News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ರೆಫ್ರಿಜರೇಟರ್ ಸ್ಫೋಟಗೊಂಡು ಮೂವರ ದುರ್ಮರಣ…..!

1462

ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ.

ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ.

ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಯತ್ತ ನೋಡಿದ್ದಾರೆ. ತುಂಬಾ ಹೊತ್ತಾದರೂ ಯಾರೂ ಮನೆಯಿಂದ ಹೊರಗೆ ಬಾರದ್ದನ್ನು ಮನಗಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ಧಾವಿಸಿದ್ದು, ಬಾಗಿಲನ್ನು ಮುರಿದು ಒಳಗೆ ತೆರಳಿದ್ದಾರೆ.

ಬಾಗಿಲು ತೆರೆದು ಒಳಗೆ ಹೋಗುತ್ತಿದ್ದಂತೆ ಚೂರು ಚೂರಾದ ವಸ್ತುಗಳು ಹಾಗೂ ಗೋಡೆ ಕಪ್ಪಾಗಿರುವುದನ್ನು ಕಂಡಿದ್ದಾರೆ. ಪ್ರಸನ್ನ, ಪತ್ನಿ ಅರ್ಚನಾ(32) ಹಾಗೂ ತಾಯಿ ರೇವತಿ(59) ಅವರ ದೇಹ ಮನೆಯ ವಿವಿಧ ಸ್ಥಳಗಳಲ್ಲಿ ಕಂಡಿವೆ. ಮನೆಯೊಳಗಿನ ರೆಫ್ರಿಜರೇಟರ್ ಸ್ಫೋಟಗೊಂಡಿದ್ದು, ರೆಫ್ರಿಜರೇಟರ್‍ನಿಂದ ಸ್ಫೋಟಗೊಂಡ ವಿಷಕಾರಿ ಅನಿಲದಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡೇ ತಿರುಗಾಡುತ್ತಿದ್ದೀರಿ. ಹಾಗಾಗಿ ಯಾವುದೇ ಕಾರ್ಯ ಮಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ನಂತರ ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ…

  • ಸಿನಿಮಾ

    ಹುಚ್ಚ ವೆಂಕಟ್ ಸ್ವಂತ ಹೊಸ ಪಕ್ಷ ಶುರು ಮಾಡ್ತಾರಂತೆ ,ನನ್ಮಗಂದ್ ಪ್ರಧಾನಿ ಆಗ್ತಾರಂತೆ..!ತಿಳಿಯಲು ಈ ಲೇಖನ ಓದಿ..

    ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಯಾವ ಯಾವ ತಿಂಗಳಲ್ಲಿ, ಎಷ್ಟು ವರ್ಷದವರೆಗೆ ಲಸಿಕೆ ಹಾಕಿಸಬೇಕು.?ಇಲ್ಲಿದೆ ಸಂಪೂರ್ಣ ಮಾಹಿತಿ..ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…

  • ಸುದ್ದಿ

    ಪತ್ನಿ ಕೇಳಿದಳೆಂದು ಮಾವಿನ ಮರವೇರಿದ ಜನಾರ್ದನ ರೆಡ್ಡಿ…..!

    ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…

  • ಸುದ್ದಿ

    ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ: ತಿಂಗಳಿಗೆ 55 ಹೂಡಿಕೆ ಮಾಡಿ ಮಾಸಿಕ ಪಿಂಚಣಿ 3000 ಪಡೆಯುವುದು ಹೇಗೆ…?

    ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…

  • ಸುದ್ದಿ

    ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ ಸುಮಲತಾ ರವರು ಮಾಡಿರುವ ಈ ಗಂಭೀರ ಆರೋಪ..!

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…