ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ.
1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ.
2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ.
3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು.
4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು ಮತ್ತು ಲೇಪಿಸುವುದರಿಂದ ಗಾಯ ಗುಣಪಡಿಸಬಹುದು.
5) ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ಜ್ವರ ಗುಣವಾಗುವುದು.
6) ಬೆಳ್ಳುಳ್ಳಿ ರಸವನ್ನು ನಿಂಬೆ ರಸದೊಂದಿಗೆ ಬೆರೆಸಿ ಸ್ವಲ್ಪ ಬೆಲ್ಲ ಹಾಕಿ ಶರಭತ್ ಮಾಡಿ ಎರಡರಿಂದ ಮೂರು ಗಂಟೆಗೆ ಒಮ್ಮೆ ಕೊಡುತ್ತಿದ್ದರೆ ಮಕ್ಕಳ ಬಿಡದೆ ಇರುವ ಕೆಮ್ಮು ಗುಣವಾಗುತ್ತದೆ.
7) ಬೆಳ್ಳುಳ್ಳಿ ಹೊಳಪನ್ನು ಸ್ವಲ್ಪ ಬೆಲ್ಲದೊಂದಿಗೆ ಅರೆದು ಗಂಟಲಿಗೆ ಹಚ್ಚುವುದರಿಂದ ಗಂಟಲುಗಳಲೆ ಗುಣವಾಗುತ್ತದೆ.
8) ಬೆಳ್ಳುಳ್ಳಿಯ ರಸಕ್ಕೆ ಸಮ ಪ್ರಮಾಣದಲ್ಲಿ ಜೇನುತುಪ್ಪ ಸೇರಿಸಿ ಹಚ್ಚುವುದರಿಂದ ಅರೆದಲೆ ಸೂಲೆ ಗುಣವಾಗುತ್ತದೆ.
9) ಬೆಳ್ಳುಳ್ಳಿಯ ರಸವನ್ನು ಬೆಚ್ಚಗೆ ಮಾಡಿ ಎರಡರಿಂದ ಮೂರು ಹನಿ ಕಿವಿಗೆ ಬಿಡುವುದರಿಂದ ಕಿವಿ ನೋವು ಗುಣವಾಗುತ್ತದೆ ಮತ್ತು ಕಿವಿಯಲ್ಲಿ ಯಾವುದೇ ಹುಳು ಸೇರಿಕೊಂಡರು ಹೊರಗೆ ಬರುತ್ತದೆ.
10) ಸ್ವಲ್ಪ ತುಪ್ಪ ಹಾಕಿ ಬೆಳ್ಳುಳ್ಳಿಯನ್ನು ಹುರಿದು ತುಪ್ಪವನ್ನು ಸೇರಿಸಿ ಅರೆದು ಒಂದು ಚಮಚ ಜೇನು ಸೇರಿಸಿ ತಿನ್ನುತ್ತಿದ್ದರೆ ಉಬ್ಬಸ ಗುಣವಾಗುತ್ತದೆ.
11) ಬೆಳ್ಳುಳ್ಳಿಯ ರಸವನ್ನು ಜೇನುತುಪ್ಪದೊಂದಿಗೆ ಸೇರಿಸಿ ಚರ್ಮರೋಗಕ್ಕೆ ಹಚ್ಚಿದರೆ ಚರ್ಮರೋಗ ಗುಣವಾಗುತ್ತದೆ.
12) ಬೆಳ್ಳುಳ್ಳಿ ರಸಕ್ಕೆ ಉಪ್ಪು ಸೇರಿಸಿ ಹಚ್ಚಿದರೆ ಚೇಳಿನ ವಿಷ ಇಳಿಯುತ್ತದೆ.
13) ಬೆಳ್ಳುಳ್ಳಿ ಎಸಳಿಗೆ ಎಳ್ಳೆಣ್ಣೆ ಸೇರಿಸಿ ಸೈಂಧವ ಲವಣ ಸೇರಿಸಿ ಪ್ರತಿದಿನ ಬೆಳಿಗ್ಗೆ ಸೇವಿಸುತ್ತಿದ್ದರೆ ವಾತ ಜ್ವರ ಗುಣವಾಗುತ್ತದೆ.
14) 20 ಗ್ರಾಂ ಬೆಳ್ಳುಳ್ಳಿ ಸಮ ಪ್ರಮಾಣದ ಶುಂಠಿ ಲಕ್ಕಿ ಸೊಪ್ಪು ಸಮ ಪ್ರಮಾಣ 8 ಪಾಲು ನೀರು ಹಾಕಿ ಕುದಿಸಿ ಅರ್ಧಕ್ಕೆ ಇಳಿಸಿ ಸೋಸಿ ಎರಡು ಹತ್ತು ಸೇವಿಸುವುದರಿಂದ ವಾತರೋಗ ಗುಣವಾಗುತ್ತದೆ.
15) ದುಷ್ಟ ಹುಣ್ಣಿನ ಮೇಲೆ ಬೆಳ್ಳುಳ್ಳಿ ರಸವನ್ನು ಹಚ್ಚುವುದರಿಂದ ಹುಳು ಆಗುವುದಿಲ್ಲ.
16) ದುಷ್ಟ ಜಂತುಗಳು ಕಚ್ಚಿದಾಗ ಬೆಳ್ಳುಳ್ಳಿಯನ್ನು ಹಚ್ಚುವುದು ಮತ್ತೆ ಹೊಟ್ಟೆಗೆ ತೆಗೆದುಕೊಳ್ಳುವುದರಿಂದ ವಿಷ ಇರುವುದಿಲ್ಲ.
17) ನಾಲ್ಕು ಎಸಳು ಬೆಳ್ಳುಳ್ಳಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಮಂಡಿ ನೋವು ಗುಣವಾಗುತ್ತದೆ.
18) ಎಳ್ಳೆಣ್ಣೆಯಲ್ಲಿ ಬೆಳ್ಳುಳ್ಳಿಯನ್ನು ಚಚ್ಚಿ ಕುದಿಸಿ ಕಪ್ಪಾದ ಮೇಲೆ ಬೆಳ್ಳುಳ್ಳಿಯನ್ನು ತೆಗೆದು ಎಣ್ಣೆಯನ್ನು ಸೀಸೆಯಲ್ಲಿ ಭದ್ರವಾಗಿಟ್ಟು ನೋವಿರುವ ಜಾಗದಲ್ಲಿ ಹಚ್ಚುವುದರಿಂದ ನೋವು ನಿವಾರಣೆಯಾಗುತ್ತದೆ.
19) ಆರು ಏಳು ಎಸಳು ಬೆಳ್ಳುಳ್ಳಿಯನ್ನು ಅಕ್ಕಿಯಲ್ಲಿ ಹಾಕಿ ಅನ್ನ ಮಾಡಿ ತಿನ್ನುವುದರಿಂದ ವಾತರೋಗಗಳು ನಿವಾರಣೆಯಾಗುತ್ತದೆ ಮತ್ತು ತಡೆಯಲಾಗದ ಗ್ಯಾಸ್ಟ್ರಿಕ್ ಗುಣವಾಗುತ್ತದೆ.
20) ಬೆಳ್ಳುಳ್ಳಿಯನ್ನು ಸಿಪ್ಪೆ ಸುಲಿದು ಹಾಲಿನಲ್ಲಿ ಬೇಯಿಸಿ ತುಪ್ಪದಲ್ಲಿ ಕೆಂಪಾಗಿ ಹುರಿದು ಇತರೆ ಸಾಮಗ್ರಿಗಳನ್ನು ಸೇರಿಸಿ ನಾನು ತಯಾರಿಸಿದ ಔಷಧಿ ಪಾರ್ಶ್ವ ವಾಯು ಮತ್ತು ವಾತರೋಗಕ್ಕೂ ತುಂಬಾ ಒಳ್ಳೆಯ ಔಷಧಿಯಾಗಿದೆ.
21) ಬೆಳ್ಳುಳ್ಳಿ ಮತ್ತು ಶುಂಠಿ ಪುಡಿಯನ್ನು ಶುಂಠಿ ಪೇಸ್ಟ್ ಸೇರಿಸಿ ಹಚ್ಚಿದರೆ ತಲೆನೋವು ಗುಣವಾಗುತ್ತದೆ.
22) ಚಳಿಗಾಲದಲ್ಲಿ ಹೆಚ್ಚು ಉಪಯೋಗಿಸುವುದರಿಂದ ಶಾಖ ಹೆಚ್ಚಿಸಿ ದೇಹದ ನೋವು ನಿವಾರಣೆ ಮಾಡುತ್ತದೆ.
23) ಪ್ರತಿ ದಿನ ಎರಡು ಎಸಳು ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ಬಿಪಿ ಹತೋಟಿಗೆ ಬರುತ್ತದೆ.
24) ಬೆಳ್ಳುಳ್ಳಿ ಹೆಣ್ಣುಮಕ್ಕಳ ತಿಂಗಳ ಮುಟ್ಟಿನ ಹೊಟ್ಟೆ ನೋವು ನಿವಾರಿಸುತ್ತದೆ.
25) ಬೆಳ್ಳುಳ್ಳಿಯ ಉಪಯೋಗದಿಂದ ಲೈಂಗಿಕ ಸಾಮರ್ಥ್ಯ ಹೆಚ್ಚುತ್ತದೆ.
26) ಇನ್ನೂ ಹೆಚ್ಚಿನ ರೋಗಗಳನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿರುವ ಬೆಳ್ಳುಳ್ಳಿ, ತಾಮಸಿಕ ಮತ್ತು ಕಾಮ ಆಸಕ್ತಿ ಗುಣವನ್ನು ಹೆಚ್ಚಿಸುತ್ತದೆ ಮೆದುಳಿನ ಮೇಲೆ ಹೆಚ್ಚಿನ ಪರಿಣಾಮ ಬೀರುವ ಇದು ಮಾನಸಿಕ ಒತ್ತಡವನ್ನು ತರುತ್ತದೆ. ಈ ಕಾರಣಕ್ಕಾಗಿ ನಮ್ಮ ಹಿರಿಯರು ಬೆಳ್ಳುಳ್ಳಿಯನ್ನು ಪೂಜೆ ಪುನಸ್ಕಾರ ದೇವಿ ಕಾರ್ಯ ತಪಸ್ಸು ಜಪ ಮಾಡುವ ಸಮಯದಲ್ಲಿ ನಿಶಿದ್ಧ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಯುರ್ವೇದ ಪದ್ದತಿಯು ನಮ್ಮ ಹಿರಿಯರು ನಮಗೆ ನೀಡಿರುವ ಒಂದು ವರದಾನ. ವಿಶ್ವದಾದ್ಯಂತ ಈಗ ಆಯುರ್ವೇದಕ್ಕೆ ಅತ್ಯುತ್ತಮ ಹೆಸರಿದೆ ಅದಕ್ಕೆಕಾರಣ ಇಂಗ್ಲೀಷ್ ಔಷದೀಯ ಪದ್ದತಿಯಿಂದ ಹಲವಾರು ಅಡ್ಡಪರಿಣಾಮಗಳು ಉಂಟಾಗುವವು ಮತ್ತು ದೀರ್ಘಕಾಲಿಕ ಕಾಯಿಲೆಗಳು ಬರುವುದು. ಆಯುರ್ವೇದದ ಪ್ರಕಾರ ನಾವು ಅಡುಗೆಯಲ್ಲಿ ಬಳಸುವ ಪದಾರ್ಥಗಳು ಸೊಪ್ಪು, ತರಕಾರಿಗಳಲ್ಲಿರುವ ಪೋಷಕಾಂಶಗಳೇ ತುಂಬಾ ಕಾಯಿಲೆಗಳನ್ನು ವಾಸಿಮಾಡುತ್ತವೆ. ಅಂತಹ ಪೋಷಕ ಮೌಲ್ಯಗಳಿರುವ ಗಿಡ “ನುಗ್ಗೆಗಿಡ” ನುಗ್ಗೆ ಗಿಡಗಳ ಎಲೆಗಳಲ್ಲಿ, ಕಾಯಿಗಳಲ್ಲಿ, ಕಾಂಡದಲ್ಲಿ ಬಹಳ ಪೋಷಕಾಂಶಗಳಿರುತ್ತವೆ. ಬಹಳ ಜನರು ನುಗ್ಗೆಕಾಯಿಯ…
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….
ಸೋಷಿಯಲ್ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…
ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ… ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ. ಕಪ್ಪೆ ಮದುವೆ ಮಾಡಿಸುವುದು ಹೇಗೆ? ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ…
ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್.ಐ.ಸಿ ಯ ಮನಿ ಬ್ಯಾಕ್ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ…