ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ ಮೇಲೆ ಪರಿಣಾಮ ಕೂಡ ಬೀರುವುದು. ಅದೇ ರೀತಿಯಾಗಿ ಊಟವಾದ ಬಳಿಕ ನೀವು ಮಾಡಲೇಬಾರದ ಕೆಲವೊಂದು ಕೆಲಸಗಳ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಇದನ್ನು ನೀವು ತಿಳಿದುಕೊಳ್ಳಿ.

ತಂಪಾದ ನೀರು ಕುಡಿಯಬೇಡಿ : ನಮ್ಮ ದೇಹದಲ್ಲಿ ಶೇ. 70ರಷ್ಟು ನೀರಿನಾಂಶವಿದೆ ಎಂದು ಹೇಳಲಾಗುತ್ತದೆ. ಇದರಿಂದ ನೀರು ನಮ್ಮದೇಹಕ್ಕೆ ಅತ್ಯಗತ್ಯವಾಗಿರುವುದು. ಜೀರ್ಣಕ್ರಿಯೆಗೂ ನೀರು ತುಂಬಾ ಸಹಕಾರಿ. ಆದರೆ ಊಟವಾದ ಕೂಡಲೇ ತಂಪಾದ ನೀರು ಕುಡಿಯಬಾರದು. ಯಾಕೆಂದರೆ ತಂಪಾದ ನೀರು ಆಹಾರವನ್ನು ಅಂಟಿಕೊಳ್ಳುವಂತೆ ಮಾಡುವುದು ಮತ್ತು ಇದರಿಂದ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು. ಜೀರ್ಣಕ್ರಿಯೆ ಬೆಂಕಿ ಎಂದು ಭಾವಿಸಿದರೆ, ತಂಪು ನೀರು ಶಾಮಕದಂತೆ!

ನಿದ್ರಿಸುವುದು : ಮಧ್ಯಾಹ್ನ ಊಟ ಮಾಡಿದ ಬಳಿಕ ಸ್ವಲ್ಪ ನಿದ್ರೆ ಮಾಡಬೇಕು ಎಂದು ಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇ ಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆ ಹಾಗೆ ಇರುವುದು. ಇದರಿಂದ ನೀವು ನಿದ್ರೆಯಿಂದ ಎದ್ದ ಬಳಿಕವೂ ಹೊಟ್ಟೆ ಭಾರವಾದಂತೆ ಆಗುವುದು.
ಧೂಮಪಾನ : ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ನಮಗೆಲ್ಲರಿಗೂ ತಿಳಿದಿರುವ ವಿಚಾರ. ಆದರೆ ಕೆಲವರಿಗೆ ಕೆಲವರಿಗೆ ಊಟವಾದ ಕೂಡಲೇ ಧಂ ಎಳೆಯಲೇ ಬೇಕು. ಇಲ್ಲದೆ ಇದ್ದರೆ ಅವರಿಗೆ ಸರಿಯಾಗಿ ಊಟ ಮಾಡಿದ ಹಾಗೆ ಆಗುವುದೇ ಇಲ್ಲ. ಊಟವಾದ ತಕ್ಷಣ ಧೂಮಪಾನ ಮಾಡುವುದು ನೀವು ಒಮ್ಮೆಲೇ ಹತ್ತು ಸಿಗರೇಟ್ ಸೇದಿದಂತೆ. ನೀವು ಇನ್ನು ಮುಂದೆ ಧೂಮಪಾನ ಮಾಡಲೇಬಾರದು.

ಸ್ನಾನ ಮಾಡಬೇಡಿ : ಊಟವಾದ ಬಳಿಕ ಸ್ನಾನ ಮಾಡುವುದರಿಂದ ಜೀರ್ಣಕ್ರಿಯೆಯು ವಿಳಂಬವಾಗುವುದು. ಹೊಟ್ಟೆಯ ಸುತ್ತಲಿನ ರಕ್ತವು ಜೀರ್ಣಕ್ರಿಯೆಗೆ ನೆರವಾಗುವ ಬದಲು ದೇಹದ ಬೇರೆ ಭಾಗಗಳಿಗೆ ತೆರಳುವುದು. ಇದರಿಂದ ಊಟವಾದ ಬಳಿಕ ಸ್ನಾನ ಮಾಡಬಾರದು. ನಾವು ಊಟ ಮಾಡುವ ವೇಳೆ ರಕ್ತವು ಹೊಟ್ಟೆಯ ಭಾಗಕ್ಕೆ ಹರಿಯಲು ಆರಂಭವಾಗುವುದು ಮತ್ತು ಜೀರ್ಣಕ್ರಿಯೆಗೆ ನೆರವಾಗುವುದು. ಆದರೆ ಊಟವಾದ ತಕ್ಷಣ ನಾವು ಸ್ನಾನ ಮಾಡಿದರೆ ಆಗ ಜೀರ್ಣಕ್ರಿಯೆ ಪ್ರಕ್ರಿಯೆ ಮೇಲೆ ಪರಿಣಾಮ ಬೀರುವುದು. ಇದು ದೇಹದ ತಾಪಮಾನ ತಗ್ಗಿಸುವುದು. ರಕ್ತವು ಕೈ, ಕಾಲು ಚರ್ಮದ ಭಾಗಕ್ಕೆ ತೆರಳಿ ದೇಹದ ಉಷ್ಣತೆ ಕಾಪಾಡಿಕೊಳ್ಳಲು ನೆರವಾಗುವುದು. ಇದರಿಂದ ಊಟವಾದ ತಕ್ಷಣವೇ ಸ್ನಾನ ಮಾಡಲೇಬಾರದು.
ಊಟವಾದ ತಕ್ಷಣ ಓಡುವುದು!: ಊಟವಾದ ತಕ್ಷಣವೇ ಓಡುವುದು ಸೆಳೆತ ಮತ್ತು ಜೀರ್ಣಕ್ರಿಯೆ ವ್ಯವಸ್ಥೆ ಮೇಲೆ ಪರಿಣಾಮ ಬೀರಬಹುದು. ಇದರಿಂದ ನಿಮ್ಮ ದೇಹದಲ್ಲಿ ಜಡತ್ವ ಉಂಟಾಗಬಹುದು.

ಅತಿಯಾಗಿ ನೀರು ಕುಡಿಯುವುದು : ಊಟವಾದ ತಕ್ಷಣ ಅತಿಯಾಗಿ ನೀರು ಕುಡಿದರೆ ಅದರಿಂದ ಜೀರ್ಣಕ್ರಿಯೆ ರಸದ ಮೇಲೆ ಪರಿಣಾಮ ಬೀರುವುದು ಮತ್ತು ಇನ್ಸುಲಿನ್ ಮಟ್ಟವನ್ನು ಅತಿಯಾಗಿ ಹೆಚ್ಚಿಸುವುದು.
ಹೊಟ್ಟೆ ತುಂಬ ಊಟ ಮಾಡಿ ಈಜಬೇಡಿ : ಊಟವಾದ ಕೂಡಲೇ ನೀವು ಈಜಲು ಹೋಗಲೇಬಾರದು. ಊಟವಾದ ತಕ್ಷಣವೇ ನೀವು ನೀರಿಗೆ ಜಿಗಿದರೆ ಆಗ ಸೆಳೆತ ಕಾಣಿಸಬಹುದು ಮತ್ತು ನೀರಿನಲ್ಲಿ ಎಳೆದುಕೊಂಡು ಹೋಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.
ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…
ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…
ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…
ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್ಶಿಪ್ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್ನ ಜಪಾನ್ನ ನಜೊಮಿ ಒಕುಹರಾ ವಿರುದ್ಧ21-7, 21-7ರ…
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…