ಉಪಯುಕ್ತ ಮಾಹಿತಿ

ಬೆಳ್ಳುಳ್ಳಿ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ

108

ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ.

1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ.

2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ.

3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು.

4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು ಮತ್ತು ಲೇಪಿಸುವುದರಿಂದ ಗಾಯ ಗುಣಪಡಿಸಬಹುದು.

5) ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ಜ್ವರ ಗುಣವಾಗುವುದು.

6) ಬೆಳ್ಳುಳ್ಳಿ ರಸವನ್ನು ನಿಂಬೆ ರಸದೊಂದಿಗೆ ಬೆರೆಸಿ ಸ್ವಲ್ಪ ಬೆಲ್ಲ ಹಾಕಿ ಶರಭತ್ ಮಾಡಿ ಎರಡರಿಂದ ಮೂರು ಗಂಟೆಗೆ ಒಮ್ಮೆ ಕೊಡುತ್ತಿದ್ದರೆ ಮಕ್ಕಳ ಬಿಡದೆ ಇರುವ ಕೆಮ್ಮು ಗುಣವಾಗುತ್ತದೆ.

7) ಬೆಳ್ಳುಳ್ಳಿ ಹೊಳಪನ್ನು ಸ್ವಲ್ಪ ಬೆಲ್ಲದೊಂದಿಗೆ ಅರೆದು ಗಂಟಲಿಗೆ ಹಚ್ಚುವುದರಿಂದ ಗಂಟಲುಗಳಲೆ ಗುಣವಾಗುತ್ತದೆ.

8) ಬೆಳ್ಳುಳ್ಳಿಯ ರಸಕ್ಕೆ ಸಮ ಪ್ರಮಾಣದಲ್ಲಿ ಜೇನುತುಪ್ಪ ಸೇರಿಸಿ ಹಚ್ಚುವುದರಿಂದ ಅರೆದಲೆ ಸೂಲೆ ಗುಣವಾಗುತ್ತದೆ.

9) ಬೆಳ್ಳುಳ್ಳಿಯ ರಸವನ್ನು ಬೆಚ್ಚಗೆ ಮಾಡಿ ಎರಡರಿಂದ ಮೂರು ಹನಿ ಕಿವಿಗೆ ಬಿಡುವುದರಿಂದ ಕಿವಿ ನೋವು ಗುಣವಾಗುತ್ತದೆ ಮತ್ತು ಕಿವಿಯಲ್ಲಿ ಯಾವುದೇ ಹುಳು ಸೇರಿಕೊಂಡರು ಹೊರಗೆ ಬರುತ್ತದೆ.

10) ಸ್ವಲ್ಪ ತುಪ್ಪ ಹಾಕಿ ಬೆಳ್ಳುಳ್ಳಿಯನ್ನು ಹುರಿದು ತುಪ್ಪವನ್ನು ಸೇರಿಸಿ ಅರೆದು ಒಂದು ಚಮಚ ಜೇನು ಸೇರಿಸಿ ತಿನ್ನುತ್ತಿದ್ದರೆ ಉಬ್ಬಸ ಗುಣವಾಗುತ್ತದೆ.

11) ಬೆಳ್ಳುಳ್ಳಿಯ ರಸವನ್ನು ಜೇನುತುಪ್ಪದೊಂದಿಗೆ ಸೇರಿಸಿ ಚರ್ಮರೋಗಕ್ಕೆ ಹಚ್ಚಿದರೆ ಚರ್ಮರೋಗ ಗುಣವಾಗುತ್ತದೆ.

12) ಬೆಳ್ಳುಳ್ಳಿ ರಸಕ್ಕೆ ಉಪ್ಪು ಸೇರಿಸಿ ಹಚ್ಚಿದರೆ ಚೇಳಿನ ವಿಷ ಇಳಿಯುತ್ತದೆ.

13) ಬೆಳ್ಳುಳ್ಳಿ ಎಸಳಿಗೆ ಎಳ್ಳೆಣ್ಣೆ ಸೇರಿಸಿ ಸೈಂಧವ ಲವಣ ಸೇರಿಸಿ ಪ್ರತಿದಿನ ಬೆಳಿಗ್ಗೆ ಸೇವಿಸುತ್ತಿದ್ದರೆ ವಾತ ಜ್ವರ ಗುಣವಾಗುತ್ತದೆ.

14) 20 ಗ್ರಾಂ ಬೆಳ್ಳುಳ್ಳಿ ಸಮ ಪ್ರಮಾಣದ ಶುಂಠಿ ಲಕ್ಕಿ ಸೊಪ್ಪು ಸಮ ಪ್ರಮಾಣ 8 ಪಾಲು ನೀರು ಹಾಕಿ ಕುದಿಸಿ ಅರ್ಧಕ್ಕೆ ಇಳಿಸಿ ಸೋಸಿ ಎರಡು ಹತ್ತು ಸೇವಿಸುವುದರಿಂದ ವಾತರೋಗ ಗುಣವಾಗುತ್ತದೆ.

15) ದುಷ್ಟ ಹುಣ್ಣಿನ ಮೇಲೆ ಬೆಳ್ಳುಳ್ಳಿ ರಸವನ್ನು ಹಚ್ಚುವುದರಿಂದ ಹುಳು ಆಗುವುದಿಲ್ಲ.

16) ದುಷ್ಟ ಜಂತುಗಳು ಕಚ್ಚಿದಾಗ ಬೆಳ್ಳುಳ್ಳಿಯನ್ನು ಹಚ್ಚುವುದು ಮತ್ತೆ ಹೊಟ್ಟೆಗೆ ತೆಗೆದುಕೊಳ್ಳುವುದರಿಂದ ವಿಷ ಇರುವುದಿಲ್ಲ.

17) ನಾಲ್ಕು ಎಸಳು ಬೆಳ್ಳುಳ್ಳಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಮಂಡಿ ನೋವು ಗುಣವಾಗುತ್ತದೆ.

18) ಎಳ್ಳೆಣ್ಣೆಯಲ್ಲಿ ಬೆಳ್ಳುಳ್ಳಿಯನ್ನು ಚಚ್ಚಿ ಕುದಿಸಿ ಕಪ್ಪಾದ ಮೇಲೆ ಬೆಳ್ಳುಳ್ಳಿಯನ್ನು ತೆಗೆದು ಎಣ್ಣೆಯನ್ನು ಸೀಸೆಯಲ್ಲಿ ಭದ್ರವಾಗಿಟ್ಟು ನೋವಿರುವ ಜಾಗದಲ್ಲಿ ಹಚ್ಚುವುದರಿಂದ ನೋವು ನಿವಾರಣೆಯಾಗುತ್ತದೆ.

19) ಆರು ಏಳು ಎಸಳು ಬೆಳ್ಳುಳ್ಳಿಯನ್ನು ಅಕ್ಕಿಯಲ್ಲಿ ಹಾಕಿ ಅನ್ನ ಮಾಡಿ ತಿನ್ನುವುದರಿಂದ ವಾತರೋಗಗಳು ನಿವಾರಣೆಯಾಗುತ್ತದೆ ಮತ್ತು ತಡೆಯಲಾಗದ ಗ್ಯಾಸ್ಟ್ರಿಕ್ ಗುಣವಾಗುತ್ತದೆ.

20) ಬೆಳ್ಳುಳ್ಳಿಯನ್ನು ಸಿಪ್ಪೆ ಸುಲಿದು ಹಾಲಿನಲ್ಲಿ ಬೇಯಿಸಿ ತುಪ್ಪದಲ್ಲಿ ಕೆಂಪಾಗಿ ಹುರಿದು ಇತರೆ ಸಾಮಗ್ರಿಗಳನ್ನು ಸೇರಿಸಿ ನಾನು ತಯಾರಿಸಿದ ಔಷಧಿ ಪಾರ್ಶ್ವ ವಾಯು ಮತ್ತು ವಾತರೋಗಕ್ಕೂ ತುಂಬಾ ಒಳ್ಳೆಯ ಔಷಧಿಯಾಗಿದೆ.

21) ಬೆಳ್ಳುಳ್ಳಿ ಮತ್ತು ಶುಂಠಿ ಪುಡಿಯನ್ನು ಶುಂಠಿ ಪೇಸ್ಟ್ ಸೇರಿಸಿ ಹಚ್ಚಿದರೆ ತಲೆನೋವು ಗುಣವಾಗುತ್ತದೆ.

22) ಚಳಿಗಾಲದಲ್ಲಿ ಹೆಚ್ಚು ಉಪಯೋಗಿಸುವುದರಿಂದ ಶಾಖ ಹೆಚ್ಚಿಸಿ ದೇಹದ ನೋವು ನಿವಾರಣೆ ಮಾಡುತ್ತದೆ.

23) ಪ್ರತಿ ದಿನ ಎರಡು ಎಸಳು ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ಬಿಪಿ ಹತೋಟಿಗೆ ಬರುತ್ತದೆ.

24) ಬೆಳ್ಳುಳ್ಳಿ ಹೆಣ್ಣುಮಕ್ಕಳ ತಿಂಗಳ ಮುಟ್ಟಿನ ಹೊಟ್ಟೆ ನೋವು ನಿವಾರಿಸುತ್ತದೆ.

25) ಬೆಳ್ಳುಳ್ಳಿಯ ಉಪಯೋಗದಿಂದ ಲೈಂಗಿಕ ಸಾಮರ್ಥ್ಯ ಹೆಚ್ಚುತ್ತದೆ.

26) ಇನ್ನೂ ಹೆಚ್ಚಿನ ರೋಗಗಳನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿರುವ ಬೆಳ್ಳುಳ್ಳಿ, ತಾಮಸಿಕ ಮತ್ತು ಕಾಮ ಆಸಕ್ತಿ ಗುಣವನ್ನು ಹೆಚ್ಚಿಸುತ್ತದೆ ಮೆದುಳಿನ ಮೇಲೆ ಹೆಚ್ಚಿನ ಪರಿಣಾಮ ಬೀರುವ ಇದು ಮಾನಸಿಕ ಒತ್ತಡವನ್ನು ತರುತ್ತದೆ. ಈ ಕಾರಣಕ್ಕಾಗಿ ನಮ್ಮ ಹಿರಿಯರು ಬೆಳ್ಳುಳ್ಳಿಯನ್ನು ಪೂಜೆ ಪುನಸ್ಕಾರ ದೇವಿ ಕಾರ್ಯ ತಪಸ್ಸು ಜಪ ಮಾಡುವ ಸಮಯದಲ್ಲಿ ನಿಶಿದ್ಧ ಎಂದಿದ್ದಾರೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಇಲ್ಲಿದೆ ಶುಭ ಸುದ್ದಿ, ಇನ್ಮುಂದೆ ಖಾಸಗಿ ವಲಯದಲ್ಲೂ ಮೀಸಲಾತಿ…!

    ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ. ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ. ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ…

  • ಸುದ್ದಿ

    ಬಿಸಿಬಿಸಿ ಕಾಫಿ ಕುಡಿಯಿರಿ:ʼತೂಕʼ ಇಳಿಸಿಕೊಳ್ಳಿ…..!

    ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್‌ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್‌ನೆಸ್‌ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್‌ ಫ್ಯಾಟ್‌ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…

  • ಸುದ್ದಿ

    ನನಗೆ ವಯಸ್ಸಾಗಿದೆ ಗನ್ ಹಿಡಿಯಲು ಸಾಧ್ಯವಿಲ್ಲ!ಅಣ್ಣಾ ಅಜಾರೆಯವರು ಈ ಮಾತನ್ನು ಹೇಳಿದ್ದೇಕೆ ಗೊತ್ತಾ?

    ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…

  • ಸುದ್ದಿ

    ಕೇಂದ್ರ ಸರ್ಕಾರದ ಆದೇಶ, ಏರ್‌ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ,.!

    ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್‌ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್‌ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್‌ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…

  • ಜ್ಯೋತಿಷ್ಯ

    ಮಾತೆ ಅನ್ನಪೂರ್ಣಾ ದೇವಿಯ ಕೃಪೆಯಿಂದ ಶುಭಯೋಗ, ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…

  • ಸುದ್ದಿ

    ಪ್ರಧಾನಿ ಮೋದಿ ರೈತರ ಸಾಲ ಮನ್ನಾ ಮಾಡ್ತರಾ ಗೊತ್ತಿಲ್ಲ?ಆದರೆ ರೈತರ ನೆರವಿಗೆ ಅವರು ಏನ್ ಮಾಡ್ತಾರೆ ಗೊತ್ತಾ..?

    ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ‌ ಕೇಂದ್ರ ಸರ್ಕಾರ ರೈತರ ಸಾಲ‌ಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ‌ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ‌ ಮೋದಿ ವಿವಿಧ ಸುತ್ತಿನ‌ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…