ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ.

ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು ಒಟ್ಟಿಗೆ ನಟಿಸಬೇಕಾಗಿದ್ದ ಸಿನಿಮಾಕ್ಕೆ ಇಂದ್ರಜಿತ್ ಲಂಕೇಶ್ ನಿರ್ದೇಶಕರಾಗಿ ಕೆಲಸ ಮಾಡಬೇಕಿತ್ತು!

ಆಗತಾನೇ ಚಿತ್ರರಂಗದಲ್ಲಿ ಸುದೀಪ್ ಮತ್ತು ದರ್ಶನ್ ಎಂಟ್ರಿ ಕೊಟ್ಟ ಸಮಯ. ಹಿಟ್ ಸಿನಿಮಾಗಳನ್ನು ನೀಡುತ್ತ ಚಿತ್ರರಂಗದಲ್ಲಿ ಭದ್ರವಾಗಿ ನೆಲೆಯೂರುತ್ತಿದ್ದರು. ಇಂದ್ರಜಿತ್ ಲಂಕೇಶ್ ಕೂಡ ಅದೇ ಸಮಯಕ್ಕೆ ನಿರ್ದೇಶರಕಾಗಿ ಸ್ಯಾಂಡಲ್ವುಡ್ಗೆ ಕಾಲಿಟ್ಟಿದ್ದರು. ಅವರಿಗೆ ಹಿಂದಿಯ ‘ದೀವಾರ್’ ಸಿನಿಮಾ ಭಾರೀ ಇಷ್ಟವಾಗಿ ಬಿಟ್ಟಿತ್ತು. ಅದನ್ನು ಕನ್ನಡಕ್ಕೆ ರಿಮೇಕ್ ಮಾಡುವ ಸಲುವಾಗಿ ಅದರ ಹಕ್ಕಗಳನ್ನು ಅವರು ಪಡೆದುಕೊಂಡು ಬಂದಿದ್ದರು.

‘ದೀವಾರ್’ನಲ್ಲಿ ಅಮಿತಾಭ್ ಬಚ್ಚನ್ ಮತ್ತು ಶಶಿ ಕಪೂರ್ ಪ್ರಮುಖ ಪಾತ್ರವನ್ನು ಮಾಡಿದ್ದರು. ವಿಜಯ್ ವರ್ಮ-ರವಿ ವರ್ಮ ಎಂಬ ಸಹೋದರರ ಪಾತ್ರಗಳಲ್ಲಿ ಅವರಿಬ್ಬರು ನಟಿಸಿದ್ದರು. ಬಾಕ್ಸ್ ಆಫೀಸ್ನಲ್ಲಿ ಅಬ್ಬರದ ಕಲೆಕ್ಷನ್ ಮಾಡಿದ ‘ದೀವಾರ್’ ತೆಲುಗು, ತಮಿಳು, ಮಲಯಾಳಂ ಭಾಷೆಗಳಿಗೆ ರಿಮೇಕ್ ಆಗಿತ್ತು. ಕನ್ನಡದಲ್ಲಿ ಇಬ್ಬರು ನಿಭಾಯಿಸಿದ್ದ ಪಾತ್ರಗಳನ್ನು ಯಾರು ಮಾಡಲಿದ್ದಾರೆ ಎಂಬ ಪ್ರಶ್ನೆ ಹುಟ್ಟಿಕೊಂಡಿತ್ತು. ‘ಅಮಿತಾಭ್ ಬಚ್ಚನ್ ಅವರು ನಿಭಾಯಿಸಿದ ಪಾತ್ರವನ್ನು ಮಾಡುವಂತೆ ನಾನು ಸುದೀಪ್ ಅವರ ಬಳಿ ಕೇಳಿಕೊಂಡೆ. ಅವರು ತುಂಬ ಖುಷಿಯಿಂದಲೇ ಒಪ್ಪಿಕೊಂಡಿದ್ದರು’ ಎಂದಿದ್ದಾರೆ ಇಂದ್ರಜಿತ್.

ಶಶಿ ಕಪೂರ್ ಪಾತ್ರಕ್ಕೆ ಯಾರನ್ನು ಆಯ್ಕೆ ಮಾಡುವುದು ಎಂಬ ಚರ್ಚೆ ಶುರುವಾಯಿತು. ‘ಆ ಪಾತ್ರಕ್ಕಾಗಿ ನಾನು ನಟ ದರ್ಶನ್ ಅವರನ್ನು ಅಪ್ರೋಚ್ ಮಾಡಿದೆ. ಅವರು ಸಿನಿಮಾದ ಕಥೆ ಕೇಳಿ, ನಟಿಸಲು ಒಪ್ಪಿಕೊಂಡರು. ಆದರೆ, ಅವರಿಗೂ ಅಮಿತಾಭ್ ಬಚ್ಚನ್ ನಿಭಾಯಿಸಿದ್ದ ಪಾತ್ರವೇ ತುಂಬ ಇಷ್ಟವಾಗಿಬಿಟ್ಟಿತ್ತು. ಇಬ್ಬರು ಬಚ್ಚನ್ ಅವರ ಆ್ಯಂಗ್ರಿಮ್ಯಾನ್ ಪಾತ್ರವನ್ನೇ ಮಾಡುವುದಕ್ಕೆ ಇಷ್ಟಪಟ್ಟರು. ಆ ಸಿನಿಮಾ ಟೇಕ್ ಆಫ್ ಆಗದೇ ಇರುವುದಕ್ಕೆ ಇದೇ ಕಾರಣ. ಈಗಲೂ ಆ ಸಿನಿಮಾ ಹಕ್ಕಗಳು ನನ್ನ ಬಳಿ ಇವೆ’ ಎಂದು ಮಾಹಿತಿ ನೀಡಿದ್ದಾರೆ ಇಂದ್ರಜಿತ್ ಲಂಕೇಶ್. ಒಂದುವೇಳೆ, ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಅಂದೇ ಕನ್ನಡ ಸಿನಿಪ್ರಿಯರು ದರ್ಶನ್ ಮತ್ತು ಸುದೀಪ್ ಅವರನ್ನು ಒಟ್ಟಿಗೆ ತೆರೆಮೇಲೆ ನೋಡಬಹುದಿತ್ತು!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…
ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ.ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್…
ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.
ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ.. ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…
ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….