ಸುದ್ದಿ

ಮಗಳ ಮದುವೆಗೆ ಲಕ್ಷಾಂತರ ರೂ. ಸಾಲ ಮಾಡಿ ರೈಲಿಗೆ ಸಿಕ್ಕಿ ತಂದೆ ಆತ್ಮಹತ್ಯೆ…!

806

ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.

ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು.

ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ ತೀರಿಸುವುದಾಗಿ ಲೆಕ್ಕಾಚಾರ ಹಾಕಿದ್ದರು. ಟ್ಯಾಕ್ಸಿ ಅಪಘಾತಕ್ಕೀಡಾಗಿ ಬಹಳ ನಷ್ಟವಾಗಿತ್ತು.

ಇದರಿಂದ ಮನನೊಂದು ದಿನೇಶ್ ಆತ್ಮಹತ್ಯೆಯ ನಿರ್ಧಾರ ಮಾಡಿರಬಹುದು ಎನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ವಿಶ್ವದ ಎಲ್ಲಾ ಕನ್ನಡಿಗರಿಗೆ ಮನರಂಜನೆ ನೀಡುತ್ತಿದ್ದ “ಮಜಾ ಟಾಕೀಸ್”ಬಂದ್ ಆಗಲಿದೆಯಾ?ಇದು ನಿಜನಾ?ತಿಳಿಯಲು ಈ ಲೇಖನ ಓದಿ…

    ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

  • Village

    ನಿಮ್ಮ ಹಳ್ಳಿಯಲ್ಲಿ ಕರೊನಾ ಜಾಸ್ತಿ ಆಗಲು ಈ ಕಾರಣ ಇರಬಹುದು.

    ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.

  • ಆರೋಗ್ಯ

    ಪ್ರತಿದಿನ ಅರಿಶಿನವನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ.!

    ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…

  • ಉಪಯುಕ್ತ ಮಾಹಿತಿ

    ನಿಮ್ಮ ತ್ವಚೆಯನ್ನು ಕಾಪಾಡಿಕೊಂಡು ಸೌಂದರ್ಯವಾಗಿ ಕಾಣಬೇಕೇ? ಹಾಗಾದರೆ ನೀವು ಇದನ್ನು ಬಳುಸುವುದು ಉತ್ತಮ.!

    ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…

  • ಚುನಾವಣೆ

    ಕರ್ನಾಟಕ ಮೇ.೧೦ ಚುನಾವಣೆ

    ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…

  • inspirational, ಉಪಯುಕ್ತ ಮಾಹಿತಿ

    ಉತ್ತಮ ಆರೋಗ್ಯ ಟಿಪ್ಸ್

    ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…