ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ.

ದುಬೈ ಸ್ಟಾಪ್ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ 36 ಗಂಟೆಗಳಲ್ಲಿ ಎರಡು, ಮೂರು ಅಥವಾ ನಾಲ್ಕು ಆಕರ್ಷಣೆಗಳನ್ನು ವೀಕ್ಷಿಸಬಹುದಾಗಿದೆ. ಇದುಪ್ರೀಪೇಯ್ಡ್ ಮಾದರಿಯ ಯೋಜನೆಯಾಗಿದ್ದು, ಅತ್ಯಲ್ಪ ಅವಧಿಯಲ್ಲಿ ಪ್ರವಾಸಿಗರು ದುಬೈನ ಸೌಂದರ್ಯಗಳನ್ನುಕಣ್ತುಂಬಿಕೊಳ್ಳಬಹುದು. ಪಾಸ್ ವಯಸ್ಕರಿಗೆ ಮತ್ತು ಮಕ್ಕಳಿಗೆ ಪ್ರತ್ಯೇಕ ದರದಲ್ಲಿರುತ್ತದೆ. ವಯಸ್ಕರರಿಗೆ 199 ಎಇಡಿಯಾದರೆ, ಮಕ್ಕಳಿಗೆ 169 ಎಇಡಿಯಾಗಿದೆ. ಮೊದಲ ಬಾರಿಗೆ ಭೇಟಿ ನೀಡುವ ಮತ್ತು ಮತ್ತೆ ಮತ್ತೆಬರುವ ಅಂತಾರಾಷ್ಟ್ರೀಯ ಅತಿಥಿಗಳಿಗೆ ವೈವಿಧ್ಯಮಯವಾದ ಅನುಭವಗಳನ್ನು ನಾವು ನೀಡುತ್ತಿದ್ದೇವೆ. ವ್ಯಕ್ತಿಗತವಾದಅನುಭವಗಳನ್ನು ಹೊಂದಬೇಕೆಂದು ಬಯಸುವ ಪ್ರವಾಸಿಗರಿಗೆ ಅಂಥ ಅನುಭವಗಳನ್ನು ನೀಡಲು ನಾವು ಬದ್ಧರಾಗಿದ್ದೇವೆ.ಈ ದಿಸೆಯಲ್ಲಿ ನಮ್ಮ ಪಾಲುದಾರರು, ಅತ್ಯಲ್ಪ ಅವಧಿಯಲ್ಲಿ ಈ ಅನುಭವಗಳನ್ನು ಪ್ರವಾಸಿಗರಿಗೆ ನೀಡಲಿದ್ದಾರೆಎಂದು ದುಬೈ ಕಾರ್ಪೊರೇಷನ್ ಫಾರ್ ಟೂರಿಸಂ ಅಂಡ್ ಕಾಮರ್ಸ್ ಮಾರ್ಕೆಟಿಂಗ್ ಹೇಳಿದೆ.

ಶೇ.60 ರವರೆಗೆ ಉಳಿತಾಯ ಮಾಡಬಹುದಾಗಿದೆ ದುಬೈಗೆ ತಲುಪುವ ಮುನ್ನ ಸ್ಟಾಪ್ಓವರ್ಪಾಸ್ ಅನ್ನು ಖರೀದಿಸುವ ಪ್ರವಾಸಿಗರಿಗೆ ರೆಗ್ಯುಲರ್ ಕಂಬೈನ್ಡ್ ಎಂಟ್ರೆನ್ಸ್ ದರದಲ್ಲಿ ಶೇ.60 ರವರೆಗೆಉಳಿತಾಯ ಮಾಡಬಹುದಾಗಿದೆ. ಈ ಪಾಸ್ ದುಬೈನಲ್ಲಿ ಅತ್ಯಂತ ಮೌಲ್ಯವರ್ಧಿತ ಆಫರ್ಗಳನ್ನು ನೀಡಲಿದ್ದು,ಪ್ರವಾಸಿಗರು ಬುಜ್ ಖಲೀಫಾ (ಮೇಲೆ), ದುಬೈ ಫೌಂಟೇನ್ ಶೋ ಮತ್ತು ಲೇಕ್ ರೈಡ್, ಸಿಟಿ ಸೈಟ್ಸೀಯಿಂಗ್ಹಾಪ್ ಆನ್ ಹಾಪ್ ಆಫ್ ಬಸ್, ಮರೀನಾ ಧೋ ಕ್ರ್ಯೂಸ್ ಡಿನ್ನರ್, ದುಬೈ ಅಕ್ವೇರಿಯಂ & ಅಂಡರ್ವಾಟರ್ಝೂ ಮತ್ತು ದುಬೈ ಫ್ರೇಂಗಳನ್ನು ವೀಕ್ಷಿಸಬಹುದಾಗಿದೆ.

ಅಹ್ಮದ್ ಅಲ್ ಖಾಜಾ ಅವರು ಮಾತನಾಡಿ ದುಬೈ ಫೆಸ್ಟಿವಲ್ಸ್ ಅಂಡ್ ರೀಟೇಲ್ ಎಸ್ಟಾಬ್ಲಿಷ್ಮೆಂಟ್(ಡಿಎಫ್ಆರ್ಇ)ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಹ್ಮದ್ ಅಲ್ ಖಾಜಾ ಅವರು ಮಾತನಾಡಿ, “ದುಬೈ ಸ್ಟಾಪ್ಓವರ್ಪಾಸ್ ಅನ್ನು ಪರಿಚಯಿಸುವುದರೊಂದಿಗೆ ಪ್ರವಾಸಿಗರಿಗೆ ಅತ್ಯುತ್ತಮವಾದ ರೀತಿಯಲ್ಲಿ ನಗರದ ಪ್ರವಾಸಿತಾಣಗಳಆಕರ್ಷಣೆಯ ಅನುಭವವನ್ನು ವಿಶೇಷವಾಗಿ ಪಡೆಯುವಂತಹ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ. 36 ಗಂಟೆಗಳಲ್ಲಿಎಮಿರೇಟ್ಸ್ನ ಲೀಸರ್ ಪ್ರಪೋಶನ್ ಅನ್ನು ಅನುಭವಿಸಬಹುದಾಗಿದೆ. ನಗರದಾದ್ಯಂತ ಅಭಿವೃದ್ಧಿಗೆ ಭಾರೀ ಮಟ್ಟದಲ್ಲಿಹೂಡಿಕೆ ಮಾಡಿರುವ ನಮ್ಮ ಪಾಲುದಾರರಿಗೆ ಬೆಂಬಲವಾಗಿ ನಿಲ್ಲುತ್ತೇವೆ, ಇಡೀ ವಿಶ್ವಕ್ಕೆ ಮಾದರಿಯಾಗಬಲ್ಲಂತಹಪ್ರವಾಸಿ ತಾಣವನ್ನಾಗಿ ನಾವು ದುಬೈ ಅನ್ನು ಅಭಿವೃದ್ಧಿಪಡಿಸುತ್ತೇವೆ” ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…
ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…