ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ.

ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು ಒಟ್ಟಿಗೆ ನಟಿಸಬೇಕಾಗಿದ್ದ ಸಿನಿಮಾಕ್ಕೆ ಇಂದ್ರಜಿತ್ ಲಂಕೇಶ್ ನಿರ್ದೇಶಕರಾಗಿ ಕೆಲಸ ಮಾಡಬೇಕಿತ್ತು!

ಆಗತಾನೇ ಚಿತ್ರರಂಗದಲ್ಲಿ ಸುದೀಪ್ ಮತ್ತು ದರ್ಶನ್ ಎಂಟ್ರಿ ಕೊಟ್ಟ ಸಮಯ. ಹಿಟ್ ಸಿನಿಮಾಗಳನ್ನು ನೀಡುತ್ತ ಚಿತ್ರರಂಗದಲ್ಲಿ ಭದ್ರವಾಗಿ ನೆಲೆಯೂರುತ್ತಿದ್ದರು. ಇಂದ್ರಜಿತ್ ಲಂಕೇಶ್ ಕೂಡ ಅದೇ ಸಮಯಕ್ಕೆ ನಿರ್ದೇಶರಕಾಗಿ ಸ್ಯಾಂಡಲ್ವುಡ್ಗೆ ಕಾಲಿಟ್ಟಿದ್ದರು. ಅವರಿಗೆ ಹಿಂದಿಯ ‘ದೀವಾರ್’ ಸಿನಿಮಾ ಭಾರೀ ಇಷ್ಟವಾಗಿ ಬಿಟ್ಟಿತ್ತು. ಅದನ್ನು ಕನ್ನಡಕ್ಕೆ ರಿಮೇಕ್ ಮಾಡುವ ಸಲುವಾಗಿ ಅದರ ಹಕ್ಕಗಳನ್ನು ಅವರು ಪಡೆದುಕೊಂಡು ಬಂದಿದ್ದರು.

‘ದೀವಾರ್’ನಲ್ಲಿ ಅಮಿತಾಭ್ ಬಚ್ಚನ್ ಮತ್ತು ಶಶಿ ಕಪೂರ್ ಪ್ರಮುಖ ಪಾತ್ರವನ್ನು ಮಾಡಿದ್ದರು. ವಿಜಯ್ ವರ್ಮ-ರವಿ ವರ್ಮ ಎಂಬ ಸಹೋದರರ ಪಾತ್ರಗಳಲ್ಲಿ ಅವರಿಬ್ಬರು ನಟಿಸಿದ್ದರು. ಬಾಕ್ಸ್ ಆಫೀಸ್ನಲ್ಲಿ ಅಬ್ಬರದ ಕಲೆಕ್ಷನ್ ಮಾಡಿದ ‘ದೀವಾರ್’ ತೆಲುಗು, ತಮಿಳು, ಮಲಯಾಳಂ ಭಾಷೆಗಳಿಗೆ ರಿಮೇಕ್ ಆಗಿತ್ತು. ಕನ್ನಡದಲ್ಲಿ ಇಬ್ಬರು ನಿಭಾಯಿಸಿದ್ದ ಪಾತ್ರಗಳನ್ನು ಯಾರು ಮಾಡಲಿದ್ದಾರೆ ಎಂಬ ಪ್ರಶ್ನೆ ಹುಟ್ಟಿಕೊಂಡಿತ್ತು. ‘ಅಮಿತಾಭ್ ಬಚ್ಚನ್ ಅವರು ನಿಭಾಯಿಸಿದ ಪಾತ್ರವನ್ನು ಮಾಡುವಂತೆ ನಾನು ಸುದೀಪ್ ಅವರ ಬಳಿ ಕೇಳಿಕೊಂಡೆ. ಅವರು ತುಂಬ ಖುಷಿಯಿಂದಲೇ ಒಪ್ಪಿಕೊಂಡಿದ್ದರು’ ಎಂದಿದ್ದಾರೆ ಇಂದ್ರಜಿತ್.

ಶಶಿ ಕಪೂರ್ ಪಾತ್ರಕ್ಕೆ ಯಾರನ್ನು ಆಯ್ಕೆ ಮಾಡುವುದು ಎಂಬ ಚರ್ಚೆ ಶುರುವಾಯಿತು. ‘ಆ ಪಾತ್ರಕ್ಕಾಗಿ ನಾನು ನಟ ದರ್ಶನ್ ಅವರನ್ನು ಅಪ್ರೋಚ್ ಮಾಡಿದೆ. ಅವರು ಸಿನಿಮಾದ ಕಥೆ ಕೇಳಿ, ನಟಿಸಲು ಒಪ್ಪಿಕೊಂಡರು. ಆದರೆ, ಅವರಿಗೂ ಅಮಿತಾಭ್ ಬಚ್ಚನ್ ನಿಭಾಯಿಸಿದ್ದ ಪಾತ್ರವೇ ತುಂಬ ಇಷ್ಟವಾಗಿಬಿಟ್ಟಿತ್ತು. ಇಬ್ಬರು ಬಚ್ಚನ್ ಅವರ ಆ್ಯಂಗ್ರಿಮ್ಯಾನ್ ಪಾತ್ರವನ್ನೇ ಮಾಡುವುದಕ್ಕೆ ಇಷ್ಟಪಟ್ಟರು. ಆ ಸಿನಿಮಾ ಟೇಕ್ ಆಫ್ ಆಗದೇ ಇರುವುದಕ್ಕೆ ಇದೇ ಕಾರಣ. ಈಗಲೂ ಆ ಸಿನಿಮಾ ಹಕ್ಕಗಳು ನನ್ನ ಬಳಿ ಇವೆ’ ಎಂದು ಮಾಹಿತಿ ನೀಡಿದ್ದಾರೆ ಇಂದ್ರಜಿತ್ ಲಂಕೇಶ್. ಒಂದುವೇಳೆ, ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಅಂದೇ ಕನ್ನಡ ಸಿನಿಪ್ರಿಯರು ದರ್ಶನ್ ಮತ್ತು ಸುದೀಪ್ ಅವರನ್ನು ಒಟ್ಟಿಗೆ ತೆರೆಮೇಲೆ ನೋಡಬಹುದಿತ್ತು!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ…
ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್ಡಿಆರ್ಎಫ್) ಒಟ್ಟು1813.75 ಕೋಟಿ…
ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…
ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…
ಜನಪ್ರಿಯ ಆನ್ಲೈನ್ ಆಟಗಳಲ್ಲಿ ಒಂದಾದ ಪಬ್ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್ನಲ್ಲಿವರದಿಯಾಗಿದೆ. ಹೌದು, ಪಬ್ಜಿ ಆಟದ ಕಾರಣದಿಂದಾಗಿ ಹೈದರಾಬಾದ್ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್ಜಿಗೆವ್ಯಸನಿಯಾಗಿದ್ದ ಹೈದರಾಬಾದ್ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ…
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.