ಸುದ್ದಿ

ಫೇಸ್ಬುಕ್ ಫೋಟೋ ನೋಡಿ ಲವ್ ಮಾಡಿದ…ಹುಡುಗಿಯನ್ನು ಭೇಟಿಯಾಗಲು ಹೋದಾಗ..!

849

ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ.

ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಹುಡುಗಿಗಿಂತ ಒಂದು ಗಂಟೆ ಮೊದಲೇ ಬಂದ ಹುಡುಗ, ಪ್ರಿಯತಮೆಯನ್ನು  ನೋಡುವ ಕಾತರದಲ್ಲಿದ್ದ.

ಕೈನಲ್ಲಿ ಹೂ ಹಿಡಿದು ನಿಂತಿದ್ದವನ ಮುಂದೆ ಬಂದಿದ್ದು ಫೇಸ್ಬುಕ್ ನಲ್ಲಿದ್ದ ಹುಡುಗಿಯಲ್ಲ. ಹೊಸ ಹುಡುಗಿ ನೋಡ್ತಿದ್ದಂತೆ ದಂಗಾದ ಹುಡುಗ ಪಾರ್ಕ್ ನಿಂದ ಓಡಲು ಶುರುಮಾಡಿದ್ದಾನೆ. ಹುಡುಗಿ ಜನವರಿ 2 ರಂದು ಪೊಲೀಸ್ ಠಾಣೆಗೆ ಹೋಗಿ ಹುಡುಗನ ವಿರುದ್ಧ ದೂರು ನೀಡಿದ್ದಾಳೆ.

facebookruins

ಪೊಲೀಸರು ಹುಡುಗನನ್ನು ಕರೆಸಿ ವಿಚಾರಿಸಿದ್ದಾರೆ. ಫೇಸ್ಬುಕ್ ನಲ್ಲಿ ಸುಂದರ ಫೋಟೋ ಹಾಕಿ ಮೋಸ ಮಾಡಿದ ಹುಡುಗಿ ಶ್ರೀಮಂತೆ ಎಂದು ಸುಳ್ಳು ಹೇಳಿದ್ದಳು. ಆದ್ರೆ ಬೇರೆಯವರ ಮನೆಯಲ್ಲಿ ಕೆಲಸ ಮಾಡ್ತಾಳೆ. ಆಕೆ ಬೇಡ ಎಂದು ಹುಡುಗ ಹೇಳಿದ್ದಾನೆ. ಠಾಣೆಯಲ್ಲಿಯೇ ಇಬ್ಬರ ಮಧ್ಯೆ ಗಲಾಟೆ ಶುರುವಾಗಿದೆ. ಪೊಲೀಸರು ಇಬ್ಬರನ್ನು ಶಾಂತಗೊಳಿಸಿ ಮನೆಗೆ ಕಳುಹಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಸ್ಸಾಂನ 700 ಹಳ್ಳಿ ಜಲಾವೃತ-ಅಪಾಯದ ತುದಿ ಮೀರಿ ಹರಿಯುತ್ತಿರೋ ಬ್ರಹ್ಮಪುತ್ರ…..ಜನ ಜೀವನ ಅಸ್ತ ವ್ಯಸ್ತ….!

    ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ…

  • ಉದ್ಯೋಗ

    ರೈಲ್ವೆ ಐಸಿಎಫ್ ನೇಮಕಾತಿ 2020:

     ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್‌ಸೈಟ್ https://icf.indianrailways.gov.in/ ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್‌ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 ರ ಅಡಿಯಲ್ಲಿ ತರಬೇತಿ…

  • ಸ್ಪೂರ್ತಿ

    ರಿಕ್ಷಾ ಚಾಲಕನ ಮಗ ಐಎಎಸ್ ಅಧಿಕಾರಿಯಾಗಿದ್ದು ಹೇಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೀ-ಕಾಫಿ ಕುಡಿಯುವ ಮುಂಚೆ ನೀರು ಕುಡಿದರೆ ಏನಾಗುತ್ತೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು.  ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…

  • ಉಪಯುಕ್ತ ಮಾಹಿತಿ

    ಎಲ್ಲಾ ಡಾಕ್ಟರ್ಸ್ ಬಿಳಿ ಬಣ್ಣದ ಬಟ್ಟೆಯನ್ನೇ ಯಾಕೆ ಧರಿಸುತ್ತಾರೆ, ನೋಡಿ ಬಿಳಿ ಬಣ್ಣದ ರಹಸ್ಯ.

    ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…

  • ಸುದ್ದಿ

    ಇನ್ನು15 ದಿನ ಮಳೆ ಬರದಿದ್ದರೆ ಮಂಜುನಾಥಸ್ವಾಮಿಯ ಅಭಿಷೇಕಕ್ಕೂ ನೀರಿಲ್ಲ: ಡಾ. ವೀರೇಂದ್ರ ಹೆಗ್ಗಡೆ

    15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…