inspirational

ವಾಟ್ಸಪ್ ಗ್ರೂಪ್ ಸ್ನೇಹಿತರಿಂದ ನೆರೆ ಸಂತ್ರಸ್ತ ಪ್ರದೇಶದ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ…!

65

ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್‌ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ.

ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್ ಸೇಲ್ ದರದಲ್ಲಿ ವಿತರಣಾ ವಸ್ತುಗಳನ್ನು ಖರೀದಿಸಿದ್ದಾರೆ. ನಂತರ ಒಂದು ತಂಡ ನೆರೆ ಪೀಡಿತ ಜಿಲ್ಲೆಗೆ ತಲುಪಿದ್ದಾರೆ. ಮೊದಲಿಗೆ ಹಾವೇರಿಯ ಕೂಡಲ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿದ್ದು, ಸೋಮುವಾರ ಬೆಳಗಾವಿ ಜಿಲ್ಲೆಯಲ್ಲಿ ವಿತರಣೆ ಮಾಡುತ್ತೇವೆ ಎಂದು ಆಯೋಜಕರು ಮಾಹಿತಿನೀಡಿದ್ದಾರೆ.

ಒಂದು ವಿದ್ಯಾರ್ಥಿಗೆ ಒಂದು ಬ್ಯಾಗ್, ನೀರಿನಬಾಟೆಲ್ ಮತ್ತು ಜಾಮೆಟ್ರಿ ಬಾಕ್ಸ್ ಎಂಟು ನೂರು ರೂಪಾಯಿಯಂತೆ ಒಟ್ಟು ಮುನ್ನೂರು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗುತ್ತಿದೆ. ಪ್ರೈಂ ಕ್ಲಬ್ ಮತ್ತು ಗೆಳೆಯರ ಸಂಯುಕ್ತ ಆಶ್ರಯದಲ್ಲಿ ಮಾಡುತ್ತಿರುವ ಕೆಲಸಕ್ಕೆ ಶಾಲಾ ಮುಖ್ಯ ಶಿಕ್ಷಕ ಶಿವಪ್ಪ ಕೂಡ ಸಂತಸ ವ್ಯಕ್ತಪಡಿಸಿದ್ದು, ಯುವಕರ ತಂಡದ ಸಮಾಜ ಸೇವೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಹಾನಗಲ್ ತಾಲೂಕಿನ ಕೂಡಲ ಗ್ರಾಮದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡಲಾಯಿತು ಸರ್ಕಾರಿ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಶಿವಪ್ಪ, ಪ್ರೈಂ ಕ್ಲಬ್ ಸದಸ್ಯರಾದ ಅಶೋಕ್ ಗೌಡ, ಜಾಯ್ಬ್ರಿಗಾಂಝ, ಮೋಹನ್ ಮತ್ತು ಮಹಮದ್ಶಫಿ ಸೇರಿದಂತೆ ಇತರರು ಹಾಜರಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಜಿಯೋ ಗ್ರಾಹಕರೇ ಎಚ್ಚರ..!ಇನ್ಮೇಲೆ ಈ ಆಫರ್ ಸಿಗಲ್ಲ!ಯಾಮಾರಿದ್ರೆ ನಿಮ್ಮ ಜೋಬಿಗೆ ಬೀಳುತ್ತೆ ಕತ್ತರಿ..!

    ಸದ್ಯ ಭಾರತದಲ್ಲಿ ಅನ್ ಲಿಮಿಟೆಡ್ ಕಾಲಿಂಗ್ ಮತ್ತು ಅನ್ ಲಿಮಿಟೆಡ್ ಡಾಟಾ ಆಫರ್ ನೀಡವ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು ರಿಲಯನ್ಸ್ ಜಿಯೋ ಸಂಸ್ಥೆ. ತನ್ನ ಜನಪ್ರಿಯ ಯೋಜನೆಯಾದ ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗೆ ಬ್ರೇಕ್ ಹಾಕಿ, ಇನ್ಮೇಲೆ ಜಿಯೋ ಫ್ರೀ ವಾಯ್ಸ್ ಕಾಲ್ ಅನ್ನು

  • ಸುದ್ದಿ

    ‘ನಿಜವಾದ ಗಂಡಸು ಎಂದು ಪ್ರೂವ್ ಮಾಡಲು ಮದ್ಯ ಬೇಕಿಲ್ಲ’ : ಕಿಚ್ಚ ಸುದೀಪ್ ಟಾಂಗ್…..!

    ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್​​ ಮೀಡಿಯಾದಲ್ಲಿ ಸಖತ್​ ಆ್ಯಕ್ಟಿವ್​​. ಅಲ್ಲಿ ಫ್ಯಾನ್ಸ್​​ ಜೊತೆ ನಿರಂತ ಟಚ್​​ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್​​​ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…

  • ಉಪಯುಕ್ತ ಮಾಹಿತಿ

    ಕಲ್ಲಂಗಡಿ ಹಣ್ಣಿನ ಬೀಜಗಳನ್ನು ಬಿಸಾಡುವ ಮುಂಚೆ ಈ ಲೇಖನ ಓದಿ

    ಅತಿ ಹೆಚ್ಚಿನ ನೀರಿನ ಅಂಶವಿರುವ ಹಣ್ಣು ಎಂದರೆ ಕಲ್ಲಂಗಡಿ. ಅಲ್ಲದೆ ಇದರಲ್ಲಿ ವಿಟಮಿನ್‌ ಎ, ಬಿ1, ಬಿ6, ವಿಟಮಿನ್‌ ಸಿ, ಪೊಟ್ಯಾಶಿಯಂ ಹಾಗೂ ಮೆಗ್ನೇಶಿಯಂ ಇವೆ. ಸಾಮಾನ್ಯವಾಗಿ ಎಲ್ಲರೂ ಹಣ್ಣಿನ ತಿರುಳನ್ನು ಸೇವಿಸಿ ಬೀಜಗಳನ್ನು ಎಸೆಯುತ್ತಾರೆ. ಆದರೆ ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿಯೂ ಆರೋಗ್ಯಕರ ಅಂಶಗಳಿವೆ. * ಕಲ್ಲಂಗಡಿ ಬೀಜಗಳಲ್ಲಿರುವ ಉತ್ತಮ ಪ್ರಮಾಣದ ಮೆಗ್ನೇಶಿಯಂ ಹೃದಯವು ಸಹಜವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ. *ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ವೃದ್ಧಾಪ್ಯವನ್ನು ನಿಧಾನವಾಗಿಸುತ್ತದೆ. *ಮುಖದ ಮೇಲೆ ಮೂಡುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ…

  • ಸುದ್ದಿ

    ಬಿಹಾರದ ರಣಬಿಸಿಲಿಗೆ 117 ಜನ ಬಲಿ- ಗಯಾದಲ್ಲಿ ಸೆಕ್ಷನ್ 144 ಜಾರಿ……!

    ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್‍ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…

  • ಉಪಯುಕ್ತ ಮಾಹಿತಿ

    ATM ಕಾರ್ಡ್ ಇದ್ದವರಿಗೆ ಬಿಗ್ಗ್ ಗಿಫ್ಟ್..!ತಿಳಿಯಲು ಈ ಲೇಖನ ಓದಿ..ಮತ್ತು ಮರೆಯದೇ ಶೇರ್ ಮಾಡಿ..

    ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ.. ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು.. ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.. ಯಾವ ಯಾವ ಕಾರ್ಡ್ ಗಳಿಗೆ ಎಷ್ಟು ವಿಮೆ…

  • inspirational, ಸುದ್ದಿ

    ದಾನ ಶೂರ ವೀರ ಕರ್ಣ ಸಾಯುವ ಮುನ್ನ ಕೊನೆಯ ಆಸೆಯನ್ನು ಕೇಳಿದಾಗ ಕೃಷ್ಣನೇ ಬೆಚ್ಚಿಬೆರಗಾದ, ಅಲ್ಲಿ ಏನು ನಡೆಯಿತು ಗೊತ್ತಾ?

    ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…