News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

39ನೇ ವಸಂತಕ್ಕೆ ಕಾಲಿಟ್ಟ ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ ಗೀತಾ ಟೀಸರ್ ರಿಲೀಸ್…!

76

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ.

ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ ಯಜಮಾನ’, ‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ’ ಎಂಬ ಪಂಚಿಂಗ್ ಡೈಲಾಗ್‍ನಲ್ಲಿ ಹೊಡೆದಿದ್ದಾರೆ. ಈ ಚಿತ್ರದ ಚಿತ್ರೀಕರಣವನ್ನು ಮನಾಲಿ, ಕೋಲ್ಕತ್ತಾ, ಮೈಸೂರು, ಹೈದರಾಬಾದ್, ಬೆಂಗಳೂರು ಮತ್ತು ಇನ್ನಿತರ ಸ್ಥಳಗಳಲ್ಲಿ ನಡೆಸಲಾಗಿದೆ. ಗಣೇಶ್ ಅವರೊಡನೆ ಸಾನ್ವಿ, ಪಾರ್ವತಿ, ಪ್ರಯಾಗ ಮಾರ್ಟಿನ್, ಸುಧಾರಾಣಿ, ದೇವರಾಜ್, ಅಚ್ಯುತ್, ರಂಗಾಯಣ ರಘು ಮತ್ತು ಇನ್ನಿತರರು ಅಭಿನಯಿಸಿದ್ದಾರೆ.

ಹುಟ್ಟುಹಬ್ಬ ಏಕೆ ಆಚರಿಸುತ್ತಿಲ್ಲ : ಗಣೇಶ್ ತಮ್ಮ ಟ್ವಿಟ್ಟರಿನಲ್ಲಿ, ನನ್ನ ಅಚ್ಚು ಮೆಚ್ಚಿನ ಪ್ರೀತಿಯ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರಲ್ಲಿ ಒಂದು ಕಳಕಳಿಯ ವಿನಂತಿ. ಈ ಸಲ ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ. ಕಾರಣ ಕೆಲವು ತಿಂಗಳ ಹಿಂದೆಯಷ್ಟೇ ನನ್ನ ತಂದೆಯವರನ್ನು ಅಗಲಿದ್ದೇನೆ ಅಲ್ಲದೇ ಈ ಸಂದರ್ಭದಲ್ಲಿ ಮನೆಯಲ್ಲಿ ನಾವ್ಯಾರೂ ಇರುವುದಿಲ್ಲ. ಆದ್ದರಿಂದ ದೂರದ ಊರುಗಳಿಂದ ಬಂದು ಕಾಯುವ ಪ್ರಯತ್ನ ಮಾಡಬೇಡಿ. ನನ್ನ ಹುಟ್ಟುಹಬ್ಬ ಆಚರಿಸಲು ದೂರದಿಂದ ಹಲವು ಸಿದ್ಧತೆಗಳೊಂದಿಗೆ ಬಂದು ಶುಭಕೋರಿ ಸಂಭ್ರಮಿಸುವ ನಿಮ್ಮ ಪ್ರೀತಿಗೆ ನಾನೆಂದೂ ಋಣಿ.

ಆದ್ದರಿಂದ ಅಭಿಮಾನಿಗಳು ದಯವಿಟ್ಟು ಹಾರ, ಕೇಕ್, ಬ್ಯಾನರ್ ಗಳಿಗಾಗಿ ಹಣ ಖರ್ಚು ಮಾಡದೇ ಹತ್ತಿರದ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಸಹಾಯವಾಗುವಂತಹ ಕೆಲಸ ಮಾಡಿದರೆ ಅದೇ ನನಗೆ ನೀವು ಕೊಡುವ ಅತ್ಯುತ್ತಮ ಉಡುಗೊರೆ, ಇಷ್ಟು ಪ್ರೀತಿ, ಅಭಿಮಾನ ಹೊಂದಿರುವ ನೀವು ನನ್ನ ಕೋರಿಕೆಯನ್ನು ಅರ್ಥ ಮಾಡಿಕೊಂಡು, ಗಂಭೀರವಾಗಿ ಪರಿಗಣಿಸುವಿರಿ ಎಂಬ ಸಂಪೂರ್ಣ ವಿಶ್ವಾಸವಿದೆ. ದಯವಿಟ್ಟು ಸಹಕರಿಸಿ. ನಿಮ್ಮ ಪ್ರೀತಿ ಸದಾ ಇರಲಿ ಎಂದು ಗಣೇಶ್ ವಿನಂತಿಸಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ಹೆಸರು A ಅಕ್ಷರದಿಂದ ಆರಂಭ ವಾಗಿದ್ದರೆ ನಿಮ್ಮ ಗುಣ ನಡೆತೆ ಹೇಗಿರುತ್ತೆ ನೋಡಿ…

    ಹೆಸರು ಹಾಗೂ ವ್ಯಕ್ತಿ ಮಧ್ಯೆ ಒಂದು ಬಂಧವಿದೆ. ಅನೇಕ ಗಣ್ಯರು, ಸೆಲೆಬ್ರಿಟಿಗಳು ಯಶಸ್ಸಿಗಾಗಿ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಹೆಸ್ರು ಪ್ರತಿಯೊಬ್ಬ ವ್ಯಕ್ತಿ ಮೇಲೂ ಪರಿಣಾಮ ಬೀರುತ್ತದೆ. ಪ್ರತಿಯೊಂದು ಅಕ್ಷರಕ್ಕೂ ತನ್ನದೇ ಆದ ಶಕ್ತಿ ಹಾಗೂ ಗುಣಲಕ್ಷಣವಿದೆ. ನಿಮ್ಮ ಹೆಸ್ರು ಯಾವ ಅಕ್ಷರದಿಂದ ಶುರುವಾಗ್ತಿದೆ ಎಂಬುದರ ಮೇಲೆ ನಿಮ್ಮ ಸ್ವಭಾವವನ್ನು ಹೇಳಬಹುದು. ಕೆಲ ಅಕ್ಷರಗಳನ್ನು ಪ್ರಭಾವಶಾಲಿ ಎನ್ನಲಾಗುತ್ತದೆ. ಎ, ಜೆ, ಒ ಮತ್ತು ಎಸ್ ಅಕ್ಷರಗಳು ಪ್ರಭಾವಶಾಲಿಯಾಗಿರುತ್ತವೆ. ನಿಮ್ಮ ಅಕ್ಷರ ಎ ನಿಂದ ಶುರುವಾಗ್ತಿದ್ದರೆ ನಿಮ್ಮ ಸ್ವಭಾವದ ಬಗ್ಗೆ…

  • ಸಿನಿಮಾ, ಸುದ್ದಿ

    ಮಗು ಮುಖ ನೋಡುವ ಮುನ್ನವೇ ಎಲ್ಲರನ್ನು ಅಗಲಿದ ಚಿರಂಜೀವಿ ಸರ್ಜಾ! ನಿಜಕ್ಕೂ ಶಾಕ್

    ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…

  • ಸುದ್ದಿ

    ರಾಜ್ಯ ಸರ್ಕಾರದಿಂದ ನೆರೆ ಸಂತ್ರಸ್ತರಿಗೊಂದು ಸಿಹಿ ಸುದ್ದಿ….!

    ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…

  • ಸುದ್ದಿ

    ಬಾಲಿವುಡ್​ಗೆ ಸೈ ಕನ್ನಡಕ್ಕೆ ಜೈ: ಈ ಬಾರಿಯ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಸಲ್ಮಾನ್ ಖಾನ್‌?

    ‘ಬಿಗ್‌ಬಾಸ್‌’ ರಿಯಾಲಿಟಿ ಶೋನಲ್ಲಿ ಒಂದಷ್ಟು ಜನ ಸ್ಪರ್ಧಿಗಳಾಗಿ ಎಂಟ್ರಿ ನೀಡಿದರೆ, ಮತ್ತೊಂದಿಷ್ಟು ಜನ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ನೀಡುತ್ತಾರೆ. ಜತೆಗೆ ಸಿನಿಮಾ ಪ್ರಮೋಷನ್‌ಗಾಗಿ ಅನೇಕರು ಬಿಗ್‌ಬಾಸ್‌ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಬಾಲಿವುಡ್‌ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಕೂಡ ಬೆಂಗಳೂರಿನ ಬಿಡದಿಯಲ್ಲಿರುವ ಬಿಗ್‌ಬಾಸ್ ಮನೆಗೆ ಕಾಲಿಟ್ಟರೆ ಅಚ್ಚರಿ ಇಲ್ಲ! ಇಂಥದ್ದೊಂದು ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಆದರೆ, ಇತ್ತೀಚಿಗಷ್ಟೇ ನಡೆದ ‘ಬಿಗ್‌ಬಾಸ್’ ಪ್ರೆಸ್‌ಮೀಟ್‌ನಲ್ಲಿ ಸಲ್ಮಾನ್‌ ಆಗಮನದ ಬಗ್ಗೆ ಸುದೀಪ್‌ ಕ್ಲಾರಿಟಿ ನೀಡಿದ್ದಾರೆ. ‘ನಾವಿಬ್ಬರು ಒಂದೇ ದಿನ ಬಿಗ್‌ಬಾಸ್‌ನ ಬೇರೆ…

  • ಸುದ್ದಿ

    ರಜನಿಕಾಂತ್‌ ಬಳಿ ಇರುವ ಆಸ್ಥಿಯ ಮೌಲ್ಯವೆಷ್ಟು ಗೊತ್ತಾ?

    ಟಾಲಿವುಡ್‌ ಸ್ಟಾರ್‌ ರಜಿನಿಕಾಂತ್‌ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್‌ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…

  • ಸುದ್ದಿ

    ‘ಮಿಸೈಲ್ ಮ್ಯಾನ್’,ಡಾ. ಎ.ಪಿ.ಜೆ. ಅಬ್ದುಲ್ ಕಲಾಂರ 88ನೇ ಹುಟ್ಟುಹಬ್ಬದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ…!

    ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು  ಸಮರ್ಥ ಮತ್ತು ಸಮೃದ್ಧ ಭಾರತದ…