News

ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ಸಿನಿಮಾ

ನಾಯಕ ನಟ ದುನಿಯಾ ವಿಜಿ ರವರಿಗೆ ಕೋಲಾರದಲ್ಲಿ ಭರ್ಜರಿ ಸ್ವಾಗತ

333

ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್‌ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ ಬಸ್ ನಿಲ್ದಾಣ ವೃತ್ತಕ್ಕೆ ಕರೆ ತರಲಾಯಿತು.

ಅಲ್ಲಿ ಅಭಿಮಾನಿಗಳು ಮತ್ತು ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮುಖ್ಯಸ್ಥ ರಮೇಶ್‌ಯಾದವ್ ಇತರರು ಬೃಹತ್ ಆಪಲ್ ಮತ್ತು ಹೂವಿನ ಹಾರವನ್ನು ಕ್ರೇನ್ ಮೂಲಕ ಹಾಕಿ ಸ್ವಾಗತಿಸಿದರು. ಅಲಂಕೃತ ತೆರೆದ ಜೀಪಿನಲ್ಲಿ ಬಸ್ ನಿಲ್ದಾಣ ವೃತ್ತದಿಂದ ಭವಾನಿ ಚಿತ್ರ ಮಂದಿರದವರೆವಿಗೂ ಅವರನ್ನು ಹೂಗಳ ಸುರಿಮಳೆಯ ಸ್ವಾಗತ, ಡಿಜೆ ಮತ್ತು ಬ್ಯಾಂಡ್‌ಸೆಟ್ ಸಾರಥ್ಯದಲ್ಲಿ ಕಿಕ್ಕಿರಿದು ನೆರೆದಿದ್ದ ಅಭಿಮಾನಿಗಳು ಕರೆ ತಂದರು.

ಚಿತ್ರ ಮಂದಿರದಲ್ಲಿಯೂ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳತ್ತ ಕೈಬೀಸುತ್ತಾ ಚಿತ್ರದ ತಂಡ ಚಿತ್ರಮಂದಿರವನ್ನು ಪ್ರವೇಶಿಸಿತು. ಚಿತ್ರಮಂದಿರದಲ್ಲಿ ರಮೇಶ್‌ಯಾದವ್ ತಂಡವು ಅವರಿಗೆ ಆತ್ಮೀಯ ಸ್ವಾಗತಕೋರಿ ಕೇಕ್ ಕತ್ತರಿಸಿ, ಆಗಮಿಸಿದ್ದ ಚಿತ್ರ ತಂಡದ ಸದಸ್ಯರಿಗೆ ಸನ್ಮಾನ ಮಾಡಿದರು.

ಕೆಲ ಹೊತ್ತು ಅಭಿಮಾನಿಗಳೊಂದಿಗೆ ವೀರಸಿಂಹಾರೆಡ್ಡಿ ಚಿತ್ರ ವೀಕ್ಷಿಸಿದ ದುನಿಯಾವಿಜಿ ಮತ್ತು ಚಿತ್ರದ ತಂಡ ಕೋಲಾರದ ಅಭಿಮಾನಿಗಳ ಸ್ವಾಗತಕ್ಕೆ ಮನಸೋತರು. ನಿರ್ದೇಶಕ ಗೋಪಿಚಂದ್ ಮಲಿನೇನಿಮಾತನಾಡಿ, ಮುಂದಿನ ದಿನಗಳಲ್ಲಿ ಬಾಲಕೃಷ್ಣರನ್ನು ಕೋಲಾರಕ್ಕೆ ಕರೆ ತರುವುದಾಗಿ ಘೋಷಿಸಿದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ