ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್ನಲ್ಲಿ ನಡೆದಿದೆ.

ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ.

ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಯತ್ತ ನೋಡಿದ್ದಾರೆ. ತುಂಬಾ ಹೊತ್ತಾದರೂ ಯಾರೂ ಮನೆಯಿಂದ ಹೊರಗೆ ಬಾರದ್ದನ್ನು ಮನಗಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ಧಾವಿಸಿದ್ದು, ಬಾಗಿಲನ್ನು ಮುರಿದು ಒಳಗೆ ತೆರಳಿದ್ದಾರೆ.

ಬಾಗಿಲು ತೆರೆದು ಒಳಗೆ ಹೋಗುತ್ತಿದ್ದಂತೆ ಚೂರು ಚೂರಾದ ವಸ್ತುಗಳು ಹಾಗೂ ಗೋಡೆ ಕಪ್ಪಾಗಿರುವುದನ್ನು ಕಂಡಿದ್ದಾರೆ. ಪ್ರಸನ್ನ, ಪತ್ನಿ ಅರ್ಚನಾ(32) ಹಾಗೂ ತಾಯಿ ರೇವತಿ(59) ಅವರ ದೇಹ ಮನೆಯ ವಿವಿಧ ಸ್ಥಳಗಳಲ್ಲಿ ಕಂಡಿವೆ. ಮನೆಯೊಳಗಿನ ರೆಫ್ರಿಜರೇಟರ್ ಸ್ಫೋಟಗೊಂಡಿದ್ದು, ರೆಫ್ರಿಜರೇಟರ್ನಿಂದ ಸ್ಫೋಟಗೊಂಡ ವಿಷಕಾರಿ ಅನಿಲದಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…
ಕೆಆರ್ಎಸ್ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ ಉಳಿಸಿಕೊಳ್ಳಬಹುದು ಎಂದು ರೈತರು ಖುಷಿಯಾಗಿದ್ದಾರೆ. ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೆಂಗಳೂರಿನಲ್ಲಿ ಸಚಿವ…
ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.