ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ.

ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ ಯಜಮಾನ’, ‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ’ ಎಂಬ ಪಂಚಿಂಗ್ ಡೈಲಾಗ್ನಲ್ಲಿ ಹೊಡೆದಿದ್ದಾರೆ. ಈ ಚಿತ್ರದ ಚಿತ್ರೀಕರಣವನ್ನು ಮನಾಲಿ, ಕೋಲ್ಕತ್ತಾ, ಮೈಸೂರು, ಹೈದರಾಬಾದ್, ಬೆಂಗಳೂರು ಮತ್ತು ಇನ್ನಿತರ ಸ್ಥಳಗಳಲ್ಲಿ ನಡೆಸಲಾಗಿದೆ. ಗಣೇಶ್ ಅವರೊಡನೆ ಸಾನ್ವಿ, ಪಾರ್ವತಿ, ಪ್ರಯಾಗ ಮಾರ್ಟಿನ್, ಸುಧಾರಾಣಿ, ದೇವರಾಜ್, ಅಚ್ಯುತ್, ರಂಗಾಯಣ ರಘು ಮತ್ತು ಇನ್ನಿತರರು ಅಭಿನಯಿಸಿದ್ದಾರೆ.

ಹುಟ್ಟುಹಬ್ಬ ಏಕೆ ಆಚರಿಸುತ್ತಿಲ್ಲ : ಗಣೇಶ್ ತಮ್ಮ ಟ್ವಿಟ್ಟರಿನಲ್ಲಿ, ನನ್ನ ಅಚ್ಚು ಮೆಚ್ಚಿನ ಪ್ರೀತಿಯ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರಲ್ಲಿ ಒಂದು ಕಳಕಳಿಯ ವಿನಂತಿ. ಈ ಸಲ ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ. ಕಾರಣ ಕೆಲವು ತಿಂಗಳ ಹಿಂದೆಯಷ್ಟೇ ನನ್ನ ತಂದೆಯವರನ್ನು ಅಗಲಿದ್ದೇನೆ ಅಲ್ಲದೇ ಈ ಸಂದರ್ಭದಲ್ಲಿ ಮನೆಯಲ್ಲಿ ನಾವ್ಯಾರೂ ಇರುವುದಿಲ್ಲ. ಆದ್ದರಿಂದ ದೂರದ ಊರುಗಳಿಂದ ಬಂದು ಕಾಯುವ ಪ್ರಯತ್ನ ಮಾಡಬೇಡಿ. ನನ್ನ ಹುಟ್ಟುಹಬ್ಬ ಆಚರಿಸಲು ದೂರದಿಂದ ಹಲವು ಸಿದ್ಧತೆಗಳೊಂದಿಗೆ ಬಂದು ಶುಭಕೋರಿ ಸಂಭ್ರಮಿಸುವ ನಿಮ್ಮ ಪ್ರೀತಿಗೆ ನಾನೆಂದೂ ಋಣಿ.

ಆದ್ದರಿಂದ ಅಭಿಮಾನಿಗಳು ದಯವಿಟ್ಟು ಹಾರ, ಕೇಕ್, ಬ್ಯಾನರ್ ಗಳಿಗಾಗಿ ಹಣ ಖರ್ಚು ಮಾಡದೇ ಹತ್ತಿರದ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಸಹಾಯವಾಗುವಂತಹ ಕೆಲಸ ಮಾಡಿದರೆ ಅದೇ ನನಗೆ ನೀವು ಕೊಡುವ ಅತ್ಯುತ್ತಮ ಉಡುಗೊರೆ, ಇಷ್ಟು ಪ್ರೀತಿ, ಅಭಿಮಾನ ಹೊಂದಿರುವ ನೀವು ನನ್ನ ಕೋರಿಕೆಯನ್ನು ಅರ್ಥ ಮಾಡಿಕೊಂಡು, ಗಂಭೀರವಾಗಿ ಪರಿಗಣಿಸುವಿರಿ ಎಂಬ ಸಂಪೂರ್ಣ ವಿಶ್ವಾಸವಿದೆ. ದಯವಿಟ್ಟು ಸಹಕರಿಸಿ. ನಿಮ್ಮ ಪ್ರೀತಿ ಸದಾ ಇರಲಿ ಎಂದು ಗಣೇಶ್ ವಿನಂತಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ. ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…
‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ. ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು. ‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ…
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…
ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…
ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.
ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು…