ಸುದ್ದಿ

ಇಲಿಗಳನ್ನು ತಿಂದು ಜೀವನವನ್ನು ನಡೆಸುತ್ತಿದ್ದರೆ ಇಲ್ಲಿನ ಜನರು …ಕಾರಣ..?

76

ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ!

ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು 300 ಕುಟುಂಬಗಳು ಈಗ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ,”ನಮ್ಮ ಮನೆ ಪ್ರವಾಹದಲ್ಲಿ ಕೊಚ್ಚಿ ಹೋದ ಕಾರಣ ಇರಲು ಸೂರಿಲ್ಲ. ತಿನ್ನಲು ಸೂಕ್ತ ಆಹಾರ ಸಿಗುತ್ತಿಲ್ಲ. ಸರ್ಕಾರದಿಂದ ನಮಗೆ ಯಾವುದೇ ಸೌಲಭ್ಯಗಳೂ ದೊರೆತಿಲ್ಲ. ಹಾಗಾಗಿ ಇಲಿಗಳನ್ನು ಹಿಡಿದು ತಿನ್ನುವಂತಹ ದುಸ್ಥಿತಿ ಎದುರಾಗಿದೆ” ಎಂದು ಸ್ಥಳೀಯ ತಲ್ಲಾ ಮುರ್ಮೂರ್ ಎಎನ್ಐಗೆ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಡ್ವಾ ಕ್ಷೇತ್ರದ ಬ್ಲಾಕ್ ಅಭಿವೃದ್ಧಿ ಅಧಿಕಾರಿ ರಾಕೇಶ್ ಕುಮಾರ್ ಗುಪ್ತಾ, ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಗ್ರಾಮಸ್ಥರ ಸ್ಥಿತಿಯ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಅವರು ಇಲಿಗಳನ್ನು ತಿನ್ನುತ್ತಿದ್ದರೂ ಸಹ, ಬುಡಕಟ್ಟು ಜನಾಂಗದವರಾದ್ದರಿಂದ ಅದನ್ನು ತಿನ್ನುತ್ತಿರಬಹುದು ಎಂದಿದ್ದಾರೆ.ಏತನ್ಮಧ್ಯೆ, ಕಾಂಗ್ರೆಸ್ ಶಾಸಕ ಶಕೀಲ್ ಅಹ್ಮದ್ ಖಾನ್ ಅವರು ಈ ಗ್ರಾಮದ ಜನರ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದು, ಗ್ರಾಮಸ್ಥರಿಗೆ ನೆರವು ನೀಡುವಂತೆ ಕೋರಿದ್ದಾರೆ.

ಕಳೆದ ಕೆಲ ದಿನಗಳಿಂದ ಬಿಹಾರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳ ನೀರಿನ ಮಟ್ಟ ಏರುತ್ತಿರುವುದರಿಂದ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಭಾರಿ ಮಳೆಯಿಂದಾಗಿ ಬಿಹಾರದ ಅರೇರಿಯಾ, ದರ್ಭಂಗಾ ಮತ್ತು ಮಧುಬನಿ ಜಿಲ್ಲೆಗಳ ಅನೇಕ ಗ್ರಾಮಗಳು ಪ್ರವಾಹಕ್ಕೆ ಸಿಲುಕಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರಿ ಬಸ್‌ಗಳಲ್ಲಿ ಇಂದಿನಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸ್ಟಾರ್ಟ್ …!

    ‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್‌(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…

  • ಸರ್ಕಾರದ ಯೋಜನೆಗಳು

    ಈಗ ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನಭಾಗ್ಯ ಮಾತ್ರವಲ್ಲ ಬಸ್, ರೈಲು, ವಿಮಾನ ಟಿಕೆಟ್ ಸಿಗುತ್ತೆ…!ತಿಳಿಯಲು ಇದನ್ನು ಓದಿ..

    ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.

  • ಸುದ್ದಿ

    ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದ ಜಿಯೋ..!

    ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್‌ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್‌ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್‌ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…

  • ಸುದ್ದಿ

    ಶಿಯೋಮಿ ಕಂಪೆನಿಯಿಂದ ಅದ್ಭುತ ಸ್ಮಾರ್ಟ್​ಫೋನ್ ಬಿಡುಗಡೆ 108 MP ಕ್ಯಾಮೆರಾ, 1 TB ಸ್ಟೋರೇಜ್,12 ಜಿಬಿ RAM…!

    ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್​ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್​ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್​ಫೋನ್​ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್​ನ ಈ ನೂತನ ಸ್ಮಾರ್ಟ್‌ಫೋನ್​ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್​ಗೆ ನೀಡಲಾಗಿರುವ  ಕ್ಯಾಮೆರಾ. ಹೌದು, ಮಿ ಮಿಕ್ಸ್​ 4ನಲ್ಲಿ 108 ಮೆಗಾಪಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್‌ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…

  • ಗ್ಯಾಜೆಟ್

    ನಿಮ್ಮ ಆಂಡ್ರಾಯ್ಡ್ ಮೊಬೈಲ್ ನ ಈ 8 ಸೀಕ್ರೆಟ್ ಆಪ್ಷನ್ಸ್ ಗಳು ನಿಮ್ಗೆ ಗೊತ್ತಿಲ್ಲಾ!ಗೊತ್ತಾಗ್ಬೇಕಂದ್ರೆ ಈ ಲೇಖನಿ ಓದಿ…

    ಬಹುಶಃ ಈಗಂತೂ ಸ್ಮಾರ್ಟ್ಫೋನ್ ಇರದೆ ಇರುವ ವ್ಯಕ್ತಿಯು ಸಿಗುವುದು ತುಂಬಾ ವಿರಳ. ಎಲ್ಲರ ಪಾಕೆಟ್ನಲ್ಲಿ ಸ್ಮಾರ್ಟ್ಫೋನ್ ಇದ್ದೇ ಇರುತ್ತದೆ. ಈ ಸತ್ಯದ ಹೊರತಾಗಿಯೂ, ನಂಬಲಾಗದ ವಿಷಯೇನಂದರೆ, ಆಂಡ್ರಾಯ್ಡ್ ಫೋನ್ ನ ಎಷ್ಟೋ ವಿಶಿಷ್ಟ ಆಪ್ಷನ್ಸ್ ಗಳು ಎಷ್ಟೋ ಬಳಕೆದಾರರಿಗೆ ಗೊತ್ತಿಲ್ಲಾ ಎನ್ನುವುದೇ ಸೋಜಿಗದ ವಿಷಯ.

  • Law

    ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ 10 ವರ್ಷ ಜೈಲು ಶಿಕ್ಷೆ..!

    ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.