗೆ ಖರೀದಿಸಬಹುದಾದ ಟಾಪ್ ಬೈಕುಗಳು ಯಾವುವು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.