ಅನೇಕರು ನಿಯಮಿತ ಆದಾಯ ಗಳಿಸುವ ದಾರಿ ಹುಡುಕುತ್ತಾರೆ. ನೌಕರಿ ಬಿಟ್ಟು ಸ್ವಂತ ಬ್ಯುಸಿನೆಸ್ ಶುರು ಮಾಡಿ, ಕೈತುಂಬ ಲಾಭ ಗಳಿಸುವ ಬ್ಯುಸಿನೆಸ್ ಹುಡುಕಾಟ ನಡೆಸುತ್ತಾರೆ. ಅಂತವರಿಗೆ ಮೊಟ್ಟೆ ಮಾರಾಟಕ್ಕಾಗಿ ಕೋಳಿ ಸಾಕಣಿಕೆ ಬೆಸ್ಟ್. 1,500 ಕೋಳಿಗಳನ್ನು ಸಾಕಿ ಸಣ್ಣ ಮಟ್ಟದಲ್ಲಿಯೂ ನೀವು ಮೊಟ್ಟೆ ಮಾರಾಟ ಶುರು ಮಾಡಬಹುದು.
ಈ ಬ್ಯುಸಿನೆಸ್ ಶುರು ಮಾಡಲು ನಿಮಗೆ 7-9 ಲಕ್ಷ ರೂಪಾಯಿಯಷ್ಟು ಖರ್ಚು ಬರುತ್ತದೆ. ಒಮ್ಮೆ ಕ್ಲಿಕ್ ಆದ್ರೆ ಪ್ರತಿ ತಿಂಗಳು ಒಂದು ಲಕ್ಷ ರೂಪಾಯಿ ಆದಾಯ ಪಡೆಯಬಹುದು. ಉತ್ತಮ ತರಬೇತಿ ಪಡೆದು ಈ ಕೃಷಿ ಶುರುಮಾಡುವುದು ಒಳ್ಳೆಯದು.
ಸ್ಥಳ, ಪಂಜರ, ಸಲಕರಣೆಗೆ ಸುಮಾರು ಐದರಿಂದ ಆರು ಲಕ್ಷ ರೂಪಾಯಿ ಖರ್ಚಾಗುತ್ತದೆ. ನೀವು ಕೋಳಿ ಖರೀದಿಗೆ ಸುಮಾರು 50 ಸಾವಿರ ರೂಪಾಯಿ ಖರ್ಚು ಮಾಡಬೇಕಾಗುತ್ತದೆ. 1500 ಕೋಳಿಯನ್ನು ನೀವು ಖರೀದಿ ಮಾಡಬೇಕು. ನಿಮ್ಮ ಪ್ಲಾನ್ ಗಿಂತ ಶೇಕಡಾ 10 ರಷ್ಟು ಹೆಚ್ಚುವರಿ ಕೋಳಿಗಳನ್ನು ಖರೀದಿ ಮಾಡಿ. ಅನಾರೋಗ್ಯದಿಂದ ಕೋಳಿಗಳು ಸಾವನ್ನಪ್ಪುವ ಸಾಧ್ಯತೆ ಹೆಚ್ಚಿರುತ್ತದೆ.
20 ವಾರಗಳ ಕಾಲ ಕೋಳಿಗೆ ಆಹಾರದ ಖರ್ಚು ಸುಮಾರು ಒಂದರಿಂದ ಒಂದುವರೆ ಲಕ್ಷ ರೂಪಾಯಿ. ಕೋಳಿ ವರ್ಷಕ್ಕೆ ಸುಮಾರು 300 ಮೊಟ್ಟೆಗಳನ್ನು ನೀಡುತ್ತದೆ. 20 ವಾರಗಳ ನಂತ್ರ ಕೋಳಿ ಮೊಟ್ಟೆಯಿಡಲು ಶುರು ಮಾಡುತ್ತದೆ. 20 ವಾರಗಳ ನಂತ್ರ ಕೋಳಿ ಆಹಾರಕ್ಕೆ 3-4 ಲಕ್ಷ ರೂಪಾಯಿ ಖರ್ಚಾಗುತ್ತದೆ. 1500 ಕೋಳಿಗಳು ವರ್ಷಕ್ಕೆ 290 ಮೊಟ್ಟೆಯಂತೆ 4,35,000 ಮೊಟ್ಟೆ ನೀಡುತ್ತದೆ ಎಂದಿಟ್ಟುಕೊಳ್ಳಿ. ಒಂದು ಮೊಟ್ಟೆ 3.5 ರೂಪಾಯಿಗೆ ಮಾರಾಟವಾದ್ರೂ ವರ್ಷಕ್ಕೆ ಸುಮಾರು 14 ಲಕ್ಷ ರೂಪಾಯಿ ಗಳಿಕೆ ಮಾಡಬಹುದು.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…
ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…
ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.
ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…
ಬಾಯಿ ಹುಣ್ಣು ತುಂಬಾ ನೋವುಂಟು ಮಾಡುವುದು ಮಾತ್ರವಲ್ಲದೆ, ಆಹಾರ ಸೇವನೆಗೂ ಇದು ಅವಕಾಶ ನೀಡುವುದಿಲ್ಲ. ಇದು ಕೆಲವೊಮ್ಮೆ ಹಲವಾರು ದಿನಗಳ ಕಾಲ ಬಾಯಿಯಲ್ಲಿ ನೋವುಂಟು ಮಾಡುತ್ತ ಲಿರುತ್ತದೆ. ಇಂತಹ ಸಮಯದಲ್ಲಿ ಇದನ್ನು ನಿವಾರಣೆ ಮಾಡಲು ನೀವು ತುಂಬಾ ಶ್ರಮ ಪಟ್ಟಿರಬಹುದು. ಇದಕ್ಕೆ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ಅದು ತುಂಬಾ ಪರಿಣಾಮಕಾರಿ ಆಗಿ ಬಾಯಿಯ ಹುಣ್ಣು ನಿವಾರಣೆ ಮಾಡುತ್ತದೆ. ತೆಂಗಿನ ಎಣ್ಣೆ : ಉರಿಯೂತ ಶಮನಕಾರಿ, ಶಿಲೀಂಧ್ರ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿರುವ ತೆಂಗಿನ ಎಣ್ಣೆಯು…