News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಬೆಳ್ಳುಳ್ಳಿ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ

112

ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ.

1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ.

2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ.

3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು.

4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು ಮತ್ತು ಲೇಪಿಸುವುದರಿಂದ ಗಾಯ ಗುಣಪಡಿಸಬಹುದು.

5) ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ಜ್ವರ ಗುಣವಾಗುವುದು.

6) ಬೆಳ್ಳುಳ್ಳಿ ರಸವನ್ನು ನಿಂಬೆ ರಸದೊಂದಿಗೆ ಬೆರೆಸಿ ಸ್ವಲ್ಪ ಬೆಲ್ಲ ಹಾಕಿ ಶರಭತ್ ಮಾಡಿ ಎರಡರಿಂದ ಮೂರು ಗಂಟೆಗೆ ಒಮ್ಮೆ ಕೊಡುತ್ತಿದ್ದರೆ ಮಕ್ಕಳ ಬಿಡದೆ ಇರುವ ಕೆಮ್ಮು ಗುಣವಾಗುತ್ತದೆ.

7) ಬೆಳ್ಳುಳ್ಳಿ ಹೊಳಪನ್ನು ಸ್ವಲ್ಪ ಬೆಲ್ಲದೊಂದಿಗೆ ಅರೆದು ಗಂಟಲಿಗೆ ಹಚ್ಚುವುದರಿಂದ ಗಂಟಲುಗಳಲೆ ಗುಣವಾಗುತ್ತದೆ.

8) ಬೆಳ್ಳುಳ್ಳಿಯ ರಸಕ್ಕೆ ಸಮ ಪ್ರಮಾಣದಲ್ಲಿ ಜೇನುತುಪ್ಪ ಸೇರಿಸಿ ಹಚ್ಚುವುದರಿಂದ ಅರೆದಲೆ ಸೂಲೆ ಗುಣವಾಗುತ್ತದೆ.

9) ಬೆಳ್ಳುಳ್ಳಿಯ ರಸವನ್ನು ಬೆಚ್ಚಗೆ ಮಾಡಿ ಎರಡರಿಂದ ಮೂರು ಹನಿ ಕಿವಿಗೆ ಬಿಡುವುದರಿಂದ ಕಿವಿ ನೋವು ಗುಣವಾಗುತ್ತದೆ ಮತ್ತು ಕಿವಿಯಲ್ಲಿ ಯಾವುದೇ ಹುಳು ಸೇರಿಕೊಂಡರು ಹೊರಗೆ ಬರುತ್ತದೆ.

10) ಸ್ವಲ್ಪ ತುಪ್ಪ ಹಾಕಿ ಬೆಳ್ಳುಳ್ಳಿಯನ್ನು ಹುರಿದು ತುಪ್ಪವನ್ನು ಸೇರಿಸಿ ಅರೆದು ಒಂದು ಚಮಚ ಜೇನು ಸೇರಿಸಿ ತಿನ್ನುತ್ತಿದ್ದರೆ ಉಬ್ಬಸ ಗುಣವಾಗುತ್ತದೆ.

11) ಬೆಳ್ಳುಳ್ಳಿಯ ರಸವನ್ನು ಜೇನುತುಪ್ಪದೊಂದಿಗೆ ಸೇರಿಸಿ ಚರ್ಮರೋಗಕ್ಕೆ ಹಚ್ಚಿದರೆ ಚರ್ಮರೋಗ ಗುಣವಾಗುತ್ತದೆ.

12) ಬೆಳ್ಳುಳ್ಳಿ ರಸಕ್ಕೆ ಉಪ್ಪು ಸೇರಿಸಿ ಹಚ್ಚಿದರೆ ಚೇಳಿನ ವಿಷ ಇಳಿಯುತ್ತದೆ.

13) ಬೆಳ್ಳುಳ್ಳಿ ಎಸಳಿಗೆ ಎಳ್ಳೆಣ್ಣೆ ಸೇರಿಸಿ ಸೈಂಧವ ಲವಣ ಸೇರಿಸಿ ಪ್ರತಿದಿನ ಬೆಳಿಗ್ಗೆ ಸೇವಿಸುತ್ತಿದ್ದರೆ ವಾತ ಜ್ವರ ಗುಣವಾಗುತ್ತದೆ.

14) 20 ಗ್ರಾಂ ಬೆಳ್ಳುಳ್ಳಿ ಸಮ ಪ್ರಮಾಣದ ಶುಂಠಿ ಲಕ್ಕಿ ಸೊಪ್ಪು ಸಮ ಪ್ರಮಾಣ 8 ಪಾಲು ನೀರು ಹಾಕಿ ಕುದಿಸಿ ಅರ್ಧಕ್ಕೆ ಇಳಿಸಿ ಸೋಸಿ ಎರಡು ಹತ್ತು ಸೇವಿಸುವುದರಿಂದ ವಾತರೋಗ ಗುಣವಾಗುತ್ತದೆ.

15) ದುಷ್ಟ ಹುಣ್ಣಿನ ಮೇಲೆ ಬೆಳ್ಳುಳ್ಳಿ ರಸವನ್ನು ಹಚ್ಚುವುದರಿಂದ ಹುಳು ಆಗುವುದಿಲ್ಲ.

16) ದುಷ್ಟ ಜಂತುಗಳು ಕಚ್ಚಿದಾಗ ಬೆಳ್ಳುಳ್ಳಿಯನ್ನು ಹಚ್ಚುವುದು ಮತ್ತೆ ಹೊಟ್ಟೆಗೆ ತೆಗೆದುಕೊಳ್ಳುವುದರಿಂದ ವಿಷ ಇರುವುದಿಲ್ಲ.

17) ನಾಲ್ಕು ಎಸಳು ಬೆಳ್ಳುಳ್ಳಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಮಂಡಿ ನೋವು ಗುಣವಾಗುತ್ತದೆ.

18) ಎಳ್ಳೆಣ್ಣೆಯಲ್ಲಿ ಬೆಳ್ಳುಳ್ಳಿಯನ್ನು ಚಚ್ಚಿ ಕುದಿಸಿ ಕಪ್ಪಾದ ಮೇಲೆ ಬೆಳ್ಳುಳ್ಳಿಯನ್ನು ತೆಗೆದು ಎಣ್ಣೆಯನ್ನು ಸೀಸೆಯಲ್ಲಿ ಭದ್ರವಾಗಿಟ್ಟು ನೋವಿರುವ ಜಾಗದಲ್ಲಿ ಹಚ್ಚುವುದರಿಂದ ನೋವು ನಿವಾರಣೆಯಾಗುತ್ತದೆ.

19) ಆರು ಏಳು ಎಸಳು ಬೆಳ್ಳುಳ್ಳಿಯನ್ನು ಅಕ್ಕಿಯಲ್ಲಿ ಹಾಕಿ ಅನ್ನ ಮಾಡಿ ತಿನ್ನುವುದರಿಂದ ವಾತರೋಗಗಳು ನಿವಾರಣೆಯಾಗುತ್ತದೆ ಮತ್ತು ತಡೆಯಲಾಗದ ಗ್ಯಾಸ್ಟ್ರಿಕ್ ಗುಣವಾಗುತ್ತದೆ.

20) ಬೆಳ್ಳುಳ್ಳಿಯನ್ನು ಸಿಪ್ಪೆ ಸುಲಿದು ಹಾಲಿನಲ್ಲಿ ಬೇಯಿಸಿ ತುಪ್ಪದಲ್ಲಿ ಕೆಂಪಾಗಿ ಹುರಿದು ಇತರೆ ಸಾಮಗ್ರಿಗಳನ್ನು ಸೇರಿಸಿ ನಾನು ತಯಾರಿಸಿದ ಔಷಧಿ ಪಾರ್ಶ್ವ ವಾಯು ಮತ್ತು ವಾತರೋಗಕ್ಕೂ ತುಂಬಾ ಒಳ್ಳೆಯ ಔಷಧಿಯಾಗಿದೆ.

21) ಬೆಳ್ಳುಳ್ಳಿ ಮತ್ತು ಶುಂಠಿ ಪುಡಿಯನ್ನು ಶುಂಠಿ ಪೇಸ್ಟ್ ಸೇರಿಸಿ ಹಚ್ಚಿದರೆ ತಲೆನೋವು ಗುಣವಾಗುತ್ತದೆ.

22) ಚಳಿಗಾಲದಲ್ಲಿ ಹೆಚ್ಚು ಉಪಯೋಗಿಸುವುದರಿಂದ ಶಾಖ ಹೆಚ್ಚಿಸಿ ದೇಹದ ನೋವು ನಿವಾರಣೆ ಮಾಡುತ್ತದೆ.

23) ಪ್ರತಿ ದಿನ ಎರಡು ಎಸಳು ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ಬಿಪಿ ಹತೋಟಿಗೆ ಬರುತ್ತದೆ.

24) ಬೆಳ್ಳುಳ್ಳಿ ಹೆಣ್ಣುಮಕ್ಕಳ ತಿಂಗಳ ಮುಟ್ಟಿನ ಹೊಟ್ಟೆ ನೋವು ನಿವಾರಿಸುತ್ತದೆ.

25) ಬೆಳ್ಳುಳ್ಳಿಯ ಉಪಯೋಗದಿಂದ ಲೈಂಗಿಕ ಸಾಮರ್ಥ್ಯ ಹೆಚ್ಚುತ್ತದೆ.

26) ಇನ್ನೂ ಹೆಚ್ಚಿನ ರೋಗಗಳನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿರುವ ಬೆಳ್ಳುಳ್ಳಿ, ತಾಮಸಿಕ ಮತ್ತು ಕಾಮ ಆಸಕ್ತಿ ಗುಣವನ್ನು ಹೆಚ್ಚಿಸುತ್ತದೆ ಮೆದುಳಿನ ಮೇಲೆ ಹೆಚ್ಚಿನ ಪರಿಣಾಮ ಬೀರುವ ಇದು ಮಾನಸಿಕ ಒತ್ತಡವನ್ನು ತರುತ್ತದೆ. ಈ ಕಾರಣಕ್ಕಾಗಿ ನಮ್ಮ ಹಿರಿಯರು ಬೆಳ್ಳುಳ್ಳಿಯನ್ನು ಪೂಜೆ ಪುನಸ್ಕಾರ ದೇವಿ ಕಾರ್ಯ ತಪಸ್ಸು ಜಪ ಮಾಡುವ ಸಮಯದಲ್ಲಿ ನಿಶಿದ್ಧ ಎಂದಿದ್ದಾರೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಕಾಗೆ ನಿಮ್ಮ ಮನೆ ಮುಂದೆ ಪದೇ ಪದೇ ಕೂಗುತ್ತಿದ್ದರೆ ಏನಾಗುತ್ತೆ ಗೊತ್ತಾ..!

    ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…

  • ಸುದ್ದಿ

    ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತಾಡಿದ್ದೇಕೆ.! ಶ್ರುತಿ ತಾಯಿ ಸಭೆಯಲ್ಲಿದ್ದ ಮಹಿಳೆಯರಿಗೆಳಿದ ಮಾತೇನು ಗೊತ್ತಾ?

    ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್‌ನಲ್ಲಿ ಫೇಸ್‌ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…

  • ಹಣ ಕಾಸು

    10 ರೂಪಾಯಿ ನಾಣ್ಯವನ್ನು ಹೊಂದಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್..!ತಿಳಿಯಲು ಈ ಲೇಖನ ಓದಿ..

    10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.

  • ಉಪಯುಕ್ತ ಮಾಹಿತಿ

    ಬೆಳಿಗ್ಗೆ ಎದ್ದೇಳುವಾಗ ಈ ಕೆಲಸಗಳು ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ..!ತಿಳಿಯಲು ಈ ಲೇಖನ ಓದಿ ..

    ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.

  • ಸುದ್ದಿ

    ಪಾಕಿಸ್ತಾನಕ್ಕೆ ಟೊಮೆಟೊ ಬ್ಯಾನ್ ಮಾಡಿದ್ದಕ್ಕೆ, ಭಾರತದ ಮೇಲೆ ಅಣು ಬಾಂಬ್ ಹಾಕ್ತೀವಿ ಎಂದ ಪಾಪಿ ಪಾಕ್ ನಿರೂಪಕ ಹೇಳಿದ್ದೇನು ಗೊತ್ತಾ?

    ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್‍ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್‍ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್‍ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್‍…

  • God

    ಧರ್ಮಸ್ಥಳ ಮಂಜುನಾಥನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….