ಮನರಂಜನೆ

ಬಿಗ್ ಬಾಸ್ ಮನೆಯಲ್ಲಿ ವಾಂಗಿಬಾತ್, ಚಿತ್ರಾನ್ನಕ್ಕಾಗಿ ದೀಪಿಕಾ ಚಂದನ್ ನಡುವೆ ಕಿತ್ತಾಟ.

63

ಕನ್ನಡ ಬಿಗ್‍ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ.

ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು ನಾನು ಅಡುಗೆ ಮಾಡುತ್ತೇನೆಂದು ಹೇಳಿದ್ದಾರೆ. ಇದಾದ ಬಳಿಕ ನಾಳೆ ನಾನು ವಾಂಗೀಬಾತ್ ಮಾಡುತ್ತೇನೆ ಎಂದಾಗ, ಚಂದನ್ ಅವರು ನಾಳಿದ್ದು ನಾನು ಚಿತ್ರಾನ್ನ ಮಾಡುತ್ತೇನೆಂದು ಹೇಳಿದ್ದಾರೆ.

ಆಗ ದೀಪಿಕಾ ದಾಸ್ ಅವರು ಇದ್ದಕಿದ್ದಂತೆ ಕೋಪಗೊಂಡು ಚಂದನ್ ಅವರಿಗೆ ನೀವು ನನಗೆ ತುಂಬಾ ಇರಿಟೇಟ್ ಮಾಡುತ್ತಿದ್ದೀರಿ ಎಂದು ಹೇಳಿದರು. ಬೇರೆಯವರ ಬಗ್ಗೆ ಮಾತನಾಡಿಬೇಡಿ, ಎಲ್ಲರೂ ಇಲ್ಲಿ ಬೇರೆ ಬೇರೆ ಮನಸ್ಥಿತಿಯಲ್ಲಿ ಇದ್ದಾರೆ. ನಿಮ್ಮ ತರ ಯಾರೂ ಇಲ್ಲ ಇಲ್ಲಿ, ನಿಮ್ಮ ಮನಸ್ಥಿತಿ ಬಗ್ಗೆ ಸ್ವಲ್ಪ ತಿಳಿದುಕೊಳ್ಳಿ ಎಂದು ಚಂದನ್ ಮೇಲೆ ಗರಂ ಆದರು. ಆಗ ಚಂದನ್ ಇದ್ದುಕೊಂಡು, ನಾವೇನು ಇಲ್ಲಿ ಸುಮ್ಮನೆ ತಿಂದುಕೊಂಡು ಹೋಗಬೇಕಾ. ನನ್ನದೇ ಆಗಬೇಕು, ನನ್ನದೇ ನಡಿಯಬೇಕು, ನಿಮ್ಮ ತರಹದ ಮನಸ್ಥಿತಿ ನನ್ನಗಿಲ್ಲ ಎಂದು ವಾದ ಮಾಡಿದರು. ಕೊನೆಗೆ ಇಬ್ಬರು ಚಿತ್ರಾನ್ನ ಮಾಡೋದಾ, ವಾಂಗಿಬಾತ್ ಮಾಡೋದಾ ಎಂದು ಇಬ್ಬರ ನಡುವೆ ಮಾತಿಗೆ ಮಾತು ಬೆಳೆಯಿತು.

ಬೇರೆಯವರ ಬಗ್ಗೆ ಬೆರಳು ತೋರಿಸಿ ಮಾತನಾಡಬೇಡಿ. ನಿಮ್ಮಲಿರುವ ಸಣ್ಣ ಮನಸ್ಥಿತಯನ್ನು ಮೊದಲು ಬಿಡಿ, ನನ್ನ ಹತ್ತಿರ ವಾದ ಮಾಡಕ್ಕೆ ಬರಬೇಡಿ ಎಂದು ದೀಪಿಕಾ ದಾಸ್ ಅವರಿಗೆ ಹೇಳಿದ್ದಾರೆ, ದೀಪಿಕಾ ಇನ್ನಷ್ಟು ಕೋಪಗೊಂಡು ಚಂದನ್, ನೀವು ಡಬಲ್ ಗೇಮ್ ಆಡಬೇಡಿ, ನನ್ನ ಮನಸ್ಥಿತಿ ನನಗೆ ಮಾತ್ರ ಗೊತ್ತು, ನಿಮ್ಮ ನಾಲಿಗೆ ಮೇಲೆ ಒಂದು ವಿಚಾರ ಇರಲಿ ಎಂದು ಒಬ್ಬರಿಗೊಬ್ಬರ ನಡುವೆ ಗಲಭೆ ಉಂಟಾಯಿತು. ಕೊನೆಗೆ ದೀಪಿಕಾ ಬೇಸರಗೊಂಡು ಅಡುಗೆ ಮನೆಯಿಂದ ಹೊರಹೋದರು.

ನನ್ನದೇ ನಡಿಯಬೇಕು ಅಂತಿದೆಯಲ್ಲಾ ಅದನ್ನು ಮನೆಯಲ್ಲಿ ಇಟ್ಟುಕೊಳ್ಳಲಿ ಎಂದು ದೀಪಿಕಾ ಬಗ್ಗೆ ಈ ವಾರದ ಬಿಗ್ ಬಾಸ್ ಕ್ಯಾಪ್ಟನ್ ಕಿಶನ್ ಜೊತೆಯೂ ಕೂಡ ವಾದವನ್ನು ಮಾಡಿದ್ದಾರೆ. ಏನಾದರೂ ಆದರೆ ಸಾಕು ಎಲ್ಲಾ ಚಂದನ್ ಎಂದು ಮನೆಯವರೆಲ್ಲಾ ಹೇಳುತ್ತಾರೆ. ಈ ಸಣ್ಣ ವಿಚಾರವನ್ನು ದೊಡ್ಡದಾಗಿ ಮಾಡುವ ಅವಶ್ಯಕತೆ ಇರಲಿಲ್ಲ. ಏನೂ ಮಾತಾಡಕ್ಕೂ ಬಿಡಲ್ಲ, ಅಡುಗೆ ಮಾಡಕ್ಕೂ ಸಹ ಬಿಡಲ್ಲ, ಮೇಲೊಂದು ಎಂದು ಚಂದನ್ ಅವರು ವಾದ ಮಾಡಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಔಟ್ ಡೇಟೆಡ್ ನೂಡಲ್ಸ್ ನಿಂದ ಮನೆ ಕಟ್ಟಿ ಮಲಗಿದ ಭೂಪ..!

    ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(19 ನವೆಂಬರ್, 2018) ಹಳೆಯ ಸಂಪರ್ಕಗಳುಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ನಿಮ್ಮ ಕಿಟಕಿಯಲ್ಲಿ ಹೂವಿಡುವ ಮೂಲಕ ನಿಮ್ಮ ಪ್ರೀತಿಯನ್ನು ತೋರಿಸಿ. ನಿಮ್ಮ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ

    ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…

  • inspirational

    ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಬಾಂಗ್ಲಾದೇಶ

    ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಕ್ರಿಕೆಟ್‌ನಲ್ಲಿನ ಪವಾಡಗಳ  ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್‌ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್‌ನಲ್ಲಿ ಹೇಗೆ…

  • ಆಟೋಮೊಬೈಲ್ಸ್

    ಕೈಗಾರಿಕೆಗಳಿಂದಾಗಿ ಈ ಹಳ್ಳಿಯಲ್ಲಿ ಶವ ಸಂಸ್ಕಾರವನ್ನು ಮಾಡುವುದಕ್ಕು ಜಾಗವಿಲ್ಲ…..! ತಿಳಿಯಲು ಈ ಲೇಖನವನ್ನು ಓದಿ..

    ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
    ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.

  • ಸರ್ಕಾರದ ಯೋಜನೆಗಳು

    ಪ್ರಧಾನಿ ನರೇಂದ್ರ ಮೋದಿಯವರಿಂದ ರೇಷನ್ ಕಾರ್ಡುದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ..

    ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.