News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಬೆಳ್ಳುಳ್ಳಿ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ

112

ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ.

1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ.

2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ.

3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು.

4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು ಮತ್ತು ಲೇಪಿಸುವುದರಿಂದ ಗಾಯ ಗುಣಪಡಿಸಬಹುದು.

5) ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ಜ್ವರ ಗುಣವಾಗುವುದು.

6) ಬೆಳ್ಳುಳ್ಳಿ ರಸವನ್ನು ನಿಂಬೆ ರಸದೊಂದಿಗೆ ಬೆರೆಸಿ ಸ್ವಲ್ಪ ಬೆಲ್ಲ ಹಾಕಿ ಶರಭತ್ ಮಾಡಿ ಎರಡರಿಂದ ಮೂರು ಗಂಟೆಗೆ ಒಮ್ಮೆ ಕೊಡುತ್ತಿದ್ದರೆ ಮಕ್ಕಳ ಬಿಡದೆ ಇರುವ ಕೆಮ್ಮು ಗುಣವಾಗುತ್ತದೆ.

7) ಬೆಳ್ಳುಳ್ಳಿ ಹೊಳಪನ್ನು ಸ್ವಲ್ಪ ಬೆಲ್ಲದೊಂದಿಗೆ ಅರೆದು ಗಂಟಲಿಗೆ ಹಚ್ಚುವುದರಿಂದ ಗಂಟಲುಗಳಲೆ ಗುಣವಾಗುತ್ತದೆ.

8) ಬೆಳ್ಳುಳ್ಳಿಯ ರಸಕ್ಕೆ ಸಮ ಪ್ರಮಾಣದಲ್ಲಿ ಜೇನುತುಪ್ಪ ಸೇರಿಸಿ ಹಚ್ಚುವುದರಿಂದ ಅರೆದಲೆ ಸೂಲೆ ಗುಣವಾಗುತ್ತದೆ.

9) ಬೆಳ್ಳುಳ್ಳಿಯ ರಸವನ್ನು ಬೆಚ್ಚಗೆ ಮಾಡಿ ಎರಡರಿಂದ ಮೂರು ಹನಿ ಕಿವಿಗೆ ಬಿಡುವುದರಿಂದ ಕಿವಿ ನೋವು ಗುಣವಾಗುತ್ತದೆ ಮತ್ತು ಕಿವಿಯಲ್ಲಿ ಯಾವುದೇ ಹುಳು ಸೇರಿಕೊಂಡರು ಹೊರಗೆ ಬರುತ್ತದೆ.

10) ಸ್ವಲ್ಪ ತುಪ್ಪ ಹಾಕಿ ಬೆಳ್ಳುಳ್ಳಿಯನ್ನು ಹುರಿದು ತುಪ್ಪವನ್ನು ಸೇರಿಸಿ ಅರೆದು ಒಂದು ಚಮಚ ಜೇನು ಸೇರಿಸಿ ತಿನ್ನುತ್ತಿದ್ದರೆ ಉಬ್ಬಸ ಗುಣವಾಗುತ್ತದೆ.

11) ಬೆಳ್ಳುಳ್ಳಿಯ ರಸವನ್ನು ಜೇನುತುಪ್ಪದೊಂದಿಗೆ ಸೇರಿಸಿ ಚರ್ಮರೋಗಕ್ಕೆ ಹಚ್ಚಿದರೆ ಚರ್ಮರೋಗ ಗುಣವಾಗುತ್ತದೆ.

12) ಬೆಳ್ಳುಳ್ಳಿ ರಸಕ್ಕೆ ಉಪ್ಪು ಸೇರಿಸಿ ಹಚ್ಚಿದರೆ ಚೇಳಿನ ವಿಷ ಇಳಿಯುತ್ತದೆ.

13) ಬೆಳ್ಳುಳ್ಳಿ ಎಸಳಿಗೆ ಎಳ್ಳೆಣ್ಣೆ ಸೇರಿಸಿ ಸೈಂಧವ ಲವಣ ಸೇರಿಸಿ ಪ್ರತಿದಿನ ಬೆಳಿಗ್ಗೆ ಸೇವಿಸುತ್ತಿದ್ದರೆ ವಾತ ಜ್ವರ ಗುಣವಾಗುತ್ತದೆ.

14) 20 ಗ್ರಾಂ ಬೆಳ್ಳುಳ್ಳಿ ಸಮ ಪ್ರಮಾಣದ ಶುಂಠಿ ಲಕ್ಕಿ ಸೊಪ್ಪು ಸಮ ಪ್ರಮಾಣ 8 ಪಾಲು ನೀರು ಹಾಕಿ ಕುದಿಸಿ ಅರ್ಧಕ್ಕೆ ಇಳಿಸಿ ಸೋಸಿ ಎರಡು ಹತ್ತು ಸೇವಿಸುವುದರಿಂದ ವಾತರೋಗ ಗುಣವಾಗುತ್ತದೆ.

15) ದುಷ್ಟ ಹುಣ್ಣಿನ ಮೇಲೆ ಬೆಳ್ಳುಳ್ಳಿ ರಸವನ್ನು ಹಚ್ಚುವುದರಿಂದ ಹುಳು ಆಗುವುದಿಲ್ಲ.

16) ದುಷ್ಟ ಜಂತುಗಳು ಕಚ್ಚಿದಾಗ ಬೆಳ್ಳುಳ್ಳಿಯನ್ನು ಹಚ್ಚುವುದು ಮತ್ತೆ ಹೊಟ್ಟೆಗೆ ತೆಗೆದುಕೊಳ್ಳುವುದರಿಂದ ವಿಷ ಇರುವುದಿಲ್ಲ.

17) ನಾಲ್ಕು ಎಸಳು ಬೆಳ್ಳುಳ್ಳಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಮಂಡಿ ನೋವು ಗುಣವಾಗುತ್ತದೆ.

18) ಎಳ್ಳೆಣ್ಣೆಯಲ್ಲಿ ಬೆಳ್ಳುಳ್ಳಿಯನ್ನು ಚಚ್ಚಿ ಕುದಿಸಿ ಕಪ್ಪಾದ ಮೇಲೆ ಬೆಳ್ಳುಳ್ಳಿಯನ್ನು ತೆಗೆದು ಎಣ್ಣೆಯನ್ನು ಸೀಸೆಯಲ್ಲಿ ಭದ್ರವಾಗಿಟ್ಟು ನೋವಿರುವ ಜಾಗದಲ್ಲಿ ಹಚ್ಚುವುದರಿಂದ ನೋವು ನಿವಾರಣೆಯಾಗುತ್ತದೆ.

19) ಆರು ಏಳು ಎಸಳು ಬೆಳ್ಳುಳ್ಳಿಯನ್ನು ಅಕ್ಕಿಯಲ್ಲಿ ಹಾಕಿ ಅನ್ನ ಮಾಡಿ ತಿನ್ನುವುದರಿಂದ ವಾತರೋಗಗಳು ನಿವಾರಣೆಯಾಗುತ್ತದೆ ಮತ್ತು ತಡೆಯಲಾಗದ ಗ್ಯಾಸ್ಟ್ರಿಕ್ ಗುಣವಾಗುತ್ತದೆ.

20) ಬೆಳ್ಳುಳ್ಳಿಯನ್ನು ಸಿಪ್ಪೆ ಸುಲಿದು ಹಾಲಿನಲ್ಲಿ ಬೇಯಿಸಿ ತುಪ್ಪದಲ್ಲಿ ಕೆಂಪಾಗಿ ಹುರಿದು ಇತರೆ ಸಾಮಗ್ರಿಗಳನ್ನು ಸೇರಿಸಿ ನಾನು ತಯಾರಿಸಿದ ಔಷಧಿ ಪಾರ್ಶ್ವ ವಾಯು ಮತ್ತು ವಾತರೋಗಕ್ಕೂ ತುಂಬಾ ಒಳ್ಳೆಯ ಔಷಧಿಯಾಗಿದೆ.

21) ಬೆಳ್ಳುಳ್ಳಿ ಮತ್ತು ಶುಂಠಿ ಪುಡಿಯನ್ನು ಶುಂಠಿ ಪೇಸ್ಟ್ ಸೇರಿಸಿ ಹಚ್ಚಿದರೆ ತಲೆನೋವು ಗುಣವಾಗುತ್ತದೆ.

22) ಚಳಿಗಾಲದಲ್ಲಿ ಹೆಚ್ಚು ಉಪಯೋಗಿಸುವುದರಿಂದ ಶಾಖ ಹೆಚ್ಚಿಸಿ ದೇಹದ ನೋವು ನಿವಾರಣೆ ಮಾಡುತ್ತದೆ.

23) ಪ್ರತಿ ದಿನ ಎರಡು ಎಸಳು ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ಬಿಪಿ ಹತೋಟಿಗೆ ಬರುತ್ತದೆ.

24) ಬೆಳ್ಳುಳ್ಳಿ ಹೆಣ್ಣುಮಕ್ಕಳ ತಿಂಗಳ ಮುಟ್ಟಿನ ಹೊಟ್ಟೆ ನೋವು ನಿವಾರಿಸುತ್ತದೆ.

25) ಬೆಳ್ಳುಳ್ಳಿಯ ಉಪಯೋಗದಿಂದ ಲೈಂಗಿಕ ಸಾಮರ್ಥ್ಯ ಹೆಚ್ಚುತ್ತದೆ.

26) ಇನ್ನೂ ಹೆಚ್ಚಿನ ರೋಗಗಳನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿರುವ ಬೆಳ್ಳುಳ್ಳಿ, ತಾಮಸಿಕ ಮತ್ತು ಕಾಮ ಆಸಕ್ತಿ ಗುಣವನ್ನು ಹೆಚ್ಚಿಸುತ್ತದೆ ಮೆದುಳಿನ ಮೇಲೆ ಹೆಚ್ಚಿನ ಪರಿಣಾಮ ಬೀರುವ ಇದು ಮಾನಸಿಕ ಒತ್ತಡವನ್ನು ತರುತ್ತದೆ. ಈ ಕಾರಣಕ್ಕಾಗಿ ನಮ್ಮ ಹಿರಿಯರು ಬೆಳ್ಳುಳ್ಳಿಯನ್ನು ಪೂಜೆ ಪುನಸ್ಕಾರ ದೇವಿ ಕಾರ್ಯ ತಪಸ್ಸು ಜಪ ಮಾಡುವ ಸಮಯದಲ್ಲಿ ನಿಶಿದ್ಧ ಎಂದಿದ್ದಾರೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    50 ವರ್ಷದ ಹಿಂದೆ ಸತ್ತು ಸಮಾಧಿಯಾದವನು ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ.ಹೇಗೆ ಗೊತ್ತಾ,.??

    ಐವತ್ತು ವರ್ಷಗಳ  ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ  ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…

  • ಸುದ್ದಿ

    ಹುಷಾರ್…..!ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯ ಸೆರೆ…!

    ಕಂಪ್ಯೂಟರ್‌ಗಳು, ಕಂಪನಿಯ ಸರ್ವರ್‌ಗಳನ್ನು ಹ್ಯಾಕ್‌ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್‌ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್‌ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್‌ಲೋಡ್‌ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್‌ಲೈನ್‌ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್‌ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…

  • inspirational, ಸುದ್ದಿ

    ಗಾಂಧಿಜಿ ಪ್ರತಿಮೆಯ ಮುಂದೆ ಧರಣಿಗೆ ಕುಳಿತ ಕಾಂಗ್ರೆಸ್ ಶಾಸಕರು….!

    ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ‌ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….

  • ಸಿನಿಮಾ

    ಸ್ವಾತಂತ್ರ್ಯ ಬಂದ ನಂತರ ಮೊದಲ ಉಗ್ರ ಹಿಂದೂ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ನಟ ಕಮಲ್ ಹಾಸನ್..!

    ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • ಸುದ್ದಿ

    ಪ್ರಾಂಶುಪಾಲರ ಮೂರು ಷರತ್ತು ಒಪ್ಪಿ ಎಂಜಿನಿಯರಿಂಗ್ ಸೇರಿದ್ದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ

    ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್‍ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…